Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಲೆನಾಡಿನ ಸಾಂಪ್ರದಾಯಿಕ ಆಹಾರ ಚೆಗಳಿ...

ಮಲೆನಾಡಿನ ಸಾಂಪ್ರದಾಯಿಕ ಆಹಾರ ಚೆಗಳಿ ಚಟ್ನಿಗೆ ಭಾರೀ ಬೇಡಿಕೆ

ಹಲವಾರು ಔಷಧೀಯ ಗುಣಗಳುಳ್ಳ ಖಾದ್ಯ

ಕೆ.ಎಲ್.ಶಿವುಕೆ.ಎಲ್.ಶಿವು22 July 2024 3:53 PM IST
share
ಮಲೆನಾಡಿನ ಸಾಂಪ್ರದಾಯಿಕ ಆಹಾರ ಚೆಗಳಿ ಚಟ್ನಿಗೆ ಭಾರೀ ಬೇಡಿಕೆ

ಚಿಕ್ಕಮಗಳೂರು: ಕಾಫಿನಾಡು ಎಂದೇ ಖ್ಯಾತಿಗೆ ಪಾತ್ರವಾಗಿರುವ ಜಿಲ್ಲೆ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರಾಗಿರುವಂತೆಯೇ ವಿಶಿಷ್ಟ ಖಾದ್ಯಗಳಿಗೂ ಹೆಸರಾಗಿದೆ. ಕಾಫಿನಾಡಿನ ಮಲೆನಾಡು ಭಾಗದ ವಿಶಿಷ್ಟ ಖಾದ್ಯಗಳಲ್ಲಿ ಚೆಗಳಿ ಇರುವೆ ಚಟ್ನಿ ತನ್ನದೇಯಾದ ವೈಶಿಷ್ಟ್ಯಕ್ಕೆ ಹೆಸರಾಗಿದ್ದು, ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಚೆಗಳಿ ಚಟ್ನಿಗೆ ಸದ್ಯ ಮಲೆನಾಡಿನಲ್ಲಿ ಭಾರೀ ಬೇಡಿಕೆ ಇದೆ.

ಚಿಕ್ಕಮಗಳೂರು ಜಿಲ್ಲೆ ಹಲವಾರು ವೈಶಿಷ್ಟ್ಯತೆಗಳಿಗೆ ಹೆಸರಾಗಿದೆ. ಇಲ್ಲಿನ ಜನರ ಆಚಾರ, ವಿಚಾರ, ಸಂಸ್ಕೃತಿ, ಜೀವನಶೈಲಿ, ಆಹಾರ ಪದ್ಧತಿ ಬಯಲು ಪ್ರದೇಶಕ್ಕೆ ಹೋಲಿಸಿದರೆ ಸಂಪೂರ್ಣವಾಗಿ ಭಿನ್ನವಾಗಿದೆ. ಮುಖ್ಯವಾಗಿ ಮಲೆನಾಡು ಹಲವಾರು ವಿಶಿಷ್ಟ ಆಹಾರ ಖಾದ್ಯಗಳಿಗೆ ಹೆಸರುವಾಸಿಯಾಗಿದೆ. ಈ ಪೈಕಿ ಮಲೆನಾಡಿನ ಚೆಗಳಿ ಚಟ್ನಿ ತನ್ನದೇಯಾದ ಪ್ರಾಮುಖ್ಯತೆ ಪಡೆದುಕೊಂಡಿದೆ. ಇರುವೆ ಪ್ರಭೇದವಾಗಿರುವ ಚೆಗಳಿ ಇರುವೆಗಳಿಂದ ಮಾಡುವ ಈ ಚಟ್ನಿ ಹಲವಾರು ರೋಗ ನಿರೋಧಕ ಗುಣಗಳನ್ನು ಹೊಂದಿರುವ ಕಾರಣಕ್ಕೆ ಮಲೆನಾಡಿನಲ್ಲಿ ಭಾರೀ ಬೇಡಿಕೆ ಇದೆ. ಇವು ನೇರಳೆ, ಮಾವು, ಹಲಸು ಸೇರಿದಂತೆ ಬಹುತೇಕ ಎಲ್ಲ ಮರಗಳಲ್ಲೂ ಗೂಡು ಕಟ್ಟಿಕೊಂಡಿರುತ್ತವೆ. ಕೇಸರಿ ಬಣ್ಣದೊಂದಿಗೆ ಆಕರ್ಷಕವಾಗಿ ಕಾಣುವ ಈ ಇರುವೆಗಳ ಗೂಡನ್ನು ಮರದಿಂದ ಕೆಡವಿ ಸಾಧಾರಣ ಬೆಂಕಿಯಲ್ಲಿ ಗೂಡನ್ನು ಬೇಯಿಸಿದ ಬಳಿಕ ಕಸವನ್ನು, ಚೆಗಳಿ ಹಾಗೂ ಅವುಗಳ ಮೊಟ್ಟೆಗಳನ್ನು ಬೇರ್ಪಡಿಸಿ ನಿಗದಿತ ಪ್ರಮಾಣದಲ್ಲಿ ಖಾರ, ಉಪ್ಪು, ಕಾಳುಮೆಣಸಿನಂತಹ ಸಂಬಾರು ಪದಾರ್ಥಗಳನ್ನು ಬೆರೆಸಿ ಚಟ್ನಿ ಮಾಡಿ ಅದನ್ನು ದೋಸೆ, ಇಡ್ಲಿ, ರೊಟ್ಟಿಯೊಂದಿಗೆ ಸವಿಯುವುದು ಮಲೆನಾಡಿನ ಜನರ ಸಾಂಪ್ರದಾಯಿಕ ಆಹಾರ ಪದ್ಧತಿಯಾಗಿದೆ.

ಮಲೆನಾಡಿನ ಮಾಂಸಾಹಾರಿಗಳ ಪೈಕಿ ಬಹುತೇಕ ಮಂದಿ ಚೆಗಳಿ ಚಟ್ನಿಯ ರುಚಿಯನ್ನು ಆಹ್ಲಾದಿಸಿರುತ್ತಾರೆ. ಈ ಚಟ್ನಿಯನ್ನು ಸೇವಿಸುವುದರಿಂದ ಜ್ವರ, ಕೆಮ್ಮು, ಶೀತದಂತಹ ರೋಗರುಜಿನಗಳಿಗೆ ಅತ್ಯುತ್ತಮ ಔಷಧ ಎಂಬ ನಂಬಿಕೆ ಇದೆ. ಅಲ್ಲದೇ ರೋಗನಿರೋಧಕ ಔಷಧೀಯ ಗುಣ ಹೊಂದಿರುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಇದು ಮಲೆನಾಡಿನ ಮೂಲನಿವಾಸಿಗಳು,ಆದಿವಾಸಿ ಜನರ ಪ್ರಮುಖ ಆಹಾರವಾಗಿದೆ.

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಾತ್ರವಲ್ಲದೇ ನೆರೆಯ ಕೊಡಗು, ಹಾಸನ, ಉಡುಪಿ, ದ.ಕ., ಶಿವಮೊಗ್ಗ, ಉತ್ತರ ಕನ್ನಡದಂತಹ ಜಿಲ್ಲೆಗಳಲ್ಲೂ ಚೆಗಳಿ ಚಟ್ನಿ ಪ್ರಮುಖ ಆಹಾರವಾಗಿ ಪ್ರಸಿದ್ಧಿ ಪಡೆದಿದೆ. ಕರ್ನಾಟಕವಲ್ಲದೇ ನೆರೆಯ ಕೇರಳ, ತಮಿಳುನಾಡು ಹಾಗೂ ಈಶಾನ್ಯ ರಾಜ್ಯಗಳಲ್ಲೂ ಚೆಗಳಿ ಚಟ್ನಿ ಪ್ರಮುಖ ಆಹಾರವಾಗಿದೆ.

ಚೆಗಳಿ ಚಟ್ನಿ ಅಂತರ್‌ರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ ಪಡೆದಿದ್ದು, ಹಲವಾರು ಅಂತರ್‌ರಾಷ್ಟ್ರೀಯ ಆಹಾರ ತಜ್ಞರ ಕಾರ್ಯಕ್ರಮಗಳಲ್ಲಿ ಚೆಗಳಿ ಚಟ್ನಿ ತಯಾರಿಸುವ ಬಗ್ಗೆ ಪ್ರಸಾರವಾಗಿದೆ. ಯೂಟ್ಯೂಬ್‌ನಲ್ಲೂ ಚೆಗಳಿ ಚಟ್ನಿ ಮಾಡುವ ಹಾಗೂ ಚೆಗಳಿಯ ಮಹತ್ವ, ಔಷಧ ಗುಣಗಳ ಬಗ್ಗೆ ಮಾಹಿತಿ ಲಭ್ಯವಿದೆ.

share
ಕೆ.ಎಲ್.ಶಿವು
ಕೆ.ಎಲ್.ಶಿವು
Next Story
X