Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಮಸ್ಯೆಗಳ ಆಗರ ಸಾಲುಮರದ ತಿಮ್ಮಕ್ಕ...

ಸಮಸ್ಯೆಗಳ ಆಗರ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ

ಎನ್.ಆರ್.ಕುಂಬಾರಎನ್.ಆರ್.ಕುಂಬಾರ19 May 2026 2:07 PM IST
share
ಸಮಸ್ಯೆಗಳ ಆಗರ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ
ಕಿತ್ತು ಹೋದ ರಸ್ತೆಗಳು, ಕುಡಿಯಲು ನೀರಿಲ್ಲ, ಮುರಿದ ಆಟಿಕೆಗಳು, ಒಣಗಿದ ಗಿಡಗಳು

ಸುರಪುರ: ನಗರದ ಹೊರವಲಯದಲ್ಲಿರುವ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಸಮಸ್ಯೆಗಳ ಆಗರವಾಗಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದಂತಾಗಿದೆ. ವೃಕ್ಷೋದ್ಯಾನಕ್ಕೆ ಹೋಗಲು ಸರಿಯಾದ ರಸ್ತೆಯಿಲ್ಲ. ಕೆಲ ವರ್ಷಗಳ ಹಿಂದೆ ದುರಸ್ತಿಗಾಗಿ ಹಾಕಿರುವ ಜಲ್ಲಿ ಕಲ್ಲುಗಳು ಕೂಡ ಹಾಗೆ ಬಿದ್ದಿದ್ದು ಬೈಕ್ ಸವಾರರು ಜೀವ ಕೈಯಲ್ಲಿ ಹಿಡಿದು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ವೃಕ್ಷೋದ್ಯಾನದ ಪ್ರವೇಶ ದ್ವಾರದಲ್ಲಿ ಮಕ್ಕಳಿಗೆ 5 ರೂ. ದೊಡ್ಡವರಿಗೆ 10 ರೂ. ದರ ತೆಗೆದುಕೊಳ್ಳಲಾಗುತ್ತದೆ. ಆದರೆ ಒಳಗೆ ಹೋದರೆ ಒಣಗಿದ ಮರ-ಗಿಡಗಳು, ಮುರಿದ ಆಟಿಕೆಗಳಿವೆ. ಕುಡಿಯಲು ನೀರೂ ಸಹ ಇಲ್ಲದ ಈ ಉದ್ಯಾನವನದಲ್ಲಿ ಯಾವುದೇ ಸೌಲಭ್ಯಗಳಿಲ್ಲದೆ ಜನರು ಹಿಡಿಶಾಪ ಹಾಕುವಂತಾಗಿದೆ.

ವೃಕ್ಷೋದ್ಯಾನಕ್ಕೆ ಬರುವ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ನಿರಂತರ ಕುಡಿಯುವ ನೀರು ಸರಬರಾಜಿನ ನಳ ಒಂದು ಮುಖ್ಯ ದ್ವಾರದ ಬಳಿ ಅಳವಡಿಸಿದ್ದು, ಅದರಿಂದ ಬರುವ ನೀರು ಕುಡಿಯಲು ಯೋಗ್ಯವಾಗಿಲ್ಲ. ಈ ನೀರು ಸೇವಿಸಿದಲ್ಲಿ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರಲಿದೆ ಎಂದು ಮಕ್ಕಳೊಂದಿಗೆ ಆಗಮಿಸಿರುವ ಪೋಷಕರು ಆರೋಪಿಸುತ್ತಿದ್ದಾರೆ. ಅಲ್ಲದೆ ನೀರು ಶುದ್ಧೀಕರಿಸುವ ಯಂತ್ರವಿದ್ದರೂ ಅದನ್ನು ಉದ್ಯಾನವನದಲ್ಲಿ ಅಳವಡಿಸದೆ ನಿರ್ಲಕ್ಷ್ಯ ತೋರಲಾಗಿದೆ ಎಂದು ಹೇಳಲಾಗಿದೆ.

ವೃಕ್ಷೋದ್ಯಾನದ ಒಳಗಡೆ ಹೊರಟರೆ ಹಾಳಾದ ರಸ್ತೆಯಿಂದ ಮಕ್ಕಳು ನಡೆದುಕೊಂಡು ಹೋಗದಂತಹ ಸ್ಥಿತಿ ತಲುಪಿದೆ. ಬೇಸಿಗೆ ರಜೆ ಇರುವುದರಿಂದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವೃಕ್ಷೋದ್ಯೋನಕ್ಕೆ ಪೋಷಕರೊಂದಿಗೆ ಆಗಮಿಸಿದರೆ ಅನೇಕ ಆಟದ ವಸ್ತುಗಳು ಕೂಡ ಮುರಿದು ಬಿದ್ದಿರುವುದು ಕಂಡುಬರುತ್ತದೆ. ಅಲ್ಲದೆ ಇತ್ತೀಚಿಗೆ ಕೆಲವು ಹೊಸ ಆಟದ ವಸ್ತುಗಳನ್ನ ಅಳವಡಿಸಲಾಗಿದ್ದರೂ ಅವುಗಳು ಚಿಕ್ಕ ಮಕ್ಕಳಿಗೆ ಉಪಯೋಗವಿಲ್ಲದಂತಿವೆ. ಜಾರು ಬಂಡಿಯ ಆಟದ ವಸ್ತುಗಳು ಮುರಿದು ಅನೇಕ ವರ್ಷಗಳಾದರೂ ಅವುಗಳನ್ನು ಬದಲಾಯಿಸುವ ಗೋಜಿಗೂ ಅರಣ್ಯ ಇಲಾಖೆ ಹೋಗಿಲ್ಲ. ಅರಣ್ಯ ಇಲಾಖೆ ಇದರ ನಿರ್ವಹಣೆಯನ್ನು ಮಾಡುತ್ತಿದ್ದು ಇಲಾಖೆಯ ಅಧಿಕಾರಿಗಳ ನಿರ್ಲಕ್ಷದಿಂದ ವೃಕ್ಷೋದ್ಯಾನ ಇದ್ದೂ ಇಲ್ಲದಂತಾಗಿದೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

ವೃಕ್ಷೋದ್ಯಾನದಲ್ಲಿನ ಅವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿ ಭಾಗಣ್ಣ ಅವರಿಗೆ ಪತ್ರಿಕೆಯಿಂದ ಸಂಪರ್ಕಿಸಿದರೆ ಕರೆಯನ್ನು ಸ್ವೀಕರಿಸುತ್ತಿಲ್ಲ.ಅಧಿಕಾರಿಗಳು ಇನ್ನಾದರೂ ಉದ್ಯಾನವನದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲಿ ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.

ಮಕ್ಕಳ ಆಟಕ್ಕಾಗಿ ನಿರ್ಮಿಸಿರುವ ವೃಕ್ಷೋದ್ಯಾನ ಪ್ರೇಮಿಗಳ ತಾಣವಾಗಿ ಮಾರ್ಪಡುತ್ತಿದೆ. ಬೇರೆ ಬೇರೆ ತಾಲೂಕುಗಳಿಂದಲೂ ಪ್ರೇಮಿಗಳು ಆಗಮಿಸಿ, ಖಾಸಗಿ ಕ್ಷಣಗಳನ್ನು ಸಾರ್ವಜನಿಕವಾಗಿ ಕಳೆಯುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸಿ ಯಾವುದೇ ಅನಗತ್ಯ ಚಟುವಟಿಕೆಗಳಿಗೆ ಅವಕಾಶ ನೀಡದೆ ಜಾಗೃತಿ ಮೂಡಿಸಬೇಕಿದೆ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಲಾಗಿದ್ದು, ಈಗ ಯಾವುದೇ ಸೌಲಭ್ಯಗಳಿಲ್ಲದೆ ಉದ್ಯಾನವನ ಅವ್ಯವಸ್ಥೆಯ ತಾಣವಾಗಿದೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಕುಡಿಯುವ ನೀರು, ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು.

-ವೆಂಕಟೇಶ ನಾಯಕ ಬೈರಿಮಡ್ಡಿ

ಕರವೇ ತಾಲೂಕು ಅಧ್ಯಕ್ಷ, ಸುರಪುರ

ಉದ್ಯಾನವನಕ್ಕೆ ಬರುವವರಿಂದ ಹಣ ಪಡೆದು ಸೌಕರ್ಯ ನೀಡದಿರುವುದು ಸರಿಯಲ್ಲ. ಅಧಿಕಾರಿಗಳು ಇಲ್ಲಿಯ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ನಮ್ಮ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುವುದು.

-ಮಾಳಪ್ಪ ಕಿರದಳ್ಳಿ,

ಜಿಲ್ಲಾ ಸಂಚಾಲಕರು, ಡಿಎಸ್‌ಎಸ್ (ಅಂಬೇಡ್ಕರ್ ವಾದ) ಯಾದಗಿರಿ

Tags

Saalumarada ThimmakkaBotanical Garden
share
ಎನ್.ಆರ್.ಕುಂಬಾರ
ಎನ್.ಆರ್.ಕುಂಬಾರ
Next Story
X