Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಮಾನಕ್ಕೆ ಬಾಂಬ್ ಬೆದರಿಕೆ ಬಂದರೆ...

ವಿಮಾನಕ್ಕೆ ಬಾಂಬ್ ಬೆದರಿಕೆ ಬಂದರೆ ಏರ್‌ಲೈನ್ಸ್‌ಗಳು ತೆಗೆದುಕೊಳ್ಳುವ ಕ್ರಮಗಳೇನು?

ಕೀರ್ತಿ ಎಸ್.ಕೀರ್ತಿ ಎಸ್.24 Oct 2024 2:22 PM IST
share
ವಿಮಾನಕ್ಕೆ ಬಾಂಬ್ ಬೆದರಿಕೆ ಬಂದರೆ ಏರ್‌ಲೈನ್ಸ್‌ಗಳು ತೆಗೆದುಕೊಳ್ಳುವ ಕ್ರಮಗಳೇನು?

ಕಳೆದೆರಡು ವಾರಗಳಿಂದ ವಿಮಾನಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆ ಕರೆಗಳು ವಿಮಾನಯಾನ ಸಂಸ್ಥೆಗಳನ್ನು ತಲ್ಲಣಗೊಳಿಸಿದ್ದು, ವಾಯುಯಾನ ಸುರಕ್ಷತೆಯ ಬಗ್ಗೆ ದೇಶಾದ್ಯಂತ ತೀವ್ರ ಕಳವಳಗಳಿಗೆ ಕಾರಣವಾಗಿವೆ. ಎಲ್ಲ ಬಾಂಬ್ ಬೆದರಿಕೆಗಳು ಹುಸಿಯಾಗಿದ್ದರೂ ಅವು ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಗೆ ತೀವ್ರ ಅಡ್ಡಿಯನ್ನುಂಟು ಮಾಡಿದ್ದವು ಮತ್ತು ಪ್ರಯಾಣಿಕರು ಹಾಗೂ ಸಿಬ್ಬಂದಿಯು ಅನನುಕೂಲವನ್ನು ಅನುಭವಿಸುವಂತಾಗಿತ್ತು.

ಬಾಂಬ್ ಬೆದರಿಕೆಗಳ ಸುರಿಮಳೆಗೆ ವಿಮಾನಯಾನ ಸಂಸ್ಥೆಗಳು ತ್ವರಿತವಾಗಿ ಪ್ರತಿಕ್ರಿಯಿಸಿದ್ದವು. ತಮ್ಮ ಭಯೋತ್ಪಾದನೆ ನಿಗ್ರಹ ಶಿಷ್ಟಾಚಾರಗಳಿಗೆ ಚಾಲನೆ ನೀಡಿದ ಅವು ಭದ್ರತಾ ಬೆದರಿಕೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ನೆರವು ಮತ್ತು ತನಿಖೆಗಾಗಿ ನಾಗರಿಕ ವಾಯುಯಾನ ಸಚಿವಾಲಯವನ್ನು ಸಂಪರ್ಕಿಸಿದ್ದವು.

‘‘ಶೇ.೯೯.೯೯ರಷ್ಟು ಬೆದರಿಕೆಗಳು ನಕಲಿಯಾಗಿರುತ್ತವೆ ಎನ್ನುವುದು ನಮಗೆ ಗೊತ್ತು, ಆದರೆ ಉಳಿದ ಶೇ.೦.೦೧ ಪ್ರಕರಣಗಳಲ್ಲಿ ಅಪಾಯವನ್ನು ಎದುರು ಹಾಕಿಕೊಳ್ಳಲು ಯಾರೂ ಬಯಸುವುದಿಲ್ಲ. ಅದಕ್ಕಾಗಿಯೇ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಾದ ನಿರ್ಗಮನ ಪೂರ್ವ ಭದ್ರತಾ ತಪಾಸಣೆಗಳ ಹೊರತಾಗಿಯೂ ಹೆಚ್ಚಿನವು ನಕಲಿಯಾಗಿರುತ್ತವೆ ಎನ್ನುವುದು ಗೊತ್ತಿದ್ದರೂ ಬಾಂಬ್ ಬೆದರಿಕೆಗಳನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತೇವೆ’’ ಎಂದು ಸಚಿವಾಲಯದ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಹಾರಾಟದ ನಡುವೆ ಬಾಂಬ್ ಬೆದರಿಕೆ ಬಂದರೆ ಎಚ್ಚರಿಕೆಯನ್ನು ಹೊರಡಿಸಲಾಗುತ್ತದೆ ಮತ್ತು ವಿಮಾನ ನಿಲ್ದಾಣದಲ್ಲಿಯ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿ(ಬಿಎಟಿಸಿ)ಯ ಸಭೆಯನ್ನು ತಕ್ಷಣವೇ ಕರೆಯಲಾಗುತ್ತದೆ. ಬೆದರಿಕೆಯನ್ನು ತೂಗಿ ನೋಡಿದ ಬಳಿಕ ಬಿಎಟಿಸಿ ಮುಂದಿನ ಕ್ರಮದ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳುತ್ತದೆ.

ಬೆದರಿಕೆಯನ್ನು ‘ನಿರ್ದಿಷ್ಟ’ ಎಂದು ಪರಿಗಣಿಸಿದರೆ ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ)ನ್ನು ಸಂಪರ್ಕಿಸಿದ ಬಳಿಕ ಮುಂದಿನ ಕ್ರಮವನ್ನು ತೆಗೆದುಕೊಳ್ಳುವಂತೆ ಪೈಲಟ್‌ಗಳಿಗೆ ಸೂಚಿಸಲಾಗುತ್ತದೆ. ಹಾರಾಟದ ಸ್ಥಳವನ್ನು ಆಧರಿಸಿ ನಿರ್ಗಮನ ವಿಮಾನ ನಿಲ್ದಾಣಕ್ಕೆ ಮರಳುವಂತೆ, ನಿಗದಿತ ಗಮ್ಯಸ್ಥಾನಕ್ಕೆ ಹೋಗುವಂತೆ ಅಥವಾ ವಿಮಾನವನ್ನು ಸಮೀಪದ ವಿಮಾನ ನಿಲ್ದಾಣದಲ್ಲಿ ಇಳಿಸುವಂತೆ ಪೈಲಟ್‌ಗಳಿಗೆ ತಿಳಿಸಲಾಗುತ್ತದೆ

ಇನ್ನೂ ಹಾರಾಟವನ್ನು ಆರಂಭಿಸಿರದ ವಿಮಾನಕ್ಕೆ ಬೆದರಿಕೆ ಬಂದರೆ ಬಿಟಿಎಸಿ ಜೊತೆ ಸಮಾಲೋಚನೆಯ ಬಳಿಕ ಸಮಗ್ರ ಭದ್ರತಾ ತಪಾಸಣೆಗಳಿಗಾಗಿ ವಿಮಾನವನ್ನು ನಿಲ್ದಾಣದಲ್ಲಿಯ ಪ್ರತ್ಯೇಕ ಸ್ಥಳಕ್ಕೆ ಸಾಗಿಸಲಾಗುತ್ತದೆ.

ಈಗಾಗಲೇ ಭಾರತೀಯ ವಾಯುಪ್ರದೇಶದಿಂದ ಹೊರಗಿರುವ ಅಂತರ್‌ರಾಷ್ಟ್ರೀಯ ವಿಮಾನಯಾನಕ್ಕೆ ಬೆದರಿಕೆ ಬಂದರೆ ಆಗ ಭಾರತೀಯ ಏಜೆನ್ಸಿಗಳು ಅಂತರ್‌ರಾಷ್ಟ್ರೀಯ ಎಟಿಸಿ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಬೇಕಾಗುತ್ತದೆ ಮತ್ತು ಮುಂದಿನ ಕ್ರಮವನ್ನು ನಿರ್ಧರಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ವಿಮಾನವನ್ನು ಹತ್ತಿರದ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗುತ್ತದೆ.

ಈ ನಡುವೆ ಸತತ ಬಾಂಬ್ ಬೆದರಿಕೆಗಳ ಸಮಸ್ಯೆಯನ್ನು ಪರಿಹರಿಸಲು ಭಾರತ ಸರಕಾರ ಮತ್ತು ನಾಗರಿಕ ವಾಯುಯಾನ ಸಚಿವಾಲಯ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ.

share
ಕೀರ್ತಿ ಎಸ್.
ಕೀರ್ತಿ ಎಸ್.
Next Story
X