Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೀದಿ ದೀಪ ಕೊರತೆ: ಕತ್ತಲೆ ಕೂಪವಾದ...

ಬೀದಿ ದೀಪ ಕೊರತೆ: ಕತ್ತಲೆ ಕೂಪವಾದ ತಾಳಿಕೋಟೆ ನಗರ

ಅಬ್ದುಲ್ ರಝಾಕ್ ಮುಲ್ಲಾಅಬ್ದುಲ್ ರಝಾಕ್ ಮುಲ್ಲಾ30 Jun 2026 2:53 PM IST
share
ಬೀದಿ ದೀಪ ಕೊರತೆ: ಕತ್ತಲೆ ಕೂಪವಾದ ತಾಳಿಕೋಟೆ ನಗರ

ತಾಳಿಕೋಟೆ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ, ಒಳ ಚರಂಡಿ, ಕುಡಿಯುವ ನೀರು, ಬೀದಿ ದೀಪ, ಶುಚಿತ್ವ ಕಾಪಾಡುವುದು ಆಯಾ ಸ್ಥಳೀಯ ಸಂಸ್ಥೆಗಳ ಬಹುಮುಖ್ಯವಾದ ಜವಾಬ್ದಾರಿ. ಆದರೆ ಸ್ಥಳೀಯ ಆಡಳಿತಗಳು ಹೊಣೆಗಾರಿಕೆ ಮರೆತ ಪರಿಣಾಮ ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ. ತಾಳಿಕೋಟೆ ಸ್ವತಂತ್ರ ತಾಲೂಕಾಗಿ ರೂಪುಗೊಂಡು ಬರೋಬ್ಬರಿ 12 ವರ್ಷ ಕಳೆದರೂ ಸಮರ್ಪಕವಾದ ಬೀದಿದೀಪಗಳ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕತ್ತಲಿನಲ್ಲಿ ಪಟ್ಟಣ: ತಾಲೂಕಿಗೆ ಮಾದರಿಯಾಗಬೇಕಾಗಿದ್ದ ತಾಳಿಕೋಟೆ ನಗರದಲ್ಲಿ ಬೀದಿದೀಪಗಳ ಸಮಸ್ಯೆ ಗಂಭೀರವಾಗಿದೆ. ರಾತ್ರಿಯ ಹೊತ್ತು ಹೊರ ಜಿಲ್ಲೆಗಳ ಹಾಗೂ ನೆರೆ ರಾಜ್ಯಗಳಿಂದ ಪ್ರವೇಶಿಸುವ ವಾಹನಗಳಿಗೆ ‘ಕಗ್ಗತ್ತಲಿನ’ ಸ್ವಾಗತ ಸಿಗುತ್ತದೆ. ವಾಹನ ಸವಾರರಿಗೆ ‘ಪಟ್ಟಣ ಪ್ರವೇಶಿಸಿದ್ದೇವೋ ಅಥವಾ ‘ಅರಣ್ಯ’ ಹಾದಿ ಹಿಡಿದಿದ್ದೇವೋ ಎಂಬ ಗೊಂದಲ ಅರೆಕ್ಷಣ ಕಾಡದಿರದು. ವಿಜಯಪುರ ಜಿಲ್ಲೆಯಿಂದ ಆಂಧ್ರ ರಾಜ್ಯ ಸಂಪರ್ಕ ಕಲ್ಪಿಸುವ ಬಿಜ್ಜಳ ರಾಜ್ಯ ಹೆದ್ದಾರಿ ಬೀದಿ ದೀಪಗಳ ನಿರ್ವಹಣೆ ಮಾಡುತ್ತಿಲ್ಲ!

ಭಾರೀ ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಸೂರ್ಯ ಮುಳುಗುತ್ತಿದ್ದಂತೆ ಕಗ್ಗತ್ತಲು ಕವಿಯುತ್ತದೆ. ಪ್ರತಿದಿನ ಸಾವಿರಾರು ಸರಕು ಸಾಗಣೆ ವಾಹನಗಳು, ಬಸ್‌ಗಳು, ಪ್ರಯಾಣಿಕ ವಾಹನಗಳು ಈ ರಸ್ತೆಯಲ್ಲಿ ಸಾಗುತ್ತಿದ್ದು ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಇದೆ. ಹೆದ್ದಾರಿಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ವೇಗವಾಗಿ ಬರುವ ವಾಹನಗಳು ಹೊರಸೂಸುವ ಪ್ರಖರ ಬೆಳಕಿನಿಂದ ಚಾಲಕರು ಗೊಂದಲಕ್ಕೆ ಸಿಲುಕುತ್ತಿದ್ದು ವಾಹನಗಳು ಡಿವೈಡರ್‌ಗಳಿಗೆ ಡಿಕ್ಕಿ ಹೊಡೆಯುತ್ತಿರುವ, ಚಾಲಕರ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿರುವ ಘಟನೆಗಳು ನಡೆಯುತ್ತಿವೆ.

ಬೈಕ್ ಸವಾರರ ಪಾಡಂತೂ ಹೇಳತೀರದು. ವಾಹನಗಳ ಪ್ರಖರ ಬೆಳಕಿನಿಂದ ಕಣ್ಣು ಮಂಜಾಗಿ ಹೆದ್ದಾರಿಯಿಂದ ವಾಹನಗಳನ್ನು ಕೆಳಗಿಳಿಸಿ, ಆಯ ತಪ್ಪಿ ಬಿದ್ದು ಗಂಭೀರವಾದ ಪೆಟ್ಟು ಮಾಡಿಕೊಂಡಿರುವ ಉದಾಹರಣೆಗಳು ಇವೆ.

ಪುರಸಭೆ ವ್ಯಾಪ್ತಿಗೊಳಪಡುವ ಜಾನಕಿ ಹಳ್ಳದ ರಸ್ತೆಯಿಂದ ಅಂಜುಮಾನ್ ಶಾಲೆಯವರೆಗೆ ಬೀದಿದೀಪಗಳಿದ್ದರೂ ಕತ್ತಲಿನಲ್ಲಿಯೇ ಸಂಚರಿಸಬೇಕಾಗಿದೆ. ಈ ರಸ್ತೆಯಲ್ಲಿ ಎಪಿಎಂಸಿ ಕಚೇರಿಯ ಮುಖ್ಯ ದ್ವಾರ, ಬಸವೇಶ್ವರ ವೃತ್ತ, ಅಂಬೇಡ್ಕರ್ ಸರ್ಕಲ್, ಟಿಪ್ಪು ವೃತ್ತ, ಶಾಲಾ-ಕಾಲೇಜುಗಳು ಇವೆ.

ಮತ್ತೊಂದೆಡೆ ಬಸವೇಶ್ವರ ವೃತ್ತದಿಂದ ಆರಂಭವಾಗುವ ಡಿವಿಯೇಷನ್ ರಸ್ತೆಯ ಪರಿಸ್ಥಿತಿಯೂ ಭಿನ್ನವಾಗಿಲ್ಲ. ದೇವರಹಿಪ್ಪರಗಿ, ಸಿಂದಗಿ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲೂ ಬೀದಿದೀಪಗಳಿದ್ದರೂ ಸರಿಯಾಗಿ ಕೆಲಸ ಮಾಡುವುದಿಲ್ಲ.

ನಗರದ ಹೃದಯಭಾಗದಲ್ಲಿರುವ ಶಿವಾಜಿ ವೃತ್ತದಲ್ಲಿ ಬೀದಿದೀಪಗಳಿದದ್ದರೂ ಅವುಗಳಿಗೆ ಮಂಕು ಕವಿದಿದೆ. ರಸ್ತೆ ವಿಭಜಕದಲ್ಲಿ ಅಳವಡಿಸಿರುವ ದೀಪಗಳು ಪ್ರಖರವಾದ ಬೆಳಕು ಹೊರಸೂಸದೆ ರಸ್ತೆಯ ಮೇಲೆ ಬೆಳಕುಚೆಲ್ಲುತ್ತಿಲ್ಲ. ಜತೆಗೆ ಅಲ್ಲಲ್ಲಿ ಬೀದಿ ದೀಪಗಳು ಕೆಟ್ಟುನಿಂತಿವೆ.

ರಸ್ತೆಯ ವಿಭಜಕದ ಮೇಲೆ ಅಳವಡಿಸಿರುವ ವಿದ್ಯುತ್ ಕಂಬ ಎಸ್‌ಕೆ ಪದವಿ ಕಾಲೇಜು ಮುಂದುಗಡೆ ನೆಲಕ್ಕುರುಲಿದೆ. ಗಾಳಿ ಮಳೆಗೆ ಅಪಾಯ ತಂದೊಡ್ಡುವಆತಂಕ ಕಾಡುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

share
ಅಬ್ದುಲ್ ರಝಾಕ್ ಮುಲ್ಲಾ
ಅಬ್ದುಲ್ ರಝಾಕ್ ಮುಲ್ಲಾ
Next Story
X