Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರಿ ಶಾಲೆಗಳಿಗೆ ತರಕಾರಿ ವ್ಯಾಪಾರಿ...

ಸರಕಾರಿ ಶಾಲೆಗಳಿಗೆ ತರಕಾರಿ ವ್ಯಾಪಾರಿ ಶರೀಫ್ ರ 'ಅಳಿಲು ಸೇವೆ'

ನಾಲ್ಕು ಶಾಲೆಗಳಿಗೆ ಉಚಿತವಾಗಿ ತರಕಾರಿ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ12 Aug 2024 11:39 AM IST
share
ಸರಕಾರಿ ಶಾಲೆಗಳಿಗೆ ತರಕಾರಿ ವ್ಯಾಪಾರಿ ಶರೀಫ್ ರ ಅಳಿಲು ಸೇವೆ

ಮಂಗಳೂರು: ಸರಕಾರಿ ಶಾಲೆಗಳನ್ನು ಉಳಿಸುವ ಕಿರು ಪ್ರಯತ್ನದ ಜತೆಗೆ ನಮ್ಮ ಸುತ್ತಮುತ್ತಲಿನ ಬಡ ಮಕ್ಕಳಿಗೆ ಪೌಷ್ಟಿಕತೆಗೂ ನೆರವಾಗಬಹುದು ಎಂಬುದಕ್ಕೆ ಬಂಟ್ವಾಳ ನಂದಾವರದ ತರಕಾರಿ ವ್ಯಾಪಾರಿ ಮುಹಮ್ಮದ್ ಶರೀಫ್ ಮಾದರಿ. ಬಂಟ್ವಾಳದ ಮೆಲ್ಕಾರ್ ಬಳಿ ಸಣ್ಣ ತರಕಾರಿ ಅಂಗಡಿ ಹೊಂದಿರುವ ಶರೀಫ್, ಸುಮಾರು ಎಂಟು ವರ್ಷಗಳ ಹಿಂದೆ ಮಜಿ ವೀರಕಂಭ ಶಾಲೆಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ಪೂರೈಕೆ ಮಾಡಲು ಆರಂಭಿಸಿದ್ದರು. ಇದೀಗ ನಾಲ್ಕು ಶಾಲೆಗಳಿಗೆ ಉಚಿತವಾಗಿ ತರಕಾರಿ ಒದಗಿಸುತ್ತಿದ್ದಾರೆ.

ಮಜಿ ಶಾಲೆಯ ಶಿಕ್ಷಕಿ ಎಂಟು ವರ್ಷಗಳ ಹಿಂದೆ ತಮ್ಮ ಶಾಲೆಯ ಬಿಸಿಯೂಟಕ್ಕೆ ತರಕಾರಿ ಖರೀದಿಸಲು ಬರುತ್ತಿದ್ದ ವೇಳೆ ಮಾನವೀಯ ನೆಲೆಯಲ್ಲಿ ಉಚಿತವಾಗಿ ತರಕಾರಿ ನೀಡಲು ಆರಂಭಿಸಿದರು. ಆರಂಭದಲ್ಲಿ ಎರಡು ಮೂರು ಕೆಜಿ ತರಕಾರಿ ಉಚಿತವಾಗಿ ನೀಡುತ್ತಿದ್ದ ಶರೀಫ್ ಸದ್ಯ ಆ ಶಾಲೆಗೆ ದಿನವೊಂದಕ್ಕೆ 10ರಿಂದ 12 ಕೆಜಿಯಷ್ಟು ತರಕಾರಿ ಪೂರೈಕೆ ಮಾಡುತ್ತಿದ್ದಾರೆ. ಆರಂಭದಲ್ಲಿ ಶಿಕ್ಷಕಿಯೇ ಮೆಲ್ಕಾರ್‌ನಿಂದ ಸುಮಾರು 9 ಕಿ.ಮೀ. ದೂರಕ್ಕೆ ಬಸ್ಸಿನಲ್ಲಿ ತರಕಾರಿ ಹೊತ್ತೊಯ್ಯುತ್ತಿದ್ದರು. ಬಳಿಕ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗಿದ್ದು, ಸದ್ಯ 250ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದಾರೆ. ಹಾಗಾಗಿ ತರಕಾರಿ ಬೇಡಿಕೆಯೂ ಹೆಚ್ಚಾಗಿದ್ದು, ಕಳೆದ 3 ವರ್ಷಗಳಿಂದೀಚೆಗೆ ಶಾಲೆಯ ಹಳೆ ವಿದಾರ್ಥಿಯೊಬ್ಬರು ತರಕಾರಿ ಸಾಗಿಸುವ ಜವಾಬ್ದಾರಿ ವಹಿಸಿ ಅದನ್ನು ನಿರ್ವಹಿಸುತ್ತಿದ್ದಾರೆ.

ಬಳಿಕ ಕೆಲಿಂಜ ಶಾಲೆಗೆ ತರಕಾರಿಯ ಬೇಡಿಕೆ ಬಂದಾಗ ಅಲ್ಲಿಗೂ ವಾರಕ್ಕೊಮ್ಮೆ ಉಚಿತವಾಗಿ ತರಕಾರಿ ಪೂರೈಕೆಯ ಜವಾಬ್ದಾರಿಯನ್ನು ವಹಿಸಿದ ಶರೀಫ್, ಇದೀಗ ಬಾಯಿಲ ಹಾಗೂ ಸಜಿಪದ ಕಂಚಿನಡ್ಕ ಪದವು ಶಾಲೆಗಳಿಗೂ ಉಚಿತವಾಗಿ ತರಕಾರಿ ಪೂರೈಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಪ್ರಚಾರ ಬಯಸದೆ ಈ ಕಾರ್ಯ ನಡೆಸುತ್ತಿರುವ ಶರೀಫ್‌ಅವರ ಈ ಕಾರ್ಯಕ್ಕೆ ಶಾಲೆಯ ಹಳೆ ವಿದ್ಯಾರ್ಥಿ ಸಂಘ, ಸ್ಥಳೀಯರು ಹಾಗೂ ಗ್ರಾಹಕರು ಸಹಕಾರ ನೀಡುತ್ತಿದ್ದಾರೆ.

‘ನನ್ನ ಕುಟುಂಬದ ಸದಸ್ಯರೆಲ್ಲರೂ ಈ ಕಾರ್ಯದಲ್ಲಿ ಸಹಕಾರ ನೀಡುತ್ತಿದ್ದಾರೆ. 8 ವರ್ಷಗಳ ಹಿಂದೆ ನನ್ನ ಅಂಗಡಿಗೆ ತರಕಾರಿ ಖರೀದಿಸಲು ಬರುತ್ತಿದ್ದ ಮಜಿ ಶಾಲೆಯ ಶಿಕ್ಷಕಿಯ ಬೇಡಿಕೆಯ ಮೇರೆಗೆ ನಾನು ಉಚಿತವಾಗಿ ತರಕಾರಿ ಒದಗಿಸಲು ಮುಂದಾದೆ. ಆ ವೇಳೆ ಶಾಲೆಯಲ್ಲಿ 24 ಮಕ್ಕಳಿದ್ದರೆ, ಇದೀಗ 290ರಷ್ಟು ಮಕ್ಕಳಿದ್ದಾರೆ. ಈ ಶಾಲೆಗೆ ವಾರಕ್ಕೊಮ್ಮೆ ಆಲೂಗಡ್ಡೆ, ಸೌತೆ, ಚೀನಿಕಾಯಿ, ಬದನೆ ಮೊದಲಾದ ತರಕಾರಿ ನೀಡುತ್ತಿದ್ದು, ಉಳಿದ ದಿನಗಳಲ್ಲಿ ಟೊಮೊಟೊ, ಈರುಳ್ಳಿ, ಕರಿಬೇವು, ಕೊತ್ತಂಬರಿ ಸೊಪ್ಪು ಮೊದಲಾದ ತರಕಾರಿಗಳನ್ನು ನೀಡುತ್ತಿದ್ದೇನೆ. ನಿರ್ದಿಷ್ಟ ಪ್ರಮಾಣ, ತೂಕದ ಬದಲಾಗಿ ಅಗತ್ಯತೆಯ ಮೇರೆಗೆ ಒದಗಿಸುತ್ತಿದ್ದೇನೆ’ ಎನ್ನುತ್ತಾರೆ ಶರೀಫ್.

ತರಕಾರಿ ವ್ಯಾಪಾರಿಯೇ ಆಗಿರುವ ಅಬ್ದುಲ್ ಹಮೀದ್ ಹಾಗೂ ಮೈಮುನಾ ದಂಪತಿಯ ಪುತ್ರರಾಗಿರುವ ಶರೀಫ್‌ರ ಇಬ್ಬರು ಹಿರಿಯ ಸಹೋದರರು ಕೂಡಾ ತರಕಾರಿ ವ್ಯಾಪಾರಿಗಳಾಗಿದ್ದು, ಇವರ ಈ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ.

‘ಬಿಸಿಯೂಟಕ್ಕೆ ಅನುದಾನ ಸಿಗುತ್ತಿದೆ. ಅದರ ಜತೆ ಶರೀಫ್ ಒದಗಿಸುವ ತರಕಾರಿಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದೇವೆ. ಶರೀಫ್‌ರ ಕಾರ್ಯ ಮಾದರಿ. ಸರಕಾರಿ ಶಾಲೆಯ ಗುಣಮಟ್ಟ ಹೆಚ್ಚಳದ ಜೊತೆಗೆ ಮಕ್ಕಳ ಉತ್ತಮ ಆರೋಗ್ಯದ ಮೇಲೂ ಇದು ಪರಿಣಾಮಕಾರಿ’

-ಬಿ. ತಿಮ್ಮಪ್ಪ ನಾಯಕ್, ಪ್ರಭಾರ ಮುಖ್ಯ ಶಿಕ್ಷಕರು, ದ.ಕ. ಜಿಪಂ ಹಿ.ಪ್ರಾ. ಶಾಲೆ, ಕೆಲಿಂಜ

ಸರಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿ ನೀಡುವುದರಿಂದ ನನಗೆ ಯಾವುದೇ ರೀತಿಯಲ್ಲಿ ನಷ್ಟವಾಗಿಲ್ಲ. ಬದಲಾಗಿ ಗ್ರಾಹಕರಿಂದ ಉತ್ತಮ ಸ್ಪಂದನ ದೊರಕಿದೆ. ಇದೀಗ ಸಮೀಪದ ಮೂರ್ನಾಲ್ಕು ಶಾಲೆಗಳಿಂದಲೂ ತರಕಾರಿಗೆ ಬೇಡಿಕೆ ಬಂದಿದೆ. ನನ್ನ ತಂದೆ, ಸಹೋದರರು ಹಾಗೂ ಬಾವ ಈ ಬಗ್ಗೆ ಚರ್ಚೆ ನಡೆಸಿದ್ದು, ಮುಂದೆ ನಾವು ಬೇರೆ ಕಡೆ ತರಕಾರಿ ಅಂಗಡಿ ತೆರೆದಲ್ಲಿ ಅಲ್ಲಿಂದ ಸಮೀಪದ ಸರಕಾರಿ ಶಾಲೆಗಳ ಬೇಡಿಕೆಯ ಮೇರೆಗೆ ಉಚಿತವಾಗಿ ತರಕಾರಿ ಪೂರೈಕೆಯ ಸಾಧ್ಯತೆಯ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ. ಈ ಮೂಲಕವಾದರೂ ನಮ್ಮ ಸರಕಾರಿ ಶಾಲೆಗಳು ಉಳಿಯಬೇಕು. ನಮ್ಮ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕೆಂಬುದು ನಮ್ಮ ಆಶಯ.

-ಮುಹಮ್ಮದ್ ಶರೀಫ್, ತರಕಾರಿ ವ್ಯಾಪಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X