Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮತ್ಸ್ಯಕ್ಷಾಮ: ಉತ್ತರ ಕನ್ನಡದಲ್ಲಿ...

ಮತ್ಸ್ಯಕ್ಷಾಮ: ಉತ್ತರ ಕನ್ನಡದಲ್ಲಿ ಮೀನುಗಾರಿಕೆ ಭಾಗಶಃ ಬಂದ್

► ಜನರಿಲ್ಲದೆ ಸ್ತಬ್ಧಗೊಂಡ ಬೈತಖೋಲ್ ಬಂದರು ► ಲಂಗರು ಹಾಕಿದ ಬೋಟ್ ಗಳು

ಶ್ರೀನಿವಾಸ್ ಬಾಡ್ಕರ್ಶ್ರೀನಿವಾಸ್ ಬಾಡ್ಕರ್25 March 2024 2:01 PM IST
share
ಮತ್ಸ್ಯಕ್ಷಾಮ: ಉತ್ತರ ಕನ್ನಡದಲ್ಲಿ ಮೀನುಗಾರಿಕೆ ಭಾಗಶಃ ಬಂದ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಸದ್ಯ ಮತ್ಸ್ಯಕ್ಷಾಮ ಉಂಟಾಗಿದ್ದು, ಇದರ ಪರಿಣಾಮವಾಗಿ ಮೀನುಗಾರಿಕೆ ಭಾಗಶಃ ಬಂದ್ ಆಗಿದೆ.

ಟ್ರಾಲರ್ ಬೋಟ್ಗಳು ಮೀನುಗಾರಿಕೆಗಾಗಿ ಆಳಸಮುದ್ರಕ್ಕೆ ತೆರಳದೆ ಸುಮಾರು ನಾಲ್ಕೈದು ತಿಂಗಳು ಕಳೆದಿದೆ. ಬೋಟ್ಗಳಲ್ಲಿ ದುಡಿಯುಲು ಇರುವ ಕಾರ್ಮಿಕರಿಗೂ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ಮೀನುಗಾರಿಕಾ ಚಟುವಟಿಕೆಯಿಂದ ತುಂಬಿರುತ್ತಿದ್ದ ನಗರದ ಬೈತಖೋಲ್ ಮೀನುಗಾರಿಕೆ ಬಂದರು ಪ್ರದೇಶ ಖಾಲಿ ಖಾಲಿಯಾಗಿದೆ.

ಬೈತಖೋಲ್ ಮೀನುಗಾರಿಕೆ ಬಂದರಿನಲ್ಲಿ ೧೫೦ ರಷ್ಟು ಟ್ರಾಲರ್ ಬೋಟ್ಗಳಿವೆ. ಸಾಮಾನ್ಯವಾಗಿ ಡಿಸೆಂಬರ್, ಜನವರಿ, ಫೆಬ್ರವರಿ, ಮಾರ್ಚ್ ಸಮಯದಲ್ಲಿ ೬೦ರಿಂದ ೧೦೦ ಬೋಟ್ಗಳು ಮೀನುಗಾರಿಕೆಗೆ ತೆರಳುತ್ತಿದ್ದವು. ಸಿಗಡಿ, ಲೆಪ್ಪೆ ಮುಂತಾದ ಮೀನುಗಳು ಬಲೆಗೆ ಬೀಳುತ್ತವೆ. ಕೆಲವು ಬಾರಿ ಈ ಅವಧಿಯಲ್ಲಿ ಬೋಟ್ಗಳಿಗೆ ೧ ಟನ್ವರೆಗೂ ಮೀನುಗಳು ಬಲೆಗೆ ಬೀಳುತ್ತಿದ್ದವು. ಆದರೆ, ಪ್ರಸಕ್ತ ದಿನದಲ್ಲಿ ಒಂದು, ಎರಡು ಟ್ರಾಲರ್ ಬೋಟ್ಗಳು, ಕೆಲವು ಪರ್ಸೀನ್ ಬೋಟ್ಗಳು ಮಾತ್ರ ಸಮುದ್ರಕ್ಕೆ ತೆರಳುತ್ತಿವೆ. ಬೆಳಗ್ಗೆ ಅಲ್ಪಪ್ರಮಾಣದಲ್ಲಿ ಮೀನು ಖರೀದಿ ನಡೆಯುತ್ತಿದೆ ಎನ್ನುತ್ತಾರೆ ಬೈತಖೋಲ್ನ ಮೀನುಗಾರರು.

ಪರ್ಸೀನ್ ಬೋಟ್ಗಳಿಗೆ ಹೊರ ರಾಜ್ಯದ ಕಾರ್ಮಿಕರನ್ನು ಬಳಸಲಾಗುತ್ತದೆ. ಒಮ್ಮೆ ಅವರು ತಮ್ಮ ಊರುಗಳಿಗೆ ತೆರಳಿದರೆ ಮತ್ತೆ ವಾಪಸ್ ಬರುವುದಿಲ್ಲ. ಇದರಿಂದ ಅವರನ್ನು ಉಳಿಸಿಕೊಳ್ಳುವ ಸಲುವಾಗಿ ಕೆಲವು ಬೋಟ್ಗಳು ಸಮುದ್ರಕ್ಕೆ ತೆರಳುತ್ತಿವೆ. ಆದರೆ, ಪರ್ಸೀನ್ ಬೋಟ್ಗಳಿಗೂ ನಿರೀಕ್ಷೆಯಷ್ಟು ಮೀನು ಬೀಳುತ್ತಿಲ್ಲ ಎಂದು ಮೀನುಗಾರರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದಾಗ ಒಂದು, ಎರಡು ಕ್ವಿಂಟಾಲ್ ಸಿಗಡಿಗಳು ಬೀಳುತ್ತಿದ್ದವು. ಪ್ರತಿ ದಿನ ಸರಾಸರಿ ೧ ಲಕ್ಷ ರೂ.ವರೆಗೂ ಆದಾಯ ಬರುತ್ತಿತ್ತು. ಆದರೆ, ಈ ಬಾರಿ ಮೀನೇ ಬೀಳುತ್ತಿಲ್ಲ. ಹೋದ ಡೀಸೆಲ್ ಖರ್ಚು, ಕಾರ್ಮಿಕರ ವೇತನವನ್ನೂ ನೀಡಲು ಕಷ್ಟವಾಗಿದ್ದರಿಂದ ಬೋಟ್ಗಳನ್ನು ದಡದಲ್ಲೇ ನಿಲ್ಲಿಸಲಾಗುತ್ತಿದೆ ಎನ್ನುತ್ತಾರೆ ಬೋಟ್ ಮಾಲಕರು.

ಹವಾಮಾನ ವೈಪರೀತ್ಯ, ಲೈಟ್ ಫಿಶಿಂಗ್ನಂತಹ ಅವೈಜ್ಞಾನಿಕ ಮೀನುಗಾರಿಕೆ ಮತ್ಸ್ಯಕ್ಷಾಮಕ್ಕೆ ಕಾರಣ ಎಂಬುದು ಮೀನುಗಾರಿಕೆ ತಜ್ಞರ ಅಭಿಪ್ರಾಯ. ಭೂಮಿಯ ಮೇಲಿನ ಉಷ್ಣಾಂಶ ಹೆಚ್ಚಾದಂತೆ ಕಡಲಿನ ನೀರಿನ ಉಷ್ಣಾಂಶವೂ ಹೆಚ್ಚುತ್ತದೆ. ಕೆಲವು ಮೀನುಗಳು ಆಳಕ್ಕೆ ಇಳಿಯುತ್ತವೆ ಎನ್ನುತ್ತಾರೆ ತಜ್ಞರು.

ಈ ಹಿಂದೆ ಫೆಬ್ರವರಿಯಲ್ಲೇ ಇಷ್ಟು ಮೀನಿನ ಕೊರತೆ ಎದುರಾದದ್ದು ನೋಡಿಲ್ಲ. ಬೋಟ್ಗಳು ಸಮುದ್ರಕ್ಕಿಳಿದರೆ ಲಾಭವಾಗುವುದಿರಲಿ, ಹೋದ ಖರ್ಚು ಕೂಡ ದೊರಕುವುದಿಲ್ಲ. ಇದರಿಂದ ಹೆಚ್ಚಿನ ಬೋಟ್ಗಳು ಲಂಗರು ಹಾಕಿವೆ ಎಂದು ಮೀನುಗಾರರು ಸಂಕಷ್ಟ ತೋಡಿಕೊಳ್ಳುತ್ತಿದ್ದಾರೆ.

‘ಸರಕಾರ ಮೀನುಗಾರರಿಗೂ ಬರ ಪರಿಹಾರ ನೀಡಲಿ’

ಅನಾವೃಷ್ಟಿಯಿಂದ ಬರ ಎದುರಾದಂತೆ ಸಮುದ್ರದಲ್ಲೂ ಬರಗಾಲ ಬಂದಿದೆ. ರೈತರಿಗೆ ನೀಡಿದಂತೆ ಸರಕಾರ ಮೀನುಗಾರರಿಗೂ ಬರ ಪರಿಹಾರ ನೀಡಬೇಕು ಎಂದು ಉತ್ತರ ಕನ್ನಡ ಸಹಕಾರ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ ಒತ್ತಾಯಿಸಿದ್ದಾರೆ.

share
ಶ್ರೀನಿವಾಸ್ ಬಾಡ್ಕರ್
ಶ್ರೀನಿವಾಸ್ ಬಾಡ್ಕರ್
Next Story
X