Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಾರ್ವಜನಿಕ ಶೌಚಾಲಯಕ್ಕೆ ದಾರಿ, ನೀರಿನ...

ಸಾರ್ವಜನಿಕ ಶೌಚಾಲಯಕ್ಕೆ ದಾರಿ, ನೀರಿನ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳು: ಆರೋಪ

ಚಿತ್ರಶೇನ ಫುಲೆಚಿತ್ರಶೇನ ಫುಲೆ8 Sept 2025 3:27 PM IST
share
ಸಾರ್ವಜನಿಕ ಶೌಚಾಲಯಕ್ಕೆ ದಾರಿ, ನೀರಿನ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳು: ಆರೋಪ

ಬೀದರ್, ಸೆ.7: ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡಗಾಂವ್ ಗ್ರಾಮದಲ್ಲಿ ಸರಕಾರದಿಂದ ಎರಡು ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದ್ದು, ಈ ಎರಡು ಶೌಚಾಲಯಕ್ಕೂ ನೀರು ಇಲ್ಲ, ದಾರಿಯೂ ಇಲ್ಲದಾಗಿದೆ.

ಎರಡು ಶೌಚಾಲಯಗಳು 2013-14 ರ ಅವಧಿಯಲ್ಲಿಯೇ ನಿರ್ಮಿಸಲಾಗಿದೆ ಎನ್ನುವುದು ಶೌಚಾಲಯಗಳ ಮೇಲೆ ಬರೆದ ಬೋರ್ಡ್‌ನಿಂದಾಗಿ ತಿಳಿದು ಬರುತ್ತಿದೆ. ಅಂದರೆ ಒಂದು ಶೌಚಾಲಯದ ಉದ್ಘಾಟನೆ ಅಥವಾ ಉಪಯೋಗ ಆಗದಿದ್ದರೂ ಕೂಡ ಇನ್ನೊಂದು ಶೌಚಾಲಯ ನಿರ್ಮಿಸಲಾಗಿದೆ. ಒಂದು ಶೌಚಾಲಯ ಶಾಸಕರ ಅನುದಾನದ ಅಡಿಯಲ್ಲಿ ಜಿಲ್ಲಾ ಪಂಚಾಯತ್ ನಿಂದ ನಿರ್ಮಿಸಿದರೆ, ಇನ್ನೊಂದು ಶೌಚಾಲಯವು ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನಿರ್ಮಾಣವಾಗಿದೆ.

ಶಾಸಕರ ಅನುದಾನದ ಅಡಿಯಲ್ಲಿ ಜಿಲ್ಲಾ ಪಂಚಾಯತ್ ನಿಂದ ನಿರ್ಮಿಸಿದ ಶೌಚಾಲಯಕ್ಕೆ ಸುಮಾರು 5 ಲಕ್ಷ ರೂ. ಖರ್ಚು ಮಾಡಿದರೆ, ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನಿರ್ಮಿಸಿದ ಶೌಚಾಲಯಕ್ಕೆ ಸುಮಾರು 10 ಲಕ್ಷ ರೂ. ಖರ್ಚು ಮಾಡಲಾಗಿದೆ. ಆದರೆ ಈ ಎರಡು ಶೌಚಾಲಯಗಳನ್ನು ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಾಣ ಮಾಡಿದರೂ ಉಪಯೋಗಕ್ಕೆ ಬಾರದಾಗಿವೆ. ಕಾರಣ ಎರಡು ಶೌಚಾಲಯಗಳಿಗೆ ಹೋಗುವುದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ದಾರಿ ಹಾಗೂ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಲ್ಲ ಎಂಬುದು ಸ್ಥಳೀಯ ನಿವಾಸಿಗಳ ಆರೋಪವಾಗಿದೆ.

ಗ್ರಾಮದಲ್ಲಿ ಎರಡು ಸುಸಜ್ಜಿತವಾದ ಸಾರ್ವಜನಿಕ ಶೌಚಾಲಯ ಕಟ್ಟಡ ಕಟ್ಟಿದರೂ ಕೂಡ ಅದಕ್ಕೆ ಮೂಲಭೂತ ಸೌಕರ್ಯವಿಲ್ಲದೆ ಪಾಳು ಬಿದ್ದಿವೆ. ಹೀಗಾಗಿ ಈ ಗ್ರಾಮದ ಜನರು ಸಾರ್ವಜನಿಕ ಶೌಚಾಲಯ ಇದ್ದರೂ ಬಯಲು ಶೌಚಕ್ಕೆ ಹೋಗುತ್ತಿರುವುದು ವಿಪರ್ಯಾಸವಾಗಿದೆ.

ಮನೆಯಲ್ಲಿ ಶೌಚಾಲಯ ಇದ್ದವರಿಗೆ ಸಮಸ್ಯೆ ಇಲ್ಲ. ಆದರೆ ಬಹುತೇಕ ಜನರ ಮನೆಯಲ್ಲಿ ಶೌಚಾಲಯವಿಲ್ಲ. ಹಾಗಾಗಿ ಶೌಚಾಲಯಕ್ಕೆ ಬಯಲಿಗೆ ಹೋಗುವುದು ಅನಿವಾರ್ಯವಾಗಿದೆ. ಹೆಣ್ಣುಮಕ್ಕಳಿಗಂತೂ ತುಂಬಾ ಸಮಸ್ಯೆಯಾಗುತ್ತಿದೆ. ಹೀಗಾಗಿ ಈ ಎರಡು ಶೌಚಾಲಯಗಳಿಗೆ ರಸ್ತೆ ಮತ್ತು ನೀರಿನ ವ್ಯವಸ್ಥೆ ಮಾಡಿದರೆ ಉಪಯೋಗ ಮಾಡಬಹುದು ಎಂದು ಗ್ರಾಮಸ್ಥರು ಹೇಳುತ್ತಾರೆ.

ಈ ಶೌಚಾಲಯಗಳು ಯಾವ ಇಲಾಖೆಯಿಂದ ನಿರ್ಮಾಣವಾಗಿವೆ ಎಂದು ನಮಗೆ ಮಾಹಿತಿ ಇಲ್ಲ. ಗ್ರಾಮ ಪಂಚಾಯತ್‌ನ ಯಾವುದೇ ಅನುದಾನದಡಿ ಅವು ನಿರ್ಮಾಣವಾಗಿಲ್ಲ. ಸರಕಾರದ ಯಾವುದೇ ಅನುದಾನದಡಿ ಅವು ನಿರ್ಮಾಣವಾದರೆ, ಅವು ಗ್ರಾಮ ಪಂಚಾಯತ್ ಗೆ ಹಸ್ತಾಂತರ ಕೂಡ ಆಗಿಲ್ಲ. ನಮ್ಮ ಪಂಚಾಯತ್‌ನಡಿಯಲ್ಲಿ ಆಗಿದ್ದರೆ ನಮ್ಮಲ್ಲಿ ಮಾಹಿತಿ ರುತ್ತಿತ್ತು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವೇಂದ್ರ ತಿಳಿಸಿದ್ದಾರೆ.

ನಮ್ಮೂರಲ್ಲಿ ಶೌಚಾಲಯ ಕಟ್ಟಿದಾಗಿನಿಂದ ಅದಕ್ಕೆ ನೀರಿನ ವ್ಯವಸ್ಥೆ ಮಾಡಿಲ್ಲ. ದಾರಿ ವ್ಯವಸ್ಥೆ ಕೂಡ ಇಲ್ಲ. ದಾರಿ ಮತ್ತು ನೀರಿನ ವ್ಯವಸ್ಥೆ ಮಾಡಿದರೆ ಗ್ರಾಮಸ್ಥರು ಶೌಚಾಲಯದ ಉಪಯೋಗ ಮಾಡಬಹುದು.

-ಶೇಷಣ್ಣ, ರಾಚಪ್ಪಗೌಡಗಾಂವ್ ಗ್ರಾಮಸ್ಥ

ಈ ಶೌಚಾಲಯಗಳು ಯಾವ ಅನುದಾನದಡಿಯಲ್ಲಿ ನಿರ್ಮಾಣವಾಗಿವೆ ಎನ್ನುವ ಮಾಹಿತಿ ನಮಗಿಲ್ಲ. ಸರಕಾರದ ಬೇರೆ ಅನುದಾನದಡಿ ನಿರ್ಮಾಣವಾದರೆ ಅವು ಗ್ರಾಮ ಪಂಚಾಯತ್ ಗೆ ಹಸ್ತಾಂತರ ಕೂಡ ಆಗಲಿಲ್ಲ. ಸಾಧ್ಯವಾದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಶೌಚಾಲಯಗಳ ದುರಸ್ಥಿ ಕೆಲಸ ಮಾಡಲಾಗುವುದು.

-ದೇವೇಂದ್ರ, ಪಿಡಿಒ, ರಾಚಪ್ಪಗೌಡಗಾಂವ್ ಗ್ರಾಪಂ

share
ಚಿತ್ರಶೇನ ಫುಲೆ
ಚಿತ್ರಶೇನ ಫುಲೆ
Next Story
X