Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಳೆ ಕೊರತೆ: ಮಡಕೆ ಮೂಲಕ...

ಮಳೆ ಕೊರತೆ: ಮಡಕೆ ಮೂಲಕ ನೀರುಣಿಸುತ್ತಿರುವ ರೈತರು

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ19 July 2026 9:29 AM IST
share
ಮಳೆ ಕೊರತೆ: ಮಡಕೆ ಮೂಲಕ ನೀರುಣಿಸುತ್ತಿರುವ ರೈತರು
ಬಿತ್ತನೆ ಮಾಡಿದ ಬೆಳೆಗಳ ರಕ್ಷಣೆಗೆ ಹರಸಾಹಸ

ಯಾದಗಿರಿ: ಆಕಾಶ ನೋಡುತ್ತಾ ಕಾದಿರುವ ರೈತನ ಕಣ್ಣಲ್ಲಿ ಈಗ ಆತಂಕ ಸೃಷ್ಟಿಯಾಗಿದ್ದು, ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ಗುರುಮಠಕಲ್ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ರೈತರು ಬೆಳೆ ಉಳಿಸಿಕೊಳ್ಳಲು ಮಡಿಕೆಗಳ ಮೂಲಕ ನೀರುಣಿಸುವ ಅನಿವಾರ್ಯ ಸ್ಥಿತಿ ಎದುರಾಗಿದೆ.

ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆ ಬಿತ್ತನೆ ಮಾಡಿದ ಬೆಳೆಗಳು ಒಣಗಲಾರಂಭಿಸಿವೆ. ಹೊಲದಲ್ಲಿರುವ ಬೆಳೆಗಳು ಸಂಪೂರ್ಣ ಒಣಗದಂತೆ ರೈತರು ಮಡಿಕೆಗಳಲ್ಲಿ ನೀರು ತಂದು ಒಂದೊಂದೇ ಗಿಡಕ್ಕೆ ನೀರುಣಿಸುತ್ತಿದ್ದಾರೆ. ಮಳೆಯ ಅಭಾವದಿಂದ ಬೆಳೆ ಉಳಿಸಿಕೊಳ್ಳುವುದು ರೈತರಿಗೆ ದೊಡ್ಡ ಸವಾಲಾಗಿದೆ.

ಬೀಜ, ರಸಗೊಬ್ಬರ, ಉಳುಮೆ ಹಾಗೂ ಬಿತ್ತನೆಗಾಗಿ ಸಾಲ ಮಾಡಿ ಕೃಷಿ ಕಾರ್ಯ ಕೈಗೊಂಡಿರುವ ರೈತರು ಈಗ ಬೆಳೆ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿಯೂ ಪ್ರಕೃತಿ ಸಂಕಷ್ಟ ತಂದೊಡ್ಡಿದೆ.

ಮಳೆಯ ನಿರೀಕ್ಷೆಯಲ್ಲಿರುವ ರೈತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಕೆಲ ಗ್ರಾಮಗಳಲ್ಲಿ ಕಪ್ಪೆ ಮದುವೆ ಸೇರಿದಂತೆ ವಿವಿಧ ಸಾಂಪ್ರದಾಯಿಕ ಆಚರಣೆಗಳ ಮೂಲಕ ಮಳೆಗಾಗಿ ಪ್ರಾರ್ಥನೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಮಳೆಯಾಗದಿದ್ದರೆ ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ಸರಕಾರ ಬೆಳೆ ಪರಿಸ್ಥಿತಿ ಪರಿಶೀಲಿಸಿ ಅಗತ್ಯ ನೆರವು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಈ ಬಾರಿ ಮಳೆ ಕೈಕೊಟ್ಟಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಬೆಳೆ ಉಳಿಸಿಕೊಳ್ಳಲು ಮಡಿಕೆ ಮೂಲಕ ನೀರು ಹಾಕುವಂತಹ ದುಸ್ಥಿತಿ ರೈತರಿಗೆ ಬಂದಿದೆ. ಸರಕಾರ ತಕ್ಷಣ ಬರ ಘೋಷಣೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು.

-ಅಂಜಪ್ಪ ತಾತಾಳಗೇರಾ ಗೌರವಾಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸೇನೆ ಗುರುಮಠಕಲ್ ತಾಲೂಕು

ಸಾಲ ಮಾಡಿ ಬಿತ್ತನೆ ಮಾಡಿದ್ದೇವೆ. ಆದರೆ ಮಳೆ ಬಾರದ ಕಾರಣ ಬೆಳೆಗಳು ಒಣಗಿ ಹೋಗುತ್ತಿವೆ. ಸರಕಾರ ಕೂಡಲೇ ಬರ ಘೋಷಣೆ ಮಾಡಿ ರೈತರಿಗೆ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು. ಇಲ್ಲವಾದರೆ ಸಾಲ ತೀರಿಸಲು ಬೆಂಗಳೂರು, ಮುಂಬೈ, ಪುಣೆ ಸೇರಿದಂತೆ ಹೊರರಾಜ್ಯಗಳಿಗೆ ಕೂಲಿ ಕೆಲಸಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ಎದುರಾಗುತ್ತದೆ.

-ಈಶಪ್ಪ ರೈತ ರಾಮಸಮುದ್ರ ರೈತ

ಸರಕಾರ ರೈತರ ಸಾಲವನ್ನು ಕೂಡಲೇ ಮನ್ನಾ ಮಾಡಬೇಕು. ಸರಕಾರ ಸಮಯಕ್ಕೆ ಸರಿಯಾಗಿ ನೆರವು ನೀಡಿದರೆ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಬಹುದು. ಜೊತೆಗೆ ರೈತರಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯನ್ನು ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ. ಸರಕಾರ ರೈತರ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಕಾಳಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

-ರಾಚಣ್ಣ ಗೌಡ ಮುದ್ನಾಳ ಬಿಜೆಪಿ ಮುಖಂಡ

Tags

potsfarmersRainfall deficit
share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X