Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರವು ಈ ಆದೇಶವನ್ನು ಹಿಂಪಡೆಯಲಿ

ಸರಕಾರವು ಈ ಆದೇಶವನ್ನು ಹಿಂಪಡೆಯಲಿ

ಜ್ಯೋತಿ ಚೇಳಾರುಜ್ಯೋತಿ ಚೇಳಾರು15 Jun 2024 3:37 PM IST
share

ಮಾನ್ಯರೇ,

ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ( ಪದವಿ ಪೂರ್ವ) ದಿನಾಂಕ 12.06.2024ರ ಸೇರ್ಪಡೆ ಆದೇಶದಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಅತಿಥಿ ಉಪನ್ಯಾಸಕರು ಕಡ್ಡಾಯವಾಗಿ ಬಿಎಡ್ ಪದವಿಯನ್ನು ಹೊಂದಿರಬೇಕು ಎಂದು ತಿಳಿಸಿದ್ದಾರೆ. ಆದರೆ ಹೆಚ್ಚಿನ ಪದವಿ ಪೂರ್ವ ಕಾಲೇಜುಗಳಲ್ಲಿ ಎಷ್ಟೋ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅನೇಕ ಅತಿಥಿ ಉಪನ್ಯಾಸಕರು ಬಿ.ಎಡ್. ಪದವಿಯನ್ನು ಹೊಂದಿರುವುದಿಲ್ಲ. ವಾಣಿಜ್ಯಶಾಸ್ತ್ರ, ಲೆಕ್ಕಶಾಸ್ತ್ರ, ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ, ಇಂಗ್ಲಿಷ್- ಮುಂತಾದ ವಿಷಯಗಳಿಗೆ ಬಿ.ಎಡ್. ಪದವಿ ಪಡೆದಂತಹ ಅಭ್ಯರ್ಥಿಗಳು (ರೂ.12,000 ಮಾಸಿಕ ಸಂಭಾವನೆಯಲ್ಲಿ ಕರ್ತವ್ಯ ನಿರ್ವಹಿಸಲಿಕ್ಕೆ) ಲಭ್ಯವಿರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಂತೂ ಈ ಸಮಸ್ಯೆ ಅಗಾಧವಾಗಿದೆ.

ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸುವಾಗ ವೃಂದ ಮತ್ತು ನೇಮಕಾತಿ ನಿಯಮಗಳು ಪೂರ್ಣವಾಗಿ ಅನ್ವಯಿಸದಿರುವಾಗ ಪದವಿ ಪೂರ್ವ ಕಾಲೇಜುಗಳಿಗೆ ಏಕೆ ಪರಿಪೂರ್ಣವಾಗಿ ಈ ನಿಯಮವನ್ನು ಅನ್ವಯಿಸಲಾಗುತ್ತದೆ?. ಅಲ್ಲಿ ಪಿಎಚ್‌ಡಿ/ಎನ್‌ಇಟಿ/ಕೆ ಸೆಟ್ ಪಾಸ್ ಆದವರಿಗೆ ಮತ್ತು ಆಗದವರಿಗೆ ಪ್ರತ್ಯೇಕ ಸಂಭಾವನೆ ನಿಗದಿಪಡಿಸಲಾಗುತ್ತಿದೆ. ಹಾಗೆಯೇ ಪದವಿ ಪೂರ್ವ ಕಾಲೇಜುಗಳಲ್ಲಿ ಕೂಡ ಬಿ.ಎಡ್. ಆದವರಿಗೆ ಮತ್ತು ಬಿ.ಎಡ್. ಆಗದವರಿಗೆ ಏಕೆ ಪ್ರತ್ಯೇಕ ಸಂಭಾವನೆಯನ್ನು ನಿಗದಿಗೊಳಿಸಲು ಸಾಧ್ಯವಾಗುವುದಿಲ್ಲ?. ಇದರಿಂದ ಎಷ್ಟೋ ವರ್ಷಗಳಿಂದ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಾ ತಮ್ಮ ಕುಟುಂಬವನ್ನು ಪೋಷಿಸುತ್ತಿರುವವರಿಗೆ ಬದುಕು ಕೊಟ್ಟಂತಾಗುತ್ತದೆ. ಅಲ್ಲದೆ ಬಿಎಡ್ ಪದವಿ ಪಡೆದಿರುವಂತಹ ಅತಿಥಿ ಉಪನ್ಯಾಸಕರನ್ನು ಹುಡುಕಿ ತರುವ ಸಂಕಟವೂ ಪ್ರಾಂಶುಪಾಲರಿಗೆ ಇರುವುದಿಲ್ಲ.

ಕಳೆದ 11 ವರ್ಷಗಳಿಂದ ಪದವಿ ಪೂರ್ವ ಕಾಲೇಜುಗಳಿಗೆ ಉಪನ್ಯಾಸಕರ ನೇಮಕವಾಗಿಲ್ಲ. ಇದರಿಂದ ಉಪನ್ಯಾಸಕರ ಹುದ್ದೆಗಳು ಖಾಲಿ ಉಳಿದಿದೆ. ಸರಕಾರವು ಪ್ರತೀ ವರ್ಷವೂ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳುತ್ತಿದ್ದು, ಇದರಿಂದ ಸರಕಾರಿ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಗುಣಾತ್ಮಕ ಶಿಕ್ಷಣವು ಸಾಧ್ಯವಾಗಿದೆ. ಇಲಾಖೆಯ ಮೇಲಿನ ಆದೇಶದಿಂದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಸಾಧ್ಯವಾಗದೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣವು ಗಗನ ಕುಸುಮವಾಗಲಿದೆ.

ಆದುದರಿಂದ ಸರಕಾರವು ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕಾಗಿ ವಿನಂತಿ.

share
ಜ್ಯೋತಿ ಚೇಳಾರು
ಜ್ಯೋತಿ ಚೇಳಾರು
Next Story
X