Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನೀರಿನ ವ್ಯವಸ್ಥೆಯಿಲ್ಲದ ಭಗತ್ ಸಿಂಗ್...

ನೀರಿನ ವ್ಯವಸ್ಥೆಯಿಲ್ಲದ ಭಗತ್ ಸಿಂಗ್ ನಗರದ ಸಾರ್ವಜನಿಕ ಶೌಚಾಲಯ

ಮಹಮ್ಮದ್ ಗೌಸ್, ವಿಜಯನಗರಮಹಮ್ಮದ್ ಗೌಸ್, ವಿಜಯನಗರ6 Sept 2025 6:48 PM IST
share
ನೀರಿನ ವ್ಯವಸ್ಥೆಯಿಲ್ಲದ ಭಗತ್ ಸಿಂಗ್ ನಗರದ ಸಾರ್ವಜನಿಕ ಶೌಚಾಲಯ
ಶೌಚಾಲಯ ಇದ್ದು ಇಲ್ಲದಂತಾಗಿದೆ: ಸ್ಥಳೀಯರ ಆರೋಪ

ಹೊಸಪೇಟೆ, ಸೆ.5: ನಗರದ 29ನೇ ವಾರ್ಡ್, ಭಗತ್ ಸಿಂಗ್ ಬಡಾವಣೆಯಲ್ಲಿ 30 ವರ್ಷಗಳಿಂದ ಮೂಲ ಸೌಕರ್ಯ ಸೇರಿದಂತೆ ಇಲ್ಲಿನ ಜನಗಳು ಬಹಿರ್ದೆಸೆಗೆ ತೆರಳಲು ಶೌಚಾಲಯದ ಸಮಸ್ಯೆ ಗಂಭೀರವಾಗಿದೆ ಎಂಬುದು ಸ್ಥಳೀಯ ನಿವಾಸಿಗಳ ಆರೋಪವಾಗಿದೆ.

ಬಡಾವಣೆಯಲ್ಲಿ ಸರಿಸುಮಾರು 150ಕ್ಕೂ ಹೆಚ್ಚು ಕುಟುಂಬಗಳಿವೆ. ಇಲ್ಲಿ ನೀರಿನ ಮೋಟಾರ್ ವ್ಯವಸ್ಥೆ ಇದ್ದರೂ, ಸಹ ನೀರು ಬರುವುದಿಲ್ಲ, ಶೌಚಾಲಯ ಇದ್ದು ಇಲ್ಲದಂತಾಗಿದೆ. ಈ ಸಮಸ್ಯೆಯ ಬಗ್ಗೆ ನಗರ ಸಭೆ ಸದಸ್ಯರ ಗಮನಕ್ಕೆ ತಂದರೆ ಯಾವುದೇ ಪ್ರಯೋಜನ ವಾಗಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಸರಿಯಾದ ರೀತಿಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದಿರುವುದರಿಂದ ರಸ್ತೆಯ ಪಕ್ಕದಲ್ಲೇ ಬಹಿರ್ದೆಸೆ ಅನಿವಾರ್ಯವಾಗಿದೆ. ಈ ಸ್ಥಳದಲ್ಲಿ ಗಿಡ - ಗಂಟೆ ಬೆಳೆದಿರುವುದರಿಂದ ವಿಷ ಜಂತು, ಕ್ರಿಮಿ-ಕೀಟಗಳು ಬಾಧಿಸುವ ಸಾಧ್ಯತೆ ಇದ್ದು ,ಪ್ರಾಣ ಹಾನಿಯಾಗುವ ಭಯ ನಮ್ಮಲ್ಲಿ ಕಾಡುತ್ತಿದೆ. ನಮ್ಮ ಗೋಳು ಕೇಳೋರ್ಯಾರು ಎನ್ನುವಂತಾಗಿದೆ ಎಂದು ಇಲ್ಲಿನ ಜನರು ನೇರವಾಗಿ ನಗರ ಸಭೆಯ ಪೌರಯುಕ್ತರ ಮತ್ತು ಸದಸ್ಯರ ವಿರುದ್ಧ ಆಕ್ರೋಶ ಹೊರ ಹಾಕಿದರು.

ತ್ವರಿತವಾಗಿ ಶೌಚಾಲಯ ಮತ್ತು ಮೂಲಭೂತ ಸೌಕರ್ಯದ ಸಮಸ್ಯೆಗಳನ್ನು ಸರಿಪಡಿಸದಿದ್ದರೆ 29ನೇ ವಾರ್ಡ್ ಗೆ ಸಂಬಂದಿಸಿದ ನಗರಸಭೆ ಸದಸ್ಯ ರಮೇಶ್ ಗುಪ್ತಾ ಮನೆಯ ಎದುರು ಖಾಲಿ ಚೆಂಬು ಹಿಡಿದು ಪ್ರತಿಭಟನೆ ಮಾಡಲಾಗುವುದು ಎಂದು ಸದಸ್ಯರಿಗೆ ಮಾಧ್ಯಮದ ಮುಖಾಂತರ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದರು.

ಈ ಹಿಂದೆ ನಮ್ಮ ತಂದೆಯವರು 29ನೇ ವಾರ್ಡ್‌ನ ನಗರಸಭೆ ಸದಸ್ಯರಾಗಿದ್ದಾಗ ಸ್ಥಳೀಯರ ಸಮಸ್ಯೆಗಳಿಗೆ ಸಂದ್ಪಿಸುತ್ತಿದ್ದರು. ಈಗ ಅವರಿಲ್ಲ ಆದರೆ ಅವರ ಮಗನಾದ ನಾನು ಇವರ ಕಷ್ಟಕ್ಕೆ ನೆರವಾಗುತ್ತಾನೆ. ಹೊಸಪೇಟೆ ನಗರ ಪೌರಾಯುಕ್ತರು ಹಾಗೂ ಅಧಿಕಾರಿಗಳು ಆದಷ್ಟು ಬೇಗನೆ ಇಲ್ಲಿನ ಸಮಸ್ಯೆ ಬಗೆಹರಿಯದಿದ್ದರೆ ನಗರಸಭೆಯ ಎದುರು ಸ್ಥಳೀಯ ನಿವಾಸಿಗಳ ನೇತೃತ್ವದಲ್ಲಿ ಧರಣಿ ನಡೆಸಲಾಗುವುದು.

-ತಳವಾರ್ ನಾಗರಾಜ್, ಜಿಲ್ಲಾಧ್ಯಕ್ಷ, ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ

ನಾನು ಈ ಹಿಂದೆ ಶೌಚಾಲಯ ಸ್ಥಳಕ್ಕೆ ಭೇಟಿನೀಡಿ ನೀರು ಹಾಗೂ ಸ್ವಚ್ಛತೆಯನ್ನು ಪ್ರತಿಯೊಬ್ಬರೂ ಸ್ವಯಂಪ್ರೆರೇಪಿತಾರಾಗಿ ಕಾಪಾಡಲು ತಿಳಿಸಿದ್ದೆವು. ಇದನ್ನು ನಿರ್ಲಕ್ಷಿಸಿದ್ದರಿಂದ ಮತ್ತು ಮೋಟಾರ್‌ಅನ್ನು ಸರಿಯಾಗಿ ನಿರ್ವಹಿಸದಿರುವುದರಿಂದ ಸಮಸ್ಯೆ ಉಂಟಾಗಿದೆ. ಸಮಸ್ಯೆ ಕುರಿತು ಪೌರಾಯುಕ್ತರಿಗೆ ತಿಳಿಸಿದ್ದೇನೆ. ಆದಷ್ಟು ಬೇಗನೆ ಹೊಸ ಶೌಚಾಲಯವನ್ನು ನಿರ್ಮಾಣ ಮಾಡಲಾಗುವುದು.

-ರಮೇಶ್ ಗುಪ್ತಾ, 29ನೇ ವಾರ್ಡ್ ಸದಸ್ಯ

ಹೊಸಪೇಟೆ ನಗರದ 29ನೇ ವಾರ್ಡ್ ನಲ್ಲಿ ಶೌಚಾಲಯ ಸಮಸ್ಯೆ ಇದೆ. ನಾವು ಈಗಾಗಲೇ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಿದ್ದೇವೆ. ಆದಷ್ಟು ಬೇಗನೆ ಶೌಚಾಲಯ ಮತ್ತು ಮೂಲಭೂತ ಸೌಕರ್ಯದ ಸಮಸ್ಯೆ ಬಗೆಹರಿಸುತ್ತೇವೆ.

-ಶಿವಕುಮಾರ್, ಪೌರಾಯುಕ್ತ, ಹೊಸಪೇಟೆ ನಗರಸಭೆ

share
ಮಹಮ್ಮದ್ ಗೌಸ್, ವಿಜಯನಗರ
ಮಹಮ್ಮದ್ ಗೌಸ್, ವಿಜಯನಗರ
Next Story
X