Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಿಪ್ಪು ನೇರಳೆಗೆ ಸುರುಳಿ ಕೀಟದ ಕಾಟ,...

ಹಿಪ್ಪು ನೇರಳೆಗೆ ಸುರುಳಿ ಕೀಟದ ಕಾಟ, ಬೆಳೆಗಾರರಿಗೆ ಸಂಕಷ್ಟ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.19 Aug 2024 12:46 PM IST
share
ಹಿಪ್ಪು ನೇರಳೆಗೆ ಸುರುಳಿ ಕೀಟದ ಕಾಟ, ಬೆಳೆಗಾರರಿಗೆ ಸಂಕಷ್ಟ

ಹೊಸಕೋಟೆ: ರೇಷ್ಮೆಗೂಡಿನ ಬೆಲೆ ಕುಸಿತದ ನಡುವೆ ಹಿಪ್ಪುನೇರಳೆ ಬೆಳೆಗೆ ಸುರುಳಿ ಕೀಟ ಅಥವಾ ಕುಡಿ ಹುಳ ಬಾಧೆ ವ್ಯಾಪಕವಾಗಿ ಬೆಳೆಗಾರರನ್ನು ಕಂಗೆಡಿಸಿದೆ. ಕುಡಿ ಹುಳುವಿನ ನಿಯಂತ್ರಣಕ್ಕಾಗಿ ರೇಷ್ಮೆ ಬೆಳೆಗಾರರು ಎಲ್ಲ ಪ್ರಯತ್ನ ನಡೆಸಿ ಸೋತಿದ್ದಾರೆ. ಪೀಡೆ ನಿರ್ವಹಣೆಯ ಒಟ್ಟು ಖರ್ಚು ಶೇ.15-20 ಮೀರುತ್ತಿದೆ. ಹೀಗಾಗಿ ಅವರು ಆರ್ಥಿಕ ಸಂಕಷ್ಟಕ್ಕೂ ಸಿಲುಕುತ್ತಿದ್ದಾರೆ.

ಜಿಲ್ಲಾದ್ಯಂತ ನುಸಿ ಪೀಡೆ, ಪಪಾಯ ಮೀಲಿ ಬಗ್, ಶಂಖದ ಹುಳು, ಓಡು ಹುಳು(ಬೀಟಲ್ಸ್) ಇತ್ಯಾದಿ ಕೀಟಗಳ ಹಾವಳಿಯಿಂದ ತೀವ್ರ ನಷ್ಟ ಅನುಭವಿ ಸುತ್ತಿರುವ ರೇಷ್ಮೆ ಬೆಳೆಗಾರರಿಗೆ ಸುರುಳಿ ಕೀಟದಿಂದಾಗಿ ತಲೆ ನೋವು ಹೆಚ್ಚಾಗಿದೆ. ರೇಷ್ಮೆಗೂಡು ಮಾರಾಟಕ್ಕೆ ಹರಸಾಹಸ ಪಡುತ್ತಾ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ರೇಷ್ಮೆ ಬೆಳೆಗಾರರಿಗೆ ಕೀಟ ಬಾಧೆ ನಿದ್ದೆಗೆಡಿಸಿದ್ದು, ಅಪಾರ ಪ್ರಮಾಣದ ಹಿಪ್ಪುನೇರಳೆ ಸೊಪ್ಪು ಈಗ ಕೈಗೆ ಬಾರದ ಸ್ಥಿತಿಗೆ ತಲುಪಿದೆ.

ಸರಕಾರ ವಿಫಲ: ಹಿಪ್ಪುನೇರಳೆ ಬೆಳೆಗೆ ಬಾಧಿಸುತ್ತಿರುವ ಸುರುಳಿ ಕೀಟ ಅಥವಾ ಕುಡಿ ಹುಳು ಬಾಧೆ ನಿಯಂತ್ರಣ ಮಾಡುವಲ್ಲಿ ಸರಕಾರ ವಿಫಲವಾಗಿದೆ. ರಾಮನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ವರ್ಷಗಳಿಂದ ಈ ರೋಗಕ್ಕೆ ರೇಷ್ಮೆ ಬೆಳೆಗಾರರು ತತ್ತರಿಸಿದ್ದಾರೆ. ಇದರ ನಿಯಂತ್ರಣ ಸಂಬಂಧ ವಿಜ್ಞಾನಿಗಳು ಈ ತನಕ ಔಷಧಿ ಪತ್ತೆ ಮಾಡದಿರುವುದು ವರ್ಷದಿಂದ ವರ್ಷಕ್ಕೆ ರೋಗ ವ್ಯಾಪ್ತಿ ಹೆಚ್ಚಾಗುತ್ತಿದೆ. ನಿಯಂತ್ರಣ ಕ್ರಮದ ಕುರಿತು ರೇಷ್ಮೆ ಇಲಾಖೆ ಅಧಿ ಕಾರಿಗಳು ಸಹ ಸಾಕಷ್ಟು ತಲೆಕೆಡಿಸಿಕೊಂಡಿ ದ್ದಾರೆ. ಆದರೂ ಪರಿಹಾರ ಕ್ರಮ ಮಾತ್ರಕಂಡುಕೊಂಡಿಲ್ಲ.

ಇಳುವರಿ ಮೇಲೆ ಪರಿಣಾಮ: ಸುರುಳಿಕೀಟ ಅಥವಾ ಕುಡಿ ಹುಳು ಕಾಟದಿಂದಾಗಿ ರೇಷ್ಮೆಗೂಡು ಇಳುವರಿ ಮೇಲೆ ಪರಿಣಾಮ ಬೀಳಲಿದೆ. ಪರಿಸ್ಥಿತಿ ಇದೇ ರೀತಿ ಮುಂದು ವರಿದರೆ ಗೂಡು ಅವಕ ಕಡಿಮೆಯಾಗಲಿದೆ ಎಂಬ ಆತಂಕದಲ್ಲಿ ರೈತರಿದ್ದಾರೆ. ಜಿಲ್ಲೆಯಲ್ಲಿ ಶೇ.100ರಷ್ಟು ಸುರುಳಿಕೀಟ ಅಥವಾ ಕುಡಿ ಹುಳು ಕಾಟ ವ್ಯಾಪಿಸಿದೆ. ಇದನ್ನು ತಕ್ಷಣಕ್ಕೆ ನಿಯಂತ್ರಣ ಮಾಡಿದರೆ ಗೂಡು ಮಾರಾಟದ ಮೇಲೆ ನೇರ ಪರಿ ಣಾಮ ಬೀರಲಿದೆ.

ಪ್ರಚಾರ ಇಲ್ಲ: ಸುರುಳಿ ಕೀಟ ಅಥವಾ ಕುಡಿ ಹುಳು ಬಾಧೆ ನಿಯಂತ್ರಣ ಸಂಬಂಧ ಜಿಲ್ಲಾಡಳಿತವಾಗಲಿ ಅಥವಾ ಜಿಲ್ಲಾ ರೇಷ್ಮೆ ಇಲಾಖೆಯಾಗಲಿ ಪ್ರಚಾರ ಮಾಡುತ್ತಿಲ್ಲ. ಸುರುಳಿ ಕೀಟದ ಸಮಸ್ಯೆಯಿಂದ ಇಡೀ ಹಿಪ್ಪುನೇರಳೆ ತೋಟವನ್ನು ಕೀಳುವ ಸ್ಥಿತಿಗೆ ತಲುಪಿದೆ. ನಿಯಂತ್ರಣ ಕ್ರಮಗಳ ಸಂಬಂಧ ಕನಿಷ್ಟ ಪ್ರಚಾರ ನೀಡದಿರುವುದು ರೇಷ್ಮೆ ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ.

24 ಸಾವಿರ ಕುಟುಂಬ

ರೇಷ್ಮೆ ಬೆಳೆ ನಂಬಿಕೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 24 ಸಾವಿರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಸುರುಳಿ ಕೀಟ ಅಥವಾ ಕುಡಿಹುಳು ಬಾಧೆಯಿಂದಾಗಿ ಇಷ್ಟು ಕುಟುಂಬಗಳ ಮೇಲೆ ನೇರ ಪರಿಣಾಮ ಉಂಟು ಮಾಡು ತ್ತಿದೆ. ಕೀಟ ಬಾಧೆಯಿಂದಾಗಿ ತೊಂದರೆ ಅನುಭವಿಸುವಂತಾಗಿದೆ.

ಅಧಿಕಾರಿಗಳು ಪರಿಶೀಲಿಸಲಿ

ತಾಲೂಕಿನ ಬಹುತೇಕ ಕಡೆ ಹಿಪ್ಪುನೇರಳೆ ತೋಟಗಳಿಗೆ ಹುಳ ಬಿದ್ದು ಬೆಳೆ ಹಾಳಾಗಿವೆ. ಈ ಬಗ್ಗೆ ರೇಷ್ಮೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ರೈತರಾದ ಸಂಜೀವಪ್ಪ, ರಾಮಣ್ಣ, ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ

ಕಡ್ಡಿ ಕೀಳಬೇಕಾದ ಸ್ಥಿತಿ

ಸುರುಳಿ ಕೀಟಿದ ಕಾಟದಿಂದಾಗಿ ಹಿಪ್ಪುನೇರಳೆ ಕಡ್ಡಿ ಕೇಳಬೇಕಾದ ಸ್ಥಿತಿ ಎದುರಾಗಿದೆ. ತರಕಾರಿ ಹೂ ಬೆಳೆಗೆ ಹೆಚ್ಚಿನಡೋಸ್ ಹೊಂದಿರುವ ಕೀಟನಾಶಕ ಸಿಂಪಡಿಸಿದರೆ ಬೆಳೆ ಉಳಿಯಲಿದೆ. ಆದರೆ, ರೇಷ್ಮೆ ಬೆಳೆಯಲ್ಲಿ ಒಮ್ಮೆಲೆ ಅತಿ ಹೆಚ್ಚಿನ ಡೋಸ್ ಕೀಟನಾಶಕ ಸಿಂಪಡಿಸಲು ಸಾಧ್ಯವಿಲ್ಲ. ಹಾಗಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇನ್ನು ಹವಾಮಾನ ವೈಪರೀತ್ಯವೂ ರೇಷ್ಮೆ ಬೆಳೆಗಳ ಮೇಲೆ ನೇರ ಪರಿಣಾಮ ಉಂಟು ಮಾಡುತ್ತಿದೆ.

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X