Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ...

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ

ರಝಾ ಮಾನ್ವಿರಝಾ ಮಾನ್ವಿ4 July 2025 2:56 PM IST
share
ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಾರವಾರ ತಾಲೂಕಿನ ಕದ್ರಾ ಸಮೀಪದ ಬಾಳೆಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಇದರಿಂದಾಗಿ ಕದ್ರಾ ಭಾಗದ ಬಾಳೆಮನೆ, ಸುಳಗೇರಿ ಮತ್ತು ಕೊಡಸಳ್ಳಿ ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಕಡಿತಗೊಂಡಿದೆ.

ಕದ್ರಾದಿಂದ ಕೊಡಸಳ್ಳಿ ಡ್ಯಾಮ್‌ಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾದ ಕಾರಣ, ಕೊಡಸಳ್ಳಿ ಜಲವಿದ್ಯುತ್ ಸ್ಥಾವರದಲ್ಲಿ ಕಾರ್ಯನಿರ್ವಹಿಸುವ ಕೆಪಿಸಿ ಸಿಬ್ಬಂದಿ ಕರ್ತವ್ಯಕ್ಕೆ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅದೃಷ್ಟವಶಾತ್, ಭೂಕುಸಿತ ಸಂಭವಿಸಿದ ಸಮಯದಲ್ಲಿ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇರಲಿಲ್ಲ. ಇದರಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಈ ಹಿಂದೆ, ಜಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ ವಿಜ್ಞಾನಿಗಳು ಕೊಡಸಳ್ಳಿ ಬಳಿ ಗುಡ್ಡ ಕುಸಿಯುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದರೆ ಕೊಡಸಳ್ಳಿ ಡ್ಯಾಮ್‌ಗೂ ತೊಂದರೆಯಾಗಬಹುದು ಎಂದು ಎಚ್ಚರಿಸಿದ್ದರು ಎನ್ನಲಾಗಿದೆ.

ಈ ಘಟನೆಯಿಂದ ಬಾಳೆಮನೆ ಮತ್ತು ಸುಳಗೇರಿ ಪ್ರದೇಶದ ನಿವಾಸಿಗಳ ದೈನಂದಿನ ಜೀವನಕ್ಕೆ ತೊಂದರೆಯಾಗಿದ್ದು, ರಸ್ತೆಯ ಮೇಲಿನ ಕೆಸರು ತೆರವುಗೊಳಿಸುವ ಕಾರ್ಯ ಜಿಲ್ಲಾಡಳಿತದಿಂದ ತೀವ್ರಗತಿಯಲ್ಲಿ ನಡೆಯುತ್ತಿದೆ.

ಇದೊಂದು ಭೂಕುಸಿತಕ್ಕೆ ಒಳಗಾಗುವ ಸೂಕ್ಷ್ಮ ಪ್ರದೇಶವಾಗಿದೆ. ಕೆಲವು ವರ್ಷಗಳ ಹಿಂದೆ ಕೊಡಸಳ್ಳಿಯಲ್ಲಿ ಭೂಕುಸಿತದ ಘಟನೆ ಸಂಭವಿಸಿತ್ತು. ಭೂವಿಜ್ಞಾನಿಗಳ ಸಮೀಕ್ಷೆಯ ಪ್ರಕಾರ, ಪಶ್ಚಿಮ ಘಟ್ಟದ ಭಾಗದಲ್ಲಿ ಭಾರೀ ಮಳೆ, ಕಾಡುಗಳ ಕಡಿತ ಮತ್ತು ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಭೂಕುಸಿತದ ಸಾಧ್ಯತೆ ಹೆಚ್ಚಾಗಿದೆ. ಜೂನ್‌ನಲ್ಲಿ ಕುಮಟಾ-ಶಿರಸಿ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಸಂಚಾರಕ್ಕೆ ತೊಂದರೆಯಾಗಿತ್ತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಭೂಕುಸಿತ ಘಟನೆಗಳು, ಸರಕಾರ ಮತ್ತು ಸ್ಥಳೀಯ ಆಡಳಿತದಿಂದ ಗಂಭೀರ ಕ್ರಮಗಳ ಅಗತ್ಯವನ್ನು ಸೂಚಿಸುತ್ತದೆ. ಭೂವಿಜ್ಞಾನಿಗಳ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದಿರುವುದು, ಅವೈಜ್ಞಾನಿಕ ರಸ್ತೆ ನಿರ್ಮಾಣ, ಕಾಡುಗಳ ಒತ್ತುವರಿ ಮತ್ತು ಅನಿಯಂತ್ರಿತ ಗಣಿಗಾರಿಕೆಯಂತಹ ಚಟುವಟಿಕೆಗಳು ಭೂಕುಸಿತ ಘಟನೆಗಳಿಗೆ ಕಾರಣವಾಗಿವೆ. ಶಿರೂರಿನಲ್ಲಿ ಸಂಭವಿಸಿದ ಗುಡ್ಡಕುಸಿತ ಘಟನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಗಳು ಕಾರಣ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿಬಂದಿದೆ. ಇದು ರಸ್ತೆ ನಿರ್ಮಾಣದಲ್ಲಿ ಭೂವೈಜ್ಞಾನಿಕ ಸಮೀಕ್ಷೆಯ ಮಹತ್ವವನ್ನು ಒತ್ತಿಹೇಳುತ್ತದೆ. ಜಿಲ್ಲಾಡಳಿತವು ಕೇವಲ ತಾತ್ಕಾಲಿಕ ಕ್ರಮಗಳಾದ ಕೆಸರು ತೆರವಿಗೆ ಸೀಮಿತವಾಗದೆ, ದೀರ್ಘಕಾಲೀನ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಬೇಕು. ಉದಾಹರಣೆಗೆ, ಭೂಕುಸಿತಕ್ಕೆ ಒಳಗಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಗಿಡಮರಗಳನ್ನು ನೆಡುವುದು, ರಸ್ತೆ ನಿರ್ಮಾಣದಲ್ಲಿ ತಜ್ಞರ ಸಲಹೆ ಪಡೆಯುವುದು ಮತ್ತು ಸ್ಥಳೀಯರಿಗೆ ಭೂಕುಸಿತದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಗತ್ಯ.

ವಿಶೇಷ ಯೋಜನೆ ಅಗತ್ಯ

ರಾಜ್ಯ ಸರಕಾರವು ಉತ್ತರ ಕನ್ನಡ ಜಿಲ್ಲೆಯಂತಹ ಪಶ್ಚಿಮ ಘಟ್ಟದ ಪ್ರದೇಶಗಳಿಗೆ ಭೂಕುಸಿತ ತಡೆಗಟ್ಟುವ ವಿಶೇಷ ಯೋಜನೆಯನ್ನು ರೂಪಿಸಬೇಕು. ಘಟನೆಗಳಿಂದ ಉಂಟಾಗುವ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟವನ್ನು ಕಡಿಮೆ ಮಾಡಲು ತಕ್ಷಣದ ಕ್ರಮಗಳ ಜೊತೆಗೆ, ಪರಿಸರ ಸಂರಕ್ಷಣೆಗೆ ಒತ್ತು ನೀಡುವುದು ಮುಖ್ಯವಾಗಿದೆ. ಒಟ್ಟಾರೆಯಾಗಿ, ಭೂಕುಸಿತದ ಆತಂಕವನ್ನು ತಗ್ಗಿಸಲು ಸರಕಾರ, ಭೂವಿಜ್ಞಾನಿಗಳು ಮತ್ತು ಸ್ಥಳೀಯ ಸಮುದಾಯಗಳ ಸಹಭಾಗಿತ್ವದಿಂದ ಸಮಗ್ರ ಯೋಜನೆಯೊಂದಿಗೆ ಮುನ್ನಡೆಯಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ.

ದೇಶಾದ್ಯಂತ ಸುದ್ದಿಯಾಗಿದ್ದ ಶಿರೂರು ದುರಂತ

ಕಳೆದ ವರ್ಷ ಜುಲೈ 16ರಂದು ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ ಭಾರೀ ಗಾತ್ರದ ಗುಡ್ಡ ಕುಸಿತವು ರಾಷ್ಟ್ರೀಯ ಹೆದ್ದಾರಿ 66ರಲ್ಲಿ (ಕಾರವಾರ-ಕುಮಟಾ ರಸ್ತೆ) ದೊಡ್ಡ ಮಟ್ಟದ ಹಾನಿಯನ್ನುಂಟು ಮಾಡಿದ್ದು, ದೇಶಾದ್ಯಂತ ಸುದ್ದಿಯಾಗಿತ್ತು. ಈ ಘಟನೆಯಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಮತ್ತು ಆತ ಚಲಾಯಿಸುತ್ತಿದ್ದ ಲಾರಿಯು ಗಂಗಾವಳಿ ನದಿಗೆ ಕೊಚ್ಚಿ ಕೊಂಡು ಹೋಗಿತ್ತು. ಈ ದುರಂತದಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದರೆ, ಇಬ್ಬರು ಇನ್ನೂ ನಾಪತ್ತೆಯಾಗಿದ್ದಾರೆ.

share
ರಝಾ ಮಾನ್ವಿ
ರಝಾ ಮಾನ್ವಿ
Next Story
X