Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಣಕುಣಿ ಸರ್ಕಾರಿ ಶಾಲೆಯ ದುಸ್ಥಿತಿ: ಜೀವ...

ಹಣಕುಣಿ ಸರ್ಕಾರಿ ಶಾಲೆಯ ದುಸ್ಥಿತಿ: ಜೀವ ಕೈಯಲ್ಲಿ ಹಿಡಿದು 200 ಮಕ್ಕಳ ಕಲಿಕೆ

ಸಯ್ಯದ್ ಮುಹ್‌ಸಿನ್ ಅಲಿಸಯ್ಯದ್ ಮುಹ್‌ಸಿನ್ ಅಲಿ24 Jun 2026 1:11 PM IST
share
ಹಣಕುಣಿ ಸರ್ಕಾರಿ ಶಾಲೆಯ ದುಸ್ಥಿತಿ: ಜೀವ ಕೈಯಲ್ಲಿ ಹಿಡಿದು 200 ಮಕ್ಕಳ ಕಲಿಕೆ

ಹುಮನಾಬಾದ್: ‘ಇದು ವಿದ್ಯಾ ದೇಗುಲ ಕೈ ಮುಗಿದು ಒಳಗೆ ಬಾ’ ಎನ್ನುವುದು ಹಳೆಯ ಮಾತಾಯಿತು. ಆದರೆ, ಇದೀಗ ತಾಲೂಕಿನ ಹಣಕುಣಿ ಸರಕಾರಿ ಶಾಲೆಯ ಪರಿಸ್ಥಿತಿ ನೋಡಿದರೆ, ‘ಜೀವ ಕೈಯಲ್ಲಿ ಹಿಡಿದು ಒಳಗೆ ಬಾ’ ಎನ್ನುವಂತಹ ಆತಂಕಕಾರಿ ವಾತಾವರಣವಿದೆ.

ಹಣಕುಣಿ ಗ್ರಾಮದ ಸರಕಾರಿ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಯು ಅನಾಥವಾದಂತಿದೆ. ಶಾಲೆಯ ಕಟ್ಟಡ ಯಾವ ಕ್ಷಣದಲ್ಲಾದರೂ ಕುಸಿಯಬಹುದಾಗಿದೆ. ಕಟ್ಟಡದ ಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಇಂದೋ ನಾಳೆಯೋ ಬೀಳುವ ಹಂತ ತಲುಪಿದೆ.

ಇತ್ತೀಚೆಗಷ್ಟೇ ಕಲಬುರ್ಗಿಯ ಮಹಿಳಾ ಕಾಲೇಜಿನಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಟ್ಟಡದ ಮೇಲ್ಬಾವಣಿ ಕುಸಿದು ಬಿದ್ದ ದುರ್ಘಟನೆ ಇನ್ನೂ ಹಸಿರಾಗಿಯೇ ಇದೆ. ಇಂತಹದೇ ಭೀಕರ ಘಟನೆ ಹಣಕುಣಿಯ ಶಾಲೆಯಲ್ಲೂ ಮರುಕಳಿಸುವ ಮುನ್ನ ಸಂಬಂಧಪಟ್ಟ ಆಡಳಿತ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಅಂಥಹದ್ದೇ ಘಟನೆ ಸಂಭವಿಸಿದರು ಆಶ್ಚರ್ಯಪಡಬೇಕಿಲ್ಲ.

ಮರೀಚಿಕೆಯಾದ ಸ್ವಚ್ಛತೆ, ಬಯಲೇ ಶೌಚಾಲಯ!

ಶಾಲೆಯ ಕಟ್ಟಡದ ಪರಿಸ್ಥಿತಿ ಒಂದು ಕಡೆಯಾದರೆ, ಇನ್ನೊಂದೆಡೆ ಶಾಲೆಯಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಶೌಚಾಲಯದ ಪರಿಸ್ಥಿತಿ ಹದಗೆಟ್ಟು ಹೋಗಿದೆ. ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಪಾಠ ಹೇಳಿಕೊಡಬೇಕಾದ ಶಾಲೆಯೇ ಇಂದು ತೀವ್ರ ಅಸ್ವಚ್ಛತೆಯಿಂದ ನರಳುತ್ತಿದೆ.

ಶಾಲೆಯ ಶೌಚಾಲಯದ ಬಾಗಿಲು ಮತ್ತು ಗೋಡೆಗಳು ಕುಸಿದು ಬಿದ್ದಿವೆ. ಇದರಿಂದಾಗಿ ವಿದ್ಯಾರ್ಥಿಗಳು ಅನಿವಾರ್ಯವಾಗಿ ಬಯಲಲ್ಲಿಯೇ ಶೌಚಕ್ಕೆ ಹೋಗಬೇಕಾದ ದುಸ್ಥಿತಿ ಎದುರಾಗಿದೆ. ಶಾಲೆಯ ಸುತ್ತಮುತ್ತಲಿನ ಅಸ್ವಚ್ಛತೆಯಿಂದಾಗಿ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಕಾಡುತ್ತಿದೆ.

200 ಬಡ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ: ಈ ಶಾಲೆ ಯಲ್ಲಿ ಸುಮಾರು 200 ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಕಳುಹಿಸಲು ಆರ್ಥಿಕ ಶಕ್ತಿ ಇಲ್ಲದ ಪೋಷಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ನಂಬಿರುವುದು ಈ ಸರಕಾರಿ ಶಾಲೆಯನ್ನೇ. ಆದರೆ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಕಟ್ಟಡದ ಜೀವಭಯದ ನಡುವೆ ಮಕ್ಕಳು ನೆಮ್ಮದಿಯಾಗಿ ಶಿಕ್ಷಣ ಪಡೆಯಲು ಸಾಧ್ಯವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಸರಕಾರ, ಸ್ಥಳೀಯ ಆಡಳಿತ ಮತ್ತು ಕ್ಷೇತ್ರದ ಶಾಸಕರು ಕೇವಲ ದುರಂತಗಳು ಸಂಭವಿಸಿದಾಗ ಮಾತ್ರ ಸ್ಥಳಕ್ಕೆ ದೌಡಾಯಿಸುವ ಬದಲು, ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಶಿಥಿಲಗೊಂಡ ಶಾಲೆಗಳತ್ತ ಗಮನ ಹರಿಸಬೇಕಿದೆ.

ನಮ್ಮ ಗ್ರಾಮದ ಸರಕಾರಿ ಶಾಲೆ ಕುಡುಕರ ತಾಣವಾಗಿದೆ. ಶಾಲೆಯಲ್ಲಿ ಕುಡಿದು ಶಾಲೆಯ ಫ್ಯಾನ್, ಲೈಟ್, ಬಾಗಿಲು ಒಡೆಯುವ ಕಿಡಗೇಡಿಗಳಿದ್ದಾರೆ. ಅಂತವರ ಮೇಲು ಕ್ರಮ ಕೈಗೊಳ್ಳಬೇಕು. ಮೇಲಾಧಿಕಾರಿಗಳು ಮತ್ತು ಸ್ಥಳೀಯ ಶಾಸಕರು ಈ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಮಕ್ಕಳ ಸುರಕ್ಷತೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಉತ್ತಮ ಗುಣಮಟ್ಟದ ಹೊಸ ಕಟ್ಟಡ ನಿರ್ಮಾಣ ಮಾಡಬೇಕು. ಸುಸಜ್ಜಿತ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು.

-ಪ್ರಜ್ವಲ್, ಗ್ರಾಮಸ್ಥ

ಸಂಬಂಧಪಟ್ಟ ಸಿಂಧನಕೇರಾ ಗ್ರಾಮ ಪಂಚಾಯತಿಗೆ ಶಾಲೆಯ ಮುಖ್ಯಗುರು ಪತ್ರ ನೀಡಿದ್ದಾರೆ. ಪ್ಲಾನಿಂಗ್ ಆಫೀಸರ್ ಬಳಿ ನಾನು ಮಾತನಾಡಿದ್ದೇನೆ. ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಿಕೊಳ್ಳಲು ಶಾಲೆಯ ಮುಖ್ಯಗುರುಗಳಿಗೆ ಹೇಳಿದ್ದೇನೆ. ಇಲ್ಲದಿದ್ದರೆ ನೋಟಿಸ್ ನೀಡುವುದಾಗಿಯೂ ಎಚ್ಚರಿಕೆ ನೀಡಿದ್ದೇನೆ. ಕುಡಿಯುವ ನೀರು ಶಾಲೆಗೂ ಕನೆಕ್ಷನ್ ಕೊಡಬೇಕು. ಸಣ್ಣಪುಟ್ಟದಾಗಿ ಬಿಲ್ಡಿಂಗ್ ಬಿರುಕು ಬಿಟ್ಟಿದ್ದರೆ ಮುಖ್ಯ ಗುರುಗಳೇ ಸರಿಪಡಿಸಬೇಕು. ಆ ಶಾಲೆಯಲ್ಲಿ ಎಷ್ಟು ಕೊಠಡಿಗಳಿವೆ, ಹೊಸದಾಗಿ ಎಷ್ಟು ಕೊಠಡಿ ಕಟ್ಟಬೇಕು ಎನ್ನುವ ಕುರಿತು ಮಾಹಿತಿ ಪಡೆಯುತ್ತೇವೆ.

-ವೆಂಕಟೇಶ್ ಗುಡಾಳ್

ಕ್ಷೇತ್ರ ಶಿಕ್ಷಣಾಧಿಕಾರಿ, ಹುಮನಾಬಾದ್ ಕ್ಷೇತ್ರ ಶಿಕ್ಷಣಾಧಿಕಾರಿ, ಹುಮನಾಬಾದ್

share
ಸಯ್ಯದ್ ಮುಹ್‌ಸಿನ್ ಅಲಿ
ಸಯ್ಯದ್ ಮುಹ್‌ಸಿನ್ ಅಲಿ
Next Story
X