Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚರಂಡಿ ನೀರಿನಲ್ಲೇ ರಸ್ತೆ ದಾಟುವ...

ಚರಂಡಿ ನೀರಿನಲ್ಲೇ ರಸ್ತೆ ದಾಟುವ ವಿದ್ಯಾರ್ಥಿಗಳು

ಭೀಮರಾಯ ಕುಡ್ಡಳ್ಳಿ ಕಾಳಗಿಭೀಮರಾಯ ಕುಡ್ಡಳ್ಳಿ ಕಾಳಗಿ13 Jan 2026 1:04 PM IST
share
ಚರಂಡಿ ನೀರಿನಲ್ಲೇ ರಸ್ತೆ ದಾಟುವ ವಿದ್ಯಾರ್ಥಿಗಳು

ಭೀಮರಾಯ ಕುಡ್ಡಳ್ಳಿ ಕಾಳಗಿ

ಕಾಳಗಿ: ತಾಲೂಕಿನ ಕಂದಗೂಳ ಗ್ರಾಮದಲ್ಲಿ ಶಾಲೆ ಸ್ಥಾಪನೆಯಾಗಿ ದಶಕಗಳೇ ಕಳೆದರೂ ಮಕ್ಕಳ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿಲ್ಲ. ಇಲ್ಲಿನ ಸರಕಾರಿ ಶಾಲೆಗೆ ನಾಲ್ಕು ನೂರಕ್ಕೂ ಹೆಚ್ಚು ಮಕ್ಕಳು ಚರಂಡಿಯಲ್ಲಿ ನಡೆದುಕೊಂಡೇ ಹೋಗುವ ಪರಿಸ್ಥಿತಿ ಮುಂದುವರಿದಿದೆ. ಶಾಲೆಯೊಳಗೆ ಕಾಲಿಡಬೇಕು ಎಂದರೆ ಚರಂಡಿ ನೀರಿನಲ್ಲಿಯೇ ನಡೆದುಕೊಂಡು ಸಾಗಬೇಕಾದ ದುಸ್ಥಿತಿ ಮಕ್ಕಳಿಗೆ ಬಂದೊದಗಿದೆ. ಇಷ್ಟಾದರೂ ಯಾವೊಬ್ಬ ಅಧಿಕಾರಿಗಳು ಇತ್ತ ಗಮನ ಹರಿಸದಿರುವುದು ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ.

ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾಗಿರುವ ಕಂದಗೂಳದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇದೆ. ಇಲ್ಲಿಗೆ ಪಕ್ಕದ ಅರಣಕಲ್, ಹುಳಗೇರಾ, ಕಂದಗೂಳ ಗ್ರಾಮಗಳಿಂದ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ಬರುತ್ತಾರೆ. ಅವರು ಕಲಿಯಲು ಶಾಲೆಗೆ ಆಗಮಿಸುವ ರೀತಿ ಮಾತ್ರ ಚರಂಡಿ ನೀರಿನಲ್ಲಿ ನಡೆದುಕೊಂಡು ಬರುವ ಸ್ಥಿತಿ.

ಸರಕಾರವು ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಅವರಿಗೆ ಸುಸಜ್ಜಿತ ಶಾಲೆ, ಬೋಧಕ ಸಿಬ್ಬಂದಿ, ಪಠ್ಯಪುಸ್ತಕ, ಸಮವಸ್ತ್ರ ಹೀಗೆ ಹಲವು ಸೌಲಭ್ಯ ನೀಡಿ ಪ್ರೋತ್ಸಾಹ ನೀಡುತ್ತಿದೆ. ಆದರೆ, ಮೂಲ ಸೌಲಭ್ಯ ನೀಡಬೇಕಾದ ಶಿಕ್ಷಣ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಹಾಗೂ ಚುನಾಯಿತ ಜನಪ್ರತಿನಿಧಿಗಳು, ಮುಖಂಡರ ನಿರ್ಲಕ್ಷ್ಯದಿಂದಾಗಿ ಮಕ್ಕಳು ದಿನಾಲೂ ಚರಂಡಿ ನೀರಿನಲ್ಲಿ ಹೋಗಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ತಮ್ಮ ಮಕ್ಕಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಾರೆನ್ನುವ ಭೀತಿ ಪಾಲಕ, ಪೋಷಕರಿಗೆ ಉಂಟಾಗಿದೆ.

ಗ್ರಾಮದಿಂದ ಶಾಲೆಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಇದಾಗಿದೆ. ಈ ಸಿಮೆಂಟ್ ರಸ್ತೆಯು ತಗ್ಗು ಪ್ರದೇಶದಲ್ಲಿ ನಿರ್ಮಾಣ ಮಾಡಿರುವುದರಿಂದ ಚರಂಡಿ ನೀರೆಲ್ಲ ರಸ್ತೆಯ ಮೇಲೆ ನಿಂತು ಪಾಚಿಗಟ್ಟಿ ಕೆರೆಯಂತೆ ಭಾಸವಾಗುತ್ತಿದೆ. ಈ ರಸ್ತೆಯಲ್ಲಿ ಸಂಚರಿಸುವುದು ಮಕ್ಕಳಿಗೆ ಪ್ರತಿನಿತ್ಯ ಸಂಕಷ್ಟ ಎನಿಸುತ್ತದೆ. ಪ್ರತಿದಿನ ಒಬ್ಬರಿಲ್ಲೊಬ್ಬರು ವಿದ್ಯಾರ್ಥಿಗಳು ಕಾಲು ಜಾರಿ ಚರಂಡಿ ನೀರಿನಲ್ಲಿ ಬೀಳುವುದು ಮತ್ತು ಕಾಲುಗಳಿಗೆ ಚರಂಡಿ ನೀರು ತಾಗಿ ಸೋಂಕು ತಗುಲುವುದು ಸಾಮಾನ್ಯವಾಗಿದೆ. ಪಾಲಕರು ಮಕ್ಕಳ ಆರೋಗ್ಯದ ದುಷ್ಪರಿಣಾಮ ಕುರಿತು ಆತಂಕ ಎದುರಿಸುತ್ತಿದ್ದಾರೆ. ಆದಷ್ಟು ಬೇಗನೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯತ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದಾಗಿ ಮಕ್ಕಳ ಪಾಲಕರಾದ ಮಲ್ಲಿನಾಥ ಬಾದನ್, ವೀರಣ್ಣ ವಡ್ಡಿ, ಅಶೋಕುಮಾರ ನಾರಂಜಿ, ಪ್ರಭು ರಾಚಂಟ್ಟಿ, ಗುರುನಾಥ ಜಡಗಿ, ಉದಯಕುಮಾರ್ ಸ್ವಾಮಿ, ಮಂಜುನಾಥ ಜಡಗಿ, ಅನಿಲಕುಮಾರ ಕೇಶಟ್ಟಿ ಎಚ್ಚರಿಸಿದ್ದಾರೆ.

ಕೊಳಚೆ ಚರಂಡಿ ಇರುವುದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವುದೋ ಅಥವಾ ಬೇಡವೋ ಎನ್ನುವುದು ತಿಳಿಯುತ್ತಿಲ್ಲ. ಇದರ ಬಗ್ಗೆ ಸಾಕಷ್ಟು ಬಾರಿ ಗ್ರಾಮ ಪಂಚಾಯತಿ ಗಮನಕ್ಕೆ ತಂದರೂ ಕೂಡ ಯಾವುದೇ ರೀತಿ ಪ್ರಯೋಜನವಾಗಿಲ್ಲ.

<ಚನ್ನಮ್ಮ ವಜ್ರಗಾಂವ್, ಸ್ಥಳೀಯ ನಿವಾಸಿ

ಚರಂಡಿ, ಶೌಚಾಲಯದ ನೀರು ಅಲ್ಲದೆ ಮಳೆ ಬಂದಾಗ ಹೊಲಗಳಲ್ಲಿನ ನೀರು ಬಂದು ನಿಲ್ಲುತ್ತಿರುವುದರಿಂದ ಪ್ರತಿನಿತ್ಯ ಮಕ್ಕಳಿಗೆ ತೊಂದರೆ ಆಗುತ್ತಿದೆ. ಈ ಸಮಸ್ಯೆಯ ಬಗೆಹರಿಸುವಂತೆ ಒತ್ತಾಯಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ.

<ಉದಯಕುಮಾರ್ ಮಠಪತಿ, ಎಸ್ಡಿಎಂಸಿ ಅಧ್ಯಕ್ಷ

ದಿನಾಲೂ ಶಾಲೆಗೆ ಚರಂಡಿ ನೀರಿನಲ್ಲೇ ನಡೆದುಕೊಂಡು ಹೋಗಬೇಕು. ಎಷ್ಟೋ ಸಲ ಚರಂಡಿ ನೀರಿನಲ್ಲಿ ಬಿದ್ದು ಮೈಯೆಲ್ಲ ಕೊಳೆ ಮಾಡಿಕೊಂಡಿದ್ದೇವೆ. ಹಾಗೇ ಇದರಿಂದಾಗಿ ಹಲವು ಬಾರಿ ಶಾಲೆಗೂ ಹೋಗಿಲ್ಲ.

<ದಾನೇಶ್ವರಿ, ವಿದ್ಯಾರ್ಥಿನಿ

share
ಭೀಮರಾಯ ಕುಡ್ಡಳ್ಳಿ ಕಾಳಗಿ
ಭೀಮರಾಯ ಕುಡ್ಡಳ್ಳಿ ಕಾಳಗಿ
Next Story
X