Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಮಸ್ಯೆಗಳ...

ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಮಸ್ಯೆಗಳ ಆಗರ: ರೋಗಿಗಳ ಪರದಾಟ

ಚಿತ್ರಸೇನ ವ್ಹಿ ಫುಲೆಚಿತ್ರಸೇನ ವ್ಹಿ ಫುಲೆ22 Aug 2025 10:42 AM IST
share
ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಮಸ್ಯೆಗಳ ಆಗರ: ರೋಗಿಗಳ ಪರದಾಟ

ಬೀದರ್: ನಗರದಲ್ಲಿರುವ ಬ್ರಿಮ್ಸ್ ಆಸ್ಪತ್ರೆಯು ಹಳೆ ಬಾವಿಯೊಂದರ ಮೇಲೆ ಕಟ್ಟಲಾಗಿದ್ದು, ಆ ಬಾವಿಯಿಂದ ಸದಾ ನೀರು ಜರಿಯ ಹಾಗೆ ಬರುತ್ತಿರುತ್ತವೆ. ಇದರಿಂದಾಗಿ ಆಸ್ಪತ್ರೆಯ ನೆಲಮಹಡಿ ದುರ್ಬಲಗೊಳ್ಳುತ್ತಿದೆ.

ಬೇಸಿಗೆ ಕಾಲ, ಚಳಿಗಾಲದಲ್ಲಿಯೂ ನೆಲಮಹಡಿಯಲ್ಲಿ ಸದಾ ನೀರು ನಿಂತಿರುತ್ತವೆ. ಇದರಿಂದಾಗಿ ಆಸ್ಪತ್ರೆ ಕಟ್ಟಡವು ದುರ್ಬಲಗೊಂಡು ಮುಂದಿನ ದಿನಗಳಲ್ಲಿ ಕುಸಿಯುವ ಮಟ್ಟಕ್ಕೆ ಹೋಗಬಹುದು. ಮಾತ್ರವಲ್ಲ ಇಲ್ಲಿ ಹಲವಾರು ಸಮಸ್ಯೆಗಳಿವೆ. ಇದು ಸುಮಾರು 6 ಅಂತಸ್ತಿನ ಕಟ್ಟಡವಾಗಿದ್ದು, ನೆಲ ಮಹಡಿ ಬಿಟ್ಟರೆ ಬೇರೆ ಯಾವ ಮಹಡಿಯಲ್ಲಿಯೂ ಕುಡಿಯುವ ನೀರಿನ ವ್ಯವಸ್ಥೆ ಕಾಣುವುದಿಲ್ಲ.

ಕುಡಿಯುವ ನೀರು ಬೇಕೆಂದರೆ ರೋಗಿಗಳು ನೆಲಮಹಡಿಗೆ ಬಂದು ನೀರು ಪಡೆದುಕೊಳ್ಳಬೇಕು. ರೋಗಿಗಳ ಜೊತೆಗೆ ಪೋಷಕರು ಬಂದರೆ ಮಾತ್ರ ಅವರಿಗೆ ನೀರಿನ ವ್ಯವಸ್ಥೆ ಸರಿಯಾಗಿ ಸಿಗುತ್ತದೆ. ಮೇಲ್ಮಹಡಿಯಲ್ಲಿ ಕೆಲವು ಕಡೆ ಫಿಲ್ಟರ್ ಇದ್ದರೂ ಎಲ್ಲವೂ ಕೆಟ್ಟು ನಿಂತಿವೆ.

ಬಹುತೇಕ ಎಲ್ಲ ವಾರ್ಡ್ ಗಳ ಶೌಚಾಲಯ ಯಾವಾಗಲೂ ತುಂಬಿರುತ್ತವೆ. ಈ ಕಟ್ಟಡದ ಶೌಚಾಲಯಗಳಿಗೆ ಪೈಪ್‌ಲೈನ್ ಸರಿ ಇಲ್ಲ. ಹಾಗಾಗಿ ಅದು ತುಂಬುತ್ತದೆ ಎಂದು ಹೇಳಲಾಗುತ್ತದೆ. ಹಾಗೆಯೇ ವಾರ್ಡ್ ಹೊರಗಿರುವ ಕೆಲ ಶೌಚಾಲಯಗಳಿಗೆ ಬೀಗ ಹಾಕಲಾಗಿದ್ದು, ಕೆಲಸಕ್ಕೆ ಬಾರದಂತಾಗಿವೆ.

ಕೆಲವು ದಿನಗಳ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಇಲ್ಲಿಗೆ ಭೇಟಿ ನೀಡಿದ್ದಾಗಲೂ ಶೌಚಾಲಯ ವ್ಯವಸ್ಥೆ ಸರಿ ಇರಲಿಲ್ಲ. ಈ ಆಸ್ಪತ್ರೆಯಲ್ಲಿರುವ ಎಲ್ಲ ಸಮಸ್ಯೆಗಳು ಜಿಲ್ಲೆಯ ಎಲ್ಲ ಅಧಿಕಾರಿ ಮತ್ತು ಜನ ಪ್ರತಿನಿಧಿಗಳಿಗೆ ಗೊತ್ತಿದ್ದು ಗೊತ್ತಿಲ್ಲದ ಹಾಗೆ ಕುಳಿತುಕೊಂಡಿದ್ದಾರೆ. ಈ ಆಸ್ಪತ್ರೆಯಲ್ಲಿರುವ ಮೂಲಭೂತ ಸಮಸ್ಯೆಯ ಜೊತೆಗೆ ಆಸ್ಪತ್ರೆಯ ಕೆಳಗಡೆ ಹರಿಯುತ್ತಿರುವ ನೀರಿಗೆ ಶಾಶ್ವತವಾಗಿ ಪರಿಹರಿಸಬೇಕು ಎನ್ನುವುದು ಜನರ ಆಗ್ರಹವಾಗಿದೆ.

ನನ್ನ ತಾಯಿಗೆ 13 ದಿನಗಳ ಕಾಲ ಬ್ರಿಮ್ಸ್ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿದ್ದೆವು. ಆ ವಾರ್ಡ್‌ನ ಶೌಚಾಲಯಗಳು ಸಂಪೂರ್ಣವಾಗಿ ಭರ್ತಿಯಾಗಿ ಮಲ, ಮೂತ್ರವೆಲ್ಲ ಹೊರಗಡೆ ಬಂದಿತ್ತು. ಇದರಿಂದಾಗಿ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿತ್ತು. ಆಸ್ಪತ್ರೆಯ ಮೇಲ್ಮಹಡಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಇಲ್ಲ.

-ಕಲ್ಲಪ್ಪ, ಮರೂರು ಗ್ರಾಮದ ನಿವಾಸಿ

share
ಚಿತ್ರಸೇನ ವ್ಹಿ ಫುಲೆ
ಚಿತ್ರಸೇನ ವ್ಹಿ ಫುಲೆ
Next Story
X