Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಳೆ ಅನಾಹುತ: ಸಂತ್ರಸ್ತರಿಗೆ ಪರಿಹಾರ...

ಮಳೆ ಅನಾಹುತ: ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ

ಭೀಮರಾಯ ಕುಡ್ಡಳ್ಳಿ ಕಾಳಗಿಭೀಮರಾಯ ಕುಡ್ಡಳ್ಳಿ ಕಾಳಗಿ9 Jan 2026 3:19 PM IST
share
ಮಳೆ ಅನಾಹುತ: ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ

ಕಾಳಗಿ : ಕಳೆದ ಬಾರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಪಟ್ಟಣದ ರಾಮನಗರದ ಅನೇಕ ಮನೆಗಳಿಗೆ ನೀರು ನುಗ್ಗಿ ಭಾರಿ ಹಾನಿಯುಂಟಾಗಿದ್ದು, ಮನೆಯಲ್ಲಿನ ದವಸ - ಧಾನ್ಯ, ಇತರೆ ಸಾಮಾಗ್ರಿಗಳು ನಷ್ಟಕ್ಕೀಡಾಗಿದ್ದವು. ಈ ವೇಳೆ ಅಧಿಕಾರಿಗಳು ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ನಾಲ್ಕು ತಿಂಗಳಾದರೂ ಸಂತ್ರಸ್ತರಿಗೆ ಪರಿಹಾರ ನೀಡದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮಳೆ ನೀರು ಮನೆಗಳೊಳಗೆ ನುಗ್ಗಿ, ವಸ್ತುಗಳು, ದಾಖಲೆಗಳು ಸಂಪೂರ್ಣ ಹಾನಿಯಾಗಿದ್ದು, ಕುಟುಂಬಗಳು ಅತಂತ್ರ ಸ್ಥಿತಿಗೆ ತಲುಪಿದ್ದವು. ಮಳೆ ಸಂದರ್ಭದಲ್ಲೇ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಹಾನಿ ಪರಿಶೀಲನೆ ಹೆಸರಿನಲ್ಲಿ ಫೋಟೋ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಕಲೆ ಹಾಕಿದ್ದರು. ಆದರೆ, ಪರಿಹಾರ ವಿತರಣೆ ವಿಷಯದಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ ಎಂದು ಬಡಾವಣೆ ನಿವಾಸಿ ತಾಯಮ್ಮ ಒಡೆಯರಾಜ ಆರೋಪಿಸಿದ್ದಾರೆ.

ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ಘೋಷಣೆ ಕಾಗದಕ್ಕೆ ಸೀಮಿತವಾಗಿದೆ. ಸುಮಾರು ನಾಲ್ಕು ತಿಂಗಳು ಕಳೆದರೂ ಸಹ, ಸಂತ್ರಸ್ತರ ಕುಟುಂಬಗಳ ಖಾತೆಗಳಿಗೆ ಪರಿಹಾರ ಹಣ ಜಮೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿದೆ, ಪರಿಹಾರ ಹಣಕ್ಕಾಗಿ ತಹಸೀಲ್ ಕಛೇರಿಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರುತ್ತಿದ್ದಾರೆ.

ಕಳೆದ ತಿಂಗಳು ಪ್ರಗತಿ ಪರಿಶೀಲನೆ ಸಭೆಯಲ್ಲಿ ತಹಶೀಲ್ದಾರ್ ಪೃಥ್ವಿರಾಜ್ ಪಾಟೀಲ ಅವರು ಮಳೆಯಿಂದ ಹಾನಿಗೊಳಗಾದ ಎಲ್ಲಾ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗಿದೆ ಎಂದು ಮಾಹಿತಿ ಕೊಟ್ಟಿದ್ದರು. ಆದರೆ ರಾಮನಗರ ವಾರ್ಡ್‌ನ ಯಾವೊಬ್ಬ ಸಂತ್ರಸ್ತರಿಗೂ ಈವರೆಗೆ ಪರಿಹಾರ ಬಂದಿಲ್ಲ. ಇದರ ಕುರಿತು ತಹಶೀಲ್ದಾರ್ ಅವರಿಗೆ ಕೇಳಿದರೆ, ಸ್ಥಳ ಪರಿಶೀಲನೆ ದಾಖಲೆಗಳು ಸಿಗುತ್ತಿಲ್ಲ. ಎರಡು ಮೂರು ದಿನಗಳಲ್ಲಿ ಸರಿಪಡಿಸಿ ಪರಿಹಾರ ಒದಗಿಸುವ ಭರವಸೆ ಕೊಟ್ಟಿದ್ದಾರೆ. ಭರವಸೆಯಂತೆಯೇ ತಹಶೀಲ್ದಾರ್ ಅವರು ಈವರೆಗೆ ಪರಿಹಾರದ ಹಣ ಖಾತೆಗೆ ಹಾಕಾದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ನಿವಾಸಿ ಶಾಂತಬಾಯಿ ಭೀಮಯ್ಯ ಒಡೆಯರಾಜ ಆಕ್ರೋಶ ವ್ಯಕ್ತಪಡಿಸಿದರು.

ಕಾಳಗಿ ಪಟ್ಟಣದ ರಾಮ ನಗರದಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಕೊಡುವುದು ಬಾಕಿ ಇದೆ. ವರದಿ ತರಿಸಿಕೊಂಡು ಎರಡು ಮೂರು ದಿನಗಳಲ್ಲಿ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು.

<ಪೃಥ್ವಿರಾಜ್ ಪಾಟೀಲ ತಹಸೀಲ್ದಾರ್, ಕಾಳಗಿ

‘‘ಮನೆ ಹಾನಿಯಾಗಿ ಜೀವನ ನಡೆಸಲು ಕಷ್ಟವಾಗುತ್ತಿದೆ. ಅಧಿಕಾರಿಗಳು ಬಂದು ಭರವಸೆ ನೀಡಿ ಹೋದರೇ ಹೊರತು, ಇದುವರೆಗೂ ಒಂದು ರೂಪಾಯಿಯೂ ನಮಗೆ ಪರಿಹಾರ ಸಿಕ್ಕಿಲ್ಲ’’

<ಭೀಮಬಾಯಿ ಶೆಟ್ಟೆಪ್ಪ, ರಾಮನಗರ ನಿವಾಸಿ

share
ಭೀಮರಾಯ ಕುಡ್ಡಳ್ಳಿ ಕಾಳಗಿ
ಭೀಮರಾಯ ಕುಡ್ಡಳ್ಳಿ ಕಾಳಗಿ
Next Story
X