Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಂಡೀಪುರ ಅಭಯಾರಣ್ಯದೊಳಗೆ ಸಫಾರಿ ಬಂದ್

ಬಂಡೀಪುರ ಅಭಯಾರಣ್ಯದೊಳಗೆ ಸಫಾರಿ ಬಂದ್

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್5 Dec 2025 2:56 PM IST
share
ಬಂಡೀಪುರ ಅಭಯಾರಣ್ಯದೊಳಗೆ ಸಫಾರಿ ಬಂದ್
ಅರಣ್ಯ ಇಲಾಖೆ ಆದಾಯಕ್ಕೆ ಹೊಡೆತ

ಚಾಮರಾಜನಗರ : ಜಿಲ್ಲೆಯ ಅಭಯಾರಣ್ಯದೊಳಗೆ ಸಫಾರಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಬರುತ್ತಿದ್ದ ಆದಾಯಕ್ಕೆ ಕುತ್ತು ಬಂದಂತಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದ ಅಭಯಾರಣ್ಯದೊಳಗೆ ಸಫಾರಿಯಿಂದಲೇ ವರ್ಷಕ್ಕೆ ಕೋಟಿ ಗಟ್ಟಲೆ ಆದಾಯವೂ ಬರುತ್ತಿತ್ತು, ಇದನ್ನೇ ನಂಬಿಕೊಂಡು ಅದೆಷ್ಟೋ ಬಡ ಕುಟುಂಬಗಳು ಜೀವನ ಸಾಗಿಸುತ್ತಿದ್ದವು.

ಕೆಲವು ತಿಂಗಳಿಂದ ಕಾಡಿನಿಂದ ಹುಲಿ, ಚಿರತೆಗಳು ಹೊರ ಬಂದು ಕಾಡಂಚಿನ ಗ್ರಾಮಗಳಲ್ಲಿ ದಾಳಿ ನಡೆಸಿದ್ದಲ್ಲದೆ ಪ್ರಾಣ ಹಾನಿಯನ್ನುಂಟು ಮಾಡಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು ಮತ್ತು ರೈತರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡಿದ್ದರು. ಕಾಡಿನಲ್ಲಿರಬೇಕಾದ ವನ್ಯ ಜೀವಿಗಳು ಕಾಡಂಚಿನ ಗ್ರಾಮದೊಳಗೆ ಬಂದು ಪ್ರಾಣ ಹಾನಿಯನ್ನುಂಟು ಮಾಡುತ್ತಿದೆ. ಇದಕ್ಕೆ ಅಭಯಾರಣ್ಯದೊಳಗೆ ಸಫಾರಿ ಮಾಡುವುದರಿಂದಲೇ ಎಂದು ಆರೋಪಿಸಿದ್ದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಬಂಡೀಪುರ ಮತ್ತು ಮೈಸೂರು ಜಿಲ್ಲೆಯ ನಾಗರಹೊಳೆಯಲ್ಲಿ ಸಫಾರಿ ಬಂದ್ ಮಾಡುವಂತೆ ಸೂಚನೆ ನೀಡಿದ್ದರು.

ಅರಣ್ಯ ಸಚಿವರ ಸೂಚನೆಯಂತೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ಬಂದ್ ಮಾಡಿದ್ದಾರೆ ಇದರಿಂದಾಗಿ ಎರಡೂ ರಾಷ್ಟ್ರೀಯ ಉದ್ಯಾನವನದಲ್ಲೂ ಸಫಾರಿ ಕೇಂದ್ರಗಳು ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದ್ದು, ಸಫಾರಿ ಕೇಂದ್ರಗಳಲ್ಲಿ ಇದೀಗ ಮೌನ ಆವರಿಸಿದೆ. ವಾರಾಂತ್ಯ ಮತ್ತು ಸಾಲು ಸಾಲು ರಜೆ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬರುವ ಪ್ರವಾಸಿಗರಿಗೆ ಸಫಾರಿ ಇಲ್ಲದೇ ಇರುವುದರಿಂದ ಬೇಸರದಿಂದ ಬೇರೆ ಪ್ರವಾಸಿ ತಾಣಗಳತ್ತ ಸಾಗುತ್ತಿದ್ದಾರೆ.

ಇನ್ನು ಹದಿನೈದು ದಿನಗಳು ಕಳೆದಂತೆ ವರ್ಷಾಂತ್ಯ ಹಾಗೂ ಹೊಸ ವರ್ಷ ಬರಲಿದೆ. ಈ ಸಮಯದಲ್ಲಿ ಬಂಡೀಪುರಕ್ಕೆ ಸಾಗರೋಪಹಾದಿಯಲ್ಲಿ ಪ್ರವಾಸಿಗರು ಆಗಮಿಸುವರು. ಪ್ರವಾಸಕ್ಕೆ ಬರುವವರು ಕಾನನದೊಳಗೆ ಸಫಾರಿ ಮಾಡುವುದು ವಾಡಿಕೆಯನ್ನು ಮಾಡಿಕೊಂಡಿರುವವರಿಗೆ ಇದೀಗ ಸಪಾರಿ ಬಂದ್‌ನಿಂದ ಬಾರಿ ನಿರಾಸೆಯಾಗುವಂತ್ತಿದೆ.

ಸಫಾರಿಗೆ ತಡೆ ನೀಡಿರುವುದರಿಂದ ಕಾಡಂಚಿನ ಗ್ರಾಮಸ್ಥರು ಮತ್ತು ರೈತರು ಪ್ರತಿಭಟನೆ ಮಾಡುವುದು ನಿಲ್ಲಿಸಿದರೆ, ಮತ್ತೊಂದು ಕಡೆ ಸಫಾರಿ ಬಂದ್‌ನಿಂದ ಇದನ್ನೇ ನೆಚ್ಚಿಕೊಂಡು ವ್ಯಾಪಾರ ವಹಿವಾಟು ಮಾಡುವ ಬಡ ಕುಟುಂಬಗಳ ಜೀವನಕ್ಕೆ ಆರ್ಥಿಕ ಹೊಡೆತವಾಗಿದೆ. ಮಗದೊಂದು ಕಡೆ ಸಫಾರಿಗೆ ತೆರಳುವ ಪ್ರವಾಸಿಗರಿಂದ ಬರುವ ಆದಾಯವು ಅರಣ್ಯ ಇಲಾಖೆಯ ಖಜಾನೆ ತುಂಬುತ್ತಿದ್ದು, ಇದೀಗ ಬರಿದಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಇದರ ನಡುವ ಸದ್ಯಕ್ಕೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸ್ಥಗಿತಗೊಂಡಿರುವ ಸಫಾರಿಯನ್ನು ಮತ್ತೆ ಆರಂಭಿಸಬೇಕೇ ಬೇಡವೇ ಎನ್ನುವ ಬಗ್ಗೆ ಹಿರಿಯ ಅರಣ್ಯಾಧಿಕಾರಿಗಳಲ್ಲಿ ಚರ್ಚೆ ಆರಂಭವಾಗಿದ್ದು, ಅಂತಿಮ ತೀರ್ಮಾನ ಇನ್ನೂ ಕೈಗೊಂಡಿಲ್ಲ ಎನ್ನಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ ಹಾವಳಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸರಕಾರದ ಸೂಚನೆಯಂತೆ ಸಫಾರಿ ಸ್ಥಗಿತಗೊಳಿಸಲಾಗಿದೆ. ವಾರಾಂತ್ಯದಲ್ಲಿ ಹೆಚ್ಚಿನ ಪ್ರವಾಸಿಗರು ಸಫಾರಿಗೆ ತೆರಳುತ್ತಿದ್ದರು. ಪ್ರಸ್ತುತ ಸಫಾರಿ ಸ್ಥಗಿತಗೊಳಿಸಿದ್ದರಿಂದ ಪ್ರವಾಸಿಗರು ಇಲ್ಲದಂತಾಗಿದೆ. ಸರಕಾರ ನಿದೇರ್ಶನ ನೀಡುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

-ಎನ್.ಪಿ.ನವೀನ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಂಡೀಪುರ

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಸ್ಥಗಿತಗೊಳಿಸಿದ್ದರಿಂದ ಕಾಡು ಪ್ರಾಣಿಗಳು ಕಾಡಿನಲ್ಲಿ ಇರುತ್ತವೆ. ಮತ್ತೆ ಸಫಾರಿ ಆರಂಭಿಸುವ ಬಗ್ಗೆ ಇಲಾಖೆಯ ಮೇಲೆ ಒತ್ತಡ ಹೇರಲಾಗುತ್ತಿದೆ. ಸರಕಾರ ಕನಿಷ್ಟ ಒಂದು ವರ್ಷವಾದರೂ ಸಫಾರಿಯನ್ನು ಸ್ಥಗಿತಗೊಳಿಸಿದರೆ ಕಾಡಂಚಿನ ಗ್ರಾಮಗಳಲ್ಲಿ ವನ್ಯ ಜೀವಿಗಳ ಹಾವಳಿಯನ್ನು ನಿಯಂತ್ರಣಕ್ಕೆ ತರಬಹುದು

-ಮಹದೇವಪ್ಪ ಶಿವಪುರ, ರೈತ ಮುಖಂಡರು ಗುಂಡ್ಲುಪೇಟೆ

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X