Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೈ ತಪ್ಪಿದ ಮೈಸೂರು-ಕೊಡಗು ಕ್ಷೇತ್ರದ...

ಕೈ ತಪ್ಪಿದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್: ವಿವಾದಾತ್ಮಕ ಹೇಳಿಕೆಗಳೇ ಪ್ರತಾಪ ಸಿಂಹಗೆ ಮುಳುವಾಯಿತೇ?

ನೇರಳೆ ಸತೀಶ್‍ ಕುಮಾರ್ನೇರಳೆ ಸತೀಶ್‍ ಕುಮಾರ್14 March 2024 10:31 AM IST
share
ಕೈ ತಪ್ಪಿದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್: ವಿವಾದಾತ್ಮಕ ಹೇಳಿಕೆಗಳೇ ಪ್ರತಾಪ ಸಿಂಹಗೆ ಮುಳುವಾಯಿತೇ?

ಮೈಸೂರು : ಮೈಸೂರು-ಕೊಡಗು ಲೋಕಸಭೆ ಸಂಸದ ಪ್ರತಾಪಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮಣೆ ಹಾಕಲಾಗಿದೆ.

ಮಹತ್ತರ ಬೆಳವಣಿಗೆಯಲ್ಲಿ ಸಂಸದ ಪ್ರತಾಪಸಿಂಹ ಅವರಿಗೆ ಈ ಬಾರಿ ಉದ್ದೇಶಪೂರ್ವಕವಾಗಿಯೇ ಬಿಜೆಪಿ ಟಿಕೆಟ್ ತಪ್ಪಿಸಲಾಗಿದೆ. ಸಂಸತ್ ಒಳಗೆ ಹೊಗೆ ಬಾಂಬ್ ಸಿಡಿಸಿದವರಿಗೆ ಪಾಸ್ ನೀಡಿದ್ದ ಪ್ರತಾಪಸಿಂಹ, ಬಿಜೆಪಿ ಪಕ್ಷವೇ ದೇಶದಲ್ಲಿ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಅಂತಹದರಲ್ಲಿ ಆತನಿಗೆ ಟಿಕೆಟ್ ಕೊಡುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಲಿದೆ ಎಂಬ ಚರ್ಚೆಗಳು ಪಕ್ಷದ ವಲಯದಲ್ಲೇ ಕೇಳಿ ಬಂದಿದೆ ಎನ್ನಲಾಗಿದೆ.

ಪ್ರತಾಪಸಿಂಹ ಅಭಿವೃದ್ಧಿಗಿಂತ ವಿವಾದಾತ್ಮಕ ಹೇಳಿಕೆಗಳನ್ನು ನೀಡುವಲ್ಲೇ ಹೆಚ್ಚು ಪ್ರಚಾರದಲ್ಲಿದ್ದರು. ಮೈಸೂರಿಗೂ ಸಂಸದ ಪ್ರತಾಪಸಿಂಹಗೂ ಯಾವುದೇ ಸಂಬಂಧವೂ ಇರಲಿಲ್ಲ, 2014ರಲ್ಲಿ ಅಚಾನಕ್ ಆಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಪ್ರತಾಪ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಸ್ವಂತ ವರ್ಚಸು ಇಲ್ಲದಿದ್ದರೂ ಬಿಜೆಪಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಿಂದ ಗೆದ್ದು ಬಂದಿದ್ದರು.

ನಂತರ ಅವರು ಕ್ಷೇತ್ರದ ಅಭಿವೃದ್ಧಿಗಿಂತಲೂ ವಿವಾದಾತ್ಮಕ ಹೇಳಿಕೆ, ಗಲಾಟೆಗಳಲ್ಲೇ ಹೆಚ್ಚು ಪ್ರಚಾರಕ್ಕೆ ಬಂದರು. ಮೈಸೂರು ನಗರದ ಖ್ಯಾತಮಾರನಹಳ್ಳಿ ರಾಜು ಕೊಲೆ ಪ್ರಕರಣದಲ್ಲಿ ಕೋಮು ಸಂಘರ್ಷಕ್ಕೆ ಸಂಸದ ಪ್ರತಾಪಸಿಂಹ ಕಾರಣರಾಗಿದ್ದರು. ಹುಣಸೂರಿನಲ್ಲಿ ನಡೆದ ಹನುಮಜಯಂತಿ ಆಚರಣೆ ವೇಳೆ ರಾಮಭಕ್ತರನ್ನು ಪ್ರಚೋದಿಸಿ ಗಲಾಟೆಗೆ ಕಾರಣರಾಗಿದ್ದರು.

ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಕೊಡಗಿನಲ್ಲಿ ಗಲಾಟೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪಸಿಂಹ ಅವರ ಪ್ರಚೋದನಕಾರಿ ಹೇಳಿಕೆ ಕಾರಣವಾಗಿತ್ತು. ಕಳೆದ ಹಲವು ವರ್ಷಗಳಿಂದ ಬಹುಜನರು ಆಚರಣೆ ಮಾಡಿಕೊಂಡು ಬರುತ್ತಿದ್ದ ಮಹಿಷ ದಸರಾ ಅಚರಣೆಗೆ ಅಡ್ಡಿ ಪಡಿಸುವ ಮೂಲಕ ಈ ಭಾಗದ ದಲಿತರನ್ನು ವಿರೋಧ ಕಟ್ಟಿಕೊಂಡರು.

ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರ ವಿರುದ್ಧ ನಾಲಿಗೆಯನ್ನು ಹರಿಬಿಟ್ಟು ಆ ಸಮುದಾಯಗಳ ಕೋಪಕ್ಕೂ ಗುರಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ವಿ.ಸೋಮಣ್ಣ ಪರ ಮಾತ್ರ ಪ್ರಚಾರ ಮಾಡಿ ಇನ್ನುಳಿದ ಯಾವುದೇ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿಲ್ಲ ಎಂಬ ಆರೋಪವು ಸಂಸದ ಪ್ರತಾಪಸಿಂಹ ಅವರ ಮೇಲಿತ್ತು.

ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ ಬಿಜೆಪಿ ವರಿಷ್ಠರು ಸಂಸದ ಪ್ರತಾಪ ಸಿಂಹ ಅವರ ಪರ ಅಭಿಪ್ರಾಯ ಸಂಗ್ರಹಿಸಲು ಇತ್ತೀಚೆಗೆ ಒಂದು ತಂಡವನ್ನು ಕಳುಹಿಸಿತ್ತು. ಆ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಪ್ರತಾಪಸಿಂಹ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಯಿಂದ ಸಂಸದ ಪ್ರತಾಪಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿತು ಎನ್ನಲಾಗಿದೆ.

Tags

MysoreKodaguBJPPratap Simha
share
ನೇರಳೆ ಸತೀಶ್‍ ಕುಮಾರ್
ನೇರಳೆ ಸತೀಶ್‍ ಕುಮಾರ್
Next Story
X