Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರೈತರಿಗೆ ವರದಾನವಾಗಿರುವ ನರೇಗಾ ಯೋಜನೆ

ರೈತರಿಗೆ ವರದಾನವಾಗಿರುವ ನರೇಗಾ ಯೋಜನೆ

ರವಿಕುಮಾರ ಶಿಂಧೆರವಿಕುಮಾರ ಶಿಂಧೆ12 May 2025 9:02 AM IST
share
ರೈತರಿಗೆ ವರದಾನವಾಗಿರುವ ನರೇಗಾ ಯೋಜನೆ

ಬೀದರ್ : ನರೇಗಾ ಯೋಜನೆಯಡಿಯಲ್ಲಿ ಕೆಲವು ಗ್ರಾಮಗಳಲ್ಲಿ ಕೊರೆದಿರುವ ಬಾವಿಗಳಲ್ಲಿ ಸಮರ್ಪಕ ನೀರು ಲಭ್ಯವಾಗಿರುವುದರಿಂದ ಬೇಸಿಗೆ ಮುಗಿಯುವವರೆಗೂ ನೀರಿನ ಸಮಸ್ಯೆ ಇಲ್ಲದಿರುವುದು ಸೇರಿದಂತೆ ವಿವಿಧ ಕಾಮಗಾರಿಗಳಿಂದ ನರೇಗಾ ಯೋಜನೆ ರೈತರ ಪಾಲಿಗೆ ವರದಾನವಾಗಿದೆ.

ಔರಾದ್ ತಾಲೂಕಿನ ಏಕಂಬಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಮಾಲಪೂರ ಗ್ರಾಮದ ಆನಂದರಾವ್ ದಿಗಂಬರರಾವ್ ಎಂಬುವರ ತೆರೆದ ಬಾವಿಗೆ ಬೇಸಿಗೆಯಲ್ಲಿ ಕೃಷಿ ಭೂಮಿಗೆ ನಿರೀಕ್ಷೆ ಮೀರಿ ನೀರು ಸಂಗ್ರಹದಿಂದ ಇದು ಅವರ ಹರ್ಷಕ್ಕೆ ಕಾರಣವಾಗಿದೆ. ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಇವರ ಪಾಲಿಗೆ ವರದಾನವಾಗಿದೆ. ಈ ನೀರಿನಿಂದ ಬಡವರ ಬಾದಾಮಿ ಶೇಂಗಾ ಬೆಳೆದು ಯಶಸ್ವಿಯಾಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ ಬಾವಿಗಳಲ್ಲಿ ಸಮರ್ಪಕ ನೀರು ಇರುವುದರಿಂದ ರೈತರು ಹಲವು ಬೆಳೆಗಳನ್ನು ಬೆಳೆಯಲು ಮುಂದಾಗಿದ್ದಾರೆ.

ಕೃಷಿ ಇಲಾಖೆಯಲ್ಲಿ ನರೇಗಾ ಯೋಜನೆ ಅನುಷ್ಠಾನಗೊಂಡಿದ್ದು, ಈ ಭಾಗದ ಹಲವು ರೈತರಿಗೆ ನೆರವಾಗಿದೆ. ತಮ್ಮ ಜಮೀನುಗಳಲ್ಲೇ ಕೆಲಸ ಮಾಡಿ, ಅಭಿವೃದ್ಧಿ ಮಾಡುವುದರಿಂದ ಕೂಲಿಯೂ ಸಿಗುತ್ತಿದೆ. ಜಮೀನು ಅಭಿವೃದ್ಧಿ ಆಗುತ್ತಿದೆ. ಹಾಗಾಗಿ ರೈತರು ಸ್ವಾವಲಂಬಿಗಳಾಗಿ ಬದುಕು ದಾರಿಯಾಗುತ್ತಿದೆ. ಔರಾದ್ ತಾಲೂಕಿನ ವ್ಯಾಪ್ತಿಯಲ್ಲಿ ಸುಮಾರು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಯುವಜನತೆಯನ್ನು ಸ್ವಾವಲಂಬಿಗಳಾಗಿ ಜೀವಿಸುವಂತೆ ಮಾಡಲು ಇಲಾಖೆ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಬರಡು ಭೂಮಿಯನ್ನು ಉತ್ಪಾದನಾ ಕೇಂದ್ರವನ್ನಾಗಿಸುವಲ್ಲಿ ಮಹಾತ್ಮ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರೈತರಿಗೆ ವರದಾನವಾಗಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನರೇಗಾ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ತಿಳಿಸಿದ್ದಾರೆ.

ಬಡವರಿಗೆ ನರೇಗಾ ಆಶ್ರಯ: ಜನ- ಜಾನುವಾರು, ಕೃಷಿಗೆ ನೀರಿನ ಸಮಸ್ಯೆ ನೀಗಿಸುವ ಜತೆಯಲ್ಲೇ ಅಂತರ್ಜಲ ವೃದ್ಧಿಗಾಗಿ ಸರಕಾರ ಕೈಗೊಂಡಿರುವ ‘ತೆರೆದ ಬಾವಿ’ ನಿರ್ಮಾಣ ಯೋಜನೆಗೆ ಬೇಡಿಕೆ ಹೆಚ್ಚಲಾರಂಭಿಸಿದೆ. ಈ ಯೋಜನೆ ಬಡವರಿಗೆ ಆಶ್ರಯವಾಗಿದ್ದು, ತಾಲೂಕಿನಲ್ಲಿ ಬಾವಿಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿವೆ. ಕೃಷಿ ಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರು ತೆರೆದ ಬಾವಿ ನಿರ್ಮಾಣ ಮಾಡಿಕೊಳ್ಳಬೇಕು ಎಂದು ನರೇಗಾ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ತಿಳಿಸಿದ್ದಾರೆ.

ಗರ್ಭಿಣಿಯರಿಗೆ ರಿಯಾಯಿತಿ: ನರೇಗಾ ಯೋಜನೆ ಕಾಮಗಾರಿಗಳಲ್ಲಿ ಕೆಲಸ ಮಾಡುವ 6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 6 ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು, ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗಿದೆ. ಕೆಲಸದಲ್ಲಿ ರಿಯಾಯಿತಿ ನೀಡಲು ಆರೋಗ್ಯ ಇಲಾಖೆ ಕೊಡುವ ತಾಯಿ ಕಾರ್ಡ್‌ನ್ನು ಆಧಾರವಾಗಿ ಪರಿಗಣಿಸುವಂತೆ ಸರಕಾರ ಆದೇಶದಲ್ಲಿ ತಿಳಿಸಿದೆ ಎಂದು ಶಿವಕುಮಾರ ಘಾಟೆ ತಿಳಿಸಿದ್ದಾರೆ.

ಕೃ

ಷಿಯಿಂದ ಕೈ ಸುಟ್ಟುಕೊಂಡು ದಾರಿ ಕಾಣದೆ ಕಂಗಾಲಾಗಿದ್ದ ರೈತರಿಗೆ ನರೇಗಾ ಯೋಜನೆ ಆಶಾಕಿರಣವಾಗಿ ಪರಿಣಮಿಸಿದೆ. ಸಾಲಬಾಧೆ, ಬೆಳೆ ನಷ್ಟದಿಂದ ಮನನೊಂದು ಜೀವದ ಆಸೆ ತೊರೆಯುತ್ತಿರುವ ಹಲವು ರೈತರು ಆತ್ಮಹತ್ಯೆಯತ್ತ ಮುಖ ಮಾಡಿದ್ದಾರೆ. ಕೆಲ ರೈತರು ಪಟ್ಟಣಗಳತ್ತ ಗುಳೆ ಹೋಗುತ್ತಿದ್ದಾರೆ. ರೈತರ ಸಂಕಷ್ಟ ಅರಿತ ಸರಕಾರ, ವಿವಿಧ ಇಲಾಖೆಗಳಲ್ಲಿ ನರೇಗಾ ಕಾಮಗಾರಿಗಳನ್ನು ಸೃಜಿಸಿದೆ. ಇದು ರೈತರ ಪಾಲಿಗೆ ಲಾಭದಾಯಕವಾಗಿದೆ.

-ಶಿವಕುಮಾರ ಘಾಟೆ, ತಾಲೂಕು ನರೇಗಾ ಸಹಾಯಕ ನಿರ್ದೇಶಕ, ಔರಾದ್

ನ

ರೇಗಾ ಯೋಜನೆಯಡಿ ಜಮಲಾಪೂರ ಗ್ರಾಮದ ಆನಂದರಾವ್ ಅವರು ತೆರೆದ ಬಾವಿ ಕೊರೆದಿದ್ದಾರೆ. ಬಾವಿಯಲ್ಲಿ ಬೇಸಿಗೆಯಲ್ಲಿಯೂ ನೀರಿದ್ದು, ಶೇಂಗಾ ಬೆಳೆ ಬೆಳೆದಿದ್ದಾರೆ. ರೈತರು ನರೇಗಾ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಯಾಗಬೇಕು.

-ಮಾಣಿಕರಾವ ಪಾಟೀಲ್,

ತಾಪಂ ಇಒ, ಔರಾದ್

share
ರವಿಕುಮಾರ ಶಿಂಧೆ
ರವಿಕುಮಾರ ಶಿಂಧೆ
Next Story
X