Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸೋಮಲಾಪುರ ಹಳ್ಳದಲ್ಲಿ ಹೂಳು ತೆರವು

ಸೋಮಲಾಪುರ ಹಳ್ಳದಲ್ಲಿ ಹೂಳು ತೆರವು

ಕೆ.ಮಹಮ್ಮದ್ ಖಾಸಿಂಕೆ.ಮಹಮ್ಮದ್ ಖಾಸಿಂ26 May 2026 9:10 AM IST
share
ಸೋಮಲಾಪುರ ಹಳ್ಳದಲ್ಲಿ ಹೂಳು ತೆರವು
ನಾರಿಹಳ್ಳ ಜಲಾಶಯಕ್ಕೆ ಸುಗಮವಾಗಿ ಸೇರಲಿದೆ ಮಳೆನೀರು

ಸಂಡೂರು: ಕಳೆದ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ತಾಲೂಕಿನ ಯಶವಂತನಗರ ಗ್ರಾಪಂ ವ್ಯಾಪ್ತಿಯ ಸೋಮಲಾಪುರ ಹಳ್ಳದಲ್ಲಿ ಇದೀಗ ಭಾರೀ ಪ್ರಮಾಣದ ಸ್ವಚ್ಛತಾ ಹಾಗೂ ಹೂಳು ತೆರವುಗೊಳಿಸುವ ಕಾರ್ಯ ಆರಂಭಗೊಂಡಿದೆ. ಮಳೆಗಾಲದ ಮುನ್ನವೇ ಕೂಡ್ಲಿಗಿಯ ಸಣ್ಣ ನೀರಾವರಿ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಗಂಡಿ ಮಾರಮ್ಮ ದೇವಸ್ಥಾನದಿಂದ ಗಂಡಿ ನರಸಿಂಹ ದೇವಸ್ಥಾನದವರೆಗೆ ಸುಮಾರು ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಎರಡು ಎಕ್ಸ್ಕವೇಟರ್ ಯಂತ್ರಗಳು, ಲಾರಿಗಳು ಹಾಗೂ ಸಿಬ್ಬಂದಿಯ ಸಹಾಯದಿಂದ ಹಳ್ಳದಲ್ಲಿ ವರ್ಷಗಳಿಂದ ಸಂಗ್ರಹವಾಗಿದ್ದ ಹೂಳು, ಮರದ ದಿಮ್ಮಿಗಳು, ಪೊದೆಗಳು ಮತ್ತು ಪ್ಲಾಸ್ಟಿಕ್ ಸೇರಿ ವಿವಿಧ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ. ಹಳ್ಳವನ್ನು ಮೊದಲಿನಂತೆ ಸಮರ್ಪಕವಾಗಿ ರೂಪಿಸುವ ಕೆಲಸ ನಡೆಯುತ್ತಿದೆ.

ವಾರ್ತಾಭಾರತಿ ವಿಶೇಷ ವರದಿಗೆ ಎಚ್ಚೆತ್ತ ಇಲಾಖೆ :

ನಾರಿಹಳ್ಳ ಜಲಾಶಯದ ಸ್ಥಿತಿ, ಹಳ್ಳಗಳ ದುಸ್ಥಿತಿ ಹಾಗೂ ಮಳೆಗಾಲದ ಅಪಾಯಗಳ ಕುರಿತು ಈ ಹಿಂದೆ ವಾರ್ತಾಭಾರತಿ ಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ವರದಿಯಲ್ಲಿ ಹಳ್ಳಗಳ ನಿರ್ವಹಣೆಯ ಕೊರತೆಯಿಂದ ಎದುರಾಗಬಹುದಾದ ಸಮಸ್ಯೆಗಳನ್ನು ವಿವರವಾಗಿ ಬೆಳಕು ಚೆಲ್ಲಲಾಗಿತ್ತು. ಈ ವರದಿ ಪ್ರಕಟವಾದ ನಂತರ ಎಚ್ಚೆತ್ತುಕೊಂಡ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತುರ್ತು ಕ್ರಮವಾಗಿ ಹೂಳು ತೆರವು ಹಾಗೂ ಸ್ವಚ್ಛತಾ ಕಾರ್ಯ ಆರಂಭಿಸಿದ್ದಾರೆ. ಸ್ಥಳೀಯರು ಪತ್ರಿಕೆಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಲಾಶಯಕ್ಕೆ ನೀರು ಹರಿವಿಗೆ ಅನುಕೂಲ :

ಸೋಮಲಾಪುರ ಹಳ್ಳದ ಮೂಲಕ ಮಳೆ ನೀರು ನಾರಿಹಳ್ಳ ಜಲಾಶಯ ಸೇರುತ್ತದೆ. ಹೂಳು ಮತ್ತು ತ್ಯಾಜ್ಯ ತೆರವುಗೊಳಿಸಿದ್ದರಿಂದ ನೀರು ವೇಗವಾಗಿ ಹಾಗೂ ಸುಗಮವಾಗಿ ಹರಿಯುವ ನಿರೀಕ್ಷೆ ಮೂಡಿದೆ. ಇದರಿಂದ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಲಿದ್ದು, ಮಳೆಗಾಲದಲ್ಲಿ ನೀರು ರಸ್ತೆಗೆ ಬರುವ ಸಮಸ್ಯೆ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾರಿಹಳ್ಳ ಜಲಾಶಯಕ್ಕೆ ಸರಾಗವಾಗಿ ನೀರು ಹರಿಯವಂತೆ ಮಾಡಲು ಸುಮಾರು 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರು ಕೂಡ ಹಳ್ಳಗಳಲ್ಲಿ ತ್ಯಾಜ್ಯ ಹಾಕದೆ ಸಹಕರಿಸಿದರೆ ನೀರಿನ ಹರಿವು ಸುಗಮವಾಗುತ್ತದೆ.

-ಶಬ್ಬೀರ್, ಜೆಇ, ಸಣ್ಣ ನೀರಾವರಿ ಇಲಾಖೆ ಕೂಡ್ಲಿಗಿ ಉಪವಿಭಾಗ

ಕಳೆದ ಹಲವು ವರ್ಷಗಳಿಂದ ಮಳೆ ಬಂದಾಗ ಹಳ್ಳದ ನೀರು ರಸ್ತೆಯ ಮೇಲೆ ಹರಿದು ಸಾರ್ವಜನಿಕರು ತುಂಬಾ ಸಂಕಷ್ಟ ಅನುಭವಿಸುತ್ತಿದ್ದರು. ಇದೀಗ ಸಣ್ಣ ನೀರಾವರಿ ಇಲಾಖೆ ಮಳೆಗಾಲಕ್ಕೂ ಮುಂಚಿತವಾಗಿಯೇ ಹೂಳು ಮತ್ತು ತ್ಯಾಜ್ಯ ತೆರವುಗೊಳಿಸುವ ಕಾರ್ಯ ಕೈಗೊಂಡಿರುವುದು ಸಂತಸ ತಂದಿದೆ.

-ಮಾರಣ್ಣ, ಸೋಮಲಾಪುರ ನಿವಾಸಿ

Tags

Somalapura
share
ಕೆ.ಮಹಮ್ಮದ್ ಖಾಸಿಂ
ಕೆ.ಮಹಮ್ಮದ್ ಖಾಸಿಂ
Next Story
X