Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ...

ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ

ಪಿ.ಡಿ.ಟಿ. ಆಚಾರಿಪಿ.ಡಿ.ಟಿ. ಆಚಾರಿಕನ್ನಡಕ್ಕೆ: ನಾ. ದಿವಾಕರಕನ್ನಡಕ್ಕೆ: ನಾ. ದಿವಾಕರ24 July 2025 12:44 PM IST
share
ಚುನಾವಣಾ ಆಯೋಗಕ್ಕೆ ಅನಿರ್ಬಂಧಿತ ಅಧಿಕಾರ ಇರುವುದಿಲ್ಲ
ಚುನಾವಣಾ ನೋಂದಣಿ ಅಧಿಕಾರಿಗಳು, ಮತದಾರರು ತಮ್ಮ ಪೌರತ್ವವನ್ನು ನಿರೂಪಿಸುವ ಸಲುವಾಗಿ, ತಪ್ಪಾದ ದಾಖಲೆಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕಾಗಿ ಅರ್ಜಿಯನ್ನು ತಿರಸ್ಕರಿಸಲಾಗುವುದಿಲ್ಲ. ಮತದಾರರ ನೋಂದಣಿಯ ನಿಯಮ 8ರ ಅನುಸಾರ, ಪ್ರಜೆಗಳು ತಮ್ಮ ಗರಿಷ್ಠ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾಹಿತಿಯನ್ನು ಒದಗಿಸಬಹುದಾಗಿದೆ. ಈ ಶಾಸನಬದ್ಧ ಷರತ್ತನ್ನು ಚುನಾವಣಾ ಆಯೋಗ ನಿರ್ಲಕ್ಷಿಸಲಾಗುವುದಿಲ್ಲ.

ಭಾರತದ ಚುನಾವಣಾ ಆಯೋಗವು (ಇಸಿಐ), ನವೆಂಬರ್‌ನಲ್ಲಿ ಚುನಾವಣೆಗಳನ್ನು ಎದುರಿಸಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಸಲುವಾಗಿ ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (Special Intensive Revision)ಯ ಕಾರ್ಯಕ್ಕೆ ಚಾಲನೆ ನೀಡಿದೆ. ವಿರೋಧ ಪಕ್ಷಗಳು ಈ ಎಸ್‌ಐಆರ್ ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಈ ಪ್ರಕ್ರಿಯೆಯು ಭಾರತದ ಪ್ರಜೆಗಳಲ್ಲ ಎಂಬ ಕಾರಣ ಒಡ್ಡಿ ಬಿಹಾರದ ಸಾವಿರಾರು ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಆರೋಪಿಸುತ್ತಿವೆ. ಚುನಾವಣಾ ಆಯೋಗವು ಈ ಆರೋಪವನ್ನು ನಿರಾಕರಿಸಿದ್ದು ತನ್ನ ಪರಿಷ್ಕರಣೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಏತನ್ಮಧ್ಯೆ ಆಯೋಗದ ಈ ಆದೇಶವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅನೇಕ ಅರ್ಜಿಗಳನ್ನು ದಾಖಲಿಸಲಾಗಿದೆ. (ಇದೇ 28ಕ್ಕೆ ಕೋರ್ಟ್ ತನ್ನ ಅಂತಿಮ ತೀರ್ಪು ನೀಡುವ ಸಾಧ್ಯತೆಗಳಿವೆ-ಅನು).

ಚುನಾವಣೆಗಳು ನಡೆಯುವ ಕೆಲವೇ ತಿಂಗಳುಗಳ ಮುನ್ನ ಆಯೋಗವು ಈ ಕ್ರಮವನ್ನು ಜಾರಿಗೊಳಿಸಿರುವುದು ವಿವಾದದ ಕೇಂದ್ರ ಬಿಂದು ಆಗಿದ್ದು, 2024ರಲ್ಲಿ ಈಗಾಗಲೇ ಒಮ್ಮೆ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿರುವಾಗ ಇದು ಅಗತ್ಯವೇ ಎಂದು ಪ್ರಶ್ನಿಸಲಾಗುತ್ತಿದೆ. ಈ ಲೇಖನ ಆಯೋಗದ ಕ್ರಮದ ಕಾನೂನುಬದ್ಧತೆ ಮತ್ತು ಇದನ್ನು ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಇರುವ ಅಧಿಕಾರವನ್ನು ಕುರಿತು ಚರ್ಚಿಸುತ್ತದೆ.

ಮತದಾರರ ಅನರ್ಹತೆಗೆ

ಸಂವಿಧಾನದ ಅನುಚ್ಛೇದ 326, ವಯಸ್ಕ ಮತದಾನದ ಆಧಾರದ ಮೇಲೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳನ್ನು ನಡೆಸಬೇಕು ಎಂದು ಹೇಳುತ್ತದೆ. ಅರ್ಥಾತ್, ಪ್ರತಿಯೊಬ್ಬ ವಯಸ್ಕ ಮತದಾರರೂ, ಕೆಲವು ನಿರ್ದಿಷ್ಟ ಕಾರಣಗಳಿಗಾಗಿ ಅನರ್ಹಗೊಳ್ಳದೆ ಇದ್ದಲ್ಲಿ, ಮತದಾರರಾಗುವ ಹಕ್ಕು ಪಡೆದಿರುತ್ತಾರೆ ಎಂದು ಹೇಳುತ್ತದೆ. ಈ ಅನುಚ್ಛೇದದ ಅನುಸಾರ ಮತದಾರರಾಗಲು ಎರಡು ಅವಶ್ಯ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಮೊದಲನೆಯದು ವ್ಯಕ್ತಿಯು ಭಾರತದ ಪ್ರಜೆ ಆಗಿರಬೇಕು ಮತ್ತು ಎರಡನೆಯದು ಕನಿಷ್ಠ 18 ವರ್ಷದವರಾಗಿರಬೇಕು. 1950ರ ಪ್ರಜಾ ಪ್ರಾತಿನಿಧ್ಯ ಕಾಯ್ದೆ (ಆರ್‌ಪಿಎ)ಯಲ್ಲಿ ಮತದಾರರಾಗಿ ನೋಂದಣಿಯಾಗಲು ಅನರ್ಹರಾಗುವ ಕಾರಣಗಳನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಅವುಗಳೆಂದರೆ, ಸಮರ್ಥ ನ್ಯಾಯಾಲಯವೊಂದರ ಮೂಲಕ ವ್ಯಕ್ತಿಯು ಮಾನಸಿಕ ಅಸ್ವಸ್ಥ ಎಂದು ಘೋಷಿಸಿರಬೇಕು ಹಾಗೂ 1951ರ ಆರ್‌ಪಿಎ ಕಾಯ್ದೆಯ ಸೆಕ್ಷನ್ 11ಎ ಅಡಿಯಲ್ಲಿ ಮತದಾನಕ್ಕೆ ಅನರ್ಹ ಎಂದು ಘೋಷಿಸಿರಬೇಕು.

ಮತದಾರರಾಗಿ ನೋಂದಣಿ ಮಾಡಿಸಲು ನಿಯಮಗಳನ್ನು ಆರ್‌ಪಿಎ ಕಾಯ್ದೆಯ ಸೆಕ್ಷನ್ 19ರಲ್ಲಿ ಸ್ಪಷ್ಟವಾಗಿ ನೀಡಲಾಗಿದೆ. ಅದೇನೆಂದರೆ, ವ್ಯಕ್ತಿಯು ಕನಿಷ್ಠ 18 ವರ್ಷ ದಾಟಿರಬೇಕು ಮತ್ತು ಆ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು. ಇಲ್ಲಿ ಸಾಮಾನ್ಯ ನಿವಾಸಿ (Ordinary Resident) ಎಂದರೇನು ಎಂಬುದನ್ನು ಸೆಕ್ಷನ್ 20ರಲ್ಲಿ ವಿವರಿಸಲಾಗಿದೆ. ಇದರನ್ವಯ ವ್ಯಕ್ತಿಯು ವಾಸಿಸುವ ಮನೆಯ ಮಾಲಕತ್ವ ಅಥವಾ ಮತ್ತಾವುದೇ ರೀತಿಯ ಹಕ್ಕು ಹೊಂದಿರುವ ಕಾರಣಕ್ಕಾಗಿ ಸಾಮಾನ್ಯ ನಿವಾಸಿ ಎಂದು ಪರಿಭಾವಿಸಲಾಗುವುದಿಲ್ಲ ಅಥವಾ ವ್ಯಕ್ತಿಯು ತಾನು ವಾಸಿಸುವ ಸ್ಥಳದಲ್ಲಿ, ತಾತ್ಕಾಲಿಕವಾಗಿ ತಮ್ಮ ನಿವಾಸದಲ್ಲಿ ಇಲ್ಲದೆ ಹೋದ ಮಾತ್ರಕ್ಕೆ ‘ಸಾಮಾನ್ಯ ನಿವಾಸಿ’ಯ ಅರ್ಹತೆಯನ್ನು ಕಳೆದುಕೊಳ್ಳುವುದಿಲ್ಲ.

ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಹಾಗೂ ಲೋಕಸಭೆ, ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಮತ್ತು ರಾಷ್ಟ್ರಪತಿ-ಉಪರಾಷ್ಟ್ರಪತಿಗಳ ಚುನಾವಣೆಯನ್ನು ನಡೆಸುವ ಪರಮಾಧಿಕಾರ ಇರುತ್ತದೆ. ಸಂವಿಧಾನದ ಅನುಚ್ಛೇದ 324, ಚುನಾವಣಾ ಆಯೋಗಕ್ಕೆ ಈ ಅಧಿಕಾರವನ್ನು ಕಲ್ಪಿಸುತ್ತದೆ. ಈ ಅಧಿಕಾರವನ್ನು ಸುಪ್ರೀಂಕೋರ್ಟ್Reservoir of Power, ಅಂದರೆ ‘ಅಧಿಕಾರದ ಸಂಗ್ರಹಾಗಾರ’ ಎಂದು ವ್ಯಾಖ್ಯಾನಿಸುತ್ತದೆ. ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಳನ್ನು ನೆರವೇರಿಸುವುದು ಸಂವಿಧಾನದ ಮೂಲ ಸಂರಚನೆಯ (Basic Structure) ಒಂದು ಪ್ರಧಾನ ಲಕ್ಷಣವಾಗಿರುವುದರಿಂದ, ಭಾರತದ ಚುನಾವಣಾ ಆಯೋಗವು ಈ ಕಾರ್ಯವನ್ನು ಪರಿಪೂರ್ಣತೆಯಿಂದ ನಿರ್ವಹಿಸುವ ಸಲುವಾಗಿ ಎಲ್ಲ ಅವಶ್ಯ ಅಧಿಕಾರಗಳನ್ನೂ ಹೊಂದಿರುವುದು ಅತ್ಯಗತ್ಯ.

ಏನೇ ಆದರೂ, ಸಂವಿಧಾನವು ಯಾವುದೇ ಅಧಿಕಾರ ಕೇಂದ್ರಕ್ಕೂ ಅನಿರ್ಬಂಧಿತ ಅಧಿಕಾರ ನೀಡುವುದನ್ನು ಊಹಿಸಲೂ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಸಹ ತನ್ನ ತೀರ್ಪುಗಳ ಮೂಲಕ, ಯಾವುದೇ ಶಾಸನಗಳ ವ್ಯಾಪ್ತಿಗೆ ಒಳಪಡದೆ ಇರುವ ಎಲ್ಲ ಪ್ರದೇಶಗಳಲ್ಲೂ ಚುನಾವಣಾ ಆಯೋಗವು ತನ್ನ ಎಲ್ಲ ಅಧಿಕಾರವನ್ನೂ ಚಲಾಯಿಸಬಹುದಾಗಿದೆ. ಆದರೆ ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಕಾನೂನುಗಳ ಅನುಸಾರ ನಿರ್ವಹಿಸತಕ್ಕದ್ದು ಎಂದು ಹೇಳಿದೆ. ಮೊಹಿಂದರ್ ಸಿಂಗ್ vs ಮುಖ್ಯ ಚುನಾವಣಾ ಆಯುಕ್ತ (1978) ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಕಾನೂನನ್ನು ಹೀಗೆ ವ್ಯಾಖ್ಯಾನಿಸುತ್ತದೆ: ‘‘ಮೊದಲನೆಯದಾಗಿ ಸಂಸತ್ತು ಅಥವಾ ಇತರ ಯಾವುದೇ ರಾಜ್ಯ ವಿಧಾನಸಭೆಯು ಚುನಾವಣೆಗಳಿಗೆ ಸಂಬಂಧಿಸಿದಂತೆ ನ್ಯಾಯಬದ್ಧವಾದ ಕಾನೂನುಗಳನ್ನು ಜಾರಿಗೊಳಿಸಿದ್ದರೆ, ಆಯೋಗವು ಆ ನಿಬಂಧನೆಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು, ಅವುಗಳಿಗೆ ವ್ಯತಿರಿಕ್ತವಾಗಿ ಅಲ್ಲ. ಆದರೆ ಅಂತಹ ಕಾನೂನು ಏನೂ ಹೇಳದೇ ಇದ್ದಲ್ಲಿ, ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಳನ್ನು ಕ್ರಮಬದ್ಧವಾಗಿ ನೆರವೇರಿಸುವ ನಿಟ್ಟಿನಲ್ಲಿ ಅನುಚ್ಛೇದ 324 ಅಧಿಕಾರದ ಸಂಗ್ರಹಾಗಾರವಾಗಿ ಪರಿಣಮಿಸುತ್ತದೆ’’.

ಸೂಕ್ತ ದಿನಾಂಕದ ಸೂಚನೆ

ಈಗ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಪಡಿಸುವ ನಿಟ್ಟಿನಲ್ಲಿ ಭಾರತದ ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಯನ್ನು ನಿರ್ಧರಿಸುವ ಪ್ರಜಾಪ್ರಾತಿನಿಧ್ಯ ಕಾಯ್ದೆಯ (ಆರ್‌ಪಿಎ) ಸಂಬಂಧಪಟ್ಟ ನಿಬಂಧನೆಗಳನ್ನು ಗಮನಿಸೋಣ. 1950ರ ಆರ್‌ಪಿಎ ಕಾಯ್ದೆಯ ಸೆಕ್ಷನ್ 21 ಮತದಾರರ ಪಟ್ಟಿಯ ಸಿದ್ಧತೆ ಮತ್ತು ಪರಿಷ್ಕರಣೆಯನ್ನು ಕುರಿತು ಹೇಳುತ್ತದೆ. ಈ ನಿಟ್ಟಿನಲ್ಲಿ ಸೆಕ್ಷನ್ 21 ನಾಲ್ಕು ಹಂತಗಳನ್ನು ಗುರುತಿಸುತ್ತದೆ. (1) ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆಗಳ ಮುನ್ನ (2) ಪ್ರತಿಯೊಂದು ಉಪಚುನಾವಣೆಗಳಿಗೂ ಮುನ್ನ (3) ಯಾವುದೇ ವರ್ಷದಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತ್ತು (4) ಆಯೋಗವು ಸಕಾರಣಗಳೊಂದಿಗೆ, ಯಾವುದೇ ಚುನಾವಣಾ ಕ್ಷೇತ್ರದಲ್ಲಿ ವಿಶೇಷ ಪರಿಷ್ಕರಣೆಯನ್ನು ಆದೇಶಿಸಿದಾಗ. ನಾಲ್ಕನೆಯ ನಿಬಂಧನೆಯನ್ನು ಹೊರತುಪಡಿಸಿ ಎಲ್ಲ ಪರಿಷ್ಕರಣೆಗಳನ್ನೂ ಒಂದು ನಿರ್ದಿಷ್ಟ, ಸೂಕ್ತ ದಿನದಿಂದ, ಸಾಮಾನ್ಯವಾಗಿ ಜನವರಿ ತಿಂಗಳ ಮೊದಲನೇ ದಿನದಿಂದ ನಡೆಸಬಹುದು ಎಂದು ಸೆಕ್ಷನ್ 14ರಲ್ಲಿ ಹೇಳಲಾಗಿದೆ. ಇದಕ್ಕೆ ಹೊರತಾದ ಒಂದೇ ನಿಬಂಧನೆ(4) ಆಗಿರುತ್ತದೆ, ಇದರನ್ವಯ ಯಾವುದೇ ಸಮಯದಲ್ಲಿ ಮಾಡಬಹುದಾದ್ದರಿಂದ ಸೂಕ್ತ ದಿನವನ್ನು ನಮೂದಿಸಲಾಗಿಲ್ಲ.

ಭಾರತದ ಚುನಾವಣಾ ಆಯೋಗವು ಜೂನ್ 24ರಂದು ಹೊರಡಿಸಿದ ಆದೇಶವು ಜುಲೈ 1, 2025ನ್ನು ಸೂಕ್ತ ದಿನ ಎಂದು ಸೂಚಿಸುತ್ತದೆ. ಇದು ಸೆಕ್ಷನ್ 21(2)(ಬಿ) ನಿರ್ದೇಶನದ ಅನ್ವಯ ನೀಡಲಾಗಿದೆ ಎಂದು ಹೇಳುತ್ತದೆ. ಬಿಹಾರದಲ್ಲಿ ನಡೆಯುತ್ತಿರುವ ಪರಿಷ್ಕರಣೆಗೆ ಇದೇ ಸೆಕ್ಷನ್ ಅನ್ವಯಿಸಲಾಗಿದೆ ಎಂದು ಭಾವಿಸಬಹುದು. ಅದರೆ ಈ ನಿಬಂಧನೆಯಡಿ ಸೂಕ್ತ ದಿನಾಂಕವು 1-1-2025 ಆಗಿರಬೇಕು. ಪರಿಷ್ಕರಣೆಯನ್ನು 2025ರ ಜನವರಿ 1ರಿಂದಲೇ ಆರಂಭಿಸಬೇಕಿತ್ತು. ಹಾಗಾಗಿ ಚುನಾವಣಾ ಆಯೋಗದ ಆದೇಶದಲ್ಲಿ ನೀಡಿರುವ ಸೂಕ್ತ ದಿನಾಂಕಕ್ಕೆ ಕಾನೂನಿನಡಿ ಸಮ್ಮತಿ ಇರುವುದಿಲ್ಲ. ಅದೇ ರೀತಿ, ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಎಂಬ ಪದವು ಕಾನೂನಿನಲ್ಲಿ ಕಾಣುವುದಿಲ್ಲ. ಚುನಾವಣಾ ಆಯೋಗವು ವಿಶೇಷ ಪರಿಷ್ಕರಣೆಯನ್ನು ಆದೇಶಿಸಬಹುದಾದ ಏಕೈಕ ಸನ್ನಿವೇಶ ಎಂದರೆ, ಅದು ಒಂದು ನಿರ್ದಿಷ್ಟ ಚುನಾವಣಾ ಕ್ಷೇತ್ರಕ್ಕೆ ಅಥವಾ ಅದರ ಒಂದು ಭಾಗಕ್ಕೆ ಸಂಬಂಧಿಸಿರಬೇಕೇ ಹೊರತು ಇಡೀ ರಾಜ್ಯಕ್ಕೆ ಸಂಬಂಧಿಸಿರಕೂಡದು.

ಹಾಗಾಗಿ ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಜಾಪ್ರಾತಿನಿಧ್ಯ ಕಾಯ್ದೆಯ (ಆರ್‌ಪಿಎ) ನಿಬಂಧನೆಗಳ ಅನುಸಾರ ನಡೆಯುತ್ತಿಲ್ಲ ಎಂದು ತೀರ್ಮಾನಿಸುವುದು ಸಮಂಜಸವಾಗಿರುತ್ತದೆ. ಭಾರತದ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಈ ಕ್ರಮವನ್ನು ಕೈಗೊಳ್ಳಲು ತನಗೆ ಸೆಕ್ಷನ್ 21ರ ಅಡಿ ಅಧಿಕಾರ ಇದೆ ಎಂದು ಹೇಳಿದೆ. ನಿಜ, ಆದರೆ ಈ ಅಧಿಕಾರವು ಒಂದು ಕ್ಷೇತ್ರಕ್ಕೆ ಅಥವಾ ಅದರ ಒಂದು ಭಾಗಕ್ಕೆ ಸೀಮಿತವಾಗಿರುತ್ತದೆ ಎನ್ನುವುದನ್ನು ಸೆಕ್ಷನ್ 21(3)ರಲ್ಲಿ ಗುರುತಿಸಬಹುದು.

ಸಂವಿಧಾನ ಅನುಚ್ಛೇದ 324ರ ಅಡಿಯಲ್ಲಿ ಪರಮಾಧಿಕಾರವನ್ನು ಪಡೆಯುವ ಭಾರತದ ಚುನಾವಣಾ ಆಯೋಗವು ಕಾನೂನು ನಿಯಮಗಳಿಗೆ ಜವಾಬ್ದಾರಿಯುತವೂ ಆಗಿರುತ್ತದೆ. ಹಾಗೆಯೇ ಸುಪ್ರೀಂ ಕೋರ್ಟ್ ಆದೇಶಗಳನ್ವಯ ಸ್ವಾಭಾವಿಕ ನ್ಯಾಯದ ನಿಯಮಗಳಿಗೆ ಪೂರಕವಾಗಿ ಇರಬೇಕಾಗುತ್ತದೆ. ಚುನಾವಣಾ ನೋಂದಣಿ ಅಧಿಕಾರಿಗಳು, ಮತದಾರರು ತಮ್ಮ ಪೌರತ್ವವನ್ನು ನಿರೂಪಿಸುವ ಸಲುವಾಗಿ, ತಪ್ಪಾದ ದಾಖಲೆಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕಾಗಿ ಅರ್ಜಿಯನ್ನು ತಿರಸ್ಕರಿಸಲಾಗುವುದಿಲ್ಲ. ಮತದಾರರ ನೋಂದಣಿಯ ನಿಯಮ 8ರ ಅನುಸಾರ, ಪ್ರಜೆಗಳು ತಮ್ಮ ಗರಿಷ್ಠ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾಹಿತಿಯನ್ನು ಒದಗಿಸಬಹುದಾಗಿದೆ. ಈ ಶಾಸನಬದ್ಧ ಷರತ್ತನ್ನು ಚುನಾವಣಾ ಆಯೋಗ ನಿರ್ಲಕ್ಷಿಸಲಾಗುವುದಿಲ್ಲ.

ಕೃಪೆ: ದ ಹಿಂದೂ

share
ಪಿ.ಡಿ.ಟಿ. ಆಚಾರಿ
ಪಿ.ಡಿ.ಟಿ. ಆಚಾರಿ
ಕನ್ನಡಕ್ಕೆ: ನಾ. ದಿವಾಕರ
ಕನ್ನಡಕ್ಕೆ: ನಾ. ದಿವಾಕರ
Next Story
X