Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಾಪೊಕ್ಲುವಿನಲ್ಲಿ 'ಕುಂಡ್ಯೋಳಂಡ ಹಾಕಿ...

ನಾಪೊಕ್ಲುವಿನಲ್ಲಿ 'ಕುಂಡ್ಯೋಳಂಡ ಹಾಕಿ ಕಾರ್ನಿವಲ್'

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ27 March 2024 10:31 AM IST
share
ನಾಪೊಕ್ಲುವಿನಲ್ಲಿ ಕುಂಡ್ಯೋಳಂಡ ಹಾಕಿ ಕಾರ್ನಿವಲ್

ಮಡಿಕೇರಿ: ದೇಶದ ಹಾಕಿ ಕ್ರೀಡೆಗೆ ಪುಟ್ಟ ಜಿಲ್ಲೆ ಕೊಡಗು ಹಲವು ಕೊಡುಗೆಗಳನ್ನು ನೀಡಿದೆ. ಅದರಲ್ಲೂ ವಿಶೇಷವಾಗಿ ಕೊಡವ ಜನಾಂಗದವರು 50ಕ್ಕೂ ಹೆಚ್ಚು ಅಂತರ್‌ರಾಷ್ಟ್ರೀಯ ಹಾಕಿ ಕ್ರೀಡಾಪಟುಗಳನ್ನು ಜಗತ್ತಿಗೆ ಪರಿಚಯಿಸಿದ್ದಾರೆ.

ಜಿಲ್ಲೆಯಲ್ಲಿ ನಡೆಯುವ ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವ ಈ ಬಾರಿ ಮಾ.30 ರಿಂದ ಎ.28ರವರೆಗೆ ಕುಂಡ್ಯೋಳಂಡ ಕುಟುಂಬಸ್ಥರು ನಾಪೊಕ್ಲುವಿನ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಆಯೋಜಿಸಿದ್ದಾರೆ. ಆದರೆ, ಈ ಬಾರಿಯ ಹಾಕಿ ಉತ್ಸವ ‘ಕುಂಡ್ಯೋಳಂಡ ಹಾಕಿ ಕಾರ್ನಿವಲ್’ ಎಂಬ ಹೆಸರಿನಿಂದ ನಡೆಯಲಿದ್ದು, ಪಂದ್ಯಾವಳಿಯಲ್ಲಿ 360 ತಂಡಗಳು ಭಾಗವಹಿಸುತ್ತಿದೆ.

ಈ ಹಾಕಿ ಹಬ್ಬಕ್ಕೆ ಅಂದಾಜು 2 ಕೋಟಿ ರೂ. ವೆಚ್ಚ ಆಗಲಿದ್ದು, ಕುಂಡ್ಯೋಳಂಡ ಕುಟುಂಬಸ್ಥರಿಂದ ಈಗಾಗಲೇ 50 ಲಕ್ಷ ರೂ. ಸಂಗ್ರಹಿಸಲಾಗಿದೆ. ಕಳೆದ ವರ್ಷದ ನಾಪೊಕ್ಲುವಿನಲ್ಲಿ ನಡೆದ ಅಪ್ಪಚಟ್ಟೋಳಂಡ ಹಾಕಿ ಹಬ್ಬಕ್ಕೆ ಕುಂಡ್ಯೋಳಂಡ ಕುಟುಂಬಸ್ಥರು ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಅದರಂತೆಯೇ, ರಾಜ್ಯ ಸರಕಾರ 1 ಕೋಟಿ ರೂ. ಅನುದಾನ ನೀಡಿತ್ತು. ಹಾಗಾಗಿ ಕುಂಡ್ಯೋಳಂಡ ಕಾರ್ನಿವಲ್‌ಗೆ ಶೀಘ್ರದಲ್ಲೇ ಅನುದಾನ ಬಿಡುಗಡೆಯ ನಿರೀಕ್ಷೆಯಲ್ಲಿ ಕುಟುಂಬಸ್ಥರು ಇದ್ದಾರೆ.

ಹಾಕಿ ಹಬ್ಬದಲ್ಲಿ ಪಳಂಗಂಡ ಕಿಂಗ್: 1,997ರಲ್ಲಿ ಆರಂಭಗೊಂಡಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದಲ್ಲಿ ಇದುವರೆಗೆ 5 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಕುಟುಂಬ ಎಂಬ ಹೆಗ್ಗಳಿಕೆ ಪಳಂಗಂಡ ಕುಟುಂಬಸ್ಥರು ಪಾತ್ರರಾಗಿದ್ದಾರೆ. ಮೂರು ಬಾರಿ ಪಳಂಗಂಡ ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ಈ ಬಾರಿಯ ಹಾಕಿ ಹಬ್ಬದಲ್ಲೂ ಪ್ರಶಸ್ತಿ ಗೆಲ್ಲುವ ಅಚ್ಚುಮೆಚ್ಚಿನ ತಂಡಗಳಲ್ಲಿ ಪಳಂಗಂಡ ತಂಡ ಮುಂದಿದೆ.

ತಂಡಗಳಾದ ಕೂತಂಡ ನಾಲ್ಕು ಬಾರಿ, ಕಲಿಯಂಡ, ಕುಲ್ಲೇಟೀರ, ನೆಲ್ಲಮಕ್ಕಡ ಕುಟಂಬಸ್ಥರು ತಲಾ ಮೂರು ಬಾರಿ, ಅಂಜಪರವಂಡ, ಚೇಂದಂಡ ತಲಾ ಎರಡು ಬಾರಿ ಹಾಗೂ ಮಂಡೇಪಂಡ, ಕುಪ್ಪಂಡ (ಕೈಕೇರಿ) ತಲಾ ಒಂದು ಬಾರಿ ಚಾಂಪಿಯನ್ ಪಟ್ಟಯನ್ನು ಅಲಂಕರಿಸಿದೆ. ನೆಲ್ಲಮಕ್ಕಡ, ಕೂತಂಡ ತಲಾ ಮೂರು ಬಾರಿ, ಕಲಿಯಂಡ ಎರಡು, ಕುಲ್ಲೇಟೀರ, ಚೇಂದಂಡ ಕುಟುಂಬಗಳು ತಲಾ ಒಂದು ಬಾರಿ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಬಹುಮಾನ ವಿವರ: ಕುಂಡ್ಯೋಳಂಡ ಹಾಕಿ ಕಾರ್ನಿವಲ್‌ನಲ್ಲಿ ಚಾಂಪಿಯನ್ ಆಗುವ ಕೊಡವ ಕುಟುಂಬ ತಂಡಕ್ಕೆ 4 ಲಕ್ಷ ರೂ. ನಗದು ಬಹುಮಾನ ಸಿಗಲಿದೆ. ದ್ವಿತೀಯ 3 ಲಕ್ಷ ರೂ., ತೃತೀಯ 2 ಲಕ್ಷ ರೂ. ಮತ್ತು 4ನೇ ಸ್ಥಾನದ ತಂಡಕ್ಕೆ 1 ಲಕ್ಷ ರೂ. ನಗದು ನೀಡಲಾಗುವುದು. ಕೊಡವ ಹಾಕಿ ಅಕಾಡಮಿ ಕಳೆದ ವರ್ಷದಿಂದ ಒಂದು ಕೆ.ಜಿ. ಬೆಳ್ಳಿಯ ರೋಲಿಂಗ್ ಟ್ರೋಫಿ ನೀಡಿದೆ. ಈ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ ‘ಮ್ಯಾನ್ ಆಫ್ ದಿ ಫೆಸ್ಟಿವಲ್’ ಆಟಗಾರನಿಗೆ ‘ಏತರ್’ ಸ್ಕೂಟರ್ ಸಂಸ್ಥೆ ಇಲೆಕ್ಟ್ರಿಕ್ ಸ್ಕೂಟರ್ ಬಹುಮಾನವಾಗಿ ನೀಡಲಿದೆ.

ಹಾಕಿ ಜನಕ ಪಾಂಡಂಡ ಕುಟ್ಟಪ್ಪ

ಪಾಂಡಂಡ ಕುಟ್ಟಪ್ಪ ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವ ಜನಕ ಎಂದೇ ಪ್ರಸಿದ್ಧರಾಗಿದ್ದಾರೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ ಅವರು, 1,997ರಲ್ಲಿ ತಮ್ಮ ಸಹೋದರರೊಂದಿಗೆ ಸೇರಿ ಕರಡದಲ್ಲಿ ಮೊದಲ ಬಾರಿಗೆ ಕೊಡವ ಕುಟುಂಬ ತಂಡಗಳ ನಡುವೆ ‘ಹಾಕಿ ನಮ್ಮೆ’ಯನ್ನು ಆಯೋಜಿಸಿದ್ದರು.

1,997ರಲ್ಲಿ ಮೊದಲ ಬಾರಿಗೆ ನಡೆದ ಕೊಡವ ಕುಟುಂಬಗಳ ಹಾಕಿ ಉತ್ಸವದಲ್ಲಿ 60 ತಂಡಗಳು ಭಾಗವಹಿಸಿತ್ತು. ಪ್ರಕೃತಿ ವಿಕೋಪ, ಕೋವಿಡ್ ಕಾರಣಗಳಿಂದ 2018ರಿಂದ 2021ರವರೆಗೆ ಕೊಡವ ಹಾಕಿ ಉತ್ಸವ ನಡೆದಿರಲಿಲ್ಲ. 2022ರಲ್ಲಿ ಪುನಃ ‘ಕುಲ್ಲೇಟೀರ ಕಪ್’ ಮೂಲಕ ಹಾಕಿ ಉತ್ಸವಕ್ಕೆ ಚಾಲನೆ ನೀಡಲಾಗಿತ್ತು. 25ನೇ ವರ್ಷದ ಕೊಡವ ಕುಟುಂಬಗಳ ನಡುವಿನ ಹಾಕಿಹಬ್ಬ ನಡೆಸಲು ಮುದ್ದಂಡ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿದ್ದು, 2025ರಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X