Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯುವಜನರಿಗಾಗಿ ಯೋಜನೆಗಳನ್ನು ರೂಪಿಸಿ

ಯುವಜನರಿಗಾಗಿ ಯೋಜನೆಗಳನ್ನು ರೂಪಿಸಿ

ಶ್ರೇಯಾಶ್ರೇಯಾ12 Jan 2024 11:56 AM IST
share
ಯುವಜನರಿಗಾಗಿ ಯೋಜನೆಗಳನ್ನು ರೂಪಿಸಿ

ಯುವ ಸಮುದಾಯವನ್ನು ನಮ್ಮ ಸುತ್ತಲಿನ ಸಮಾಜ ಯಾವತ್ತಿಗೂ ಜವಾಬ್ದಾರಿ ರಹಿತ, ಅಶಿಸ್ತಿನಿಂದ ಕೂಡಿದ, ಗುರುಹಿರಿಯರಿಗೆ ಗೌರವಕೊಡದ ಒಂದು ಗುಂಪು ಎಂಬುದಾಗಿ ನೋಡಿರುವುದೇ ಹೆಚ್ಚು. ಆದರೆ, ಮೂಲಭೂತವಾಗಿ ಯುವಸಮುದಾಯ ಹಾಗೆ ಇರುವುದು ನಿಜವೇ ಎಂದು ನೋಡಿದರೆ, ಇದೊಂದು ಕಟ್ಟಿಕೊಂಡಿರುವ ಮನಸ್ಥಿತಿ ಎನ್ನುವುದು ಭಾಸವಾಗುತ್ತದೆ. ಎಲ್ಲಾ ವಯೋ ಮಾನದ ವ್ಯಕ್ತಿಗಳ ಗುಂಪಿನಲ್ಲಿಯೂ ಇಂತಹವರು ಇರುವುದು ಇದ್ದದ್ದೇ. ಹಾಗಿರುವಾಗ ಯುವ ಸಮುದಾಯವನ್ನು ಮಾತ್ರ ಈ ನೆಲೆಯಲ್ಲಿ ಆರೋಪಿಸುವುದು ಸಮಂಜಸವೂ ಅಲ್ಲ, ಸಾಧುವೂ ಅಲ್ಲ.

ಇವತ್ತು ಯುವಸಮುದಾಯ ಅತಿಹೆಚ್ಚು ಸಾಮರ್ಥ್ಯವನ್ನು ವೃದ್ಧಿಸಿಕೊಂಡು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಂಡಿದೆ. ಡಿಜಿಟಲ್ ತಂತ್ರಾಂಶದ ಜೊತೆಗೆ ತಮ್ಮನ್ನು ಅನುದಿನವೂ ಅಪ್‌ಡೇಟ್ ಮಾಡಿಕೊಳ್ಳುತ್ತಿದೆ. ದೊಡ್ಡವರು ಅನ್ನಿಸಿಕೊಳ್ಳುವವರು ತಮ್ಮ ಯುವ ವಯಸ್ಸಿನಲ್ಲಿ ಎಷ್ಟು ಸ್ಮಾರ್ಟ್ ಇದ್ದರೋ ಅದಕ್ಕಿಂತ ಅನೇಕ ಪಟ್ಟು ಹೆಚ್ಚು ಇಂದಿನ ಯುವಸಮುದಾಯ ಇದೆ. ಹೀಗಿರುವಾಗ ಯುವಸಮುದಾಯವನ್ನು ಹೀಗೆಳೆಯುವುದು ಸಮರ್ಥನೀಯವಲ್ಲ.

ಜನಸಮುದಾಯ ಯುವಜನರನ್ನು ಈ ದೇಶದ ಜವಾಬ್ದಾರಿಯುತ ನಾಗರಿಕರನ್ನಾಗಿ ಕಾಣುವ ಮತ್ತು ಅವರಿಗೆ ದೊರಕಬೇಕಾದ ಎಲ್ಲಾ ಹಕ್ಕುಗಳನ್ನು ಒದಗಿಸಿಕೊಡುವ ಕಡೆಗೆ ಸರಕಾರ ಗಮನ ನೀಡಬೇಕು. ಯುವಜನರಿಗೆ ಪೌಷ್ಟಿಕ ಆಹಾರ ದೊರಕಬೇಕಾದುದು ಅವರ ಹಕ್ಕು. ಸರಕಾರ ಇದನ್ನು ಖಾತ್ರಿಪಡಿಸುವ ಸಲುವಾಗಿ ಇಂದಿರಾ ಕ್ಯಾಂಟೀನ್ ಮಾದರಿಯ ಯೋಜನೆ ಅಥವಾ ಬಿಸಿಯೂಟ ಯೋಜನೆಯ ವಿಸ್ತರಣೆಯನ್ನು ಕಾಲೇಜುಗಳಿಗೂ ಮಾಡಬೇಕಿದೆ.

ಕಾಲೇಜುಗಳಲ್ಲಿ ಯುವಜನರ ಮಾನಸಿಕ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಆಪ್ತಸಮಾಲೋಚಕರ ನೇಮಕಾತಿ ಮತ್ತೊಂದು ಇಂದಿನ ಅಗತ್ಯತೆ. ಇತ್ತೀಚೆಗೆ ಒತ್ತಡ, ಮಾನಸಿಕ ಕಾಯಿಲೆ, ಒಂಟಿತನ, ಮೊಬೈಲ್ ಗೀಳು, ಮಾದಕ ವ್ಯಸನ ಮುಂತಾದವುಗಳಿಂದ ಮನೋವೇದನೆಗೆ ಒಳಗಾಗುವ ಮತ್ತು ಆತ್ಮಹತ್ಯೆಯಂತಹ ಯೋಚನೆಯ ಕಡೆಗೆ ಹೊರಳುವ ಯುವಜನರ ಸಂಖ್ಯೆ ಹೆಚ್ಚಾಗಿರು ವುದು ಕಳವಳಕಾರಿ. ಯುವಜನರ ತುಮುಲ, ಆತಂಕ, ಗಲಿಬಿಲಿ, ಗೊಂದಲಗಳನ್ನು ಆಲಿಸಲು ಆಪ್ತಸಮಾಲೋಚಕರ ಉಪಸ್ಥಿತಿ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಬೇಕಿದೆ.

ಸರಕಾರಗಳು ಯುವಜನತೆಯನ್ನು ಕೇಂದ್ರವಾಗಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ಸಮಾಜವೂ ಅದಕ್ಕೆ ಪೂರಕವಾಗಿ ಯುವಜನಸ್ನೇಹಿಯಾಗಿ ವಿಕಸಿತವಾಗಬೇಕು. ಆಗ ಮಾತ್ರ ಯುವಜನತೆಯ ದಿನಗಳು ಯಶಸ್ಸು ಕಾಣಬಹುದು.

share
ಶ್ರೇಯಾ
ಶ್ರೇಯಾ
Next Story
X