Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಲ್ಪಸಂಖ್ಯಾತರ ಇಲಾಖೆಯಿಂದ ಸರಳ...

ಅಲ್ಪಸಂಖ್ಯಾತರ ಇಲಾಖೆಯಿಂದ ಸರಳ ವಿವಾಹಕ್ಕೆ ಉತ್ತೇಜನ: ಪ್ರತೀ ಜೋಡಿಗೆ 50 ಸಾವಿರ ರೂ., ಆಯೋಜಕರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ

ಸಾಜಿದ್‌ ಅಲಿಸಾಜಿದ್‌ ಅಲಿ6 Nov 2025 2:37 PM IST
share
ಅಲ್ಪಸಂಖ್ಯಾತರ ಇಲಾಖೆಯಿಂದ ಸರಳ ವಿವಾಹಕ್ಕೆ ಉತ್ತೇಜನ: ಪ್ರತೀ ಜೋಡಿಗೆ 50 ಸಾವಿರ ರೂ., ಆಯೋಜಕರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ

ಕಲಬುರಗಿ: ಮದುವೆಗಳಲ್ಲಿ ಸಾವಿರಾರು ರೂಪಾಯಿಗಳ ಆಹಾರ, ಸಡಗರದ ಹೂವಿನ ಅಲಂಕಾರಗಳು ಆಡಂಬರ ಅನಿವಾರ್ಯವೆಂಬ ಭಾವನೆ ಆರ್ಥಿಕ ಬಾಧೆಗೆ ಕಾರಣವಾಗುತ್ತಿದೆ. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ನವ ಜೋಡಿಗಳು ಸಾಮೂಹಿಕ ವಿವಾಹ ಕೇಂದ್ರಗಳಲ್ಲಿ ಸರಳ ವಿವಾಹವಾಗುವ ಪ್ರತೀ ಜೋಡಿಗಳಿಗೆ 50 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ತಿಳಿಸಿದೆ.

ಶಾದಿ ಭಾಗ್ಯ ಯೋಜನೆಯಲ್ಲಿ ಪ್ರತ್ಯೇಕ ಮದುವೆ ಆಗುತ್ತಿದ್ದ ನವ ವಧುವಿನ ಖಾತೆಗೆ 50 ಸಾವಿರ ರೂ. ಶಾದಿ ಭಾಗ್ಯ ಯೋಜನೆಯ ಹಣ ನೀಡಲಾಗುತ್ತಿತ್ತು. ಇದನ್ನು ರದ್ದು ಮಾಡಿದ ರಾಜ್ಯ ಸರಕಾರ ಇದೀಗ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಸಮುದಾಯದ ಆರ್ಥಿಕ ಹೊರೆ ತಗ್ಗಿಸುವ ಮಹದಾಸೆಯೊಂದಿಗೆ ಸರಳ ವಿವಾಹ ಯೋಜನೆ ಜಾರಿಗೆ ತಂದಿದೆ.

ಪ್ರತೀ ಜೋಡಿಗೆ 50 ಸಾವಿರ ರೂ. ಪ್ರೋತ್ಸಾಹ ನೀಡುತ್ತದೆ. ಸಾಮೂಹಿಕ ವಿವಾಹ ಆಯೋಜನೆ ಮಾಡುವ ವ್ಯಕ್ತಿ, ಸಂಘಟನೆ, ಸಂಘ, ಸಂಸ್ಥೆ, ಖಾಸಗಿ ಟ್ರಸ್ಟ್, ಸೊಸೈಟಿ, ಕಮಿಟಿ, ದೇವಸ್ಥಾನ, ಮಸೀದಿಯ ಕಮಿಟಿಗಳು ಸೇರಿದಂತೆ ಇತರ ಯಾರು ಬೇಕಾದರೂ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಿ ಕನಿಷ್ಠ 5 ನವ ಜೋಡಿಗಳಿಗೆ ಸಾಮೂಹಿಕ ಮದುವೆ ಮಾಡಿಸುವ ಆಯೋಜಕರಿಗೆ ಪ್ರತೀ ಜೋಡಿಗೆ 5 ಸಾವಿರ ರೂ. ಖರ್ಚು ವೆಚ್ಚದ ರೂಪದಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಷರತ್ತು: 18 ವರ್ಷದಿಂದ 42 ವರ್ಷದೊಳಗಿನ ವಧು ಮತ್ತು 21 ವರ್ಷದಿಂದ 45 ವರ್ಷದೊಳಗಿನ ವರ ಆಗಿರಬೇಕು. ಮೊದಲನೇ ವಿವಾಹವಾಗುತ್ತಿರುವ ನವ ಜೋಡಿಯಾಗಿರಬೇಕು. ವಾರ್ಷಿಕ ಆದಾಯ 2.50 ಲಕ್ಷದಿಂದ 5 ಲಕ್ಷ ರೂ. ಮೀರತಕ್ಕದ್ದಲ್ಲ. ಜೀವನದಲ್ಲಿ ಒಮ್ಮೆ ಮತ್ತು ಕುಟುಂಬದಲ್ಲಿ ಒಬ್ಬರು ಮಾತ್ರ ಸೌಲಭ್ಯ ಪಡೆಯಬಹುದು. ಜೀವಂತ ಪತಿ, ಪತ್ನಿ ಇರುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ವಧು, ವರ ಮತ್ತು ಸಾಮೂಹಿಕ ವಿವಾಹ ಹಮ್ಮಿಕೊಳ್ಳುವ ಆಯೋಜಕರು ಕನಿಷ್ಠ 7 ದಿನ ಮುಂಚಿತವಾಗಿ ಸ್ವಂತ ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ, ವಿವಾಹ ನಡೆದ ಮೂರು ತಿಂಗಳ ಒಳಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ವಧು, ವರನ ಜಂಟಿ ಜಿಪಿಎಸ್ ಫೋಟೊಗಳು ನೀಡಬೇಕು. ಫಲಾನುಭವಿಗಳ ಪೈಕಿ ವಿಧವೆ ತಾಯಿಯ/ವಿಕಲಚೇತನ ಕುಟುಂಬಗಳಿಗೆ ಮೊದಲ ಆದ್ಯತೆ ಮೇರೆಗೆ ಸಹಾಯಧನ ಮಂಜೂರು ಪರಿಗಣಿಸುವುದು. ಅರ್ಹ ವಧು ವರನ ಜಂಟಿ ಬ್ಯಾಂಕ್ ಖಾತೆಯ ಹೆಸರಿಗೆ ಮಾತ್ರ ಪ್ರೋತ್ಸಾಹ ಧನದ ಹಣ ಜಮೆ ಮಾಡಲಾಗುತ್ತದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಸಂಗಮೇಶ್ವರ ತಿಳಿಸಿದ್ದಾರೆ.

2025-26ನೇ ಸಾಲಿನ ಜಿಲ್ಲಾವಾರು ಗುರಿ

ಬಾಗಲಕೋಟೆಗೆ 120, ಬೆಂಗಳೂರು ನಗರಕ್ಕೆ 500, ಬೆಂಗಳೂರು ಗ್ರಾಮಾಂತರ 50, ಬೆಳಗಾವಿ 300, ಬಳ್ಳಾರಿ 100, ಬೀದರ್ 180, ಚಾಮರಾಜನಗರ 40, ಚಿಕ್ಕಬಳ್ಳಾಪುರ 60, ಚಿಕ್ಕಮಗಳೂರು 50, ಚಿತ್ರದುರ್ಗ 100, ದಕ್ಷಿಣ ಕನ್ನಡ 250, ದಾವಣಗೆರೆ 150, ಧಾರವಾಡ 200, ಗದಗ 70, ಹಾಸನ 50, ಹಾವೇರಿ 200, ಕಲಬುರಗಿ 300, ಕೊಡಗು 40, ಕೋಲಾರ 120, ಕೊಪ್ಪಳ 100, ಮಂಡ್ಯ 40, ಮೈಸೂರು 150, ರಾಯಚೂರು 150, ರಾಮನಗರ 50, ಶಿವಮೊಗ್ಗ 80, ತುಮಕೂರು 150, ಉಡುಪಿ 50, ಉತ್ತರ ಕನ್ನಡ 100, ವಿಜಯನಗರ 100, ವಿಜಯಪುರ 150, ಯಾದಗಿರಿ 100. ಜಿಲ್ಲಾವಾರು ಫಲಾನುಭವಿಗಳ ಗುರಿ ನಿಗದಿಪಡಿಸಿದೆ.

ಯಾವುದೇ ಅಪೇಕ್ಷೆ ಇಟ್ಟುಕೊಳ್ಳದೇ ಪ್ರತೀ ವರ್ಷ ಸಾಮೂಹಿಕ ವಿವಾಹ ಏರ್ಪಡಿಸಿ ಹಲವು ಜೋಡಿಗಳಿಗೆ ಸರಳ ವಿವಾಹ ಮಾಡುತ್ತಾ ಬಂದಿದ್ದೇವೆ. ವಧು ವರನಿಗೆ ಸಿಗುವ ಪ್ರೋತ್ಸಾಹ ತುಂಬಾ ಅಗತ್ಯ. ಮದುವೆಗೆ ಮುನ್ನ ಶೇ.50, ಮದುವೆಯ ನಂತರ ಶೇ.50 ಸಿಕ್ಕರೆ ಉತ್ತಮ.

-ವಹಾಜ್ ಬಾಬಾ, ಸಾಮೂಹಿಕ ವಿವಾಹದ ಆಯೋಜ, ಶೇಖ್ ರೋಜಾ ದರ್ಗಾದ ಮುಖ್ಯಸ್ಥ

ಸರಳ ವಿವಾಹಕ್ಕೆ ಉತ್ತೇಜನ ನೀಡುವ ರಾಜ್ಯ ಸರಕಾರದ ಮಹತ್ವದ ಯೋಜನೆಯ ಲಾಭವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬೇಕು. ಸಮಾಜದ ಮುಖಂಡರು, ವ್ಯಕ್ತಿಗಳು ಮುಂದೆ ಬಂದು ಇದರ ಲಾಭವನ್ನು ಸಮುದಾಯಕ್ಕೆ ತಲುಪಿಸಬೇಕು. ಮುಂದಾಳತ್ವ ವಹಿಸಿಕೊಂಡು ಅರ್ಜಿ ಸಲ್ಲಿಸುವ ವ್ಯಕ್ತಿಗಳಿಗೆ ಇಲಾಖೆ ಸ್ಪಂದಿಸುತ್ತದೆ. ಸರಳ ಮತ್ತು ಸಾಮೂಹಿಕ ವಿವಾಹಗಳು ಆರ್ಥಿಕತೆ ತಗ್ಗಿಸುತ್ತವೆ.

-ಸಂಗಮೇಶ್ವರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಕಲಬುರಗಿ

share
ಸಾಜಿದ್‌ ಅಲಿ
ಸಾಜಿದ್‌ ಅಲಿ
Next Story
X