Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಉಣ್ಣೆಯಿಂದ ತಯಾರಿಸಿದ ಕಲಾಕೃತಿಗಳಿಗೆ...

ಉಣ್ಣೆಯಿಂದ ತಯಾರಿಸಿದ ಕಲಾಕೃತಿಗಳಿಗೆ ವಿದೇಶಗಳಲ್ಲಿ ಭಾರೀ ಬೇಡಿಕೆ

ಮಾಳಿಂಗರಾಯ ಕೆಂಭಾವಿಮಾಳಿಂಗರಾಯ ಕೆಂಭಾವಿ25 Nov 2024 1:18 PM IST
share
ಉಣ್ಣೆಯಿಂದ ತಯಾರಿಸಿದ ಕಲಾಕೃತಿಗಳಿಗೆ ವಿದೇಶಗಳಲ್ಲಿ ಭಾರೀ ಬೇಡಿಕೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಕಡೋಲಿ ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮಹಿಳೆಯರು ಮತ್ತು ಇತರ ಉಣ್ಣೆ ಸಹಕಾರ ಸಂಘಗಳ ಮಹಿಳೆಯರು ಕೈಯಲ್ಲಿ ಸಿದ್ಧಪಡಿಸಿರುವ ಉಣ್ಣೆಯ ಕಲಾಕೃತಿಗಳನ್ನು ವಿದೇಶಗಳಿಗೆ ರವಾನಿಸಲಾಗುತ್ತಿದ್ದು, ವಿಶಿಷ್ಟ ಕಲಾಕೃತಿಗಳಿಗೆ ವಿದೇಶಗಳಲ್ಲಿ ಭಾರೀ ಬೇಡಿಕೆಯುಂಟಾಗಿದೆ.

ಸುಮಾರು 15ರಿಂದ 20 ವರ್ಷಗಳಿಂದ ಉಣ್ಣೆ ಕಲಾಕೃತಿ ಮಾಡುವಲ್ಲಿ ನಿರತರಾಗಿರುವ ಮಹಿಳೆಯರ ಗುಂಪು ಹಲವು ಮಾದರಿಯಲ್ಲಿ ಉಣ್ಣೆಯ ಕಲಾಕೃತಿಗಳನ್ನು ರಚಿಸುವ ಮೂಲಕ ನೋಡುಗರನ್ನು ಆಕರ್ಷಿಸುತ್ತದೆ.

ಕಂಬಳಿ, ಹಾಸಿಗೆ, ಹೊದಿಕೆ, ಮ್ಯಾಟ್, ಬ್ಯಾಗ್, ಸೇರಿದಂತೆ ಮನೆಗೆ ಬೇಕಾದ ಅಗತ್ಯ ವಸ್ತುಗಳು, ಅಲಂಕಾರಿಕ ವಸ್ತುಗಳು ದೊರೆಯುತ್ತವೆ. ಉಣ್ಣೆಯ ವಸ್ತುಗಳು ಹೆಚ್ಚು ಬೆಲೆಯುಳ್ಳವಾಗಿದ್ದರಿಂದ ಹಳ್ಳಿಗಳಲ್ಲಿ ಬೇಡಿಕೆ ಕಡಿಮೆ ಇದೆ. ಆದರೆ, ವಿದೇಶಗಳಲ್ಲಿ ರಾಜ್ಯದ ಉಣ್ಣೆಯ ವಸ್ತುಗಳು ಮತ್ತು ಕಲಾಕೃತಿಗಳಿಗೆ ಬೇಡಿಕೆ ಹೆಚ್ಚಾಗಿದೆ ಎನ್ನುವುದು ಕಲಾಕೃತಿ ವಿನ್ಯಾಸಗಾರ ಮಹಿಳೆಯರ ಅಭಿಪ್ರಾಯವಾಗಿದೆ.

ನಮ್ಮ ಮಹಿಳೆಯರು ಮಾಡಿರುವ ಉಣ್ಣೆ ವಸ್ತುಗಳು ಜಗತ್ತಿನಾದ್ಯಂತ ರವಾನಿಸಲಾಗುತ್ತಿದೆ. ನಮಗೆ ಯಾವುದೇ ರೀತಿಯ ಮಾರುಕಟ್ಟೆ ಸಮಸ್ಯೆ ಇಲ್ಲ. ದಕ್ಷಿಣ ಭಾರತದಲ್ಲಿ ಹಲವು ಪ್ರಕಾರದ ಕುರಿಗಳು ಇವೆ. ಆದರೆ, ಎಲ್ಲ ಕುರಿಗಳಿಗೂ ಉಣ್ಣೆ ಇರುವುದಿಲ್ಲ. ದಖ್ಖನಿ ಮತ್ತು ಬಳ್ಳಾರಿ ಕುರಿಗಳಿಗೆ ಮಾತ್ರ ಉಣ್ಣೆ ಇರುತ್ತದೆ. ಉಣ್ಣೆ ಕುರಿಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಬಣ್ಣಗಳ ವಸ್ತುಗಳನ್ನು ಮಾಡಬಹುದು. ನಮ್ಮ ರಾಜ್ಯದಲ್ಲಿರುವ ವಿಶೇಷತೆಯನ್ನು ಜಗತ್ತಿಗೆ ಪರಿಚಯಿಸಬೇಕು ಎನ್ನುತ್ತಾರೆ ಹಿರಿಯ ವಿನ್ಯಾಸಗಾರ ಗೋಪಿಕೃಷ್ಣ.

ಬೇರೆ ಕೈಗಾರಿಕೆಗಳಲ್ಲಿ ಎಲ್ಲರೂ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಆದರೆ, ನಾವು ಎಲ್ಲರಿಗೂ ತರಬೇತಿ ನೀಡಿ ಕಲಾಕಾರರನ್ನಾಗಿ ಮಾಡುತ್ತೇವೆ. ಅದೇ ನಮ್ಮ ಉದ್ದೇಶವಾಗಿದೆ. ಕಲಾಕಾರರನ್ನು ಸಮಾಜ ಗುರುತಿಸುತ್ತದೆ. ಆದರೆ, ಕಾರ್ಮಿಕರನ್ನು ಗುರುತಿಸುವುದಿಲ್ಲ. ನಮ್ಮ ವಸ್ತುಗಳನ್ನು ಹುಡುಕಿಕೊಂಡು ಬರುತ್ತಾರೆ. ಸಾವಿರಾರು ಜನ ಮಹಿಳೆಯರಿಗೆ ತರಬೇತಿ ನೀಡಿದ್ದೇವೆ. ಈಗ ಕೆಲವರು ಅವರೇ ಸ್ವತಂತ್ರವಾಗಿ ಉಣ್ಣೆ ವಸ್ತುಗಳನ್ನು ಮಾಡುತ್ತಿದ್ದಾರೆ. ಉಣ್ಣೆ ವಸ್ತುಗಳಿಗೆ ಅದರ ವಿನ್ಯಾಸದ ಆಧಾರದಲ್ಲಿ ಬೆಲೆ ನಿಗದಿ ಮಾಡುತ್ತೇವೆ. ಸುಮಾರು 1 ಲಕ್ಷ ರೂ.ವರೆಗಿನ ವಸ್ತುಗಳು ಸಿಗುತ್ತವೆ.

-ಗೋಪಿಕೃಷ್ಣ, ಹಿರಿಯ ವಿನ್ಯಾಸಗಾರ

ನಗರ ಪ್ರದೇಶಗಳಲ್ಲಿ ನಡೆಯುವ ವಸ್ತು ಪ್ರದರ್ಶನಗಳಲ್ಲಿ ಭಾಗವಹಿಸುತ್ತೇವೆ. ನಮ್ಮ ಹಳ್ಳಿಯಲ್ಲಿಯೇ ಸ್ವಸಹಾಯ ಗುಂಪುಗಳನ್ನು ಮಾಡಿಕೊಂಡು ಬೇರೆ ಕೆಲಸದ ಜತೆಗೆ ಉಣ್ಣೆ ವಸ್ತುಗಳನ್ನು ಸಿದ್ಧಪಡಿಸುತ್ತೇವೆ. ಉಣ್ಣೆಯ ವಸ್ತುಗಳಿಂದ ಸ್ವಲ್ಪಮಟ್ಟಿಗೆ ಲಾಭ ಬರುತ್ತದೆ. ಮುಂದಿನ ದಿನಗಳಲ್ಲಿ ಮಹಿಳೆಯರೇ ಸೇರಿಕೊಂಡು ಮಳಿಗೆ ಮಾಡುವ ಯೋಚನೆಯಿದೆ.

-ಪ್ರಭಾವತಿ, ಉಣ್ಣೆ ವಸ್ತು ವಿನ್ಯಾಸಗಾರ್ತಿ

share
ಮಾಳಿಂಗರಾಯ ಕೆಂಭಾವಿ
ಮಾಳಿಂಗರಾಯ ಕೆಂಭಾವಿ
Next Story
X