Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಸಮರ್ಪಕ ಅಧ್ಯಯನ ವರದಿಯನ್ನು...

ಅಸಮರ್ಪಕ ಅಧ್ಯಯನ ವರದಿಯನ್ನು ಹಿಂಪಡೆಯಿರಿ: ಡಾ.ಶ್ರೀನಿವಾಸ ಕಕ್ಕಿಲ್ಲಾಯ

ವಾರ್ತಾಭಾರತಿವಾರ್ತಾಭಾರತಿ8 July 2025 11:25 AM IST
share
ಅಸಮರ್ಪಕ ಅಧ್ಯಯನ ವರದಿಯನ್ನು ಹಿಂಪಡೆಯಿರಿ: ಡಾ.ಶ್ರೀನಿವಾಸ ಕಕ್ಕಿಲ್ಲಾಯ

ಮಂಗಳೂರು: ದಿಢೀರ್ ಹೃದಯಾಘಾತದಿಂದ ಆಗುತ್ತಿರುವ ಸಾವುಗಳ ಬಗ್ಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ನೀಡಿರುವ ವರದಿ ಅಸಮರ್ಪಕವಾಗಿದೆ, ಅದನ್ನು ಹಿಂಪಡೆಯಬೇಕು ಎಂದು ತಜ್ಞ ವೈದ್ಯ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಸರಕಾರವನ್ನು ಆಗ್ರಹಿಸಿದ್ದಾರೆ.

'ವಾರ್ತಾಭಾರತಿ' ಜೊತೆ ಮಾತಾಡಿರುವ ಡಾ.ಕಕ್ಕಿಲ್ಲಾಯ, ಕೊರೋನ ಲಸಿಕೆಗೂ, ಈಗ ಆಗುತ್ತಿರುವ ದಿಢೀರ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಈ ವರದಿ ಹೇಳಿಬಿಟ್ಟಿದೆ ಎಂಬಂತೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇಂತಹ ಯಾವುದೇ ನಿರ್ಣಯವೂ ಸಮಿತಿಯ ವರದಿಯಲ್ಲಿ ಎಲ್ಲಿಯೂ ಇಲ್ಲ. ಆ ವರದಿಯಲ್ಲಿ ಉಲ್ಲೇಖಿಸಿರುವ ಅಧ್ಯಯನದ ವರದಿಗಳಿಗೂ ಸಮಿತಿಯು ಮಾಡಿರುವ ಅಧ್ಯಯನಕ್ಕೂ ಯಾವುದೇ ಸಂಬಂಧವಿಲ್ಲ. ಕೊರೋನ ಲಸಿಕೆ ತೆಗೆದುಕೊಂಡ ನಾಲ್ಕೈದು ವರ್ಷಗಳ ಬಳಿಕ ನಡೆಯುತ್ತಿರುವ ಈ ದಿಢೀರ್ ಸಾವುಗಳಿಗೂ ಕೊರೋನ ಲಸಿಕೆಗೂ ಏನಾದರೂ ಸಂಬಂಧವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುವ ಯಾವುದೇ ಅಧ್ಯಯನವನ್ನು ಇವರು ಉಲ್ಲೇಖಿಸಿಲ್ಲ, ಅಂತಹ ಯಾವುದೇ ಅಧ್ಯಯನವು ಲಭ್ಯವೂ ಇಲ್ಲ ಎಂದು ಹೇಳಿದ್ದಾರೆ. ಐಸಿಎಂಆರ್ ಹಾಗೂ ಜಯದೇವ ಆಸ್ಪತ್ರೆಯಂತಹ ಪ್ರತಿಷ್ಠಿತ ಸಂಸ್ಥೆಗಳು ಇಂತಹ ವರದಿಗಳನ್ನು ಪ್ರಕಟಿಸುತ್ತವೆ ಅಂದರೆ ವೈದ್ಯಕೀಯ ವಿಜ್ಞಾನದಲ್ಲಿ ನಮ್ಮ ದೇಶ ಎಲ್ಲಿಗೆ ತಲುಪಿದೆ ಎಂದು ಚಿಂತಿಸಬೇಕಾಗಿದೆ ಎಂದು ಡಾ.ಕಕ್ಕಿಲ್ಲಾಯ ಆತಂಕ ವ್ಯಕ್ತ ಪಡಿಸಿದ್ದಾರೆ.

53+17+180 ಅಂದರೆ 250 ಅಂತ ಸಣ್ಣ ಮಕ್ಕಳೂ ಹೇಳುತ್ತವೆ. ಆದರೆ ಈ ವರದಿಯಲ್ಲಿ ಈ ಲೆಕ್ಕವು 249 ಆಗಿದೆ. ಹಾಗೆಯೇ ಅಧ್ಯಯನಕ್ಕೊಳಪಟ್ಟ 77 ಮಂದಿಯಲ್ಲಿ ಹೃದ್ರೋಗಕ್ಕೆ ಕಾರಣವಾಗಬಲ್ಲ ಯಾವುದೇ ಸಮಸ್ಯೆಗಳೂ ಇರಲಿಲ್ಲ ಎಂಬುದನ್ನು ಗುರುತಿಸಿರುವ ಸಮಿತಿಯು ಅದನ್ನು ಸಣ್ಣ ಪ್ರಮಾಣ ಎಂದಿರುವುದು ತಪ್ಪಾಗುತ್ತದೆ, ಮೂವರಲ್ಲಿ ಒಬ್ಬರಲ್ಲಿ ಯಾವುದೇ ಕಾರಣವು ಕಂಡುಬಂದಿಲ್ಲದಿರುವುದು ಸಣ್ಣ ಪ್ರಮಾಣ ಹೇಗಾಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ಈ 77 ಮಂದಿಯಲ್ಲಿ ಯಾವುದೋ ಗೊತ್ತಿಲ್ಲದ ಅಥವಾ ಹೊಸ ಬಗೆಯ ಸಮಸ್ಯೆಯು ಹೃದಯಾಘಾತಕ್ಕೆ ಕಾರಣವಾಗಿರಬಹುದು ಎಂದು ಸಮಿತಿಯ ವರದಿಯಲ್ಲೇ ಹೇಳಿರುವುದು ಲಸಿಕೆ ಅಥವಾ ಕೊರೋನ ಸೋಂಕನ್ನು ದೋಷಮುಕ್ತಗೊಳಿಸುವುದಕ್ಕೆ ವ್ಯತಿರಿಕ್ತವಾಗುತ್ತದೆ ಎಂದು ಡಾ.ಕಕ್ಕಿಲ್ಲಾಯ ಹೇಳಿದ್ದಾರೆ. ಆದ್ದರಿಂದ ಈ ಸಮಿತಿಯ ವರದಿಯ ಆಧಾರದಲ್ಲಿ ಕೊರೋನ ಲಸಿಕೆಗೂ ದಿಢೀರ ಸಾವುಗಳಿಗೂ ಸಂಬಂಧ ಇದೆಯೇ ಎಂದು ಕೇಳಿದರೆ ಜಯದೇವ ಸಂಸ್ಥೆಯಾಗಲಿ, ಅದರ ನಿರ್ದೇಶಕರಾಗಲಿ, ಮುಖ್ಯಮಂತ್ರಿಗಳಾಗಲೀ, ಕೇಂದ್ರ ಸರಕಾರವಾಗಲೀ, ಅಥವಾ ಯಾರೇ ವೈದ್ಯರಾಗಲೀ "ನಮಗೆ ಇನ್ನೂ ಗೊತ್ತಿಲ್ಲ" ಎಂದು ಹೇಳಬೇಕೇ ವಿನಃ " ಸಂಬಂಧ ಇಲ್ಲ " ಎಂದು ಹೇಳಲೇಬಾರದು ಎನ್ನುವುದು ಸುಸ್ಪಷ್ಟ ಎಂದು ಡಾ. ಕಕ್ಕಿಲ್ಲಾಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಈ ವರದಿ ಅರ್ಧಂಬರ್ಧ ಆಗಿದೆ, ಲೆಕ್ಕಾಚಾರ ತಪ್ಪಾಗಿದೆ, ಇದನ್ನು ಹಿಂಪಡೆಯುತ್ತೇವೆ, ಮುಂದಿನ ಆರು ತಿಂಗಳಲ್ಲಿ ನಮ್ಮ ಸಂಸ್ಥೆಯಲ್ಲಿ ಸರಿಯಾದ ಆಳವಾದ ಅಧ್ಯಯನ ನಡೆಸಿ ಒಂದು ವರದಿ ಕೊಡುತ್ತೇವೆ, ಅವರೆಗೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ ಎಂದು ಸರಕಾರ ನೇಮಿಸಿರುವ ಸಮಿತಿ ಸ್ಪಷ್ಟೀಕರಣ ಕೊಡಬೇಕು ಎಂದು ಡಾ. ಕಕ್ಕಿಲಾಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X