Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಮಸ್ಯೆಗಳಿಗೆ ಸ್ಪಂದಿಸಿ

ಸಮಸ್ಯೆಗಳಿಗೆ ಸ್ಪಂದಿಸಿ

ಆಕಾಶ್ ಕುಡ್ಲಾಆಕಾಶ್ ಕುಡ್ಲಾ12 Jan 2024 12:27 PM IST
share
ಸಮಸ್ಯೆಗಳಿಗೆ ಸ್ಪಂದಿಸಿ

ನಮ್ಮ ಭಾರತವನ್ನು ಬಲಿಷ್ಠ ರಾಷ್ಟ್ರ ಎನ್ನಲಾಗುತ್ತದೆ. ಏಕೆಂದರೆ ಭಾರತದಲ್ಲಿ ಯುವಜನರ ಸಂಖ್ಯೆ ಬೇರೆ ಎಲ್ಲ ರಾಷ್ಟ್ರಗಳಿಗಿಂತಲೂ ಹೆಚ್ಚಾಗಿವೆ. ನಮ್ಮ ರಾಜ್ಯ ಕರ್ನಾಟಕದಲ್ಲಿ ಜನಸಂಖ್ಯೆಯ ಸುಮಾರು ಶೇ. 29 ಯುವಜನರಿದ್ದಾರೆ. ಆದರೆ ನಮ್ಮ ಸಮಾಜಕ್ಕಾಗಲಿ ಸರಕಾರಕ್ಕಾಗಲಿ ಯುವಜನರ ನೆನಪಾಗುವುದು ಜನವರಿ 12ರಂದು ಸ್ವಾಮಿ ವಿವೇಕಾನಂದರ ಜನ್ಮದಿನ ಯುವಜನರ ದಿನವನ್ನಾಗಿ ಆಚರಿಸುವಾಗ ಮಾತ್ರ. ಯುವಜನರ ದಿನದಂದು ವೇದಿಕೆ ಹತ್ತಿ ಯುವಕರನ್ನು ಉದ್ದೇಶಿಸಿ ಮಾತನಾಡುವವರು ಕೂಡ ‘ಕುದಿಯುವ ರಕ್ತ’, ‘ದೇಶದ ಶಕ್ತಿ’, ‘ಕಲ್ಲು ನುಂಗಿದರೂ ಕರಗಿಸುವಂತಹ ಜೀವ’, ‘ಮರ್ಕಟ ಮನಸ್ಸು-ಹಾದಿ ತಪ್ಪುವ ವಯಸ್ಸು’ ಹೀಗೆ ಭಿನ್ನ-ಭಿನ್ನ ಮಾತುಗಳನ್ನು ಹಲವಾರು ವರ್ಷಗಳಿಂದ ನಾವು ಕೇಳುತ್ತಾ ಬಂದಿದ್ದೇವೆ. ಇದರ ಬದಸು ಯುವಜನರು ಅಭಿವೃದ್ಧಿಯನ್ನು ಹೊಂದಲು ಅವಕಾಶವನ್ನು ಕಲ್ಪಿಸಿಕೊಡುವಂತಹ ಪ್ರೋತ್ಸಾಹ ಭರಿತ ಮಾತುಗಳು ನಮಗೆ ಕೇಳಲು ಸಿಗುವುದು ತುಂಬಾ ಕಡಿಮೆ.

ಇಂದು ಯುವಜನರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳು ಒಬ್ಬರಿಂದ ಇನ್ನೊಬ್ಬರಿಗೆ ಬಹಳ ಭಿನ್ನವಾಗಿದೆ. ಹಳ್ಳಿ ಮತ್ತು ನಗರದ ನಡುವೆ ಭಿನ್ನವಾಗಿದೆ. ಮೇಲ್ವರ್ಗ ಹಾಗೂ ಸಾಮಾಜಿಕವಾಗಿ ಹಿಂದುಳಿದ ಮತ್ತು ಕೆಳಸ್ತರದಲ್ಲಿರುವ ವರ್ಗದ ಯುವಜನರ ನಡುವೆ ಭಿನ್ನವಾಗಿದೆ, ಯುವತಿಯರಿಗೆ ಇನ್ನೂ ಹಲವು ಬೇರೆ ರೀತಿಯಾದಂತಹ ಸಮಸ್ಯೆಗಳಿರುತ್ತವೆ. ಲಿಂಗತ್ವ ಅಲ್ಪಸಂಖ್ಯಾತರಿಗೂ ಭಿನ್ನ ಸಮಸ್ಯೆಗಳಿರುತ್ತವೆ. ಇವತ್ತು ಮಕ್ಕಳ ಹಕ್ಕುಗಳಿವೆ, ಮಹಿಳಾ ಹಕ್ಕುಗಳಿವೆ, ಮಾನವ ಹಕ್ಕುಗಳಿವೆ. ಆದರೆ ಈ ದೇಶದ ಬಲಿಷ್ಠತೆ ಅಥವಾ ಶಕ್ತಿ ಎಂದು ನಾವು ಯಾರನ್ನು ಕರೆಯುತ್ತೇವೋ ಅವರಿಗೆ ಹಕ್ಕುಗಳನ್ನು ಒದಗಿಸಿಲ್ಲ.

ದೇಶದ ಅಭಿವೃದ್ಧಿಗೆ ಯುವ ಜನರ ಆರೋಗ್ಯವೂ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇವತ್ತು ಯುವಜನರಲ್ಲಿ ಪೌಷ್ಟಿಕತೆಯ ಕೊರತೆ ಇರುತ್ತದೆ. ಯುವಜನರ ಮಾನಸಿಕ ಆರೋಗ್ಯದ ಮೇಲೆ ಬೇರೆ ಬೇರೆ ವಿಷಯಗಳಿಂದ ಬಹಳಷ್ಟು ಪರಿಣಾಮಗಳಿವೆ. ಇದರ ಬಗ್ಗೆ ಮಾತನಾಡುವುದು ತೀರ ಕಡಿಮೆಯಾಗಿದೆ ಏಕೆಂದರೆ ಇದು ಒಂದು ಅಗತ್ಯ ಎಂದು ಇಲ್ಲಿಯವರೆಗೆ ಪರಿಗಣಿಸಲಾಗಿಲ್ಲ.

ದೇಶದಲ್ಲಿ ಯುವಜನತೆಯ ಅಭಿವೃದ್ಧಿಯಾಗದಿದ್ದರೆ ದೇಶ ಅಭಿವೃದ್ಧಿ ಹೊಂದಲು ಹೇಗೆ ಸಾಧ್ಯ? ಈ ದೇಶದ ಅಭಿವೃದ್ಧಿ ಬಗ್ಗೆ ಪ್ರತಿಯೊಬ್ಬ ಯುವಕ-ಯುವತಿಗೂ ತಮ್ಮದೇ ಆದ ಕರ್ತವ್ಯಗಳಿವೆ. ಆ ಕರ್ತವ್ಯಗಳನ್ನು ನಿರ್ವಹಿಸಲು ಯುವಜನತೆಗೆ ಯುವ ಜನರ ಹಕ್ಕುಗಳು ಬೇಕಾಗಿದೆ. ಹಕ್ಕುಗಳಿದ್ದರೆ ಮಾತ್ರ ನಮಗಾಗುವ ಅನ್ಯಾಯಗಳನ್ನು ನಾವು ಪ್ರಶ್ನಿಸಲು ಸಾಧ್ಯ.

ಯುವಜನರ ಹಕ್ಕುಗಳಿಗಾಗಿ ಯುವಜನ ಆಯೋಗ ಸ್ಥಾಪನೆಯಾಗಬೇಕು. ಅಲ್ಲದೆ ಯುವನೀತಿಯೂ ಕೂಡಲೇ ಜಾರಿಯಾಗಬೇಕು. ಯುವಜನರ ಅಭಿವೃದ್ಧಿ ಆದರೆ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ.

share
ಆಕಾಶ್ ಕುಡ್ಲಾ
ಆಕಾಶ್ ಕುಡ್ಲಾ
Next Story
X