Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕರಿಮೆಣಸು ಕೊಯ್ಲಿಗೆ ಅಲ್ಯುಮಿನಿಯಂ ಏಣಿ...

ಕರಿಮೆಣಸು ಕೊಯ್ಲಿಗೆ ಅಲ್ಯುಮಿನಿಯಂ ಏಣಿ ಬಳಕೆ; ಕಾರ್ಮಿಕರಿಗೆ ವಿದ್ಯುತ್ ತಂತಿ ತಗಲುವ ಭೀತಿ

ಕೆ.ಎಂ.ಇಸ್ಮಾಯಿಲ್ ಕಂಡಕರೆಕೆ.ಎಂ.ಇಸ್ಮಾಯಿಲ್ ಕಂಡಕರೆ26 March 2024 11:45 AM IST
share
ಕರಿಮೆಣಸು ಕೊಯ್ಲಿಗೆ ಅಲ್ಯುಮಿನಿಯಂ ಏಣಿ ಬಳಕೆ; ಕಾರ್ಮಿಕರಿಗೆ ವಿದ್ಯುತ್ ತಂತಿ ತಗಲುವ ಭೀತಿ

ಮಡಿಕೇರಿ: ಕೊಡಗು ಜಿಲ್ಲಾದ್ಯಂತ ಕಾಫಿ ಕೊಯ್ಲು ಪೂರ್ಣಗೊಂಡು ಇದೀಗ ಕಾಳುಮೆಣಸು ಕೊಯ್ಲು ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಬೆಳೆಗಾರರು ಮತ್ತು ಕಾರ್ಮಿಕರು ಕೊಯ್ಲು ಕೆಲಸದಲ್ಲಿ ನಿರತರಾಗಿದ್ದಾರೆ.

ಆದರೆ, ಕೊಯ್ಲಿನ ಸಂದರ್ಭದಲ್ಲಿ ಅಲ್ಯುಮಿನಿಯಂ ಏಣಿಗಳನ್ನೇ ಹೆಚ್ಚಾಗಿ ಬಳಸುತ್ತಿರುವುದರಿಂದ ವಿದ್ಯುತ್ ತಂತಿಗೆ ಏಣಿ ಸ್ಪರ್ಶಿಸಿ ಕಳೆದ ಆರು ವರ್ಷಗಳಲ್ಲಿ ೩೫ಕ್ಕೂ ಹೆಚ್ಚು ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ. ಆದರೂ, ಜಿಲ್ಲೆಯಲ್ಲಿ ಕರಿಮೆಣಸು ಕೊಯ್ಲು ಮಾಡಲು ಅಲ್ಯುಮಿನಿಯಂ ಏಣಿಗಳನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ.

ಕೊಡಗಿನ ಬಹುತೇಕ ತೋಟಗಳಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದು, ಮರಗಳ ಪಕ್ಕದಲ್ಲೇ ಕಾಣಸಿಗುತ್ತವೆ. ಕರಿಮೆಣಸು ಕೊಯ್ಲು ಮಾಡುವಾಗ ಎಷ್ಟೇ ಎಚ್ಚರ ವಹಿಸಿದ್ದರೂ ಆಕಸ್ಮಿಕವಾಗಿ ಅಲ್ಯುಮಿನಿಯಂ ಏಣಿ ವಿದ್ಯುತ್ ತಂತಿಗೆ ತಗಲಿ ಕಾರ್ಮಿಕರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಕರಿಮೆಣಸು ಕೊಯ್ಲಿಗೆ ಮಾತ್ರವಲ್ಲದೆ ಇತ್ತೀಚಿನ ವರ್ಷಗಳಲ್ಲಿ ಮರ ಕಪಾತ್ ಸಂದರ್ಭದಲ್ಲೂ ಅಲ್ಯುಮಿನಿಯಂ ಏಣಿಯನ್ನು ತೋಟಗಳಲ್ಲಿ ಬಳಸುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.

ಕಾಣೆಯಾದ ಬಿದಿರಿನ ಏಣಿಗಳು: ಕೆಲ ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಕರಿಮೆಣಸು ಕೊಯ್ಲು ಮಾಡಲು ಬಿದಿರಿನ ಏಣಿಗಳನ್ನು ಬಳಸುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಬಿದಿರು ಕಾಡ್ಗಿಚ್ಚು, ಕಟ್ಟೆ ರೋಗದಿಂದ ನಾಶಗೊಂಡು ಬೆರಳೆಣಿಕೆಯಷ್ಟು ತೋಟಗಳಲ್ಲಿ ಮಾತ್ರ ಬಿದಿರಿನ ಏಣಿಗಳು ಕಾಣ ಸಿಗುತ್ತಿವೆ. ಹೊಸ ಆವಿಷ್ಕಾರ ಹಾಗೂ ಆಧುನಿಕತೆಯ ಪರಿಣಾಮ ಅಲ್ಯುಮಿನಿಯಂ ಹಾಗೂ ಕಬ್ಬಿಣದ ಏಣಿಗಳನ್ನು ಬಳಸಲಾಗುತ್ತಿವೆ. ಇದರ ಪರಿಣಾಮ ತೋಟದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ.

ಅಲ್ಯುಮಿನಿಯಂ ಏಣಿ ಬಳಸುವುದಾದರೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿದ್ಯುತ್ ತಂತಿ ಹಾದು ಹೋದ ಜಾಗದಲ್ಲಿ ಬಳಸಲೇಬಾರದು. ಏಣಿ ಉಪಯೋಗಿಸುವ ಸಂದರ್ಭದಲ್ಲಿ ಸಂಬಂಧಿಸಿದ ತೋಟಗಳ ಮಾಲಕರು ಜೊತೆಯಲ್ಲಿದ್ದು, ಮಾರ್ಗದರ್ಶನ ಮಾಡುವುದು ಅನಿವಾರ್ಯವಾಗಿದೆ. ಅಲ್ಲದೆ, ಕಾರ್ಮಿಕರು ಎಚ್ಚರ ವಹಿಸಬೇಕಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹೆಚ್ಚು ಸಂಬಳ ಕೊಡುತ್ತಾರೆ ಎಂದು ಹೇಳಿ ನಾವು ಕಾಳುಮೆಣಸು ಕೊಯ್ಲು ಕೆಲಸಕ್ಕೆ ಹೋಗುತ್ತೇವೆ. ತೋಟಗಳಲ್ಲಿ ವಿದ್ಯುತ್ ಲೈನ್‌ಗಳಿದ್ದು, ಅಲ್ಯುಮಿನಿಯಂ ಏಣಿಯನ್ನು ಬಳಸುವಾಗ ಭಯ ಆಗುತ್ತದೆ. ರಸ್ತೆ ಬದಿಗಳಲ್ಲಿ ಕೊಯ್ಲು ಮಾಡುವಾಗ ಅತೀ ಎಚ್ಚರಿಕೆಯಿಂದ ಇರುತ್ತೇವೆ. ಈ ಹಿಂದೆ ಬಿದಿರಿನ ಏಣಿಗಳನ್ನು ಬಳಸಿ ನಾವು ಕಾಳುಮೆಣಸು ಕೊಯ್ಲು ಮಾಡುತ್ತಿದ್ದೆವು. ಆದರೆ, ಕಳೆದ ಹತ್ತು ವರ್ಷಗಳಿಂದ ತೋಟಗಳಲ್ಲಿ ಬಿದಿರಿನ ಏಣಿಗಳೇ ಇಲ್ಲದಂತಾಗಿದೆ.

-ಚೆಟ್ಟಳ್ಳಿ, ಕಾಳುಮೆಣಸು ಕೊಯ್ಲು ಮಾಡುವ ಕಾರ್ಮಿಕ

ಅಲ್ಯುಮಿನಿಯಂ ಏಣಿ ಇತ್ತೀಚಿನ ವರ್ಷಗಳಲ್ಲಿ ಎಲ್ಲರೂ ಬಳಸುತ್ತಿರುವುದು ಸಾಮಾನ್ಯವಾಗಿವೆ. ಅದರಲ್ಲೂ ಕೆಲವು ವರ್ಷಗಳಲ್ಲಿ ಇದರ ಬಳಕೆಯಿಂದ ವಿದ್ಯುತ್ ಸ್ಪರ್ಶಗೊಂಡು ಸಾವು-ನೋವು ಸಂಭವಿಸುತ್ತಿರುವುದು ಖೇದಕರ ವಿಷಯ. ಬಿದಿರಿನ ಏಣಿ ಮೊದಲಿನ ತರ ಸಿಗುತ್ತಿಲ್ಲ. ಕಾರ್ಮಿಕರು ಅಲ್ಯುಮಿನಿಯಂ ಏಣಿಯನ್ನೇ ಹೆಚ್ಚು ಅವಲಂಬಿಸಿದ್ದಾರೆ.

-ಐತಿಚಂಡ ಪ್ರಕಾಶ್, ಕರಡ ಗ್ರಾಮದ ಬೆಳೆಗಾರ

share
ಕೆ.ಎಂ.ಇಸ್ಮಾಯಿಲ್ ಕಂಡಕರೆ
ಕೆ.ಎಂ.ಇಸ್ಮಾಯಿಲ್ ಕಂಡಕರೆ
Next Story
X