Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಿಂತ ನೀರಿನಿಂದ ಸಾಂಕ್ರಾಮಿಕ ರೋಗಗಳ...

ನಿಂತ ನೀರಿನಿಂದ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ವಿಜಯಪುರ ನಗರದ ಬಡಾವಣೆಗಳು

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್22 Nov 2025 12:43 PM IST
share
ನಿಂತ ನೀರಿನಿಂದ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ವಿಜಯಪುರ ನಗರದ ಬಡಾವಣೆಗಳು

ವಿಜಯಪುರ, ನ.21: ಮಳೆ ನಿಂತು ಎರಡು ತಿಂಗಳುಗಳೇ ಆಗಿದ್ದರೂ ನಗರದ ಹಲವು ಈ ಬಡಾವಣೆಯ ಜಾಗದಲ್ಲಿ ಸಂಗ್ರಹಗೊಂಡಿರುವ ನೀರಿನಿಂದಾಗಿ ಸಾಂಕ್ರಾಮಿಕ ರೋಗ ಭೀತಿ, ಇನ್ನೊಂದು ಕಡೆ ಮನೆಯೊಳಗೆ ನುಗ್ಗುತ್ತಿರುವ ನೀರು ಹೀಗೆ ಸಮಸ್ಯೆಗಳ ಸರಮಾಲೆಯಿಂದ ಜೀವನ ನಡೆಸುವಂತಾಗಿದೆ ಸ್ಥಳೀಯ ನಿವಾಸಿಗಳ ಆರೋಪವಾಗಿದೆ.

ನಗರದ ಐತಿಹಾಸಿಕ ಇಬ್ರಾಹಿಂ ರೋಝಾ ಹಿಂಭಾಗದಲ್ಲಿರುವ ಬಾಗವಾನ ಕಾಲನಿ, ಮುಝಾವರ ಮಲ್ಲಾ ಸೇರಿದಂತೆ ನಗರದ ಅನೇಕ ಬಡಾವಣೆಗಳು ಇಂದಿಗೂ ನಡುಗಡ್ಡೆಯಾಗಿ ಉಳಿದಿವೆ. ಇಲ್ಲಿನ ಮನೆಯ ಮುಂದೆ ಸಾಕಷ್ಟು ಪ್ರಮಾಣದಲ್ಲಿ ನೀರು ನಿಂತಿದ್ದರೂ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಸಮಸ್ಯೆಯ ಪರಿಹಾರಕ್ಕೆ ಕ್ರಮವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರ ಆರೋಪವಾಗಿದೆ.

ಮಳೆಯ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆಯನ್ನು ವೀಕ್ಷಣೆ ಮಾಡಿ, ಇಲ್ಲಿ ನಿಂತಿರುವ ನೀರು ಹರಿದು ಹೋಗಲು ಕ್ರಮವಹಿಸುತ್ತೇನೆ ಎಂದು ಭರವಸೆ ನೀಡಿ ಅಧಿಕಾರಿಗಳಿಗೂ ಸೂಚನೆ ನೀಡಿದ್ದರೂ ಅವರ ಮಾತಿಗೂ ಅಧಿಕಾರಿಗಳೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಇಬ್ರಾಹಿಂ ರೋಝಾದ ಹಿಂದೆ ನೀರು ಹೋಗಲು ಕಾಲುವೆ ಮಾಡಿದರೂ ಸರಿಯಾಗಿ ನೀರು ಹೋಗುತ್ತಿಲ್ಲ. ಇದು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದಾರೆ. ಎಲ್ಲೂ ಸಹ ನೀರು ಹರಿದು ಹೋಗುವ ಅವಕಾಶವೇ ಇಲ್ಲ, ಹೀಗಾಗಿ ಅಲ್ಲಿರುವ ಬಡವರು ನೀರಿನಲ್ಲಿಯೇ ನಡೆದು ಮನೆ ಸೇರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಕೆಲ ಮನೆಗಳು ರಾಜ ಕಾಲುವೆ ಮೇಲೆ ಮನೆ ಕಟ್ಟಿದ್ದಾರೆಂಬ ಆರೋಪ ಇದೆ. ಇದನ್ನು ಪ್ರಶ್ನಿಸಿ, ಕೆಲವರು ಕೋರ್ಟ್‌ಗೆ ಹೋಗಿದ್ದಾರೆ.

ನೀರು ಸಂಪೂರ್ಣವಾಗಿ ಪಾಚಿಗಟ್ಟಿ ಒಂದು ತರಹ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣಗೊಂಡಿದೆ. ನಿಂತ ನೀರಿನಲ್ಲಿ ಸೊಳ್ಳೆ, ನೊಣಗಳ ಹಾವಳಿಯಿಂದ ಕೆಲವರು ಸಾಂಕ್ರಾಮಿಕ ರೋಗಗಳಿಗೂ ತುತ್ತಾಗಿದ್ದಾರೆ, ಇದನ್ನು ನೋಡಿ ಅನೇಕರು ಜಾಗ ಖಾಲಿ ಮಾಡಿದ್ದಾರೆ, ಆದರೆ ಅಲ್ಲಿರುವ ಅನೇಕ ಬಡ ಕೂಲಿಕಾರ್ಮಿಕರು, ಪೌರಕಾರ್ಮಿಕರು ಬೇರೆಡೆ ಹೋಗಲು ಸಾಧ್ಯವಿಲ್ಲದೇ ಅನಿವಾರ್ಯವಾಗಿ ಬದುಕುವಂತಾಗಿದೆ ಎಂದು ಸ್ಥಳಿಯ ನಿವಾಸಿಗಳ ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ವಿಷಾಕಾರಿ ಜೀವಿಗಳಾದ ಹಾವು, ಚೇಳು ಸೇರಿದಂತೆ ಮತ್ತಿತರ ಪ್ರಾಣಿಗಳು ಹಾವಳಿ ಹೆಚ್ಚಾಗಿದೆ. ಕಲುಷಿತ ನೀರಿನಿಂದ ಹಾವುಗಳ ಸಂಖ್ಯೆ ಹೆಚ್ಚಾಗಿ ಹಲವಾರು ಬಾರಿ ಈ ಬಡಾವಣೆಯ ಮನೆಯಲ್ಲಿ ಹಾವುಗಳು ಕಂಡುಬಂದಿರುವ ಉದಾಹರಣೆಗಳು ಇವೆ. ಆದ್ದರಿಂದ ಇಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ದೊರಕಿಸಿಕೊಡಬೇಕು ಎಂಬುದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ.

ಮನೆಯ ಮುಂದೆ ನೀರು ನಿಲ್ಲುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೀರು ದುರ್ವಾಸನೆಯಿಂದ ಕೂಡಿರುವುದರಿಂದ ನಾವು ಊಟ ಮಾಡಲು ಕಷ್ಟವಾಗಿದೆ. ನಮ್ಮ ಮಕ್ಕಳು ಅನಾರೋಗ್ಯದಿಂದ ಆಸ್ಪತ್ರೆ ಸೇರುವಂತಾಗಿದೆ. ಬೇರೆ ಕಡೆ ಹೋಗಿ ಬಾಡಿಗೆ ಮನೆಯಲ್ಲಿ ವಾಸ ಮಾಡಲು ಹೋಗೋಣವೆಂದರೆ ಬಾಡಿಗೆ ಹೆಚ್ಚು ಇರುವದರಿಂದ ನಮಗೆ ಅದು ಅಸಾಧ್ಯವಾಗಿದೆ. ಇಂತಹ ಮನೆಯಲ್ಲಿ ಇರುವುದು ಅನಿವಾರ್ಯ ಆಗಿದ್ದು, ನಮ್ಮ ಸಮಸ್ಯೆಯ ಪರಿಹಾರಕ್ಕೆ ಕ್ರಮವಹಿಸಿ.

-ಅಬ್ಬಾಸ್, ಸ್ಥಳೀಯ ನಿವಾಸಿ

ಮಳೆ ನೀರು, ಚರಂಡಿಯ ಕಲುಷಿತ ನೀರು ಮುಂದೆ ಹರಿಯದೇ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ಗಾಡ ನಿದ್ರೆಗೆ ಜಾರಿದ್ದಾರೆ. ಅಲ್ಲದೇ ಈ ಭಾಗದ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಸಂಬಂಧಿಕರು ಬರಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹಾರ ಮಾಡದೇ ಹೋದರೆ ಹೋರಾಟ ಮಾಡುತ್ತೇವೆ.

-ಯುಸೂಫ್ ಜಮಾದಾರ, ರಾಜ್ಯಾಧ್ಯಕ್ಷ, ಅಖಿಲ ಭಾರತೀಯ ಜಮ್ ಜಮ್ ಅಸೋಶಿಯೇಷನ್, ವಿಜಯಪುರ

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಇಲ್ಲಿನ ಸಮಸ್ಯೆಯನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಇವರ ಮಾತಿಗೆ ಪಾಲಿಕೆ ಆಯುಕ್ತರು ಯಾವುದೇ ಕ್ರಮವಹಿಸಿಲ್ಲ. ಐತಿಹಾಸಿಕ ಸ್ಮಾರಕದಲ್ಲಿ ನೀರು ನಿಂತಿದೆ. ಇದರಿಂದಾಗಿ ಸ್ಮಾರಕಕ್ಕೆ ಹಾನಿ ಉಂಟಾಗುತ್ತಿದೆ.

-ಅಬ್ದಲ್ ರಝಾಕ್ ಹೋರ್ತಿ, ಮಾಜಿ ಪಾಲಿಕೆ ಸದಸ್ಯರು, ವಿಜಯಪುರ

share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X