Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ,...

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ, ಬೆಳ್ಳುಳ್ಳಿ

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.1 Sept 2024 12:12 PM IST
share
ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ, ಬೆಳ್ಳುಳ್ಳಿ

ಹೊಸಕೋಟೆ: ಈರುಳ್ಳಿ ದರ ಮತ್ತೆ ಗಗನಕ್ಕೇರಿದ್ದು, 100ರ ಗಡಿ ಮುಟ್ಟಿದೆ. ಬೆಳೆಗಾ ರರಿಗೆ ಖುಷಿ ತಂದರೂ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ.

ಪ್ರತಿಯೊಂದು ತಿಂಡಿ, ಸಾಂಬಾರಿಗೆ ಬೆಳ್ಳುಳ್ಳಿ ಇಲ್ಲದಿದ್ದರೆ ರುಚಿ ಇರುವುದಿಲ್ಲ. ಆದರೆ, ಇದರ ಬೆಲೆ ಏರಿಕೆಯಾಗಿದ್ದು, ಮಹಿಳೆಯರಿಗೆ ಕೈ ಕಟ್ಟು ವಂತಾಗಿದೆ. ಹೊಟೇಲ್‌ಗಳಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿಯಿಂದ ಸಾಕಷ್ಟು ಪದಾರ್ಥ ಗಳನ್ನು ತಯಾರಿಸುತ್ತಾರೆ. ಮಾಂಸಾಹಾರಿ ಹೊಟೇಲ್‌ಗಳಿಗೆ ಬೆಳ್ಳುಳ್ಳಿ ಬೆಲೆ ಏರಿಕೆಯ ಬರೆ ಬೀಳುವಂತೆ ಆಗಿದೆ. ಬೆಳ್ಳುಳ್ಳಿ ಸರಿಯಾದ ರೀತಿ ಬರುತ್ತಿಲ್ಲದಿರುವುದರಿಂದ ಬೆಲೆ

ಏರಿಕೆಯಾಗಿದೆ. ರಾಜ್ಯದ ಹಲವು ಕಡೆ ಈ ಬಾರಿ ಮಳೆಯಾಗುತ್ತಿ ರುವುದರಿಂದ ಬೆಳೆಗಳು ನಾಶವಾಗಿದೆ. ಹೊಸ ಬೆಳ್ಳುಳ್ಳಿ ಇನ್ನೂ 2-3ತಿಂಗಳು ಕಟಾವಿಗೆ ಬರಬೇಕಾಗಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಈರುಳ್ಳಿ ಬೆಲೆ ಏರಿಕೆ: ಈರುಳ್ಳಿ ಮತ್ತು ಬೆಳ್ಳುಳ್ಳಿ ಬೆಲೆ ಏರಿಕೆಯಿಂದ ಗ್ರಾಹಕರಲ್ಲಿ ಮತ್ತಷ್ಟು ಹೊರೆ ಬೀಳುತ್ತಿದೆ. ಹಲವು ದಿನಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರುತ್ತಲೇ ಇದೆ. ಗ್ರಾಹಕರ ಕಣ್ಣಲ್ಲಿ ಕೊಳ್ಳುವಾಗಲೇ ನೀರು ಬರುತ್ತಿದೆ. ಗುಣಮಟ್ಟದ ಈರುಳ್ಳಿಗೆ ಮಾರುಕಟ್ಟೆಯಲ್ಲಿ ಒಂದು ಕೆ.ಜಿಗೆ 60ರಿಂದ 70 ರೂ. ಮಾರಾಟವಾಗುತ್ತಿದೆ. ಕಳೆದ ಕೆಲವು ತಿಂಗಳ ಹಿಂದೆ 100 ರೂ.ಗೆ 5 ಕೆ.ಜಿ ಮಾರಾಟವಾಗುತ್ತಿದ್ದ ಈರುಳ್ಳಿ, ಈಗ 4 ಕೆ.ಜಿಗೆ 250ರಿಂದ 260 ರೂ.ಗಳಿಗೆ ಮಾರಾಟವಾಗುತ್ತಿದೆ. ರಾಜ್ಯದ ವಿವಿಧೆಡೆ ಈ ಬಾರಿ ಮಳೆ ಆಗುತ್ತಿರುವುದರಿಂದ ಈರುಳ್ಳಿ ಸೇರಿದಂತೆ ಬೆಳೆಗಳು ನಾಶವಾಗಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳವಾಗಿದೆ .

ಶ್ರಾವಣ ಮಾಸ ಮುಗಿಯುತ್ತಿರುವ ಬೆನ್ನಲ್ಲೇ ಬೆಳ್ಳುಳ್ಳಿ ಬೆಲೆ ಏರಿಕೆ ಆಗಿರುವುದು ಗ್ರಾಹಕರಿಗೆ ಮತ್ತಷ್ಟು ಹೊರೆ ಬೀಳುವಂತಾಗಿದೆ. ಇದೀಗ ಬೆಳ್ಳುಳ್ಳಿ ಬೆಲೆ 400 ರೂ. ದಾಟಿದೆ. ಫೆಬ್ರವರಿ ತಿಂಗಳಲ್ಲಿ 500 ರೂ. ತಲುಪಿ ಭಾರೀ ದುಬಾರಿಯಾಗಿತ್ತು.

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸುವವರ ಸಂಖ್ಯೆ ಕಡಿಮೆ ಹೀಗಾಗಿ ಹೆಚ್ಚು ಬೆಳ್ಳುಳ್ಳಿ ಕೂಡ ಬಳಸುತ್ತಿಲ್ಲ. ಶ್ರಾವಣ ಮುಗಿದು ದಸರಾ ಪ್ರಾರಂಭವಾಗುತ್ತಿದೆ. ಮನೆಗಳಲ್ಲಿ ಬೆಳ್ಳುಳ್ಳಿ ಬಳಕೆ ಹೆಚ್ಚಲಿದೆ. ಬೆಳ್ಳುಳ್ಳಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಬೆಲೆ ಏರಿಕೆಯಿಂದಾಗಿ ಮಹಿಳೆಯರು ಅಡುಗೆಗೆ ಬೆಳ್ಳುಳ್ಳಿ ಬಳಸಲು ಹಿಂದೇಟು ಹಾಕುತ್ತಿದ್ದಾರೆ.

ಬೆಳ್ಳುಳ್ಳಿ ಸಮರ್ಪಕವಾಗಿ ಸರಬರಾಜು ಆಗುತ್ತಿಲ್ಲ. ಬೆಳ್ಳುಳ್ಳಿಯನ್ನು ಬೇರೆ ಕಡೆಯಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಹೆಚ್ಚಿನ ಬೆಲೆ ಕೊಡಬೇಕಾಗುತ್ತದೆ. ಬೆಲೆ ಏರಿಕೆ ನಡುವೆ ವಾಹನಗಳಲ್ಲಿ ಬೆಳ್ಳುಳ್ಳಿ ಸರಬರಾಜು ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದೇವೆ. ಬೆಳ್ಳುಳ್ಳಿ ದರ ಜಾಸ್ತಿ ಆಗಿರುವುದರಿಂದ ಗ್ರಾಹಕರಿಗೆ ಚಿಲ್ಲರೆ ಬೆಳ್ಳುಳ್ಳಿ ನೀಡಲು ಕಷ್ಟವಾಗುತ್ತಿದೆ.

-ಅಕ್ಬರ್ ಖಾನ್, ತರಕಾರಿ ವ್ಯಾಪಾರಿ, ಸೂಲಿಬೆಲೆ

ಅಡುಗೆಗೆ ಈರುಳ್ಳಿ, ಬೆಳ್ಳುಳ್ಳಿ ಇಲ್ಲದಿದ್ದರೆ ರುಚಿ ಇರುವುದಿಲ್ಲ. ಪ್ರತಿಯೊಂದು ಒಗ್ಗರಣೆಗೆ ಬೆಳ್ಳುಳ್ಳಿ ಬಳಸುತ್ತೇವೆ. ಈರುಳ್ಳಿ ಬೆಳ್ಳುಳ್ಳಿ ಎಷ್ಟೇ ದುಬಾರಿಯಾದರೂ ಅನಿವಾರ್ಯವಾಗಿ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

-ರಂಜಿತಾ, ಗೃಹಿಣಿ ಚಿಕ್ಕಕೋಲಿಗ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X