Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಾಯಿ ನಗರ ಬಡಾವಣೆಗಿಲ್ಲ ಸಮರ್ಪಕ ರಸ್ತೆ:...

ಸಾಯಿ ನಗರ ಬಡಾವಣೆಗಿಲ್ಲ ಸಮರ್ಪಕ ರಸ್ತೆ: ಸಾರ್ವಜನಿಕರಿಗೆ ಸಂಕಷ್ಟ

ಚಿತ್ರಸೇನ ವ್ಹಿ ಫುಲೆಚಿತ್ರಸೇನ ವ್ಹಿ ಫುಲೆ28 July 2025 2:21 PM IST
share
ಸಾಯಿ ನಗರ ಬಡಾವಣೆಗಿಲ್ಲ ಸಮರ್ಪಕ ರಸ್ತೆ: ಸಾರ್ವಜನಿಕರಿಗೆ ಸಂಕಷ್ಟ

ಬೀದರ್, ಜು.27: ನಗರದ ನೌಬಾದ್ ಹತ್ತಿರ ಇರುವ ಸಾಯಿ ನಗರ ಬಡಾವಣೆಯಾಗಿ 20 ವರ್ಷ ಕಳೆದರೂ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದೆ ಬಡಾವಣೆಯ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಸಾಯಿ ನಗರದ ಯಾವ ಓಣಿಯಲ್ಲಿ ಹೋದರೂ ಅಲ್ಲಿನ ರಸ್ತೆಗಳು ಬರೀ ಕೆಂಪು ಮಣ್ಣಿನ ಕೆಸರಿನ ಗದ್ದೆಯಂತೆ ಕಾಣುತ್ತವೆ. ಮೊಣಕಾಲುದ್ದಕ್ಕೂ ಗುಂಡಿಗಳು ಸಿಗುತ್ತವೆ. ಮಳೆ ಬಿದ್ದರಂತೂ ಈ

ಓಣಿಯಲ್ಲಿ ನಡೆದಾಡುವುದಕ್ಕೆ ತುಂಬಾ ಕಷ್ಟವಾಗುತ್ತದೆ. ರಸ್ತೆಯ ಪರಿಸ್ಥಿತಿ ನೋಡಿ ಈ ಓಣಿಯಲ್ಲಿ ಬಾಡಿಗೆ ಆಟೊಗಳು ಕೂಡ ಬರುವುದಿಲ್ಲ. ಸುಮಾರು ಅರ್ಧ ಕಿ. ಮೀ. ದೂರದ ನೌಬಾದ್‌ನಿಂದ ಈ ಓಣಿಯ ಜನ ನಡೆದುಕೊಂಡೆ ಬರಬೇಕಾಗಿದೆ.

ಇಂತಹ ಗುಂಡಿ ಬಿದ್ದ ರಸ್ತೆಯಲ್ಲಿ ಬೈಕ್ ಮತ್ತು ಶಾಲಾ ವಾಹನಗಳು ಅನಿವಾರ್ಯವಾಗಿ ಓಡಾಡಲೇಬೇಕು. ಅಂಥದರಲ್ಲಿ ಅದೆಷ್ಟೋ ಬೈಕ್ ಸವಾರರು ಜಾರಿ ಬಿದ್ದಿದ್ದಾರೆ. ಅದೆಷ್ಟೋ ಶಾಲಾ ವಾಹನಗಳು ಕೆಸರಲ್ಲಿ ಸಿಲುಕಿದೆ. ಮಳೆಗಾಲದಲ್ಲಿ ರಸ್ತೆಯ ತಗ್ಗಿನ ತುಂಬೆಲ್ಲ ನೀರು ನಿಂತು, ತಗ್ಗಿನ ಪ್ರಮಾಣ ಗೊತ್ತಾಗುತ್ತಿಲ್ಲ

ಮಳೆಯಿಂದ ಓಣಿಯ ತುಂಬೆಲ್ಲ ನೀರು ನಿಂತಿವೆ. ಇದರಿಂದಾಗಿ ಮಕ್ಕಳು, ಮಹಿಳೆಯರಿಗೆ ಹೊರಗಡೆ ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಯಾರಾದರು ಮೃತಪಟ್ಟರೆ ಮೃತದೇಹವನ್ನು ಸಾಗಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯಲ್ಲಿ ನಿಂತ ನೀರಿನ ಪರಿಣಾಮವಾಗಿ ಓಣಿಯ ತುಂಬೆಲ್ಲ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಇದು ಹಲವಾರು ರೋಗಗಳಿಗೆ ದಾರಿ ಮಾಡಿಕೊಡುತ್ತಿದೆ.

ಸುಮಾರು ವರ್ಷಗಳಿಂದ ನಮ್ಮ ಓಣಿಯ ಜನರು ಈ ರಸ್ತೆ ಸಮಸ್ಯೆಯಿಂದ ನೊಂದು ಹೋಗಿದ್ದಾರೆ. ಆದರೆ ಯಾರು ಕೂಡ ಇತ್ತ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಅಳಲನ್ನು ತೊಡಿಕೊಂಡಿದ್ದಾರೆ.ಹಲವು ಬಾರಿ ಜಿಲ್ಲಾಧಿಕಾರಿ ಮತ್ತು ನಗರಸಭೆ ಆಯುಕ್ತರ ಗಮನಕ್ಕೆ ತಂದರೂ ನಮ್ಮ ಓಣಿಯ ಸಮಸ್ಯೆ ಬಗೆಹರಿದಿಲ್ಲ. ರಸ್ತೆ ನಿರ್ಮಾಣ ಮಾಡುವ ಭರವಸೆ ನೀಡಿದ್ದಾರೆ. ಆದರೆ ಇಲ್ಲಿವರೆಗೆ ಇತ್ತ ಕಡೆಗೆ ಗಮನ ಹರಿಸಿ ನೋಡಲಿಲ್ಲ. ಹೇಗಾದರೂ ಮಾಡಿ ನಮ್ಮ ಓಣಿಗೆ ರಸ್ತೆ ನಿರ್ಮಾಣ ಮಾಡಬೇಕು ಎಂದು ಬಡಾವಣೆಯ ಜನರು ಒತ್ತಾಯಿಸುತ್ತಿದ್ದಾರೆ.

ರಸ್ತೆಯ ಮಧ್ಯದಲ್ಲಿ ಮೊಣಕಾಲಿನವರೆಗೆ ನೀರು ನಿಂತಿದೆ. ಇದರಿಂದಾಗಿ ಬೈಕ್ ಮತ್ತು ಶಾಲಾ ವಾಹನಗಳು ಓಡಾಡಲು ತುಂಬಾ ಕಷ್ಟವಾಗುತ್ತಿದೆ. ರಸ್ತೆ ನಿರ್ಮಾಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ನಗರಸಭೆ ಆಯುಕ್ತರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

-ನಾಗರಾಜ್, ಸಾಯಿ ನಗರ ಬಡಾವಣೆಯ ನಿವಾಸಿ

ಸಾಯಿ ನಗರ ಬಡಾವಣೆಗೆ ರಸ್ತೆ ಬಗ್ಗೆ ನಗರಸಭೆ ಆಯುಕ್ತರಿಗೆ ತಿಳಿಸಲಾಗಿದೆ. ಪತ್ರ ಕೂಡ ಸಲ್ಲಿಸಲಾಗಿದೆ. ಅವರು ಓಣಿಗೆ ಬಂದು ರಸ್ತೆ ನೋಡಿಕೊಂಡು ಹೋಗಿದ್ದಾರೆ. ಆದರೆ ಯಾವುದೇ ಸಮಸ್ಯೆ ಬಗೆಹರಿದಿಲ್ಲ. ಟೆಂಡರ್ ಆಗಬೇಕಿದ್ದು, ಬಜೆಟ್ ಇಲ್ಲ ಎನ್ನುವ ಕಾರಣಕ್ಕೆ ಅದನ್ನು ನಿಲ್ಲಿಸಲಾಗಿದೆ ಎನ್ನುವ ಮಾಹಿತಿ ಇದೆ.

-ಮಹಾದೇವಿ, ಸಾಯಿನಗರ ನಗರಸಭೆ ಸದಸ್ಯೆ

ನಾವು ಈ ಬಡಾವಣೆಗೆ ಬಂದು 25 ವರ್ಷಗಳು ಆಯಿತು. ಈ ಬಡಾವಣೆಯಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ. ನಮ್ಮ ಮಕ್ಕಳು ಶಾಲೆಗೆ ಹೋಗಿ ಬರುವಾಗ ಕೆಸರಲ್ಲಿ ಬೀಳುತ್ತಿದ್ದಾರೆ. ಅಲ್ಲಲ್ಲಿ ಹುಲ್ಲು ಬೆಳೆದಿದ್ದು, ಹಾವುಗಳು ಓಡಾಡುತ್ತಿವೆ. ನಮ್ಮ ಓಣಿಯಲ್ಲಿ ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆ ಮಾಡಬೇಕು.

-ಸಂಪಾವತಿ, ಓಣಿಯ ನಿವಾಸಿ

share
ಚಿತ್ರಸೇನ ವ್ಹಿ ಫುಲೆ
ಚಿತ್ರಸೇನ ವ್ಹಿ ಫುಲೆ
Next Story
X