Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಡಿಕೇರಿ: ಉದ್ಘಾಟನೆಗೆ ಸಜ್ಜುಗೊಂಡ ‘ಮಿನಿ...

ಮಡಿಕೇರಿ: ಉದ್ಘಾಟನೆಗೆ ಸಜ್ಜುಗೊಂಡ ‘ಮಿನಿ ವಿಧಾನ ಸೌಧ’

ಕೆ.ಎಂ.ಇಸ್ಮಾಯೀಲ್ ಕಂಡಕರೆಕೆ.ಎಂ.ಇಸ್ಮಾಯೀಲ್ ಕಂಡಕರೆ10 Feb 2025 12:41 PM IST
share
ಮಡಿಕೇರಿ: ಉದ್ಘಾಟನೆಗೆ ಸಜ್ಜುಗೊಂಡ ‘ಮಿನಿ ವಿಧಾನ ಸೌಧ’

ಮಡಿಕೇರಿ: ಕಳೆದ 9 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಕಂದಾಯ ಇಲಾಖೆಯ ವಿವಿಧ ಕಚೇರಿಗಳನ್ನು ಒಳಗೊಂಡಿರುವ ಮಿನಿ ವಿಧಾನ ಸೌಧ(ತಾಲೂಕು ಕಚೇರಿ ಸಂಕೀರ್ಣ) ಕಟ್ಟಡ ಕಾಮಗಾರಿ ಬರದಿಂದ ಸಾಗಿದ್ದು, ಉದ್ಘಾಟನೆಗೆ ಸಜ್ಜುಗೊಂಡಿದೆ.

ಮಡಿಕೇರಿ ನಗರದ ಕೋಟೆ ಬಳಿಯಿರುವ ತಾಲೂಕು ಕಚೇರಿಯನ್ನು ತೆರವುಗೊಳಿಸಬೇಕೆಂದು ಪ್ರಾಚ್ಯವಸ್ತು ಇಲಾಖೆಯಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಕಾನ್ವೆಂಟ್ ಜಂಕ್ಷನ್‌ನ ಬಳಿ ಇರುವ ಖಾಲಿ ಜಾಗವನ್ನು ಗುರುತಿಸಿ ಅಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಯಿತು. ಅಲ್ಲದೆ, ತಾಲೂಕು ಆಡಳಿತ ಒಂದೇ ಸೂರಿನಡಿ ದೊರೆಯಲು ಸರಕಾರ ಯೋಜನೆ ರೂಪಿಸಿ ಪ್ರತಿ ತಾಲೂಕಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಇಟ್ಟಿತ್ತು. ಮೊದಲ ಹಂತದ ಕಾಮಗಾರಿ ಶೀಘ್ರದಲ್ಲಿಯೇ ಪೂರ್ಣ ಗೊಂಡಿತ್ತಾದರೂ ಮೇಲಂತಸ್ತಿನ ಕಾಮಗಾರಿ ಅನುದಾನದ ಕೊರತೆಯಿಂದಾಗಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅನುದಾನದ ಭರವಸೆ ದೊರೆತ ಮೇರೆಗೆ ಕಾಮಗಾರಿಯ ಗುತ್ತಿಗೆವಹಿಸಿಕೊಂಡಿರುವ ಗೃಹನಿರ್ಮಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆಯಾದರೂ ಕಚೇರಿಗಳ ಒಳವಿನ್ಯಾಸ ಗುತ್ತಿಗೆಯ ಕರಾರಿನಲ್ಲಿ ಒಳಪಡದೇ ಇರುವುದರಿಂದ ಆ ಕೆಲಸ ಕಾರ್ಯಗಳನ್ನು ಸಂಬಂಧಿಸಿದ ಇಲಾಖೆ ಮಾಡಿಕೊಳ್ಳಬೇಕಾಗಿದೆ. ಕಿಟಕಿ, ಬಾಗಿಲು, ಮೆಟ್ಟಿಲುಗಳಿಗೆ ರೇಲಿಂಗ್ಸ್‌ಗಳನ್ನು ಗುತ್ತಿಗೆದಾರರು ಅಳವಡಿಸಿದ್ದಾರೆ. ಕಟ್ಟಡ ಶೀಘ್ರ ಉದ್ಘಾಟನೆಗೊಳ್ಳಲು ಸಜ್ಜುಗೊಳ್ಳುತ್ತಿದೆ.

ಕಟ್ಟಡದ ಮುಂಭಾಗದಲ್ಲಿ ಮುಖ್ಯರಸ್ತೆವರೆಗೆ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಇನ್ನುಳಿದಂತೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲ್ದಾಣಕ್ಕೆ ಮೀಸಲಿಟ್ಟಿರುವ ಜಾಗ ಧೂಳುಮಯವಾಗಿದ್ದು, ಇದಕ್ಕೂ ಡಾಂಬಾರ್ ಅಥವಾ ಕಾಂಕ್ರಿಟ್ ಅನ್ನು ಕಂದಾಯ ಇಲಾಖೆಯೇ ಹಾಕಬೇಕಿದೆ.

ಅಂಗಡಿಗಳ ತೆರವು:

ಮಿನಿ ವಿಧಾನಸೌಧ ನಿರ್ಮಾಣವಾಗಿರುವ ಮುಂಭಾಗದಲ್ಲಿನ ರಸ್ತೆ ಬದಿಯಲ್ಲಿ ಹಲವಾರು ವರ್ಷಗಳಿಂದ ಕೆಲವು ಸಣ್ಣ ಸಣ್ಣ ಅಂಗಡಿ, ಹೊಟೇಲ್, ವರ್ಕ್‌ಶಾಪ್, ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಇದೀಗ ಮಿನಿ ವಿಧಾನಸೌಧ ನಿರ್ಮಾಣ ಕಾರ್ಯ ಪೂರ್ಣಗೊಂಡು ಹಸ್ತಾಂತರ ಕಾರ್ಯವಾಗುತ್ತಿರುವುದರಿಂದ ಅಲ್ಲಿದ್ದ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಲಾಗಿದೆ.

ಈಗಾಗಲೇ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ಒಳವಿನ್ಯಾಸ ಕೆಲಸಗಳು ಬಾಕಿಯಿದೆ. ಒಳವಿನ್ಯಾಸ ಹಾಗೂ ಪೀಠೋಪಕರಣಕ್ಕಾಗಿ 40ಲಕ್ಷ ರೂ. ಮೊತ್ತದ ಪ್ರಸ್ತಾವ ಸಲ್ಲಿಸಲಾಗಿತ್ತು. ಈ ಪೈಕಿ ಒಳ ವಿನ್ಯಾಸಕ್ಕಾಗಿ 12.50 ಲಕ್ಷ ರೂ. ಮಂಜೂರಾಗಿದೆ. ಆದಷ್ಟು ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು. ಫೆಬ್ರವರಿ 2ನೇ ವಾರದಲ್ಲಿ ಕಂದಾಯ ಸಚಿವರು ಜಿಲ್ಲೆಗೆ ಆಗಮಿಸುವುದಾಗಿ ತಿಳಿಸಿದ್ದು, ಶೀಘ್ರದಲ್ಲಿ ಉದ್ಘಾಟಿಸಲಾಗುವುದು.

-ಪ್ರವೀಣ್ ಕುಮಾರ್, ತಹಶೀಲ್ದಾರ್, ಮಡಿಕೇರಿ ತಾಲೂಕು

ಏನೇನಿದೆ?

ಮೂರು ಅಂತಸ್ತು ಒಳಗೊಂಡಿರುವ ಕಟ್ಟಡ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಕಚೇರಿ ಒಳಗೊಳ್ಳಲಿದೆ. ಮೀಟಿಂಗ್ ಹಾಲ್, ಸಬ್ ರಿಜಿಸ್ಟರ್ ಕಚೇರಿ, ಕಂದಾಯ ಇಲಾಖೆಯ ಖಜಾನೆ, ಪಹಣಿ ಕೇಂದ್ರ, ಶಾಸಕರ ಕಚೇರಿಗಳು, ಆರ್‌ಟಿಸಿ ನೀಡುವ ಸಿಬ್ಬಂದಿ ಕಚೇರಿ, ಚುನಾವಣೆ ಸಂದರ್ಭ ಸಭೆ ನಡೆಸಲು ಸಭಾಂಗಣ ನಿರ್ಮಾಣದ ಯೋಜನೆಯನ್ನು ಮಿನಿ ವಿಧಾನಸೌಧ ಒಳಗೊಂಡಿದೆ.

2016ರಲ್ಲಿ ಆರಂಭ

ಮಡಿಕೇರಿ ನಗರದ ಕಾನ್ವೆಂಟ್ ಜಂಕ್ಷನ್ ಬಳಿಯ 1.5 ಎಕರೆ ಪ್ರದೇಶದಲ್ಲಿ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿ 2016ರಲ್ಲಿ ಆರಂಭಗೊಂಡಿತ್ತು. 5 ಕೋಟಿ ರೂ. ವೆಚ್ಚದ ಯೋಜನೆಯಲ್ಲಿ ಮೊದಲ ಹಂತದಲ್ಲಿ ಕಟ್ಟಡ ತಲೆಎತ್ತಲು ಆರಂಭಿಸಿತು. ಸುತ್ತಲೂ ಗೋಡೆ, ಸ್ಲ್ಯಾಬಿಂಗ್ ಸೇರಿದಂತೆ ಇನ್ನಿತರ ಕೆಲಸಗಳು ನಡೆದಿದ್ದವು. ಉಳಿದ ಕಾಮಗಾರಿ ಕೆಲ ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡು ಮಿನಿ ವಿಧಾನಸೌಧ ಕಟ್ಟಡ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಇದೀಗ ಗೃಹನಿರ್ಮಾಣ ಸಂಸ್ಥೆ ವತಿಯಿಂದ ಕಟ್ಟಡದ ಸಂಪೂರ್ಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ.

share
ಕೆ.ಎಂ.ಇಸ್ಮಾಯೀಲ್ ಕಂಡಕರೆ
ಕೆ.ಎಂ.ಇಸ್ಮಾಯೀಲ್ ಕಂಡಕರೆ
Next Story
X