Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಿವೇಶನಕ್ಕಾಗಿ 17 ದಿನಗಳಿಂದ ಧರಣಿ...

ನಿವೇಶನಕ್ಕಾಗಿ 17 ದಿನಗಳಿಂದ ಧರಣಿ ನಡೆಸುತ್ತಿರುವ ಲೈನ್‌ಮನೆ ನಿವಾಸಿಗಳು

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ12 May 2025 7:19 AM IST
share
ನಿವೇಶನಕ್ಕಾಗಿ 17 ದಿನಗಳಿಂದ ಧರಣಿ ನಡೆಸುತ್ತಿರುವ ಲೈನ್‌ಮನೆ ನಿವಾಸಿಗಳು

ಮಡಿಕೇರಿ : ಕಳೆದ 17 ದಿನಗಳಿಂದ ಬಹುಜನ ಕಾರ್ಮಿಕ ಸಂಘ ಕೊಡಗು ಜಿಲ್ಲಾ ಸಮಿತಿ, ಭೂಮಿ ಹಾಗೂ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಅಮ್ಮತ್ತಿ ಹಾಗೂ ಕಾರ್ಮಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ 100ಕ್ಕೂ ಹೆಚ್ಚು ನಿವೇಶನ ರಹಿತರು ಅಮ್ಮತ್ತಿ ನಾಡ ಕಚೇರಿಯ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ, ತೋಟದ ಲೈನ್ ಮನೆಗಳಲ್ಲೇ ಜೀವನ ನಡೆಸುತ್ತಿರುವ 100 ಅಧಿಕ ಕುಟುಂಬಗಳು ತಮ್ಮ ದಿನನಿತ್ಯ ಕೂಲಿ ಕೆಲಸ ಎಲ್ಲವನ್ನೂ ಬಿಟ್ಟು ಸ್ವಂತ ಭೂಮಿಗಾಗಿ ಹೋರಾಟ ನಡೆಸುತ್ತಿದ್ದು, ಜಿಲ್ಲಾಡಳಿತ, ಸ್ಥಳೀಯ ಗ್ರಾಮ ಪಂಚಾಯತ್ ಸ್ಪಂದಿಸುತ್ತಿಲ್ಲ ಎಂದು ಧರಣಿನಿರತರು ಆರೋಪಿಸುತ್ತಿದ್ದಾರೆ.

‘ನಾವು ಹುಟ್ಟಿದ್ದು, ಬೆಳೆದಿದ್ದು ತೋಟದ ಲೈನ್ ಮನೆಗಳಲ್ಲೇ, ನಮ್ಮ ತಾತಂದಿರ ಕಾಲದಿಂದಲೂ ತೋಟದ ಲೈನ್ ಮನೆಗಳಲ್ಲಿ ಜೀವನ ನಡೆಸುತ್ತಿದ್ದೇವೆ. ಹಲವು ಬಾರಿ ನಿವೇಶನಕ್ಕಾಗಿ ಅರ್ಜಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ತೋಟದಲ್ಲಿ ಸಂಬಳವೂ ಹೆಚ್ಚು ಕೊಡಲ್ಲ. ನಮಗೆ ಸ್ವಂತ ಮನೆ ಮಾತ್ರ ಕೊಟ್ಟರೆ ಸಾಕು’ ಎಂದು ಮಹಿಳೆಯೊಬ್ಬರು ಅಳಲು ತೋಡಿಕೊಂಡರು.

ಅಮ್ಮತ್ತಿ ಕಾರ್ಮಾಡು ಹೋಬಳಿಯ ಸರಕಾರಿ ಜಾಗದ ಸರ್ವೇ ನಂಬರ್ 151, 155, 1731, 33, 8811, 29512, 541, 2413, 1371, 2902ರಲ್ಲಿ ಕಂದಾಯ ಇಲಾಖೆ ಸರ್ವೇ ನಡೆಸಿ ಜಾಗವನ್ನು ಗುರುತಿಸಬೇಕೆಂದು ನಿವೇಶನ ರಹಿತರು ಒತ್ತಾಯಿಸಿದ್ದಾರೆ.

‘ಅಮ್ಮತ್ತಿ ಹೋಬಳಿಯಲ್ಲಿ, ತಲೆತಲಾಂತರದಿಂದಲೂ ದಲಿತರು, ಆದಿವಾಸಿಗಳು ಲೈನ್ ಮನೆಗಳಲ್ಲೇ ವಾಸಿಸುತ್ತಿದ್ದಾರೆ. ಭೂ ಮಾಲಕರು ನಿವೇಶನ ರಹಿತರಿಗೆ ಸೂರು ಕೊಡಲು ಬಿಡುತ್ತಿಲ್ಲ.ಸರಕಾರದ ಮಟ್ಟದಲ್ಲಿ ಪ್ರಭಾವ ಬೀರುತ್ತಿದ್ದಾರೆ. ಲೈನ್ ಮನೆಗಳಲ್ಲಿ ಜನರು ಇರುವುದಿಲ್ಲ ಎಂಬ ಕಾರಣದಿಂದಾಗಿ ಭೂ ಮಾಲಕರು ಸೂರು ಕೊಡಲು ಬಿಡುತ್ತಿಲ್ಲ. ಸರಕಾರಿ ಪೈಸಾರಿ ಭೂಮಿ ನೀಡಲು ನೂರೊಂದು ಕಾರಣ ಹೇಳುತ್ತಾರೆ. ಬಡವರಿಗೆ ನಿವೇಶನ ಕೊಟ್ಟರೆ ಶ್ರೀಮಂತರ ಹಿಡಿತದಲ್ಲಿ ಕಾರ್ಮಿಕರು ಇರುವುದಿಲ್ಲ ಎಂಬ ಭಾವನೆ ಇಟ್ಟುಕೊಂಡು, ದಲಿತರನ್ನು ಕೇವಲ ಮತಕ್ಕಾಗಿ ಬಳಸುತ್ತಿದ್ದಾರೆ. ದಲಿತರ ಕೂಗು ಜಿಲ್ಲಾಡಳಿತಕ್ಕೆ ಕೇಳುತ್ತಿಲ್ಲ. ಎಕರೆಗಟ್ಟಲೆ ಭೂಮಿ ಸರಕಾರ ಶ್ರೀಮಂತರಿಗೆ ಕೊಡುತ್ತಿದೆ. ಜೀತ ಮುಕ್ತವಾಗಬೇಕೆಂದು ಹೇಳುತ್ತಾರೆ ಆದರೆ ಇನ್ನೂ ಕೊಡಗಿನಲ್ಲಿ ಜೀತ ಪದ್ಧತಿ ಜೀವಂತವಾಗಿದೆ. ಅಮ್ಮತ್ತಿ ಹೋಬಳಿ ವ್ಯಾಪ್ತಿಯಲ್ಲಿ ಎಕರೆಗಟ್ಟಲೆ ಸರಕಾರಿ ಪೈಸಾರಿ ಜಾಗವನ್ನು ಅತಿಕ್ರಮಿಸಿದ್ದಾರೆ. ಆದರೆ ನಿವೇಶನ ಇಲ್ಲದವರಿಗೆ ಕೊಡುತ್ತಿಲ್ಲ. ಸೂರು ನೀಡದೆ ನಾವು ಇಲ್ಲಿಂದ ಕದಲುವುದಿಲ್ಲ. ಇಲ್ಲಿಂದ ಹೋಗಬೇಕೆಂದರೆ ನಮಗೆ ಭೂಮಿ ಕೊಡಬೇಕು’ ಎಂದು ಬಹುಜನ ಕಾರ್ಮಿಕ ಸಂಘದ ಜಿಲ್ಲಾ ಪದಾಧಿಕಾರಿ ಮಹದೇಶ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಸ್ಥಳೀಯ ಗ್ರಾಮ ಪಂಚಾಯತ್‌ಗೆ ನಿವೇಶನ ನೀಡುವಂತೆ ಒತ್ತಾಯಿಸಿ ಹಲವು ಬಾರಿ ನಾವು ಮನವಿ ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಅಮ್ಮತ್ತಿ ಕಾರ್ಮಾಡು ಹೋಬಳಿಯ 541 ಸರಕಾರಿ ಕಂದಾಯ ಪೈಸಾರಿ ಜಾಗದಲ್ಲಿ ಟೆಂಡ್ ಹಾಕಿ ನಿವೇಶನ ನೀಡುವಂತೆ ಒತ್ತಾಯಿಸಿ ಅಲ್ಲಿಯೇ ಇದ್ದೆವು. ಏಕಾಏಕಿ ಉಪತಹಶೀಲ್ದಾರ್ ಟೆಂಡ್ ತೆರವುಗೊಳಿಸಿ ನೀರಿನ ಟ್ಯಾಂಕ್ ಒಡೆದುಹಾಕಿದ್ದಾರೆ. ಇದೀಗ ನಾವು 17 ದಿನಗಳಿಂದ ಧರಣಿ ನಡೆಸುತ್ತಿದ್ದೇವೆ. ನಿವೇಶನ ರಹಿತರಿಗೆ ಭೂಮಿ ಗುರುತಿಸಿ, ನಿವೇಶನ ನೀಡುವವರೆಗೆ ನಾವು ಇಲ್ಲಿಂದ ತೆರಳುವುದಿಲ್ಲ.ಜಿಲ್ಲಾಡಳಿತ ಭೂಮಾಲಕರ ಪರವಾಗಿ ಕೆಲಸ ಮಾಡುತ್ತಿರುವುದು ನೋವಿನ ಸಂಗತಿ. ಆದಿವಾಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಜೀತದಾಳುವಾಗಿ ದುಡಿಸಿಕೊಳ್ಳುತ್ತಿದ್ದಾರೆ.

- ಪಾಪಣ್ಣ ಅಮ್ಮತ್ತಿ, ನಿವೇಶನ ರಹಿತ ಹೋರಾಟ ಸಮಿತಿ ಪ್ರಮುಖ

ತೋಟದ ಲೈನ್ ಮನೆಗಳಲ್ಲಿ ಜೀವನ ನಡೆಸಲು ಸ್ವಾತಂತ್ರ್ಯವೇ ಇಲ್ಲದ ಪರಿಸ್ಥಿತಿ ನಮ್ಮದು. ನನಗೆ ತಂದೆ ಇಲ್ಲ. ತಾಯಿ ಒಬ್ಬಳೇ ಆಸರೆ. ತೋಟದ ಲೈನ್ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ನಮಗೆ ಸರಕಾರ ಸ್ವಂತ ನಿವೇಶನ ಕೊಡಬೇಕು.

- ಗಗನ, ಅಮ್ಮತ್ತಿ ಕಾರ್ಮಾಡು

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X