Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹೊಸ ಪರ್ವದತ್ತ ಬೆಂಗಳೂರು ವಿವಿ ಗ್ರಂಥಾಲಯ

ಹೊಸ ಪರ್ವದತ್ತ ಬೆಂಗಳೂರು ವಿವಿ ಗ್ರಂಥಾಲಯ

►ದೇಶದ ಅತ್ಯುತ್ತಮ ಗ್ರಂಥಾಲಯವಾಗುವತ್ತ ಹೆಜ್ಜೆ

ಪ್ರಕಾಶ್ ಅವರಡ್ಡಿಪ್ರಕಾಶ್ ಅವರಡ್ಡಿ29 Jan 2024 12:27 PM IST
share
ಹೊಸ ಪರ್ವದತ್ತ ಬೆಂಗಳೂರು ವಿವಿ ಗ್ರಂಥಾಲಯ

ಬೆಂಗಳೂರು, ಜ.28: ಬೆಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರೀಯ ಗ್ರಂಥಾಲಯ ಮೇಲ್ದರ್ಜೆಗೇರಿಸಲು ಸಕಲ ಸಿದ್ಧತೆ ಶುರುವಾಗಿದೆ. ಸುಮಾರು 1ಕೋಟಿ ರೂ. ಅನುದಾನದಲ್ಲಿ ಗ್ರಂಥಾಲಯ ಹೊಸ ಸ್ಪರ್ಶ ಪಡೆದುಕೊಳ್ಳಲ್ಲಿದ್ದು, ಗ್ರಂಥಾಲಯದ ಸುತ್ತಲೂ 10 ಎಕರೆ ವ್ತಾಪ್ತಿಯಲ್ಲಿ 28 ಸಾವಿರ ಮಿಯಾವಾಕಿ ಗಿಡಗಳನ್ನು ನೆಡುವ ಮೂಲಕ ಹಸಿರು ಗ್ರಂಥಾಲಯಕ್ಕೆ ಮತ್ತಷ್ಟು ಒತ್ತು ನೀಡಲಾಗುತ್ತಿದೆ.

ಸಾಂಪ್ರದಾಯಿಕ ಗಿಡ, ಮರಗಳನ್ನು ನೆಡುವ ಮೂಲಕ ಸಂಪೂರ್ಣ ಗ್ರಂಥಾಲಯ ಸುತ್ತಲೂ ಹಸಿರುಮಯವಾಗಿಸಲು ಕ್ರಮ ವಹಿಸಲಾಗುತ್ತಿದೆ. ವಿದ್ಯಾರ್ಥಿಗಳು ಒತ್ತಡ ಮುಕ್ತರಾಗಿ ಅಧ್ಯಯನ ನಡೆಸಲು ವಿಶೇಷವಾಗಿ ಆಲದಮರದಲ್ಲಿ ಹ್ಯಾಂಗಿಂಗ್ ಲೈಬ್ರರಿ ನಿರ್ಮಿಸಲಾಗುವುದು. ಪ್ರತೀ ಮರದಲ್ಲೂ ವಿದ್ಯಾರ್ಥಿಗಳು ಯಾವುದೇ ಅಡಚಣೆಗಳಿಲ್ಲದೆ ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುವುದು.

ಗ್ರಂಥಾಲಯವನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸಲು ಆದ್ಯತೆ ನೀಡಲಾಗುವುದು. ಗ್ರಂಥಾಲಯ ವ್ಯಾಪ್ತಿಯಲ್ಲಿ ಉಚಿತ ವೈಫೈ ಒದಗಿಸಲಾಗುವುದು. ವಿದ್ಯಾರ್ಥಿ ಮತ್ತು ಶಿಕ್ಷಕರ ಲಾಂಜ್ ನಿರ್ಮಿಸಲಾಗುವುದು. ವಿದ್ಯಾರ್ಥಿಗಳ ಮನೋ ಒತ್ತಡ ಕಡಿಮೆ ಮಾಡಲು ಮತ್ತು ಓದಿನ ನಡುವೆ ಮನೋವಿಕಾಸ ಹೆಚ್ಚಿಸಲು ಕ್ರೀಡಾ ವಲಯ, ಸಂಗೀತ ವಲಯ ನಿರ್ಮಿಸಲಾಗುವುದು.

ಚೆಸ್, ಕ್ಯಾರಮ್ ನಂತಹ ಸಣ್ಣ ಪುಟ್ಟ ಆಟಗಳು, ಸಂಗೀತ ಆಲಿಸುವುದರ ಮೂಲಕ ಮನಸ್ಸಿಗೆ ವಿಶ್ರಾಂತಿ ನೀಡುವ ಪ್ರಯತ್ನವನ್ನು ಗ್ರಂಥಾಲಯ ವಿಭಾಗ ಮಾಡಲಿದೆ. ಬಯಲು ರಂಗಮಂದಿರ ಕೂಡ ತೆಲೆ ಎತ್ತಲ್ಲಿದ್ದು, ಶಿಕ್ಷಣಕ್ಕೆ ಸಾಥ್ ನೀಡುವ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗುವುದು.

ಬೆಂಗಳೂರು ವಿಶ್ವವಿದ್ಯಾನಿಲಯ ಗ್ರಂಥಾಲಯ ಅಭಿವೃದ್ಧಿಗೆ ಗ್ರಂಥಪಾಲಕ ಡಾ.ಬಿ.ಆರ್.ರಾಧಾಕೃಷ್ಣ ಕಾಯಕಲ್ಪ ನಕ್ಷೆ ರೂಪಿಸಿದ್ದು, ಕುಲಪತಿ ಡಾ.ಜಯಕರ ಎಸ್.ಎಂ., ಕುಲಸಚಿವ ಶೇಕ್ ಲತೀಫ್ ಸಹಕಾರದಿಂದ 2023-24ನೇ ಸಾಲಿನಲ್ಲಿ ಗ್ರಂಥಾಲಯ ಹೊಸ ರೂಪ ಪಡೆದುಕೊಳ್ಳಲಿದೆ.

ಬೆಂಗಳೂರು ವಿಶ್ವವಿದ್ಯಾನಿಲಯ ಗ್ರಂಥಾಲಯ ಅತಿಹೆಚ್ಚು ಪುಸ್ತಕ ಭಂಡಾರ ಹೊಂದಿರುವ ಸರಕಾರಿ ಗ್ರಂಥಾಲಯಗಳಲ್ಲಿ ಒಂದಾಗಿದೆ. ಸುಮಾರು 4 ಲಕ್ಷಕ್ಕೂ ಅಧಿಕ ಪುಸ್ತಕ ಸಂಗ್ರಹ ಹೊಂದಿದ್ದು, 65 ಸಾವಿರಕ್ಕೂ ಹೆಚ್ಚು ಇ-ಬುಕ್ಸ್ ಗಳನ್ನು ಹೊಂದಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಂ ಲೈಬ್ರಿರಿ ಆಪ್ ಕೂಡ ನಿರ್ಮಿಸಿದ್ದು ಈ ಮೂಲಕ ವಿದ್ಯಾರ್ಥಿಗಳ ಗ್ರಂಥಾಲಯ ಲಾಭ ಪಡೆಯಬಹುದಾಗಿದೆ.

ವಿಶೇಷತೆಗಳು

► ಹಸಿರೀಕರಣ

► ಡಿಜಟಲೀಕರಣ

► ಹ್ಯಾಂಗಿಂಗ್ ಲೈಬ್ರರಿ

► ಉಚಿತ ವೈಫೈ

► ಬಯಲು ರಂಗಮಂದಿರ

► 4 ಲಕ್ಷಕ್ಕೂ ಅಧಿಕ ಪುಸ್ತಕ ಸಂಗ್ರಹ

► ಶೋಧ ಶುದ್ಧಿ ತಂತ್ರಜ್ಞಾನ

► ಪ್ರಶ್ನೆ ಪತ್ರಿಕೆಗಳ ಸಂಗ್ರಹ

► ಯುಜಿಸಿ-ಮಾಹಿತಿ ತಂತ್ರಜ್ಞಾನ ವ್ಯವಸ್ಥೆ

► ಧ್ವನಿ, ದೃಶ್ಯ, ಅಕ್ಷರ ರೂಪದ ಪುಸ್ತಕ

ವಿಜ್ಞಾನ, ಸಮಾಜಶಾಸ್ತ್ರ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವಶ್ಯಕವಾಗಿರುವ ಪುಸ್ತಕ ಕೋಶವನ್ನು ಗ್ರಂಥಾಲಯ ಹೊಂದಿದೆ. ಹಸಿರೀಕರಣ, ಡಿಜೀಟಲಿಕರಣಗೊಳಿಸುವ ನಿಟ್ಟಿನಲ್ಲಿ ಹೊಸ ಸ್ವರೂಪಕ್ಕೆ ಮುಂದಾಗಿದ್ದೇವೆ.

?ಡಾ.ಬಿ.ಆರ್.ರಾಧಾಕೃಷ್ಣ, ಬೆಂಗಳೂರು ವಿವಿ, ಗ್ರಂಥಪಾಲಕ

share
ಪ್ರಕಾಶ್ ಅವರಡ್ಡಿ
ಪ್ರಕಾಶ್ ಅವರಡ್ಡಿ
Next Story
X