Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹೊಸ ರೂಪದತ್ತ ಪಿಲಿಕುಳದ ಗಾಲ್ಫ್ ಕ್ಲಬ್

ಹೊಸ ರೂಪದತ್ತ ಪಿಲಿಕುಳದ ಗಾಲ್ಫ್ ಕ್ಲಬ್

ಸತ್ಯಾ ಕೆ.ಸತ್ಯಾ ಕೆ.30 Jun 2025 3:19 PM IST
share
ಹೊಸ ರೂಪದತ್ತ ಪಿಲಿಕುಳದ ಗಾಲ್ಫ್ ಕ್ಲಬ್

ಮಂಗಳೂರು: ಪಿಲಿಕುಳ ನಿಸರ್ಗಧಾಮ ಟ್ರಸ್ಟ್‌ನ ಭಾಗವಾಗಿರುವ ಪಿಲಿಕುಳ ಗಾಲ್ಫ್ ಕ್ಲಬ್ ಅತ್ಯುಧಾನಿಕ ವ್ಯವಸ್ಥೆಗಳೊಂದಿಗೆ ಹೊಸ ರೂಪ ಪಡೆಯುವತ್ತ ಹೆಜ್ಜೆ ಇರಿಸಿದೆ. ಪಿಲಿಕುಳದತ್ತ ವಿದೇಶಿಯರು ಸೇರಿದಂತೆ ದೇಶದ ವಿವಿಧ ಭಾಗದಿಂದ ಪ್ರವಾಸಿಗರನ್ನು ಹೆಚ್ಚು ಸಂಖ್ಯೆಯಲ್ಲಿ ಸೆಳೆಯುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ.

ಅನುದಾನದ ಕೊರತೆಯಲ್ಲದೇ ಕೆಲವೊಂದು ಸಮಸ್ಯೆಗಳಿಂದ ಸುದ್ದಿಯಾಗುತ್ತಿರುವ ವಾಮಂಜೂರಿನ ಮೂಡುಶೆಡ್ಡೆಯಲ್ಲಿರುವ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮಕ್ಕೆ ಆದಾಯದ ಮೂಲವಾಗಿ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಹಿಂದಿನ ದ.ಕ. ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ನಿಸರ್ಗಧಾಮ ಟ್ರಸ್ಟ್ ಅಧ್ಯಕ್ಷರೂ ಆಗಿದ್ದ ಮುಲ್ಲೈ ಮುಗಿಲನ್ ಜಿಲ್ಲೆಯ ಗಾಲ್ಫ್ ಪ್ರೇಮಿಗಳ ಜೊತೆ ಸೇರಿ ಪಿಲಿಕುಳ ಗಾಲ್ಫ್ ಕ್ಲಬ್‌ಗೆ ಹೊಸ ರೂಪು ನೀಡಲು ಯೋಜನೆ ರೂಪಿಸಿದ್ದರು. ಇತ್ತೀಚೆಗೆ ವರ್ಗಾ ವಣೆ ಗೊಂಡಿರುವ ಮುಲ್ಲೈ ಮುಗಿಲನ್ ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲೂ ಪಿಲಿಕುಳದಲ್ಲಿ ಶೀಘ್ರವೇ ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಗಾಲ್ಫ್ ಕ್ಲಬ್ ಹೊಸ ವಿನ್ಯಾಸದೊಂದಿಗೆ ಕಾರ್ಯಾಚರಿಸಲಿದೆ ಎಂಬುದನ್ನು ತಿಳಿಸಿದ್ದರು. ಇದೀಗ ನೂತನ ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಗಾಲ್ಫ್ ಕ್ಲಬ್‌ನ ನೂತನ ಅಧ್ಯಕ್ಷರ ಮೇಲುಸ್ತುವಾರಿಯಲ್ಲಿ ಈ ಗಾಲ್ಫ್ ಕ್ಲಬ್‌ನ ನವೀಕರಣ ಕಾರ್ಯ ಮುಂದುವರಿಯಲಿದೆ.

356 ಎಕರೆ ಭೂಮಿಯಲ್ಲಿ ಹರಡಿಕೊಂಡಿರುವ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ 70 ಎಕರೆಯಲ್ಲಿ ಈ ಗಾಲ್ಫ್ ಕ್ಲಬ್ 9 ಹೋಲ್‌ಗಳೊಂದಿಗೆ 1998ರಲ್ಲಿ ಆರಂಭಗೊಂಡಿತ್ತು.

ಸದ್ಯ ಜಿಲ್ಲಾಧಿಕಾರಿ ಗಾಲ್ಫ್ ಕ್ಲಬ್ ಸೊಸೈಟಿಯ ಅಧ್ಯಕ್ಷರಾಗಿದ್ದು, ಜಿಪಂ ಸಿಇಒ, ಮಂಗಳೂರು ನಗರ ಪೊಲೀಸ್ ಆಯುಕ್ತರು, ಡಿಎಫ್‌ಒ, ಮನಪಾ ಆಯುಕ್ತರನ್ನು ಒಳಗೊಂಡು ಐವರು ಸರಕಾರಿ ಅಧಿಕಾರಿಗಳು ಈ ಸೊಸೈಟಿಯ ಖಾಯಂ ಸದಸ್ಯರಾಗಿದ್ದಾರೆ. ಪ್ರಸಕ್ತ ಪಿಲಿಕುಳ ಗಾಲ್ಫ್ ಕ್ಲಬ್ 1,033 ಸದಸ್ಯರನ್ನು ಒಳಗೊಂಡಿದೆ. ಸದಸ್ಯತ್ವ ಶುಲ್ಕ ಹಾಗೂ ಬಂಡವಾಳ ಹೂಡಿಕೆದಾರರ ಮೂಲಕ ನಿರ್ವಹಣೆ ನಡೆಸಲಾಗುತ್ತಿದೆ.

ಏನೆಲ್ಲಾ ಹೊಸತು ?

ಈ ವರ್ಷಾಂತ್ಯದಿಂದ ಪಿಲಿಕುಳ ಗಾಲ್ಫ್ ಕ್ಲಬ್ 9 ಹೋಲ್‌ಗಳಿಂದ ಅಂತರ್‌ರಾಷ್ಟ್ರೀಯ ದರ್ಜೆಗೆ ಪೂರಕವಾಗಿ 18 ಹೋಲ್‌ಗಳಿಗೆ ಮಾರ್ಪಡಲಿದೆ. ಹೊನಲು ಬೆಳಕಿನ ವ್ಯವಸ್ಥೆಯೊಂದಿಗೆ ಆಸ್ಟ್ರೇಲಿಯಾದ ತಜ್ಞ ವಿನ್ಯಾಸಗಾರರಿಂದ ಫೆಸಿಫಿಕ್ ಕೋರ್ಸ್ ಮಾದರಿಯಲ್ಲಿ ದೇಶದ 3ನೆ ಅಂತರ್‌ರಾಷ್ಟ್ರೀಯ ಗಾಲ್ಫ್ ಕ್ಲಬ್ ಆಗಿ ಪರಿವರ್ತನೆಗೊಳ್ಳುತ್ತಿದೆ. ಇಲ್ಲಿ ಬೆಳೆಸಲಾಗಿದ್ದ 450 ಅಕೇಶಿಯಾ ಮರಗಳ ಬದಲಿಗೆ, ಶೀಘ್ರವಾಗಿ ಬೆಳೆಯುವ, ಪಶ್ಚಿಮ ಘಟ್ಟದ ತಳಿಗಳು ಸೇರಿದಂತೆ ಹಣ್ಣು ಹಂಪಲುಗಳ 5,000ದಷ್ಟು ಗಿಡಗಳನ್ನು ನೆಡುವ ಕಾರ್ಯ ನಡೆಯುತ್ತಿದೆ. 180ರಷ್ಟು ವಿವಿಧ ತಳಿಯ ಸ್ಥಳೀಯ ಮಾವಿನ ತಳಿಗಳ ಮರಗಳು, ಜಾಮೂನು, ಹೂವು ಬಿಡುವ ಗಿಡಗಳನ್ನು ಬೆಳೆಸಲಾಗಿದೆ. ಅಂತರ್‌ರಾಷ್ಟ್ರೀಯ ಮಟ್ಟದ ಗಾಲ್ಫ್ ಆಟಗಾರರಿಗೆ ಪೂರಕವಾಗಿ 10 ಕೊಠಡಿಗಳ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಆಟವಾದ ಬಳಿಕ ಸುಧಾರಿಸಿಕೊಳ್ಳಲು ಪೂರಕವಾಗಿ ಶವರ್, ಶೌಚಾಲಯ ಹಾಗೂ ಆಟಗಾರರಿಗೆ ಗಾಲ್ಫ್ ಕೋರ್ಸ್‌ನಲ್ಲಿ ಓಡಾಡಲು ಅಗತ್ಯವಾದ ವಾಹನ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈಗಾಗಲೇ ಗಾಲ್ಪ್ ಕ್ಲಬ್‌ನ ಸದಸ್ಯರಾಗಿರುವ ವೈದ್ಯರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ವ್ಯವಹಾರಸ್ಥರಿಗೆ ಪೂರಕವಾಗಿ ರಾತ್ರಿ ಹೊತ್ತು ಕೂಡಾ ಆಟವಾಡಲು ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎನ್ನುತ್ತಾರೆ ಪಿಲಿಕುಳ ಗಾಲ್ಪ್ ಕ್ಲಬ್‌ನ ಕ್ಯಾಪ್ಟನ್ ಮನೋಜ್ ಶೆಟ್ಟಿ.

ಈ ನಡುವೆ, ಪಿಲಿಕುಳದ ಸರಕಾರಿ ಭೂಮಿ ಸದ್ಯ ಕಂದಾಯ ಇಲಾಖೆಯ ಅಧೀನದಲ್ಲಿದ್ದು, ಈ ಬಗ್ಗೆ ಕಂದಾಯ ಕಾರ್ಯದರ್ಶಿಗಳ ಸಭೆ ನಡೆದಿದ್ದು, ಭೂಮಿಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಹಸ್ತಾಂತರಿಸಿ ಪಿಲಿಕುಳವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆದಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಗಾಲದ ಸಂದರ್ಭದಲ್ಲಿ ಪಿಲಿಕುಳ ನಿಸರ್ಗಧಾಮದೊಳಗೆ ನೀರು ತುಂಬುವ ಸಮಸ್ಯೆ ಈ ಬಾರಿಯೂ ಕಾಡಿದೆ. ಈ ಬಾರಿಯ ಮಳೆಗೆ ಹಳೆಯ ಕಂಪೌಂಡ್‌ಗಳು ಕೂಡಾ ಕುಸಿದು ಸಮಸ್ಯೆಯಾಗಿದ್ದು, ದುರಸ್ತಿ ಕಾರ್ಯ ನಡೆಸಲಾಗುವುದು. ಸ್ಥಳೀಯವಾಗಿ ಹರಿಯುವ ಎಸ್‌ಟಿಪಿ ನೀರು ಪಿಲಿಕುಳದೊಳಗೆ ಹರಿಯುವ ಸಮಸ್ಯೆಯ ಬಗ್ಗೆ ಮನಪಾ ಗಮನಕ್ಕೆ ತರಲಾಗಿದೆ. ಮೃಗಾಲಯದ ಪ್ರಾಣಿಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದ ಗುತ್ತಿಗೆದಾರ ಮೃತಪಟ್ಟ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಪ್ರಕ್ರಿಯೆ ಆಗಬೇಕಾಗಿದೆ. ಆದರೆ ಪ್ರಾಣಿಗಳಿಗೆ ಆಹಾರ ಪೂರೈಕೆ ನಿಲ್ಲಿಸಲಾಗದು. ಹಾಗಾಗಿ ಮೃತಪಟ್ಟ ಆಹಾರ ಪೂರೈಕೆ ಗುತ್ತಿಗೆದಾರರ ಬಾಕಿ ಹಣವನ್ನು ಯಾರಿಗೆ ಪಾವತಿಸಬೇಕೆಂಬ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆ ನಡೆಯಬೇಕು. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ನಡೆಯುತ್ತಿದೆ ಎಂದು ನಿಸರ್ಗಧಾಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರವಾಸೋದ್ಯಮ, ಮನೋರಂಜನೆ, ಕ್ರೀಡೆಗೆ ಪ್ರೋತ್ಸಾಹದ ಜೊತೆಗೆ, ಪಶ್ಚಿಮ ಘಟ್ಟದ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನಿರ್ಮಾಣವಾಗಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಗಾಲ್ಫ್ ಕ್ಲಬ್ ಕೂಡಾ ವಿಶೇಷ ಆಕರ್ಷಣೆಯಾಗಿದೆ. ಈ ಕ್ಲಬ್‌ನ ಸದಸ್ಯತ್ವ ಶುಲ್ಕದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕ್ಲಬ್‌ನ ಆದಾಯದ ಶೇ.2ರಷ್ಟು ಅಥವಾ ವಾರ್ಷಿಕ 10 ಲಕ್ಷ ರೂ.ಗಳಂತೆ ಶುಲ್ಕವನ್ನು ಪಿಲಿಕುಳ ನಿಸರ್ಗಧಾಮ ಸೊಸೈಟಿಗೆ ನೀಡುವ ಕುರಿತಂತೆ ಈಗಾಗಲೇ ಒಪ್ಪಂದವಾಗಿದೆ. ರಾಜ್ಯದ ಬೆಂಗಳೂರು ಸೇರಿದಂತೆ ಇತರ ಕಡೆಗಳಲ್ಲೂ ಗಾಲ್ಫ್ ಕ್ಲಬ್‌ಗಳು ಇದೇ ಮಾದರಿಯಲ್ಲಿ ನಿರ್ವಹಿಸಲ್ಪಡುತ್ತಿವೆ. ಹಿಂದಿನ ಶುಲ್ಕವನ್ನೂ (2006ರಿಂದ 2022ರವರೆಗಿನ ಬಾಕಿ) ಕ್ಲಬ್‌ನಿಂದ ನೀಡಲು ಒಪ್ಪಿಗೆ ದೊರಕಿದೆ. ಇದರಿಂದ ನಿಸರ್ಗಧಾಮಕ್ಕೆ ಆದಾಯವೂ ಸಿಗಲಿದೆ. ಈ ನಡುವೆ ಮಾನಸ ವಾಟರ್ ಪಾರ್ಕ್ ಕೂಡಾ ಆರಂಭಗೊಳ್ಳಲಿದೆ.

-ಡಾ.ಅರುಣ್ ಕುಮಾರ್, ಪ್ರಭಾರ ಆಯುಕ್ತರು, ಪಿಲಿಕುಳ ನಿಸರ್ಗಧಾಮ.

ಪಿಲಿಕುಳ ಗಾಲ್ಫ್ ಕ್ಲಬ್‌ನ್ನು ವಿಶ್ವದರ್ಜೆಯ ಕೇಂದ್ರವನ್ನಾಗಿಸುವ ಮೂಲಕ ವಿದೇಶಿ ಪ್ರವಾಸಿಗರಿಗೆ ಪೂರಕವಾದ ವ್ಯವಸ್ಥೆಗಳೊಂದಿಗೆ ಅಂದಾಜು 23 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿದೆ. ನವೆಂಬರ್‌ನಿಂದ ಹೊಸತನದೊಂದಿಗೆ ಗಾಲ್ಫ್ ಕ್ಲಬ್ ಪುನರಾರಂಭಗೊಳ್ಳಲಿದ್ದು, ಮುಂದೆ ಇಲ್ಲಿ ಗಾಲ್ಫ್ ತರಬೇತಿ ಕೇಂದ್ರ ಆರಂಭಿಸುವ ಉದ್ದೇಶವೂ ಇದೆ.

-ಮನೋಜ್ ಶೆಟ್ಟಿ, ಕ್ಯಾಪ್ಟನ್,ಪಿಲಿಕುಳ ಗಾಲ್ಫ್ ಕ್ಲಬ್.

share
ಸತ್ಯಾ ಕೆ.
ಸತ್ಯಾ ಕೆ.
Next Story
X