Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೆಂಪುಕೋಟೆಯಲ್ಲಿ ನಡೆಯುವ ಗಣರಾಜ್ಯೋತ್ಸವ...

ಕೆಂಪುಕೋಟೆಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಕುಂದಾಪುರದ ಮಣಿಕಂಠ!

23 ವರ್ಷಗಳಿಂದ ಚಮ್ಮಾರಿಕೆ ವೃತ್ತಿ ಮಾಡುತ್ತಿರುವ ವ್ಯಕ್ತಿಗೆ ಒದಗಿಬಂದ ಅವಕಾಶ

ಯೋಗೀಶ್ ಕುಂಭಾಸಿಯೋಗೀಶ್ ಕುಂಭಾಸಿ24 Jan 2024 2:51 PM IST
share
ಕೆಂಪುಕೋಟೆಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಕುಂದಾಪುರದ ಮಣಿಕಂಠ!

ಕುಂದಾಪುರ, ಜ.23: ಕುಂದಾಪುರ ಶಾಸ್ತ್ರಿ ವೃತ್ತದ ಸಮೀಪದಲ್ಲಿ ಕೊಡೆ, ಚಪ್ಪಲಿ ಮತ್ತಿತರ ವಸ್ತುಗಳನ್ನು ರಿಪೇರಿ ಮಾಡುವ ಮೂಲಕ ಚಮ್ಮಾರಿಕೆ ಕಾಯಕದಲ್ಲಿ ತೊಡಗಿಸಿಕೊಂಡಿರುವ ಮಣಿಕಂಠ (38) ಜ.26ರಂದು ದಿಲ್ಲಿಯ ಕೆಂಪುಕೋಟೆಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ವಿಕ್ಷಣೆಗೆ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.

ಕೇಂದ್ರ ಸರಕಾರದ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಸಾಲ ಪಡೆದು, ಸ್ವಉದ್ಯೋಗ ನಡೆಸಿ ಯಶಸ್ಸು ಕಂಡಿದ್ದ ಕುಂದಾಪುರದ ಎಲ್‌ಐಸಿ ರಸ್ತೆಯ ವ್ಯಾಸರಾಯ ಕಲ್ಯಾಣ ಮಂಟಪ ಸಮೀಪದ ನಿವಾಸಿ ಮಣಿಕಂಠ 23 ವರ್ಷಗಳಿಂದ ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಲಿಡ್ಕರ್‌ನ ಪಾದರಕ್ಷೆ ರಿಪೇರಿ ಮಾಡುವ ಚಿಕ್ಕ ಪೆಟ್ಟಿಗೆ ಅಂಗಡಿ ನಡೆಸುತ್ತಿದ್ದಾರೆ.

ಭದ್ರಾವತಿ ಮೂಲದ ಮಣಿಕಂಠರ ಅಜ್ಜ ಮುನುಸ್ವಾಮಿ, 70 ವರ್ಷಗಳ ಹಿಂದೆ ಕುಂದಾಪುರಕ್ಕೆ ಬಂದು ನೆಲೆಸಿದ್ದು, ಹೊಟ್ಟೆಪಾಡಿಗಾಗಿ ಚಪ್ಪಲಿ ರಿಪೇರಿ ಅಂಗಡಿಯನ್ನು ಆರಂಭಿಸಿದರು. ಮಣಿಕಂಠರ ತಂದೆ ರಾಜು ಕೂಡ ಇದನ್ನು ಮುಂದುವರಿಸಿದ್ದು ವಡೇರಹೋಬಳಿ ಸರಕಾರಿ ಶಾಲೆಯಲ್ಲಿ 5ನೇ ತರಗತಿ ಓದಿದ ಮಣಿ ಹಾಗೂ ಸಹೋದರ ವಿಷ್ಣು ಕೂಡ ತಂದೆಯಿಂದ ಈ ವೃತ್ತಿ ಕಲಿತಿದ್ದಾರೆ.

ಶ್ರದ್ದೆಯಿಂದ ಕೆಲಸ: ನಿತ್ಯ ಬೆಳಗ್ಗೆನಿಂದ ಸಂಜೆ ತನಕ ಮಣಿಕಂಠ ಕೆಲಸ ಮಾಡುತ್ತಾರೆ. ಇವರ ಕೆಲಸಕ್ಕೆ ಅನುಕೂಲವಾದ ಕುಷನ್ ಕೆಲಸವನ್ನು ವಿಷ್ಣು ಮಾಡುತ್ತಾರೆ. ಚಪ್ಪಲಿ, ಕೊಡೆ ರಿಪೇರಿ, ವಿದ್ಯಾರ್ಥಿಗಳ ಬ್ಯಾಗ್, ಜನರೇಟರ್ ಸಣ್ಣ ಟಯರ್, ಟರ್ಪಾಲು ಹೊಲಿಯುವುದು ಸಹಿತ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದ್ದಾರೆ.

ಇದರಿಂದ ಬರುವ ಆದಾಯದಲ್ಲಿಯೇ ತಾಯಿ ಸರೋಜಾ, ಪತ್ನಿ ನಿರ್ಮಲಾ ಮತ್ತು ಇಬ್ಬರು ಮಕ್ಕಳು, ಸಹೋದರನೊಂದಿಗೆ ಜೀವನ ನಡೆಸುತ್ತಿದ್ದಾರೆ.

ಪ್ರಾಮಾಣಿಕತೆಗೆ ಸಂದ ಗೌರವ: ಚಪ್ಪಲಿ, ಕೊಡೆ ಮತ್ತು ಇತರ ವಸ್ತುಗಳ ರಿಪೇರಿಗೆ ಬೇಕಾದ ಕಚ್ಚಾ ಸಾಮಗ್ರಿ ಖರೀದಿಗೆ ಹಣಬೇಕಾದಾಗ ಮೊದಲಿಗೆ ಹೆಚ್ಚು ಬಡ್ಡಿ ನೀಡಿ ಸಾಲ ಪಡೆಯುತ್ತಿದ್ದರು. ಎರಡು ವರ್ಷಗಳ ಹಿಂದೆ ಕೌಶಲಾಭಿವೃದ್ಧಿ ಇಲಾಖೆ ಕುಂದಾಪುರ ಪುರಸಭೆ ಮೂಲಕ ಅವರಿಗೆ ಪಿಎಂ ಸ್ವನಿಧಿ (ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಸಾಲ) ಯೋಜನೆಯಡಿ 10 ಸಾವಿರ ರೂ. ಸಾಲ ನೀಡಿತು.

ಶೇ.7ರ ಬಡ್ಡಿ ದರದ ಈ ಸಾಲ ಮರುಪಾವತಿಗೆ 12 ತಿಂಗಳು ಅವಧಿ ಇದ್ದರೂ ಮಣಿಕಂಠ 2,500 ರೂ.ನಂತೆ ಕಟ್ಟಿ ಐದೇ ತಿಂಗಳಲ್ಲಿ ತೀರಿಸಿದರು. ಮತ್ತೆ 20 ಸಾವಿರ ರೂ. ಪಡೆದು ಅದನ್ನೂ 5 ತಿಂಗಳಲ್ಲಿ ಮರುಪಾವತಿಸಿದರು. ತದನಂತರ ಪಡೆದ 50 ಸಾವಿರ ರೂ. ಕೂಡ ಪಾವತಿ ಮಾಡಿ ನಿಷ್ಟೆ ಮೆರೆದಿದ್ದರು. ಈ ಬಾರಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಫಲಾನುಭವಿಗಳಿಗೆ ಗಣ ರಾಜ್ಯೋತ್ಸವಕ್ಕೆ ಆಹ್ವಾನಿಸಲಾಗಿದ್ದು, ರಾಜ್ಯದ ನಾಲ್ವರ ಪೈಕಿ ಕುಂದಾಪುರ ಪುರಸಭೆಯ ನಿವಾಸಿ ಮಣಿಕಂಠ ಕೂಡ ಆಯ್ಕೆಯಾಗಿದ್ದಾರೆ.

ದಂಪತಿಗೆ ಅಭಿನಂದನೆ: ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಸಹಾಯಕ ಆಯುಕ್ತೆ ಮತ್ತು ಪುರಸಭೆಯ ಆಡಳಿತಾಧಿಕಾರಿ ರಶ್ಮಿ ಎಸ್.ಆರ್ ಮಾರ್ಗದರ್ಶನದಲ್ಲಿ ಮಣಿಕಂಠ ಹಾಗೂ ಪತ್ನಿ ನಿರ್ಮಲಾರನ್ನು ಪುರಸಭೆ ಕಚೇರಿಯಲ್ಲಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಮಂಜುನಾಥ್ ಆರ್., ಜಿಲ್ಲಾ ಲೀಡ್ಕರ್ ನಿಗಮದ ಸಂಯೋಜಕ ತಿಪ್ಪೆಸ್ವಾಮಿ, ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾಕರ್, ಪರಿಸರ ಅಭಿಯಂತರ ಗುರುಪ್ರಸಾದ್ ಶೆಟ್ಟಿ, ಸಮುದಾಯದ ಸಂಘಟನಾಧಿಕಾರಿ ಶರತ್ ಖಾರ್ವಿ, ಕಂದಾಯ ಅಧಿಕಾರಿ ಅಂಜನಿ ಗೌಡ, ಹಿರಿಯ ಆರೋಗ್ಯ ನಿರೀಕ್ಷಕ ರಾಘವೇಂದ್ರ ನಾಯ್ಕ್, ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಣೇಶ್ ಕುಮಾರ್ ಜನ್ನಾಡಿ ಹಾಜರಿದ್ದರು.

ಜ.24ಕ್ಕೆ ದಿಲ್ಲಿಗೆ ಪಯಾಣ

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಫಲಾನುಭವಿ ಆಗಿರುವುದರಿಂದ ಮಣಿಕಂಠ ರನ್ನು ಗಣರಾಜ್ಯೋತ್ಸವ ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಲು ಕೇಂದ್ರ ಸರಕಾರದಿಂದ ಆಯ್ಕೆ ಮಾಡಲಾಗಿದ್ದು, ಮಂಗಳವಾರ ಬೆಳಗ್ಗೆ ಬೆಂಗಳೂರು ತಲುಪಿರುವ ಮಣಿಕಂಠ-ನಿರ್ಮಲಾ ದಂಪತಿ ಬುಧವಾರ ಮುಂಜಾನೆ ವಿಮಾನದಲ್ಲಿ ಪ್ರಯಾಣಿಸಿ ಬೆಳಗ್ಗೆ ದಿಲ್ಲಿಗೆ ತಲುಪಲಿದ್ದಾರೆ. ಅವರ ಎಲ್ಲಾ ಖರ್ಚು ವೆಚ್ಚವನ್ನು ಕೇಂದ್ರ ಸರಕಾರ ಭರಿಸಲಿದೆ.

‘ಚಪ್ಪಲಿ ರಿಪೇರಿ ಮಾಡುವ ನನ್ನಂತಹ ಸಾಮಾನ್ಯ ವ್ಯಕ್ತಿಗೆ ದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಿರುವುದು ಖುಷಿ ಕೊಟ್ಟಿದೆ. ಜೀವನದಲ್ಲಿ ಮೊದಲ ಬಾರಿಗೆ ವಿಮಾನ ಪ್ರಯಾಣ ಮಾಡುತ್ತಿರುವೆ. ಬದುಕು ರೂಪಿಸಿದ ನನ್ನ ವೃತ್ತಿಯ ಬಗ್ಗೆ ಹೆಮ್ಮೆಯಿದೆ. ದಿಲ್ಲಿಗೆ ತೆರಳಲು ಹಾಗೂ ಸಮೀಪದಿಂದ ಗಣರಾಜ್ಯೋತ್ಸವವನ್ನು ಕಣ್ತುಂಬಿಕೊಳ್ಳಲು ಉತ್ಸಾಹಿಯಾಗಿರುವೆ’

► ಮಣಿಕಂಠ, ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಫಲಾನುಭವಿ,

‘ಮಣಿಕಂಠ ಕುಂದಾಪುರ ಪುರಸಭೆ ವ್ಯಾಪ್ತಿಯ ನಿವಾಸಿಯಾಗಿದ್ದು, ಇಲ್ಲಿನ ಬೀದಿಬದಿ ವ್ಯಾಪಾರಿಯಾಗಿ ತನ್ನ ಉದ್ಯೋಗ ಅಭಿವೃದ್ಧಿಗೆ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಮೂರು ಬಾರಿ ಸಾಲ ಪಡೆದಿದ್ದರು. ಸಮಯಕ್ಕೆ ಸರಿಯಾಗಿ ಡಿಜಿಟಲ್ ವ್ಯವಸ್ಥೆ ಮೂಲಕ ಸಾಲ ಮರು ಪಾವತಿ ಮಾಡಿದ್ದರು. ಸದ್ಯ ಅವರು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿತರಾಗಿ ತೆರಳಿರುವುದು ಇಡೀ ಜಿಲ್ಲೆಗೆ ಹೆಮ್ಮೆಯ ಸಂಗತಿ’

► ಮಂಜುನಾಥ್ ಆರ್., ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ

share
ಯೋಗೀಶ್ ಕುಂಭಾಸಿ
ಯೋಗೀಶ್ ಕುಂಭಾಸಿ
Next Story
X