Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಳೆಗಾಲದಲ್ಲಿ ಶಾಲೆ ಬಂದ್ : ಅರ್ಧಕ್ಕರ್ಧ...

ಮಳೆಗಾಲದಲ್ಲಿ ಶಾಲೆ ಬಂದ್ : ಅರ್ಧಕ್ಕರ್ಧ ಕಾಲನಿಯೇ ಖಾಲಿ!

ಎನ್.ಆರ್.ಕುಂಬಾರಎನ್.ಆರ್.ಕುಂಬಾರ12 Jun 2026 3:23 PM IST
share
ಮಳೆಗಾಲದಲ್ಲಿ ಶಾಲೆ ಬಂದ್ : ಅರ್ಧಕ್ಕರ್ಧ ಕಾಲನಿಯೇ ಖಾಲಿ!

ಸುರಪುರ: ಮಳೆಗಾಲ ಆರಂಭವಾದರೆ ನಮ್ಮ ಗೋಳು ಯಾರ ಮುಂದೆ ಹೇಳಿಕೊಳ್ಳಲಾಗದಷ್ಟು ಇದೆ. ಪ್ರತಿವರ್ಷ ಮಳೆ ನೀರಿನಿಂದ ತೊಂದರೆ ಅನುಭವಿಸುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸಿಕೊಡಿ ಎಂದು ಪಟ್ಟಣದ ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 31ರ ವಣಕಿಹಾಳದ ಸುಡುಗಾಡು ಸಿದ್ದರ ಕಾಲೋನಿಯ ನಿವಾಸಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಈ ಹಿಂದೆ ಕೆರೆ ಇದ್ದ ಜಾಗದಲ್ಲಿ ನಿರ್ಮಾಣಗೊಂಡಿರುವ ಈ ಕಾಲೋನಿಯಲ್ಲಿ ಐವತ್ತಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಮಳೆಗಾಲ ಆರಂಭವಾದರೆ ಮಳೆ ನೀರು ಮನೆಗಳೊಳಗೆ ನುಗ್ಗುವುದರಿಂದ ಪ್ರತಿವರ್ಷ ಮನೆಗಳನ್ನು ಖಾಲಿ ಮಾಡಿ ಬೇರೆಡೆ ಆಶ್ರಯ ಪಡೆಯುವ ಪರಿಸ್ಥಿತಿ ಎದುರಾಗಿದೆ.

ಈ ವರ್ಷ ಮುಂಗಾರು ಪೂರ್ವದಲ್ಲಿಯೇ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಈಗಾಗಲೇ ಮನೆಗಳಿಗೆ ನೀರು ನುಗ್ಗಿ ಕಾಲೋನಿಯಲ್ಲಿನ ಅರ್ಧದಷ್ಟು ಮನೆಗಳ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿಕೊಂಡು ಬೇರೆಡೆಗೆ ಹೋಗಿದ್ದಾರೆ.

ಶಾಲೆಗೂ ಮಳೆ ನೀರಿನ ಕಾಟ

ಕಾಲೋನಿಯ ಮಕ್ಕಳಿಗಾಗಿ ಇರುವ ಕಿರಿಯ ಪ್ರಾಥಮಿಕ ಶಾಲೆಯೊಳಗೂ ಮಳೆ ನೀರು ನುಗ್ಗಿದ್ದು, ಶಾಲೆಗೆ ರಜೆ ಘೋಷಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಶಾಲೆಗೆ ಬೀಗ ಹಾಕಿ ಬಯಲು ಪ್ರದೇಶದಲ್ಲಿ ಮಕ್ಕಳಿಗೆ ಪಾಠ ಮಾಡುವುದು ಅಥವಾ ರಜೆ ನೀಡುವುದು ಅನಿವಾರ್ಯವಾಗುತ್ತಿದೆ.

ಮೂರು ದಿನಗಳ ಹಿಂದೆ ಸುರಿದ ಮಳೆಯಿಂದ ಶಾಲೆಯೊಳಗೆ ನೀರು ತುಂಬಿಕೊಂಡ ಪರಿಣಾಮ ಮಕ್ಕಳಿಗೆ ರಜೆ ನೀಡಲಾಗಿತ್ತು. ಈ ವೇಳೆ ಮಕ್ಕಳು ಮತ್ತು ಪೋಷಕರು ಶಾಲಾ ಆವರಣದಲ್ಲೇ ನೀರಿನಲ್ಲಿ ನಿಂತು ತಮ್ಮ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಈಗಾಗಲೇ ಮನೆಗಳಲ್ಲಿ ನೀರು ನುಗ್ಗಿದ್ದು ಶಾಲೆಯ ಒಳಗೂ ನೀರು ನುಗಿದ್ದರಿಂದ ಶಾಲೆಗೆ ರಜೆ ನೀಡಲಾಗಿತ್ತು. ಈ ಮಾಹಿತಿ ತಿಳಿಯುತ್ತಿದ್ದಂತೆ ನಗರ ಸಭೆಯ ಪೌರಾಯುಕ್ತ ಬಸವರಾಜ ಟಣಕೆದಾರ ಕಾಲೋನಿಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಿ ಪರಿಹಾರ ಕಲ್ಪಿಸಿಕೊಡುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಕಾಲೋನಿಯಲ್ಲಿನ ಅನೇಕ ಮಹಿಳೆಯರು ತಮ್ಮ ಗೋಳು ತೋಡಿಕೊಂಡು, ಪ್ರತಿ ವರ್ಷ ಮಳೆ ಬಂದರೆ ಮನೆಯಲ್ಲಿ ನೀರು ನಿಲ್ಲುವುದರಿಂದ ಮಕ್ಕಳಿಗೆ ಅಡುಗೆಯನ್ನು ಮಾಡಿಕೊಡಲಾಗದೆ ಮಕ್ಕಳು ಹಸಿವಿನಿಂದ ಬಳಲುವಂತಾಗುತ್ತಿದೆ. ನಮ್ಮ ಎಂಎಲ್‌ಎ ಸಾಹೇಬರಿಗೂ ಭೇಟಿ ಮಾಡಿ ನಮಗೆ ಶಾಶ್ವತ ಪರಿಹಾರ ಮಾಡಿಕೊಡುವಂತೆ ಕೈಮುಗಿದು ವಿನಂತಿ ಮಾಡುವುದಾಗಿ ಬೇಡಿಕೊಂಡಿದ್ದಾರೆ.

ಮಳೆಗಾಲ ಆರಂಭದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಬಿದ್ದು ಅನೇಕ ಮನೆಗಳ ಜನರು ಮನೆ ಖಾಲಿ ಮಾಡಿದ್ದಾರೆ. ಮಳೆಗಾಲ ಮುಗಿಯುವವರೆಗೂ ನಮಗೆ ಗೋಳು ತಪ್ಪಿದ್ದಲ್ಲ.

-ಬಸ್ಸಪ್ಪ, ಕಾಲೋನಿ ಮುಖಂಡ

ವಣಕಿಹಾಳದ ಸುಡುಗಾಡು ಸಿದ್ದರ ಕಾಲೋನಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ತಾತ್ಕಾಲಿಕವಾಗಿ ನೀರು ಹೊರಹಾಕುವ ಕಾರ್ಯ ನಡೆಯುತ್ತಿದೆ. ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕಾಮಗಾರಿ ಕೈಗೊಂಡು ಶಾಶ್ವತ ಪರಿಹಾರ ಕಲ್ಪಿಸಲಾಗುವುದು.

-ಬಸವರಾಜ ಟಣಕೆದಾರ, ಪೌರಾಯುಕ್ತರು, ನಗರಸಭೆ ಸುರಪುರ

ಮಕ್ಕಳು, ಕುಟುಂಬ ಸಮೇತ ಮನೆ ಖಾಲಿ ಮಾಡಿಕೊಂಡು ಹೋಗುವುದು ತುಂಬಾ ಕಷ್ಟಕರ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥಮಾಡಿಕೊಂಡು ಶಾಶ್ವತ ಪರಿಹಾರ ಕಲ್ಪಿಸಬೇಕು.

-ದೊಡ್ಡ ಮರೆಪ್ಪ ಕಾಲೋನಿಯ ಹಿರಿಯ ವ್ಯಕ್ತಿ

share
ಎನ್.ಆರ್.ಕುಂಬಾರ
ಎನ್.ಆರ್.ಕುಂಬಾರ
Next Story
X