Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಿದ್ದಾಪುರ: ಮಿತಿಮೀರಿದ ಕಾಡುಪ್ರಾಣಿಗಳ...

ಸಿದ್ದಾಪುರ: ಮಿತಿಮೀರಿದ ಕಾಡುಪ್ರಾಣಿಗಳ ಹಾವಳಿ...aaa

ವಾರ್ತಾಭಾರತಿವಾರ್ತಾಭಾರತಿ9 March 2026 9:30 AM IST
share
ಸಿದ್ದಾಪುರ: ಮಿತಿಮೀರಿದ ಕಾಡುಪ್ರಾಣಿಗಳ ಹಾವಳಿ...aaa
ಕಾರ್ಮಿಕರಲ್ಲಿ ಹೆಚ್ಚಿದ ಆತಂಕ

ಸಿದ್ದಾಪುರ (ಕೊಡಗು) : ವಿರಾಜಪೇಟೆ ತಾಲೂಕು ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಹಾಗೂ ಕಾಡಾನೆಗಳ ಹಾವಳಿ ಹೆಚ್ಚಾಗಿರುವುದು ಗ್ರಾಮಸ್ಥರಲ್ಲಿ ಮತ್ತು ಕಾಫಿ ತೋಟ ಕಾರ್ಮಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ಕರಡಿಗೋಡು ಗ್ರಾಮದ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ 10ಕ್ಕೂ ಹೆಚ್ಚು ಕಾಡುಕೋಣಗಳ ಹಿಂಡು ಬೀಡು ಬಿಟ್ಟಿದ್ದು. ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ತೋಟದ ಒಳಭಾಗದಲ್ಲಿ ಹಿಂಡಾಗಿ ಸಂಚರಿಸುತ್ತಿರುವ ಕಾಡುಕೋಣಗಳು ಕಾರ್ಮಿಕರಿಗೆ ಭೀತಿ ಉಂಟು ಮಾಡಿದೆ. ಸಾಮಾನ್ಯವಾಗಿ ಮನುಷ್ಯರನ್ನು ತಪ್ಪಿಸಿಕೊಂಡು ಹೋಗುವ ಸ್ವಭಾವ ಹೊಂದಿದ ಕಾಡುಕೋಣಗಳು, ಅಲ್ಪ ಉದ್ದೀಪನಕ್ಕೂ ಆಕ್ರಮಣಕಾರಿ ವರ್ತನೆ ತೋರಿಸುವ ಸಾಧ್ಯತೆ ಇರುವುದರಿಂದ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂಜರಿಯುತ್ತಿದ್ದಾರೆ. ಮಹಿಳಾ ಕಾರ್ಮಿಕರ ಸಂಖ್ಯೆಯೂ ಹೆಚ್ಚಿರುವುದರಿಂದ ಭದ್ರತೆ ಕುರಿತ ಚಿಂತನೆ ಹೆಚ್ಚಾಗಿದೆ.

ಇದರ ನಡುವೆ ಕಾಡಾನೆಗಳ ಹಾವಳಿಯೂ ಕಡಿಮೆಯಾಗಿಲ್ಲ. ರಾತ್ರಿ ವೇಳೆ ತೋಟ ಪ್ರದೇಶಕ್ಕೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವುದಾಗಿ ರೈತರು ದೂರಿದ್ದಾರೆ. ಮನೆಗಳ ಸಮೀಪದಲ್ಲಿಯೇ ಆನೆಗಳ ಸಂಚಾರ ಕಂಡುಬಂದಿದ್ದು, ಮಕ್ಕಳು ಮತ್ತು ವೃದ್ಧರಲ್ಲಿ ಭಯ ಹೆಚ್ಚಾಗಿದೆ. ಶಾಲೆಗೆ ತೆರಳುವ ಮಕ್ಕಳನ್ನು ಪೋಷಕರು ಒಂಟಿಯಾಗಿ ಕಳುಹಿಸಲು ಹೆದರುತ್ತಿದ್ದಾರೆ. ಕಾಡಾನೆಗಳ ಹಾದಿ ಗ್ರಾಮ ದಾರಿಗಳನ್ನೇ ದಾಟುತ್ತಿರುವುದರಿಂದ ಜನರು ಗುಂಪುಗಳಾಗಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯರು ಹಾಗೂ ತೋಟದ ಮಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರೂ, ಶಾಶ್ವತ ಪರಿಹಾರ ಇನ್ನೂ ಸಿಕ್ಕಿಲ್ಲವೆಂಬ ಅಸಮಾಧಾನ ವ್ಯಕ್ತವಾಗಿದೆ. ಕಾಡಾನೆಗಳ ಹಾವಳಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ಕಾಡುಕೋಣಗಳ ಹಿಂಡು ಕೂಡ ಸೇರಿಕೊಂಡಿರುವುದು ನಮ್ಮ ಸಂಕಷ್ಟವನ್ನು ಹೆಚ್ಚಿಸಿದೆ. ರಾತ್ರಿ ಗಸ್ತು ಹೆಚ್ಚಿಸಿ, ತಕ್ಷಣ ಕಾಡಿಗಟ್ಟುವ ಕ್ರಮ ಕೈಗೊಳ್ಳ ಬೇಕು,’ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅರಣ್ಯ ಪ್ರದೇಶಗಳಲ್ಲಿ ನೀರು ಮತ್ತು ಆಹಾರದ ಕೊರತೆ, ಮಾನವ ವಾಸಸ್ಥಾನಗಳ ವಿಸ್ತರಣೆ ಹಾಗೂ ಕಾಡು ಪ್ರದೇಶಗಳ ಕುಗ್ಗುವಿಕೆ ಇಂತಹ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಅರಣ್ಯ-ಮಾನವ ಸಂಘರ್ಷ ಹೆಚ್ಚುತ್ತಿರುವುದು ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ. ಶಾಶ್ವತ ಪರಿಹಾರಕ್ಕಾಗಿ ವೈಜ್ಞಾನಿಕ ಕ್ರಮಗಳು, ವಿದ್ಯುತ್ ಬೇಲಿ, ಕಂದಕ ನಿರ್ಮಾಣ ಹಾಗೂ ನಿರಂತರ ಗಸ್ತು ಅಗತ್ಯವೆಂದು ಅಭಿಪ್ರಾಯ ವ್ಯಕ್ತವಾಗಿದೆ.

ಕರಡಿಗೋಡು ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಹಾಗೂ ಕಾಡಾನೆಗಳ ಹಾವಳಿ ಜನರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದು, ಅರಣ್ಯ ಇಲಾಖೆ ತಕ್ಷಣ ಸ್ಪಂದಿಸಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X