Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಪತ್ರ-ಮಿತ್ರ’: ಪೋಸ್ಟ್ ಕಾರ್ಡ್‌ನಿಂದ...

‘ಪತ್ರ-ಮಿತ್ರ’: ಪೋಸ್ಟ್ ಕಾರ್ಡ್‌ನಿಂದ ಭಾವನೆಗಳ ವಿನಿಮಯ

ಕೆ. ಎಲ್ ಶಿವುಕೆ. ಎಲ್ ಶಿವು27 July 2026 2:30 PM IST
share
‘ಪತ್ರ-ಮಿತ್ರ’: ಪೋಸ್ಟ್ ಕಾರ್ಡ್‌ನಿಂದ ಭಾವನೆಗಳ ವಿನಿಮಯ
ಎಮ್ಮೆದೊಡ್ಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ

ಚಿಕ್ಕಮಗಳೂರು: ಹಿಂದಿನ ಕಾಲದಲ್ಲಿ ಕುಟುಂಬದ ಸದಸ್ಯರ ಯೋಗಕ್ಷೇಮ, ಪತ್ರ ವ್ಯವಹಾರ, ಪ್ರೇಮ ಸಂದೇಶ ವಿನಿಮಯ ಮಾಡಿಕೊಳ್ಳಲು ಪೋಸ್ಟ್ ಕಾರ್ಡ್‌ಗಳ ಬಳಕೆ ಮಾಡಲಾಗುತ್ತಿತ್ತು. ಆದರೆ, ಇಂದಿನ ಆಧುನಿಕ ತಂತ್ರಜ್ಞಾನ, ಬೆಳೆಯುತ್ತಿರುವ ಡಿಜಿಟಲ್ ವ್ಯವಸ್ಥೆ ಹಾಗೂ ಮೊಬೈಲ್ ಯುಗದಲ್ಲಿ ಪತ್ರ ಬರೆಯುವ ಸಂಸ್ಕೃತಿ ಮರೆಯಾಗಿದೆ. ಸರಿಯಾದ ವಿಳಾಸಕ್ಕೆ ತಲುಪಲು ವಾರಗಟ್ಟಲೇ ತಲುಪುತ್ತಿದ್ದ ದಿನಮಾನದಿಂದ, ಇಂದು ಕ್ಷಣಮಾತ್ರದಲ್ಲಿ ಸಂದೇಶಗಳು ರವಾನೆಯಾಗವ ಕಾಲಕ್ಕೆ ನಾವೆಲ್ಲರೂ ಕಾಲಿಟ್ಟಿದ್ದೇವೆ.

ಇಂದಿನ ಡಿಜಿಟಲ್ ಹಾಗೂ ಮೊಬೈಲ್ ಯುಗದಲ್ಲಿ ಮರೆಯಾಗುತ್ತಿರುವ ಪತ್ರ ಬರೆಯುವ ಸಂಸ್ಕೃತಿಯನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಮ್ಮೆದೊಡ್ಡಿ ಸರಕಾರಿ ಪ್ರೌಢಶಾಲೆಯಲ್ಲಿ ಅಪೂರ್ವವಾದ ಪತ್ರ-ಮಿತ್ರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ತಂತ್ರಜ್ಞಾನದ ಅತಿಯಾದ ಬಳಕೆಯಿಂದ ಇಂದಿನ ಮಕ್ಕಳಿಗೆ ಪತ್ರ ಬರೆಯುವ ಅನುಭವ ಅಪರಿಚಿತವಾಗಿದೆ. ಮಕ್ಕಳಿಗೆ ಪತ್ರ ಬರೆಯುವುದು ಪರಿಚಯಿಸುವ ನಿಟ್ಟಿನಲ್ಲಿ ಎಮ್ಮೆದೊಡ್ಡಿ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಶಾಲಾ ಮಕ್ಕಳಿಗೆ ಹಳೆಯ ದಿನಗಳ ಭಾವನಾತ್ಮಕ ಪತ್ರ ಸಂಸ್ಕೃತಿಯ ರುಚಿ ತೋರಿಸಲು ಈ ವಿಶಿಷ್ಟ ಪ್ರಯತ್ನ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಪೋಷಕರಿಗೆ, ಪಂಚಾಯತ್‌ಗೆ ಪತ್ರ ಸಂದೇಶ: ಪತ್ರ-ಮಿತ್ರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪೋಸ್ಟ್ ಕಾರ್ಡ್‌ಗಳಲ್ಲಿ ತಮ್ಮ ಮನದಾಳದ ಮಾತುಗಳನ್ನು ಬರೆದರು. ಹೆತ್ತವರಿಗೆ ಮತ್ತು ತಮ್ಮ ಗ್ರಾಮ ಪಂಚಾಯತ್‌ಗೆ ಪತ್ರ ಬರೆಯುವ ಮೂಲಕ ವಿಶಿಷ್ಟ ಅನುಭವವನ್ನು ತಮ್ಮದಾಗಿಸಿಕೊಂಡರು. ಪತ್ರದಲ್ಲಿ ತಮ್ಮ ಭಾವನೆಗಳನ್ನು ಹಂಚಿಕೊಂಡರು. ಹಿಂದಿನ ಕಾಲದಲ್ಲಿ ಸಮಾಚಾರವನ್ನು ತಲುಪಿಸುವ ಏಕೈಕ ಮಾರ್ಗವಾಗಿದ್ದ ಪೋಸ್ಟ್ ಕಾರ್ಡ್ ಬರೆಯುವ ಅನುಭವವನ್ನೂ ವಿದ್ಯಾರ್ಥಿಗಳು ಪಡೆದುಕೊಂಡರು.

ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಯರ ಯೋಗಕ್ಷೇಮ ವಿಚಾರಿಸುವ ಜತೆಗೆ, ಶಾಲೆಯಲ್ಲಿ ನಡೆಯಲಿರುವ ಪೋಷಕರ ಸಭೆ ಹಾಗೂ ಮುಂಬರುವ ಸ್ವಾತಂತ್ರ್ಯ ದಿನಾಚರಣೆಯ ಆಮಂತ್ರಣವನ್ನು ಪತ್ರದ ಮೂಲಕ ಪೋಷಕರಿಗೆ ತಲುಪಿಸುವ ಪ್ರಯತ್ನ ಮಾಡಿದರು. ವಿದ್ಯಾರ್ಥಿಗಳೂ ತಂದೆ ತಾಯಿಯರಿಗೆ ಬರೆದ ಪತ್ರ ಭಾವನಾತ್ಮಕವಾಗಿದ್ದು, ಅವರ ಭಾವನೆಗಳು ಅಕ್ಷರ ರೂಪದಲ್ಲಿ ಮೂಡಿಬಂದಿದ್ದವು.

ಕೇವಲ ವೈಯಕ್ತಿಕ ವಿಚಾರಗಳಷ್ಟೇ ಅಲ್ಲದೆ, ತಮ್ಮ ಶಾಲೆಗೆ ಬೇಕಾಗುವ ಮೂಲ ಸೌಲಭ್ಯಗಳ ಕುರಿತಾಗಿ ಗ್ರಾಮ ಪಂಚಾಯತ್‌ಗೆ ವಿದ್ಯಾರ್ಥಿಗಳು ಪತ್ರದಲ್ಲಿ ಮನವಿ ಸಲ್ಲಿಸಿ ಜವಾಬ್ದಾರಿಯುತ ಪ್ರಜೆಗಳಾಗಿ ಗಮನ ಸೆಳೆದರು.

ಶಾಲೆಯಲ್ಲಿ ನಡೆಯುತ್ತಿರುವ ಪಾಠ-ಪ್ರವಚನಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ತಮ್ಮ ಸ್ನೇಹಿತರೊಂದಿಗೆ ಮುಕ್ತವಾಗಿ ಹಂಚಿಕೊಳ್ಳಲು ಪತ್ರಗಳನ್ನು ಸಿದ್ಧಪಡಿಸಿದರು. ಹಿಂದಿನ ಕಾಲದಲ್ಲಿ ಭಾವನೆಗಳನ್ನು ಪತ್ರದ ಮೂಲಕ ಹಂಚಿಕೊಳ್ಳುತ್ತಿದ್ದ ‘ಪತ್ರ-ಮಿತ್ರ’ ಪರಿಕಲ್ಪನೆಯನ್ನು ಮಕ್ಕಳು ಪತ್ರ ಬರೆಯುವ ಮೂಲಕ ಪ್ರಾಯೋಗಿಕವಾಗಿ ಅನುಭವಿಸಿದರು. ಈ ಅಪೂರ್ವ ಚಟುವಟಿಕೆ ವಿದ್ಯಾರ್ಥಿಗಳಲ್ಲಿ ಅಕ್ಷರ ಜ್ಞಾನ, ಅಭಿವ್ಯಕ್ತಿ ಸಾಮರ್ಥ್ಯ ಹಾಗೂ ಸಮಾಜದೊಂದಿಗಿನ ಒಡನಾಟ ಹೆಚ್ಚಿಸುವಲ್ಲಿ ಯಶಸ್ವಿಯಾಯಿತು. ಶಾಲೆಯ ಮುಖ್ಯಸ್ಥರು, ಶಿಕ್ಷಕ ವೃಂದ ಹಾಗೂ ಮಕ್ಕಳು ಈ ಸಂಭ್ರಮದ ಕ್ಷಣದಲ್ಲಿ ಪಾಲ್ಗೊಂಡಿದ್ದರು.

ಹಿಂದಿನ ಕಾಲದಲ್ಲಿ ಸಂವಹನ ಮಾಧ್ಯಮವಾಗಿ ಪತ್ರ ಪ್ರಧಾನವಾಗಿತ್ತು. ಆದರೆ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಬೆಳವಣಿಗೆಯಿಂದ ಪೋಸ್ಟ್ ಕಾರ್ಡ್ ಸಂಸ್ಕೃತಿ ಮರೆಯಾಗಿದ್ದು, ಇಂದಿನ ಮಕ್ಕಳಲ್ಲಿ ಪೋಸ್ಟ್ ಕಾರ್ಡ್ ಪತ್ರ ವ್ಯವಹಾರ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಪತ್ರ-ಮಿತ್ರ ಕಾರ್ಯಕ್ರಮ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಮನದಾಳದ ಭಾವನೆಗಳನ್ನು ಅಕ್ಷರ ರೂಪಕ್ಕಿಳಿಸಿದರು.

-ಎಸ್.ಆರ್.ಸತೀಶ್, ಮುಖ್ಯ ಶಿಕ್ಷಕ,

ಎಮ್ಮೆದೊಡ್ಡಿ ಸರಕಾರಿ ಪ್ರೌಢಶಾಲೆ

share
ಕೆ. ಎಲ್ ಶಿವು
ಕೆ. ಎಲ್ ಶಿವು
Next Story
X