Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೋನಿಗೆ ಬೀಳದ ಚಿರತೆ: ಗ್ರಾಮಸ್ಥರಲ್ಲಿ...

ಬೋನಿಗೆ ಬೀಳದ ಚಿರತೆ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು7 July 2025 12:49 PM IST
share
ಬೋನಿಗೆ ಬೀಳದ ಚಿರತೆ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ರಾಯಚೂರು: ರಾಯಚೂರು ತಾಲೂಕಿನ ಡಿ.ರಾಂಪೂರ(ಡೊಂಗರಾಂಪೂರು) ಗ್ರಾಮದ ಪರಮೇಶ್ವರ ಬೆಟ್ಟದ ಮೇಲೆ ಮೇ ತಿಂಗಳ ಆರಂಭದಲ್ಲಿ ಚಿರತೆ ಕಾಣಿಸಿಕೊಂಡು ಅರಣ್ಯ ಇಲಾಖೆಯ ಬೋನಿಗೆ ಇದುವರೆಗೆ ಸೆರೆಯಾಗದೇ ಗ್ರಾಮದ ಬೆಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಡುತ್ತ ವಾಸವಾಗಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಜೂನ್ ಮೊದಲನೆ ವಾರ ಡಿ.ರಾಂಪೂರ ಗ್ರಾಮದಲ್ಲಿ ಚಿರತೆ ಕಾಣಿಸಿದಾಗ ವಲಯ ಅಥವಾ ಅರಣ್ಯ ಅಧಿಕಾರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಆರಂಭದಲ್ಲಿ ಒಂದು ಬೋನು ಹಾಕಿ ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡದಂತೆ ಎಚ್ಚರಿಕೆ ನೀಡಿ ಹೋಗಿದ್ದರು. ಬಳಿಕ ಬೋನಿನಲ್ಲಿ ಚಿರತೆ ಸೆರೆಯಾಗದ ಕಾರಣ ಬೆಟ್ಟದ ಎರಡು ಬದಿಯಲ್ಲಿ ಬೋನು ಹಾಕಿ ಚಲನ ವಲನದ ಮೇಲೆ ನಿಗಾ ಇಡಲು ಸಿಸಿ ಕ್ಯಾಮರಾ ಅಳವಡಿಸಿ ಹೋಗಿದ್ದರು. ಆದರೆ ಇದಾಗಿ ಒಂದು ತಿಂಗಳಾದರೂ ಇದುವರೆಗೆ ಚಿರತೆ ಬೋನಿಗೆ ಸೆರೆಯಾಗಿಲ್ಲ. ಅರಣ್ಯ ಇಲಾಖೆಯ ನಿಧಾನಗತಿಯ ಕಾರ್ಯಾಚರಣೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಹೊರವಲಯದಲ್ಲಿ ಬೀದಿ ನಾಯಿಗಳು ಹಾಗೂ ಬೆಟ್ಟದಲ್ಲಿರುವ ಅನೇಕ ನವಿಲುಗಳನ್ನು ತಿಂದು ಹಾಕಿ ಇದೀಗ ಗ್ರಾಮದೊಳಗೆ ಪ್ರವೇಶಿಸಲು ಆರಂಭಿಸಿದೆ. ಬೆಟ್ಟದ ಬಂಡೆಗಲ್ಲಿನ ಮೇಲೆ ಪ್ರಾಣಿ ಮಾಂಸ ಹಾಗೂ ಪಕ್ಷಿಗಳನ್ನು ತಿಂದಿರುವ ಕುರುಹು ಕಂಡು ಬಂದಿದೆ. ಗ್ರಾಮದ ಸುತ್ತ ಚಿರತೆ ಹೆಜ್ಜೆ ಗುರುತುಗಳು ಕಾಣಿಸಿಕೊಂಡಿವೆ. ಹೀಗಾಗಿ ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ಗ್ರಾಮದ ಜನ ಮನೆಯಿಂದ ಹೊರಗೆ ಬರಲು ಭಯಪಡುತ್ತಿದ್ದಾರೆ. ಸಂಜೆ ನಂತರ ರಾಯಚೂರು ನಗರಕ್ಕೆ ಬಂದು ಹೋಗಲು ಜನ ಹಿಂಜರಿಯುತ್ತಿದ್ದಾರೆ.

ಗ್ರಾಮದ ಅಂಚಿನಲ್ಲಿರುವ ಕಾವಲಿ ಅಶೋಕ ಅವರ ಮನೆಯ ಕೊಟ್ಟಿಗೆಯಲ್ಲಿ ಮೂರು ದನಗಳನ್ನು ಕಟ್ಟಲಾಗುತ್ತಿದೆ. ದನಗಳ ವಾಸನೆಯ ಜಾಡು ಹಿಡಿದು ಚಿರತೆ ಬಾಗಿಲವರೆಗೂ ಬಂದು ಹೋಗಿದೆ.

ಬೆಟ್ಟ, ನದಿ ದಂಡೆಯಲ್ಲಿ ಹೊಲಗದ್ದೆಗಳಿದ್ದು ಕೃಷಿ ಚಟುವಟಿಕೆ ಮಾಡಲು, ರಾತ್ರಿ ವೇಳೆ ಪಂಪ್ ಸೆಟ್ ಹಾಕಲು ರೈತರು ಭಯಭೀತರಾಗಿದ್ದಾರೆ.

ಚಿರತೆಯ ಹೆಜ್ಜೆ ಗುರುತುಗಳನ್ನು ಮೊಬೈಲ್ ಕ್ಯಾಮರಾದಲ್ಲಿ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಹೋಗಿ ತೋರಿಸಲಾಗಿದೆ. 15 ದಿನಗಳ ಹಿಂದೆ ದನಗಳಿಗೆ ಮೇವು ತರಲು ಹೊಲಗಳಿಗೆ ಹೋಗುವ ಮೊದಲು ಗ್ರಾಮಸ್ಥರು ಡ್ರೋನ್ ಕ್ಯಾಮರಾದಿಂದ ಬೆಟ್ಟದ ಮೇಲೆ ವೀಕ್ಷಣೆ ಮಾಡಿದಾಗ ಚಿರತೆ ಬಂಡೆಗಲ್ಲಿನ ಮೇಲೆ ಕುಳಿತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಡ್ರೋನ್ ಶಬ್ದಕ್ಕೆ ಬಂಡೆಗಲ್ಲಿನ ಮಧ್ಯೆ ಓಡಿ ಹೋಗಿದೆ.

ಮೇ20ರಂದು ಡಿ.ರಾಂಪುರದ ಬೆಟ್ಟದಲ್ಲಿ ಚಿರತೆ ಬಂದಿರುವುದು ದೃಢಪಟ್ಟಿದೆೆ. ಎರಡೂವರೆ ಮೂರು ವರ್ಷದ ಚಿರತೆ ಪರಮೇಶ್ವರ ಬೆಟ್ಟದಲ್ಲಿ ಬಂಡೆಗಲ್ಲಿನ ಮಧ್ಯೆ ನೆಲೆಯೂರಿರುವ ಶಂಕೆ ಇದೆ. 15 ದಿನಗಳ ಹಿಂದೆ ಡ್ರೋನ್ ಕ್ಯಾಮರಾ ನೆರವಿನಿಂದಲೂ ಚಿರತೆಯನ್ನು ಗುರುತಿಸಲಾಗಿದೆ. ಗ್ರಾಮಸ್ಥರಿಗೆ ರಾತ್ರಿ ವೇಳೆ ಓಡಾಡದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಡಂಗೂರ ಸಾರಲಾಗಿದೆ. ಅಲ್ಲದೇ ಇಬ್ಬರು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಬೆಟ್ಟದಲ್ಲಿ ಚಿರತೆಗೆ ಬೇಕಾಗುವ ಆಹಾರ ಸಿಗುವ ಕಾರಣ ಬೋನಿನ ಬಳಿ ಸುಳಿಯುತ್ತಿಲ್ಲ, ಸೆರೆ ಹಿಡಿಯಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ.

-ರಾಜೇಶ ನಾಯಕ, ರಾಯಚೂರು ತಾಲೂಕು ವಲಯ ಅರಣ್ಯ ಅಧಿಕಾರಿ

ಅರಣ್ಯ ಇಲಾಖೆಯ ಚಿರತೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿ ತಿಂಗಳಾದರೂ ಇದುವರೆಗೆ ಸೆರೆಯಾಗಿಲ್ಲ, ಕೇವಲ ಎರಡು ಬೋನು ಹಾಕಿ ಕಾಟಾಚಾರಕ್ಕೆ ಸಿಬ್ಬಂದಿ ನೇಮಕ ಮಾಡಿದರೆ ಸಾಲದು, ಚಿರತೆ ಬೋನಿಗೆ ಯಾಕೆ ಬೀಳುತ್ತಿಲ್ಲ ಎಂಬ ಬಗ್ಗೆ ಆಲೋಚಿಸಿ ಬೇರೆ ಮಾರ್ಗ ಕಂಡು ಹಿಡಿಯಬೇಕು. ನವಿಲು,ನಾಯಿಗಳನ್ನು ತಿಂದು ಮುಗಿಸಿದ ಚಿರತೆ ಮುಂದೆ ದನಕರುಗಳು ಹಾಗೂ ಮಾನವರ ಮೇಲೆ ದಾಳಿ ಮಾಡಲೂಬಹುದು, ಪ್ರಾಣ ಹಾನಿ ಸಂಭವಿಸುವ ಮುಂಚೆ ಅರಣ್ಯ ಇಲಾಖೆಯವರು ಕಾರ್ಯಾಚರಣೆ ಚುರುಕುಗೊಳಿಸಬೇಕು.

-ರಂಗನಾಥಗೌಡ ಪೊಲೀಸ್ ಪಾಟೀಲ್, ರೈತ ಮುಖಂಡ.

share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X