Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊರೆಯುವ ಚಳಿಯ ನಡುವೆ ಜಲಪಾತ ವೀಕ್ಷಣೆಗೆ...

ಕೊರೆಯುವ ಚಳಿಯ ನಡುವೆ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್22 July 2024 2:19 PM IST
share
ಕೊರೆಯುವ ಚಳಿಯ ನಡುವೆ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ತುಂಬಿ ತುಳುಕುತ್ತಿರುವ ಕಾವೇರಿ-ಕಪಿಲ ನದಿಗಳ ಒಡಲಿನಿಂದಾಗಿ ಗಡಿನಾಡು ಚಾಮರಾಜನಗರ ಜಿಲ್ಲೆಯ ಜಲಪಾತಗಳು ಬೋರ್ಗರೆಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆದುಕೊಳ್ಳುತ್ತಿವೆ.

ಕಾವೇರಿ, ಕಪಿಲ ನದಿ ಪಾತ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಎರಡೂ ನದಿಗಳಲ್ಲಿ ಒಳ ಹರಿವು ನೀರು ಹೆಚ್ಚಾಗಿದ್ದರಿಂದ ಕಬಿನಿ ಮತ್ತು ಕೆ.ಆರ್.ಎಸ್ ಜಲಾಶಯಗಳು ಸಂಪೂರ್ಣ ಭರ್ತಿಯತ್ತ ಕಾಲಿಡುತ್ತಿದ್ದಂತೆ, ಜಲಾಶಯಗಳ ಹಿತದೃಷ್ಟಿಯಿಂದಾಗಿ ಜಲಾಶಯಗಳಿಂದ ಸಾವಿರಾರು ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಟಿ.ನರಸೀಪುರದ ಕಾವೇರಿ-ಕಪಿಲ ನದಿಗಳ ನೀರು ಹೆಚ್ಚಾಗಿದ್ದು, ಅಲ್ಲಿ ಸೃಷ್ಟಿಯಾಗುವ ಸ್ಪಟಿಕ ಸರೋವರದ ನೀರು ಅತೀ ಹೆಚ್ಚಾಗಿ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದಲ್ಲಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ವಾಸ ಮಾಡುವ ಜನರಿಗೆ ಕಿರಿಕಿರಿಯಾಗಿದೆ. ಅದೂ ಅಲ್ಲದೆ ನದಿ ಪಾತ್ರದ ಬಳಿ ಕೃಷಿ ಮಾಡುವ ರೈತರ ಜಮೀನುಗಳಿಗೆ ನೀರು ಹರಿಯುವ ಹಂತದಲ್ಲಿದ್ದು, ರೈತರು ಬೆಳೆದ ಫಸಲುಗಳು ನೀರಿನಿಂದ ಜಲಾವೃತಗೊಳ್ಳಲಿದೆ.

ಯಡಕುರಿಯಾ ಬಳಿ ಸೇತುವೆ ನಿರ್ಮಾಣದಿಂದಾಗಿ ಅಲ್ಲಿ ವಾಸ ಮಾಡುವ ಜನರು ತುಸು ನಿಟ್ಟುಸಿರು ಬಿಟ್ಟಿದ್ದಾರೆ. ಒಂದು ವೇಳೆ ಯಡಕುರಿಯಾ ಬಳಿ ಸೇತುವೆ ನಿರ್ಮಾಣವಾಗದೇ ಇದ್ದರೆ ಯಡಕುರಿಯಾದಲ್ಲಿ ವಾಸ ಮಾಡುವ ಜನರು ನದಿ ಪಾತ್ರದಲ್ಲಿ ನೀರು ಹರಿವು ಕಡಿಮೆಯಾಗುವ ತನಕ ಅಲ್ಲೇ ಇರುವ ಪರಿಸ್ಥಿತಿ ಬರುತ್ತಿತ್ತು.

ಸತ್ತೇಗಾಲದ ಬಳಿಯೂ ನದಿಪಾತ್ರದ ನೀರು ಹರಿವು ಹೆಚ್ಚಾಗಿದ್ದರಿಂದ ಸಮೀಪದ ಭರಚುಕ್ಕಿ ಜಲಪಾತದಲ್ಲಿ ಧುಮ್ಮಿಕ್ಕುವ ನೀರು ಅಧಿಕವಾಗಿರುವುದರಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದ್ದು, ಇದು ಕರ್ನಾಟಕದ ನಯಾಗರ ಕೇಂದ್ರವನ್ನಾಗಿಸಿದೆ. ಅದೂ ಅಲ್ಲದೆ, ಶಿವನಸಮುದ್ರ ಬಳಿಯ ದರ್ಗಾದ ಬಳಿ ಇರುವ ಗಗನ ಚುಕ್ಕಿ ಜಲಪಾತದಲ್ಲೂ ನೀರಿನ ಪ್ರಮಾಣ ಅಧಿಕವಾಗಿರುವ ಹಿನ್ನೆಲೆಯಲ್ಲಿ ಇಲ್ಲೂ ಸಹ ಪ್ರವಾಸಿಗರು ಹೆಚ್ಚಾಗಿ ಆಗಮಿಸಿ, ನೀರಿನ ಮನಮೋಹಕ ದೃಶ್ಯವನ್ನು ಕಂಡು ಪುಳಕಿತರಾಗುತ್ತಿದ್ದಾರೆ.

ಚುಮು ಚುಮು ಚಳಿಯ ನಡುವೆ ಬೀಳುತ್ತಿರುವ ತುಂತುರು ಮಳೆಯಲ್ಲೇ ಪ್ರವಾಸಿಗರು ಈ ಅವಳಿ ಜಲಪಾತಗಳನ್ನು ಕಂಡು ಕಣ್ತುಂಬಿಸಿಕೊಳ್ಳಲು ಕಾತುರದಿಂದ ಹೆಜ್ಜೆಯಿಡುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿರುವ ಅವಳಿ ಜಲಾಶಯಗಳಿಗೆ ಬರುವ ಪ್ರವಾಸಿಗರ ಹಿತದೃಷ್ಟಿಯಿಂದ ಮತಷ್ಟು ಮೂಲ ಸೌಕರ್ಯ ಕಲ್ಪಿಸಬೇಕು. ಜಲಪಾತದ ಕೆಳಗೆ ಯಾರೂ ಹೋಗದಂತೆ ನಿರ್ಬಂಧಿಸಬೇಕು ಹಾಗೂ ಜಲಪಾತಗಳು ಬೋರ್ಗರೆಯುವ ದಿನಗಳಲ್ಲಿ ವಿಶೇಷ ವಾಹನ ವ್ಯವಸ್ಥೆ ಮಾಡಬೇಕು.

<ಮನೋಜ್ ಕುಮಾರ್, ಪ್ರವಾಸಿಗ, ಬೆಂಗಳೂರು

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X