Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಂಪುರ ಗ್ರಾಮಸ್ಥರಿಗೆ ಕುತ್ತು...

ರಾಂಪುರ ಗ್ರಾಮಸ್ಥರಿಗೆ ಕುತ್ತು ತರುತ್ತಿರುವ ಪ್ರಿಯಾ ಪಾಮ್ ಆಯಿಲ್ ಫ್ಯಾಕ್ಟರಿ

ಎಂ.ಡಿ ಅಖೀಲ್ ಉಡೇವುಎಂ.ಡಿ ಅಖೀಲ್ ಉಡೇವುಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್20 Jan 2026 11:10 AM IST
share
ರಾಂಪುರ ಗ್ರಾಮಸ್ಥರಿಗೆ ಕುತ್ತು ತರುತ್ತಿರುವ ಪ್ರಿಯಾ ಪಾಮ್ ಆಯಿಲ್ ಫ್ಯಾಕ್ಟರಿ
ದುರ್ವಾಸನೆಯಿಂದ ರೈತರು ಹಾಗೂ ದಾರಿಹೋಕರು ಕಂಗಾಲು

ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರಿಯಾ ಪಾಮ್ ಅಯಿಲ್ ಕಾರ್ಖಾನೆಯಿಂದ ಹೊರಸೂಸುವ ದುರ್ನಾತ ಬೀರುವ ಹೊಗೆಯಿಂದಾಗಿ ರಾಂಪುರ, ಚಿಕ್ಕಮಾದಿನಾಳ, ಇರಕಲಗಡ್, ಚಿಲಕಮುಖಿ ಕೊಪ್ಪಳ ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಈ ಗ್ರಾಮಗಳ ರೈತರು ತಮ್ಮ ಹೊಲದಲ್ಲಿ ಬೆಳೆದಿರುವ ತೋಗರಿ, ಮೆಕ್ಕೆ ಜೋಳ, ಅಣ್ಣಿ, ಸಜ್ಜೆ ಬೆಳೆಗಳ ಮೇಲೆ ಕಪ್ಪಿನ ಕಣಗಳು ಹರಡಿದ್ದು, ಬೆಳೆಹಾನಿಯ ಭೀತಿ ಎದುರಾಗಿದೆ.

ಸಾವಿರಾರು ಜನರು ವಾಸಿಸುವ ರಾಂಪುರ ಗ್ರಾಮದ ಜನರು ಪಾಮ್ ಅಯಿಲ್ ಎಣ್ಣೆಯ ವಾಸನೆಯಿಂದಾಗಿ ನೆಮ್ಮದಿಯಿಂದ ಊಟ ಮಾಡಲಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಪ್ರಾರಂಭದಲ್ಲಿ ಗ್ರಾಪಂ ಮೂಲಕ ಕಾರ್ಖಾಯು ಪಡೆದುಕೊಂಡಿದ್ದು, ಪರವಾನಿಗೆಯಲ್ಲಿ ಕೊಟ್ಟಿರುವ ನಿಯಮದ ಪ್ರಕಾರ ಕಾರ್ಖಾನೆಯು ಕಾರ್ಯನಿರ್ವಹಿಸುತ್ತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದೆ. ಜೊತೆಗೆ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಖಾನೆಯಿಂದ ಹೊರಸೂಸುವ ಹೊಗೆಯಿಂದಾಗಿ ಪರಿಸರ ಮಾಲಿನ್ಯ, ಆರೋಗ್ಯ ಸಮಸ್ಯೆಗಳು ಮತ್ತು ಸ್ಥಳೀಯ ಜನರ ಜೀವನಶೈಲಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಈ ಈಬಗ್ಗೆ ಹಲಾವರು ಬಾರಿ ಅಧಿಕಾರಿಗಳಿಗೆ ಮನವಿ ಕೊಟ್ಟರು ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ರೈತರು ಆರೋಪಿಸಿದ್ದಾರೆ.

ಕಾರ್ಖಾನೆಯು ಹೊರಚೆಲ್ಲುವ ಕಪ್ಪು ಧೂಳಿನಿಂದ ಸುತ್ತಮುತ್ತಲಿನ ಗ್ರಾಮಗಳ ಜನರ ಬದುಕು ದುಸ್ತರವಾಗಿದೆ. ಧೂಳಿನ ಕಣಗಳು ಬೆಳೆಗಳ ಮೇಲೆ ಕುಳಿತು ಇಳುವರೆ ಕಡಿಮೆಯಾಗಿದೆ. ಕುಡಿಯುವ ನೀರು ಕಲುಷಿತವಾಗಿದೆ ಎಂದು ಗ್ರಾಮಸ್ಥರು ನೋವು ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಪಾಮ್ ಅಯಿಲ್ ಕಾರ್ಖಾನೆಯಿಂದ ಹೊರಬರುತ್ತಿರುವ ಧೂಳು ಹೊಲದಲ್ಲಿ ಬೆಳೆಗಳ ಮೇಲೆ ಹರಡುತ್ತಿದೆ. ಅಧಿಕಾರಿಗಳಿಗೆ ಹಲುವು ಬಾರಿ ಮನವಿ ಮಾಡಿಕೊಂಡರು ಪ್ರಯೋಜನೆ ಆಗುತ್ತಿಲ್ಲ ಕಾರ್ಖಾನೆ ಬೇರೆ ಕಡೆ ಸ್ಥಳಾಂತರ ಮಾಡಬೇಕು.

-ಹನುಮೇಶ ಉಡೇಜಾಲಿ, ರೈತ

ಈ ಕಾರ್ಖಾನೆಯನ್ನು ಬಂದ್ ಮಾಡಬೇಕು. ಕರ್ನಾಟಕ ಪಂಚಾಯತ್ ಕಾಯ್ದೆ ಕಲಂ 56ರ ಪ್ರಕಾರ ಕ್ರಮ ತಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ಈ ಕಾರ್ಖಾನೆಯ ವಿರುದ್ಧ ಅಧಿಕಾರಿಗಳು ಕ್ರಮವನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳು ಈ ಕಾರ್ಖಾನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕರೆ ಸ್ವೀಕರಿಸದ ಪಿಡಿಒ :

ಕನಕಗಿರಿ ತಾಲೂಕಿನ ಮುಸಲಾಪೂರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರಿಯಾ ಪಾಮ್ ಅಯಿಲ್ ಕಾರ್ಖಾನೆಯ ಕುರಿತು ಮಾಹಿತಿ ಕೇಳಲು ಪಿಡಿಒ ನಾಗೇಶವರನ್ನು ದೂರವಾಣಿಯ ಮೂಲಕ ವಾರ್ತಾಭಾರತಿ ವರದಿಗಾರ ಕರೆ ಮಾಡಿದರೆ ಅವರು ಕರೆಯನ್ನು ಸ್ವೀಕರಿಸಿಲ್ಲ.

Tags

Priya Palm Oil Factory
share
ಎಂ.ಡಿ ಅಖೀಲ್ ಉಡೇವು
ಎಂ.ಡಿ ಅಖೀಲ್ ಉಡೇವು
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್
Next Story
X