Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸುಪ್ರೀಂ ತೀರ್ಪು ಮತ್ತು Creamy Layer...

ಸುಪ್ರೀಂ ತೀರ್ಪು ಮತ್ತು Creamy Layer ಗೊಂದಲ

ಶಿವಸುಂದರ್ಶಿವಸುಂದರ್1 Aug 2024 4:46 PM IST
share
ಸುಪ್ರೀಂ ತೀರ್ಪು ಮತ್ತು Creamy Layer ಗೊಂದಲ

ಒಳ ಮೀಸಲಾತಿಯ ಅಗತ್ಯದ ಬಗ್ಗೆ ಮತ್ತು ಅದನ್ನು ಒದಗಿಸಲು ರಾಜ್ಯಗಳಿಗಿರುವ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ 6-1 ಬಹುಮತದಲ್ಲಿ ಒಳಮೀಸಲಾತಿಯ ಪರವಾಗಿ ತೀರ್ಪು ಕೊಟ್ಟಿರುವುದು ಸರಿಯಷ್ಟೆ.

ತೀರ್ಪಿನ ಸಂಪೂರ್ಣ ಪ್ರತಿ ಈ ವೆಬ್ ವಿಳಾಸದಲ್ಲಿ ಲಭ್ಯವಿದೆ:

https://api.sci.gov.in/supremecourt/2010/25536/25536_2010_1_1501_54462_Judgement_01-Aug-2024.pdf

ತೀರ್ಪು ಸಾರದಲ್ಲಿ ಸಾಮಾಜಿಕ ನ್ಯಾಯದ ಕಡೆಗೆ ಒಂದು ಪೂರಕ ಹೆಜ್ಜೆಯೆಯನ್ನು ಇಟ್ಟಿದ್ದರೂ ಕೆಲವು ಗೊಂದಲಗಳನ್ನು ಹುಟ್ಟಿಸಿದೆ. ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಮೀಸಲಾತಿಯ ಒಳಗೆ Creamy Layer ಸಿದ್ಧಾಂತ ಅಳವಡಿಸಬೇಕೆಂಬ ಬಗ್ಗೆ ಜಸ್ಟಿಸ್ ಮಿತ್ತಲ್ ಅವರ ತೀರ್ಪಿನ ಅಭಿಪ್ರಾಯ ಒಂದಷ್ಟು ಕಳವಳವನ್ನು ಹುಟ್ಟಿಸಿದೆ.

ಈ ಪ್ರಕರಣದಲ್ಲಿ ಒಟ್ಟು ಆರು ನ್ಯಾಯಾಧೀಶರು ಪ್ರತ್ಯೇಕ ತೀರ್ಪುಗಳನ್ನು ನೀಡಿದ್ದಾರೆ. ಇದರಲ್ಲಿ ಆರು ನ್ಯಾಯಾಧೀಶರು ಸಾರದಲ್ಲಿ ಒಳಮೀಸಲಾತಿಯ ವರ್ಗೀಕರಣವನ್ನು ಎತ್ತಿ ಹಿಡಿದಿದ್ದಾರೆ. ಮತ್ತು ಜಸ್ಟಿಸ್ ಬೇಲಾ ತ್ರಿವೇದಿ ಮಾತ್ರ ಅದನ್ನು ವಿರೋಧಿಸಿದ್ದಾರೆ.

ಒಳಮೀಸಲಾತಿಯನ್ನು ಎತ್ತಿ ಹಿಡಿಡಿರುವ ಮುಖ್ಯ ನ್ಯಾಯಾಧೀಶರಾದ ನ್ಯಾ. ಚಂದ್ರಚೂಡ್ ಮಾತು ನ್ಯಾ. ಮನೋಜ್ ಮಿಶ್ರಾ ರವರ ಜಂಟಿ ತೀರ್ಪಿನಲ್ಲಿ Creamy Layer ಬಗ್ಗೆ ಯಾವ ಅಭಿಪ್ರಾಯವೂ ಇಲ್ಲ. ಆದೇಶವೂ ಇಲ್ಲ.

ಜಸ್ಟಿಸ್ ಗವಾಯಿ ಮತ್ತು Creamy Layer

ಪೀಠದ ಮತ್ತೊಬ್ಬ ಹಿರಿಯ ನ್ಯಾಯಾಧೀಶ ಜಸ್ಟಿಸ್ ಗವಾಯಿ ಅವರ ತೀರ್ಪಿನಲ್ಲಿ ಮಾತ್ರ: "ಒಳ ಮೀಸಲಾತಿ ಸಾರ್ಥಕವಾಗಬೇಕೆಂದಿದ್ದರೆ Creamy Layer ಮಾನದಂಡಗಳನ್ನು ಪರಿಶಿಷ್ಟ ಜಾತಿಗಳ ಮೀಸಲಾತಿಗೂ ಅನ್ವಯಿಸಬೇಕು...ಮತ್ತು

viii) that the criteria for exclusion of the creamy layer from the Scheduled Castes and Scheduled Tribes for the purpose of affirmative action could be different from the criteria as applicable to the Other Backward Classes.

ಅಂದರೆ, ಪರಿಶಿಷ್ಟ ಜಾತಿಗಳಿಗೆ ಅನ್ವಯವಾಗುವ Creamy Layer ಮಾನದಂಡ OBC ಗಳಿಗೆ ಅನ್ವಯವಾಗುವ ಮಾನದಂಡಗಳಿಗಿಂತ ಭಿನ್ನವಾಗಿರಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹಾಗೆಯೇ ಒಳ ಮೀಸಲಾತಿಯೂ ಅಷ್ಟೂ ಪರಿಶಿಷ್ಟ ಮೀಸಲಾತಿಯ ಪ್ರಮಾಣಕ್ಕೆ ಶೇ. 100 ಅನ್ವಯವಾಗಬಾರದು ಎಂದು ಹೇಳಿದ್ದಾರೆ.

ಇನ್ನುಳಿದಂತೆ ಮುಖ್ಯ ನ್ಯಾಯಮೂರ್ತಿಯವರ ತೀರ್ಪಿಗೆ ಸಹಮತ ವ್ಯಕ್ತಪಡಿಸಿರುವ ಜಸ್ಟಿಸ್ ವಿಕ್ರಮನಾಥ್ ಮತ್ತು ಜಸ್ಟಿಸ್ SC ಶರ್ಮ ಅವರು Creamy Layer ವಿಷ್ಯದಲ್ಲಿ ಜಸ್ಟಿಸ್ ಗವಾಯಿ ಅವರ ಜೊತೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಶೇ. 100 ಒಳಮೀಸಲಾತಿ ಇರಬಾರದು ಎಂಬ ಅಭಿಪ್ರಾಯಕ್ಕಲ್ಲ. ಒಳಮೀಸಲಾತಿ ಪರ ತೀರ್ಪನ್ನು ಅನಿವಾರ್ಯ ಹಾಗೂ ಪರ್ಯಾಯ ನೆಲೆಗಳಿಲ್ಲ ಎಂಬ ಕಾರಣಕ್ಕೆ ಸಮರ್ಥಿಸಿರುವ ಜಸ್ಟಿಸ್ ಮಿತ್ತಲ್ ಮಾತ್ರ ಪರಿಶಿಷ್ಟರ ಮೀಸಲಾತಿಯನ್ನು ಒಂದು ಜನರೇಷನ್ ಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಹೇಳಿದ್ದಾರೆ.

ಹೀಗೆ ಈಗ ಒಳಮೀಸಲಾತಿ ಪರ ಇರುವ ಬಹಮತದ ನ್ಯಾಯಾಧೀಶರುಗಳಲ್ಲಿ ಮುಖ್ಯ ನ್ಯಾಯಾಧೀಶರು ಮತ್ತು ನ್ಯಾ. ಮನೋಜ್ ಮಿಶ್ರಾ ಅವರ ತೀರ್ಪಿನಲ್ಲಿ Creamy Layer ಉಲ್ಲೇಖವಿಲ್ಲ.

ಪರಿಶಿಷ್ಟರ ಮೀಸಲಾತಿಯಲ್ಲೂ Cremy Layer ಅನ್ವಯಿಸಬೇಕೆಂಬ ಜಸ್ಟಿಸ್ ಗವಾಯಿ, ಜಸ್ಟಿಸ್ ವಿಕ್ರಂ ನಾಥ್ ಮತ್ತು ಜಸ್ಟಿಸ್ SC ಶರ್ಮ ಪರಿಶಿಷ್ಟರ Creamy Layer ಮಾನದಂಡ OBC ಗಳಿಗಿಂತ ಭಿನ್ನವಾಗಿರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ತೀರ್ಪು ಅನುಷ್ಠಾನಾದ ಭಾಗದಲ್ಲಿ Creamy Layer ಬಗ್ಗೆ ಮೂರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವುದರಿಂದ ಗೊಂದಲಕ್ಕೀಡು ಮಾಡಿದೆ.

ಹೀಗಾಗಿ ಇದರ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಅಹವಾಲುದಾರರು ನ್ಯಾಯಾಲಯದಿಂದ ಸ್ಪಷ್ಟೀಕರಣವನ್ನು ಕೇಳುವ ಅಗತ್ಯವಿದೆ ಎಂದು ನನಗೆ ಅನಿಸುತ್ತದೆ.

-ಶಿವಸುಂದರ್

share
ಶಿವಸುಂದರ್
ಶಿವಸುಂದರ್
Next Story
X