Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಿದ್ದಾಪುರ: ನಿರ್ವಹಣೆ ಇಲ್ಲದೆ...

ಸಿದ್ದಾಪುರ: ನಿರ್ವಹಣೆ ಇಲ್ಲದೆ ಶಿಥಿಲಗೊಂಡ ಹಳೇ ಕಟ್ಟಡ; ಕೂಡಲೇ ತೆರವು ಮಾಡಲು ಸಾರ್ವಜನಿಕರ ಒತ್ತಾಯ

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ5 July 2024 2:23 PM IST
share
ಸಿದ್ದಾಪುರ: ನಿರ್ವಹಣೆ ಇಲ್ಲದೆ ಶಿಥಿಲಗೊಂಡ ಹಳೇ ಕಟ್ಟಡ; ಕೂಡಲೇ ತೆರವು ಮಾಡಲು ಸಾರ್ವಜನಿಕರ ಒತ್ತಾಯ

ಮಡಿಕೇರಿ: ಸಿದ್ದಾಪುರ ಪಟ್ಟಣದಲ್ಲಿ ಈ ಹಿಂದೆ ಪೊಲೀಸ್ ಠಾಣೆಯಾಗಿ ಕಾರ್ಯನಿರ್ವಹಿಸಿದ್ದ ಬ್ರಿಟಿಷರ ಕಾಲದ ಕಟ್ಟಡ ಇದೀಗ ಗಿಡಗಂಟಿ ಬೆಳೆದು ಶಿಥಿಲಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕಟ್ಟಡ ತೆರವಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಪಟ್ಟಣದ ಹೃದಯ ಭಾಗದಲ್ಲಿರುವ ಈ ಕಟ್ಟಡವು ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಅಂಚೆ ಇಲಾಖೆಗೆ ಸೇರಿದೆ. ಇಲ್ಲಿರುವ ಕಟ್ಟಡವು ಬ್ರಿಟಿಷರ ಕಾಲದ್ದಾಗಿದ್ದು ಪತ್ರ ವ್ಯವಹಾರ ಟಪಾಲುಗಳು ಇಲ್ಲಿಂದಲೇ ನಡೆಯುತ್ತಿತ್ತು ಎನ್ನಲಾಗಿದೆ.

ತದನಂತರ ಕಟ್ಟಡದ ಒಂದು ಭಾಗವನ್ನು ಪೊಲೀಸ್ ಠಾಣೆಯಾಗಿ ಮಾರ್ಪಡಿಸಿ ಮತ್ತೊಂದು ಭಾಗದಲ್ಲಿ ಅಂಚೆ ಕಚೇರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಯವರ ಕಚೇರಿ ಕಾರ್ಯ ನಿರ್ವಹಿಸುತ್ತಿತ್ತು. ೨೦೦೮ರಲ್ಲಿ ಪೊಲೀಸ್ ಠಾಣೆಗೆ ನೂತನ ಕಟ್ಟಡ ನಿರ್ಮಾಣ ಗೊಂಡು ಸ್ಥಳಾಂತರ ಮಾಡಲಾಗಿದ್ದು, ಹಳೆ ಕಟ್ಟಡ ನಿರ್ವಹಣೆ ಇಲ್ಲದೆ ಪಾಳು ಬಿಡಲಾಗಿದೆ. ಇದೀಗ ಗೋಡೆಗಳಲ್ಲಿ ಗಿಡಗಳು ಬೆಳೆದು ಹೆಮ್ಮರವಾಗಿದ್ದು ಮರ ತೆರವಿಗೆ ಅರಣ್ಯ ಇಲಾಖೆಯಿಂದ ಅನುಮತಿಗೆ ಕಾಯ ಬೇಕಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇದಕ್ಕೆ ಹೊಂದಿಕೊಂಡಿರುವ ಅಂಚೆ ಕಚೇರಿಯನ್ನು ಐದು ವರ್ಷಗಳ ಹಿಂದೆ ಕಬ್ಬಿಣದ ಸರಳುಗಳ ಸಹಾಯದಿಂದ ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ. ಆದರೂ ಹೊಂದಿಕೊಂಡು ಇರುವ ಗೋಡೆಯು ಶಿಥಿಲಗೊಳ್ಳುತ್ತಿರುವುದರಿಂದ ಯಾವ ಸಂದರ್ಭದಲ್ಲಿ ಬೇಕಾದರೂ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಅಲ್ಲದೆ ಗೋಡೆಯಲ್ಲಿ ಬೆಳೆದ ಹದಿನೈದು ಅಡಿ ಎತ್ತರದ ಮರತೆರವು ಸಂದರ್ಭದಲ್ಲಿ ಹಾನಿ ಉಂಟಾಗಲಿದೆ.

ಭಾರೀ ಅನಾಹುತ ಸಂಭವಿಸುವ ಸಾಧ್ಯತೆ

ಕಟ್ಟಡಕ್ಕೆ ಹೊಂದಿಕೊಂಡು ಆಟೊರಿಕ್ಷಾ ನಿಲ್ದಾಣ ಹಾಗೂ ಗ್ರಾಮ ಪಂಚಾಯತ್ ಕಚೇರಿ, ಕರಡಿಗೋಡು ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಇದ್ದು ಗೋಡೆ ಕುಸಿದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ.

ಕಂದಾಯ, ಪೊಲೀಸ್, ಅಂಚೆ ಇಲಾಖೆಗೆ ಸೇರಿದ ಕಟ್ಟಡ ಇದಾಗಿದ್ದು, ಹಿಂದೆ ಇದೇ ಕಟ್ಟಡದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಹೊಂದಿದ್ದರು. ಈಗಾಗಲೇ ಅಂಚೆ ಇಲಾಖೆಗೆ ಸೇರಿದ ಭಾಗಗಳಿಗೆ ಕಬ್ಬಿಣ ಸರಳುಗಳು ಅಳವಡಿಸಿ, ಶೀಟ್ ಹಾಕಲಾಗಿದೆ. ಪೊಲೀಸ್ ಠಾಣೆ ಹೊಸ ಕಟ್ಟಡಕ್ಕೆ ವರ್ಗಾವಣೆ ಆದನಂತರ ಪಾಳು ಬಿಟ್ಟಿದ್ದು ಬೀಳುವ ಹಂತ ತಲುಪಿದೆ.

-ಕೆ.ಕೆ.ಚಂದ್ರಕುಮಾರ್, ಮಾಜಿ ಪ್ರಧಾನರು ಮಂಡಲ ಪಂಚಾಯತ್

ಸಿದ್ದಾಪುರ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಪಟ್ಟಣವಾಗಿದ್ದು, ವಾಹನ ದಟ್ಟಣೆಯು ಹೆಚ್ಚುತ್ತಿದೆ. ಹೃದಯ ಭಾಗದಲ್ಲಿ ಈ ಪಾಳು ಬಿದ್ದಿರುವ ಕಟ್ಟಡವನ್ನು ನೆಲಸಮ ಮಾಡಿದಲ್ಲಿ ಪಾರ್ಕಿಂಗ್ ಸಮಸ್ಯೆ ಇತ್ಯರ್ಥವಾಗಲಿದೆ. ಪಕ್ಕದಲ್ಲೆ ಆಟೊರಿಕ್ಷಾ ನಿಲ್ದಾಣವಿರುವುದರಿಂದ ಭಾರೀ ಅನಾಹುತ ಸಂಭವಿಸುವ ಮುನ್ನ ಎಚ್ಚರಿಕೆ ವಹಿಸುವ ಅಗತ್ಯವಿದೆ.

-ಕೆ.ಬಿ.ಸುರೇಶ್,ಆಟೊ ಚಾಲಕ

ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಸಂಬಂಧಪಟ್ಟ ಕಟ್ಟಡ ಮಾಲಕರಿಗೆ ನೋಟೀಸ್ ನೀಡುವಂತೆ ಗ್ರಾಮ ಪಂಚಾಯತ್ಗೆ ಸೂಚಿಸಲಾಗಿದೆ. ಸಿದ್ದಾಪುರ ಪಟ್ಟಣದಲ್ಲಿ ಕಂದಾಯ ಇಲಾಖೆಗೆ ಸೇರಿದ ಕಟ್ಟಡವು ಸುಸ್ಥಿತಿಯಲ್ಲಿದೆಯೇ ಎಂಬ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

-ಎಚ್.ಎನ್.ರಾಮಚಂದ್ರ, ತಹಶೀಲ್ದಾರ್ ವೀರಾಜಪೇಟೆ

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X