Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. Sandur | ಕುರೇಕುಪ್ಪ ಪುರಸಭೆಯಾದರೂ...

Sandur | ಕುರೇಕುಪ್ಪ ಪುರಸಭೆಯಾದರೂ ಸೌಲಭ್ಯ ನಗಣ್ಯ

ಕೆ.ಮಹಮ್ಮದ್ ಖಾಸೀಂಕೆ.ಮಹಮ್ಮದ್ ಖಾಸೀಂ13 Aug 2026 12:32 PM IST
share
Sandur | ಕುರೇಕುಪ್ಪ ಪುರಸಭೆಯಾದರೂ ಸೌಲಭ್ಯ ನಗಣ್ಯ
ಜನರಿಗೆ ನಿತ್ಯ ಪರದಾಟ: ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ

ಸಂಡೂರು: ಪುರಸಭೆಯಾಗಿ ಮೇಲ್ದರ್ಜೆಗೇರಿ ಬರೋಬ್ಬರಿ 11 ವರ್ಷ ಕಳೆದರೂ ಕುರೇಕುಪ್ಪ ಪಟ್ಟಣದ ಜನರಿಗೆ ಸರಕಾರಿ ಆರೋಗ್ಯ ಸೇವೆ ಇನ್ನೂ ಕೈಗೆಟುಕದ ಸ್ಥಿತಿಯಲ್ಲಿದೆ. ಜನಸಂಖ್ಯೆ ತಕ್ಕಂತೆ ಆರೋಗ್ಯ ಸೇವೆ ನೀಡದ ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡವರು, ಕಟ್ಟಡ ಕಾರ್ಮಿಕರು, ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸೇರಿದಂತೆ ಸಾವಿರಾರು ಜನರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆಗಾಗಿ ದೂರದ ಸರಕಾರಿ ಆರೋಗ್ಯ ಕೇಂದ್ರಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸೆ :

ಕುರೇಕುಪ್ಪ ಪಟ್ಟಣ ಹಾಗೂ ಸುತ್ತಮುತ್ತಲಿನ ಜನರಿಗೆ ಅನಾರೋಗ್ಯ ಉಂಟಾದಾಗ ದುಬಾರಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುವುದು ಆರ್ಥಿಕ ಹೊರೆಯಾಗಿದೆ. ಮತ್ತೊಂದೆಡೆ, ಸರಕಾರಿ ಆರೋಗ್ಯ ಸೇವೆ ಪಡೆಯಲು ತೋರಣಗಲ್ಲಿನ ಸಮುದಾಯ ಆರೋಗ್ಯ ಕೇಂದ್ರದತ್ತ ತೆರಳುತ್ತಾರೆ. ಇದರಿಂದ ಪ್ರಯಾಣದ ವೆಚ್ಚ, ಸಮಯದ ವ್ಯಯ ಹಾಗೂ ತುರ್ತು ಸಂದರ್ಭಗಳಲ್ಲಿ ಸಮಸ್ಯೆಗಳು ಬಾಧಿಸುತ್ತಿವೆ.

ಗ್ರಾಪಂ ಪುರಸಭೆ ಮೇಲ್ದರ್ಜೆಗೇರಿದರೂ ಸೌಲಭ್ಯ ಮರೀಚಿಕೆ :

ಕುರೇಕುಪ್ಪ ಗ್ರಾಪಂ ಪುರಸಭೆಯಾಗಿ ಮೇಲ್ದರ್ಜೆಗೇರಿಸಿ ಸುಮಾರು 11 ವರ್ಷವಾಗಿವೆ. ಈ ಅವಧಿಯಲ್ಲಿ ಪಟ್ಟಣದ ಜನಸಂಖ್ಯೆ ಹಾಗೂ ವಸತಿ ಪ್ರದೇಶಗಳು ಗಣನೀಯವಾಗಿ ವಿಸ್ತರಿಸಿವೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಆಡಳಿತ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕುರೇಕುಪ್ಪ ಪುರಸಭೆ ಕೇಂದ್ರ ಸ್ಥಾನದಲ್ಲಿಯೇ ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಿ, ವೈದ್ಯರು, ಶುಶ್ರೂಷಕರು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಜನಸಂಖ್ಯೆ ಹಾಗೂ ಆರೋಗ್ಯದ ಅಗತ್ಯವನ್ನು ಪರಿಗಣಿಸಿ ಸರಕಾರ ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣಕಾರರ ಫೆಡರೇಶನ್, ರಾಜ್ಯ ಪ್ರಾಂತ ರೈತ ಸಂಘ, ಒಂಟಿ ಮಹಿಳೆಯರ ಸಂರಕ್ಷಣಾ ಸಂಘಟನೆ, ನಾಗರಿಕರು ಆಗ್ರಹಿಸಿದ್ದಾರೆ.

ಕುರೇಕುಪ್ಪ ಪುರಸಭೆಯ ಸರ್ವೇ ನಂಬರ್ 35/2ರಲ್ಲಿ 0.85 ಸೆಂಟ್ಸ್ ಖಾಲಿ ಜಾಗವನ್ನು ಕಂದಾಯ ಇಲಾಖೆ ಈಗಾಗಲೇ ಸರ್ವೇ ನಡೆಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಮೀಸಲಿಟ್ಟಿದೆ. ಜಿಪಂ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಜಾಗ ಯೋಗ್ಯವಾಗಿದೆ ಎಂದು ಒಪ್ಪಿಗೆ ಸೂಚಿಸಿದ್ದಾರೆ. ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಆದಷ್ಟು ಬೇಗನೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿ ಆರಂಭವಾಗಲಿದೆ.

-ಅರುಣ್ ಕುಮಾರ್, ಮುಖ್ಯಾಧಿಕಾರಿ, ಕುರೇಕುಪ್ಪ ಪುರಸಭೆ

ಜಿಂದಾಲ್ ಸೇರಿದಂತೆ ದೊಡ್ಡ ಕೈಗಾರಿಕೆಗಳು ಸ್ಥಾಪನೆಯಾದ ಬಳಿಕ ಈ ಭಾಗದಲ್ಲಿ ಶ್ವಾಸಕೋಶ ಮತ್ತು ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿವೆ ಎಂಬ ಆತಂಕ ಜನರಲ್ಲಿ ಮೂಡಿದೆ. ಕೆಮ್ಮು, ದಮ್ಮು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಂದ ಜನರು ಬಳಲುತ್ತಿರುವ ಸಂದರ್ಭದಲ್ಲಿ, ಸರಕಾರಿ ಆರೋಗ್ಯ ಕೇಂದ್ರ ಇಲ್ಲದಿರುವುದು ಅತ್ಯಂತ ಬೇಸರ ತರಿಸಿದೆ. ಈ ಕುರಿತು ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ. ಇನ್ನಾದರೂ ಸರಕಾರವು ಜನರ ಆರೋಗ್ಯದ ದೃಷ್ಟಿಯಿಂದ ಕುರೇಕುಪ್ಪದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತ್ವರಿತವಾಗಿ ಆರಂಭಿಸಬೇಕು.

-ಹೊನ್ನೂರು ಸ್ವಾಮಿ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಕ್ಷಣಾ ವೇದಿಕೆ, ಕುರೇಕುಪ್ಪ ಪುರಸಭೆ ಘಟಕ.

Tags

KurekuppaSandur
share
ಕೆ.ಮಹಮ್ಮದ್ ಖಾಸೀಂ
ಕೆ.ಮಹಮ್ಮದ್ ಖಾಸೀಂ
Next Story
X