Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರಿ ಶಾಲೆಯಲ್ಲಿ ನೂರರಿಂದ ಮೂರಕ್ಕೆ...

ಸರಕಾರಿ ಶಾಲೆಯಲ್ಲಿ ನೂರರಿಂದ ಮೂರಕ್ಕೆ ಇಳಿದ ಮಕ್ಕಳ ಸಂಖ್ಯೆ

ಗಂಗನಹಳ್ಳಿ ಎಂ.ಮುನಿನಾರಾಯಣಗಂಗನಹಳ್ಳಿ ಎಂ.ಮುನಿನಾರಾಯಣ17 Nov 2025 10:41 AM IST
share
ಸರಕಾರಿ ಶಾಲೆಯಲ್ಲಿ ನೂರರಿಂದ ಮೂರಕ್ಕೆ ಇಳಿದ ಮಕ್ಕಳ ಸಂಖ್ಯೆ

ಶಿಡ್ಲಘಟ್ಟ, ನ.16: ತಾಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳುವನಹಳ್ಳಿ ಗ್ರಾಮದಲ್ಲಿ, ಇದುವರೆಗೂ ಸರಕಾರಿ ಶಾಲಾ ಕಟ್ಟಡವೇ ಇಲ್ಲದೆ, 50 ವರ್ಷಗಳ ಹಿಂದೆ ದಾನಿಗಳು ಕೊಟ್ಟಿರುವ ಹಳೆಯ ಕಟ್ಟಡದಲ್ಲೆ ಶಾಲೆಯನ್ನು ನಡೆಸುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಸುಸಜ್ಜಿ ತವಾದ ಕಟ್ಟಡವಿಲ್ಲದ ಕಾರಣ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿದಿದೆ.

ಸರಕಾರ, ಪ್ರಾಥಮಿಕ ಶಾಲಾ ಶಿಕ್ಷಣಕ್ಕೆ ಒತ್ತು ನೀಡುವುದಕ್ಕಾಗಿ ಪ್ರತಿ ವರ್ಷದ ತನ್ನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಅನುದಾನ ಮೀಸಲಿಟ್ಟಿದ್ದರೂ, ಈ ಬಳುವನಹಳ್ಳಿ ಗ್ರಾಮದಲ್ಲಿ ಸರಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಇದುವರೆಗೂ ಜಾಗ ಸಿಕ್ಕಿಲ್ಲ. ಹೊಸ ಕಟ್ಟಡವನ್ನೂ ಮಾಡಿಲ್ಲ.

ತಾಲೂಕಿನ ಬಳುವನಹಳ್ಳಿ ಗ್ರಾಮದಲ್ಲಿ, ಹಳೆಯ ಕಟ್ಟಡದಲ್ಲೆ ಮಕ್ಕಳು ಓದುತ್ತಿದ್ದಾರೆ. ಕಳೆದ 15 ವರ್ಷಗಳ ಹಿಂದೆ 100 ಮಂದಿ ವಿದ್ಯಾರ್ಥಿಗಳು ಓದುತ್ತಿದ್ದ ಶಾಲೆಯಲ್ಲಿ ಈಗ ಮೂರು ಮಂದಿಗೆ ಇಳಿಕೆಯಾಗಿದೆ.

ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗ್ರಾಮದ ದಾನಿಗಳು ಶಾಲೆಗೆಂದು ಕೊಟ್ಟಿರುವ ಕಟ್ಟಡದಲ್ಲೆ ಮಕ್ಕಳಿಗೆ ಕಲಿಕಾ ಕೋಣೆ, ಅಡುಗೆ ಕೋಣೆ, ಮಾಡಿ ಕೊಂಡಿದ್ದಾರೆ. ಎರಡನೇ ಅಂತಸ್ತಿನಲ್ಲಿರುವ ಹಾಲ್‌ನಲ್ಲಿ ಮಕ್ಕಳಿಗೆ ಕುಳಿತುಕೊಂಡು ಪಾಠ ಕೇಳಲು ವ್ಯವಸ್ಥೆಯಿದೆಯಾದರೂ ಶಾಲೆಯಲ್ಲಿ ಮಕ್ಕಳಿಲ್ಲ.

ನಮ್ಮೂರಿನಲ್ಲಿ, ಸರಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಎಲ್ಲೂ ಜಾಗವನ್ನು ಮೀಸಲಿಟ್ಟಿಲ್ಲ, ಈ ಕಾರಣದಿಂದ ದಾನಿಗಳು ಕೊಟ್ಟಿರುವ ಹಳೆಯ ಕಟ್ಟಡದಲ್ಲೆ ಪಾಠಪ್ರವಚನಗಳು ನಡೆಯುತ್ತಿವೆ. ಪ್ರತಿಯೊಂದು ಚುನಾವಣೆಗೂ ಇದೇ ಕಟ್ಟಡದಲ್ಲಿ ಮತದಾನ ಮಾಡುತ್ತೇವೆ. ಕಟ್ಟಡ ಸುಸಜ್ಜಿತವಾಗಿಲ್ಲದ ಕಾರಣ, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಟ್ಟು, ಖಾಸಗಿ ಶಾಲೆಗಳಿಗೆ ದಾಖಲು ಮಾಡಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಗ್ರಾಮದಲ್ಲಿ 350 ಕ್ಕೂ ಹೆಚ್ಚು ಕುಟುಂಬಗಳಿವೆ. 1300ಕ್ಕೂ ಹೆಚ್ಚು ಮಂದಿ ಮತದಾರರಿದ್ದಾರೆ. ಒಟ್ಟು ಜನಸಂಖ್ಯೆ 1700 ಇದೆ. ಈ ಗ್ರಾಮದಲ್ಲಿನ ಬಹುತೇಕ ಮಕ್ಕಳು ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ದಾಖಲಾಗಿದ್ದು, ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ನವರು, ಸರಕಾರಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಬೇಕಿದೆ. ಈಗ ಶಾಲೆಯಲ್ಲಿನ ಮಕ್ಕಳ ಸಂಖ್ಯೆ ಕಡಿಮೆಯಾಗಿರುವುದರಿಂದ ಈ ಶಾಲೆಯನ್ನು ಮುಚ್ಚಿದರೆ, ಮುಂಬರುವ ದಿನಗಳಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಲಿದೆ ಎಂದು ಒತ್ತಾಯಿಸಿದ್ದಾರೆ.

ಬಳುವನಹಳ್ಳಿ ಗ್ರಾಮದಲ್ಲಿ ಶಾಲೆ ಕಟ್ಟಲು ಜಾಗವಿಲ್ಲ, ಸರಕಾರ, ಗ್ರಾಮ ಪಂಚಾಯತ್‌ಗೆ ಒಂದರಂತೆ ಮಾದರಿ ಶಾಲೆಗಳು ತೆರೆಯಲು ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಈ ಗ್ರಾಮದ ಮಕ್ಕಳನ್ನು ಬಸ್ಸಿನ ಕರೆದುಕೊಂಡು ಬಂದು ಪಾಠ ಮಾಡಿ, ಪುನಃ ಬಿಟ್ಟು ಬರುವ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದ್ದೇವೆ.

-ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿಡ್ಲಘಟ್ಟ.

share
ಗಂಗನಹಳ್ಳಿ ಎಂ.ಮುನಿನಾರಾಯಣ
ಗಂಗನಹಳ್ಳಿ ಎಂ.ಮುನಿನಾರಾಯಣ
Next Story
X