Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಸ ವಿಲೇವಾರಿ ಘಟಕದಿಂದ ರೋಗಗಳಿಗೆ...

ಕಸ ವಿಲೇವಾರಿ ಘಟಕದಿಂದ ರೋಗಗಳಿಗೆ ತುತ್ತಾಗುತ್ತಿರುವ ಸಿಂಧನಕೇರಾ ಗ್ರಾಮಸ್ಥರು

ಚಿತ್ರಶೇನ ಫುಲೆಚಿತ್ರಶೇನ ಫುಲೆ4 Jun 2025 1:55 PM IST
share
ಕಸ ವಿಲೇವಾರಿ ಘಟಕದಿಂದ ರೋಗಗಳಿಗೆ ತುತ್ತಾಗುತ್ತಿರುವ ಸಿಂಧನಕೇರಾ ಗ್ರಾಮಸ್ಥರು

ಬೀದರ್ : ಹುಮನಾಬಾದ್ ತಾಲೂಕಿನ ಸಿಂಧಕೇರಾ ಗ್ರಾಮದ ಸಮೀಪ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗಿದ್ದು, ಇದರಿಂದಾಗಿ ಸಿಂಧಕೇರಾ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ರೋಗಗಳು ತಗಲಿ ಪರಿತಪಿಸುವಂತಾಗಿದೆ ಎಂಬುದು ಸ್ಥಳೀಯ ನಿವಾಸಿಗಳ ಆರೋಪವಾಗಿದೆ.

ಈ ಸ್ಥಳದಲ್ಲಿ ಸುಮಾರು 15 ರಿಂದ 20 ವರ್ಷಗಳಿಂದ ಕಸ ವಿಲೇವಾರಿ ಮಾಡಲಾಗುತ್ತಿದೆ. ಹುಮನಾಬಾದ್ ಪಟ್ಟಣದ ಸಂಪೂರ್ಣ ಕಸವನ್ನು ಈ ಸ್ಥಳಕ್ಕೆ ತಂದು ಸುರಿಯಲಾಗುತ್ತಿದೆ. ಇದು ಸಿಂಧನಕೇರಾ ಗ್ರಾಮದ ಹತ್ತಿರವೇ ಇರುವ ಕಾರಣದಿಂದಾಗಿ ಗ್ರಾಮಸ್ಥರು ಆನಾರೋಗ್ಯದಿಂದ ನರಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಬದುಕುತ್ತಿದ್ದಾರೆ.

ಕಸ ವಿಲೇವಾರಿ ಘಟಕದಲ್ಲಿ ಕಸ ಪುಡಿ ಮಾಡುವ ಯಂತ್ರಗಳಿದ್ದರೂ ಕೂಡ ಅವುಗಳು ಉಪಯೋಗಕ್ಕೆ ಬಾರದಂತಾಗಿವೆ. ಯಾವಾಗಲು ಆ ಯಂತ್ರಗಳು ಬಂದ್ ಇರುತ್ತವೆ. ಅಲ್ಲಿ ಕೃಷಿ ಹೊಂಡ, ಫಿಲ್ಟರ್ ಮಷಿನ್, ಗೊಬ್ಬರ ಶೇಖರಿಸಿಡುವ ಗೋದಾಮು ಹೀಗೆ ಎಲ್ಲ ವ್ಯವಸ್ಥೆ ಇದ್ದರೂ ಕೂಡ ಯಾವುದೇ ಉಪಯೋಗಕ್ಕೆ ಬರುತ್ತಿಲ್ಲ. ಕಸವನ್ನು ಅಲ್ಲಿಯೇ ಸುಡಲಾಗುತ್ತದೆ. ಹಾಗೆಯೇ ಅಪರಿಚಿತ ವ್ಯಕ್ತಿಗಳು ಮೃತಪಟ್ಟರೆ ಅದೇ ಜಾಗದಲ್ಲಿ ತಂದು ಸುಡಲಾಗುತ್ತದೆ. ಅದೇ ರೀತಿ ಯಾವುದೇ ಪ್ರಾಣಿ, ಪಕ್ಷಿಗಳು ಸತ್ತರೂ ಕೂಡ ಅದೇ ಸ್ಥಳಕ್ಕೆ ತಂದು ಬಿಸಾಡಿ ಹೋಗಲಾಗುತ್ತದೆ. ಇದರಿಂದಾಗಿ ಪರಿಸರದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಬಹುದು.

ಆ ಗ್ರಾಮದಲ್ಲಿ ಕಸದ ದುರ್ವಾಸನೆ ಹೊಡೆಯುತ್ತಿರುತ್ತದೆ. ಸುಮಾರು ವರ್ಷಗಳಿಂದ ಅದನ್ನೇ ರೂಢಿಸಿಕೊಂಡಿರುವ ಗ್ರಾಮಸ್ಥರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಕಸ ವಿಲೇವಾರಿ ಘಟಕದಿಂದ ಪರಿಸರದ ಮೇಲೂ ಕೂಡ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಬಹುದು. ಈ ಬಗ್ಗೆ ಗ್ರಾಮಸ್ಥರು ಅದೆಷ್ಟು ಭಾರಿ ಪ್ರತಿಭಟನೆ ಮಾಡಿದರೂ, ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ. ಈ ಕಸ ವಿಲೇವಾರಿ ಘಟಕ ಪರಿಣಾಮದಿಂದ ಆನೆಕಾಲು, ಡೆಂಗಿ, ಟಿಬಿ ಹಾಗೂ ಇತರ ರೋಗಗಳಿಂದ ಇಲ್ಲಿನ ಜನ ತತ್ತರಿಸಿದ್ದಾರೆ. 10 ವರ್ಷಗಳ ಅವಧಿಯಲ್ಲಿ ಸುಮಾರು 23 ಆನೆಕಾಲು ರೋಗಗಳು ಈ ಊರಲ್ಲಿ ಪತ್ತೆಯಾಗಿವೆ. ಈ ಎಲ್ಲ ಸಮಸ್ಯೆಗಳಿಂದ ಮಕ್ಕಳ ಬೆಳವಣಿಗೆ ಕೂಡ ಕೂಗ್ಗುತ್ತಿದೆ ಎಂದು ಗ್ರಾಮದ ನಿವಾಸಿಗಳು ಹೇಳುತ್ತಿದ್ದಾರೆ.

ಈ ಕಸ ವಿಲೇವಾರಿ ಘಟಕವು ಸಿಂಧನಕೇರಾ ಗ್ರಾಮ ಬಿಟ್ಟು ಜನ ರಹಿತ ಪ್ರದೇಶದಲ್ಲಿ ಸ್ಥಳಾಂತರ ಮಾಡಿದರೆ, ಆ ಗ್ರಾಮಸ್ಥರು ಆರೋಗ್ಯವಂತರಾಗಿ ನೆಮ್ಮದಿಯ ಜೀವನ ಸಾಗಿಸಬಹುದು ಎಂದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ.

ಕಸ ವಿಲೇವಾರಿ ಘಟಕವನ್ನು ಸಿಂಧನಕೇರಾ ಗ್ರಾಮ ಬಿಟ್ಟು ಜನ ರಹಿತ ಪ್ರದೇಶದಲ್ಲಿ ಸ್ಥಳಾಂತರ ಮಾಡಿಎಂದು ಗ್ರಾಮಸ್ಥರು ಪತ್ರ ನೀಡಿದ್ದಾರೆ. ನಾವು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿದ್ದೇವೆ. ಆದರೆ ಇದರ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ಯಾವುದೇ ನಿರ್ದೇಶನ ಬಂದಿಲ್ಲ. ಜಿಲ್ಲಾಧಿಕಾರಿ ಕಚೇರಿಯಿಂದ ನಿರ್ದೇಶನ ಬಂದರೆ ಅದರ ಪ್ರಕಾರ ನಾವು ಕೆಲಸಕ್ಕೆ ಮುಂದುವರಿಯುತ್ತೇವೆ.

-ಮೀನಾಕುಮಾರಿ, ಮುಖ್ಯ ಅಧಿಕಾರಿ, ಟಿಎಂಸಿ ಹುಮನಾಬಾದ್

ಕಸ ವಿಲೇವಾರಿ ಘಟಕದಲ್ಲಿ ಬಿಸಾಡಿರುವ ಸತ್ತ ಪ್ರಾಣಿ, ಪಕ್ಷಿಗಳ ಮಾಂಸವನ್ನು ನಮ್ಮ ಊರಿನ ನಾಯಿಗಳು ಊರಲ್ಲಿ ಎಳೆದು ತರುತ್ತವೆ. ನಮ್ಮ ಊರಿನ ಜನ ರೋಗಗಳಿಂದ ಬೇಸತ್ತು ಹೋಗಿದ್ದಾರೆ. ಈ ಘಟಕವನ್ನು ಸ್ಥಳಾಂತರಿಸಲು ಬೀದರ್ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಉಪಯೋಗವಾಗಲಿಲ್ಲ. ಇದು ಸ್ಥಳಾಂತರ ಮಾಡದಿದ್ದರೆ ನೀರಿನ ಟ್ಯಾಂಕಲ್ಲಿ ವಿಷ ಹಾಕಿ ಕೊಡಿ, ಗ್ರಾಮಸ್ಥರೆಲ್ಲರೂ ಒಂದೇ ಸಮಯಕ್ಕೆ ಸಾಯುತ್ತೇವೆ. ನಂತರ ತಾವು ನೆಮ್ಮದಿಯಾಗಿ ಅಧಿಕಾರ ನಡೆಸಿ.

-ಯುವರಾಜ್ ಐಹೊಳ್ಳಿ, ಸಿಂಧನಕೇರಾ ಗ್ರಾಮಸ್ಥ

ತ್ಯಾಜ್ಯ ವಿಲೇವಾರಿ ಘಟಕವು ಸಿಂಧನಕೇರಾ ಗ್ರಾಮದ ಹತ್ತಿರವೇ ಸ್ಥಾಪಿಸಿ 15-20 ವರ್ಷಗಳಾಗಿವೆ. ಅಲ್ಲಿ ಯಾವುದೇ ರೀತಿಯ ಸ್ವಚ್ಛತೆ ಕಾಪಾಡುತ್ತಿಲ್ಲ. ವಾಯು ಮಾಲಿನ್ಯದಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗ್ರಾಮದಲ್ಲಿ ಸುಮಾರು ರೋಗಗಳು ಹರಡುತ್ತಿವೆ. ಹುಟ್ಟುವ ಮಕ್ಕಳು ಕೂಡ ಅಂಗವಿಕಲರಾಗಿ ಹುಟ್ಟುತ್ತಿದ್ದಾರೆ. ಇದರ ವಿರುದ್ಧ ಎಷ್ಟೇ ಸಲ ಧ್ವನಿ ಎತ್ತಿದರೂ ಕೂಡ, ಈ ಗ್ರಾಮಸ್ಥರಿಗೆ ಅನ್ಯಾಯ ಮಾಡಲಾಗುತ್ತಿದೆ. ಇದರ ಬಗ್ಗೆ ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇಡೀ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಪುರಸಭೆ ಎದುರು ಧರಣಿ ಮಾಡಲಾಗುತ್ತದೆ.

-ಭೀಮರೆಡ್ಡಿ, ಸಾಮಾಜಿಕ ಕಾರ್ಯಕರ್ತ, ಸಿಂಧನಕೇರಾ

share
ಚಿತ್ರಶೇನ ಫುಲೆ
ಚಿತ್ರಶೇನ ಫುಲೆ
Next Story
X