Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 50ಶೇ. ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸದ...

50ಶೇ. ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸದ ಮಹಾರಾಷ್ಟ್ರ ಪೊಲೀಸ್: ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ9 Dec 2017 6:52 PM IST
share
50ಶೇ. ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸದ ಮಹಾರಾಷ್ಟ್ರ ಪೊಲೀಸ್: ಸಮೀಕ್ಷೆ

ಮುಂಬೈ, ಡಿ.9: ಮಹಾರಾಷ್ಟ್ರದ ಪೊಲೀಸ್ ಠಾಣೆಗಳಲ್ಲಿ ಶೇಕಡಾ 50 ಅಪರಾಧ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಲಾಗುವುದೇ ಇಲ್ಲ ಎಂಬ ಆಘಾತಕಾರಿ ಅಂಶ ಸಮೀಕ್ಷೆಯೊಂದರಲ್ಲಿ ಬಯಲಾಗಿದೆ. ಅಪರಾಧವನ್ನು ಕ್ಷುಲ್ಲಕಗೊಳಿಸುವ ಅಥವಾ ಎಫ್‌ಐಆರ್ ದಾಖಲಿಸಲು ನಿರಾಕರಿಸುವ ಪ್ರಕರಣಗಳು ಮಹಾರಾಷ್ಟ್ರ ಪೊಲೀಸ್ ಠಾಣೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದೆ ಎಂಬ ಅಂಶವನ್ನು ಈ ಸಮೀಕ್ಷೆ ಬಯಲು ಮಾಡಿದೆ.

ಕಳೆದ ಮೇ ತಿಂಗಳಲ್ಲಿ ಮಹಿಳೆಯೊಬ್ಬರು ನಾಸಿಕ್ ಗ್ರಾಮೀಣ ಪೊಲೀಸ್ ಠಾಣೆಗೆ ಅತ್ಯಾಚಾರ ದೂರು ದಾಖಲಿಸಲು ಆಗಮಿಸಿದ್ದರು. ಆದರೆ ಆಕೆಯ ಪ್ರಕರಣವನ್ನು ಪೊಲೀಸರು ಕೇವಲ ಲೈಂಗಿಕ ಶೋಷಣೆ ಎಂದು ದಾಖಲಿಸಿದ್ದರು. ಇದಾದ ಮೂರು ತಿಂಗಳ ನಂತರ ವಿಧಿವಿಜ್ಞಾನ ಇಲಾಖೆಯು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ದೃಢೀಕರಿಸಿದ ನಂತರ ದೂರನ್ನು ತಿರುಚಿ ಅತ್ಯಾಚಾರವೆಂದು ಬದಲಿಸಲಾಗಿತ್ತು.

ಈ ಘಟನೆಯಿಂದ ಎಚ್ಚೆತ್ತುಕೊಂಡ ರಾಜ್ಯ ಪೊಲೀಸ್ ಇಲಾಖೆ ಆಂತರಿಕ ಸಮೀಕ್ಷೆ ನಡೆಸಲು ಮುಂದಾದಾಗ ಬೆಚ್ಚಿಬೀಳಿಸುವಂತಹ ವಿಷಯಗಳು ಬೆಳಕಿಗೆ ಬಂದಿದೆ. ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಶೇಕಡಾ 50 ಅಪರಾಧ ಪ್ರಕರಣಗಳನ್ನು ಕ್ಷುಲ್ಲಕಗೊಳಿಸಲಾದರೆ ಎಫ್‌ಐಆರ್ ದಾಖಲಿಸಲು ನಿರಾಕರಿಸುವ ಪ್ರಕರಣಗಳು ಕೂಡಾ ಅಷ್ಟೇ ಇವೆ.

ಈ ಸಮೀಕ್ಷೆಯನ್ನು ನಡೆಸಲು ಮುಂದಾದ ಹೆಚ್ಚುವರಿ ಪೊಲೀಸ್ ಪ್ರಧಾನ ನಿರ್ದೇಶಕರಾದ ಬಿಪಿನ್ ಬಿಹಾರಿ ಹೇಳುವಂತೆ ಪ್ರಕರಣವನ್ನು ದಾಖಲಿಸಲು ನಿರಾಕರಿಸುವುದು ಗಂಭೀರ ವಿಷಯವಾಗಿದ್ದು ಅದು ಅಪರಾಧಿ ನ್ಯಾಯ ವ್ಯವಸ್ಥೆಯನ್ನು ಹಾಳುಗೆಡವುದಕ್ಕೆ ಸಮ.

ಬಹುತೇಕ ಪ್ರಕರಣಗಳನ್ನು ಪೊಲೀಸರು ಗಂಭೀರವಲ್ಲದ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಿ ಆ ಮೂಲಕ ಪ್ರಕರಣದಲ್ಲಿ ಯಾವುದೇ ತನಿಖೆಯಾಗದಂತೆ ನೋಡಿಕೊಳ್ಳುತ್ತಾರೆ ಎಂಬುದು ಸಮೀಕ್ಷೆಯಲ್ಲಿ ಬಯಲಾಗಿದೆ.

ವಾರ್ಷಿಕ ಅಪರಾಧಗಳ ಏರಿಕೆ ಅಥವಾ ಇಳಿಕೆಯ ಅಂಕಿಅಂಶಗಳ ಮೂಲಕ ತಮ್ಮ ಇಲಾಖೆಯ ಸಾಮರ್ಥ್ಯವನ್ನು ಅಳೆಯುವಲ್ಲೇ ಸಂತುಷ್ಟರಾಗಿರುವ ಪೊಲೀಸರಿಗೆ ಇದೊಂದು ನಿತ್ಯದ ಕಾಯಕವಾಗಿದೆ. ಅಪರಾಧಗಳಲ್ಲಿ ಏರಿಕೆಯಾದರೆ ಹಿರಿಯ ಅಧಿಕಾರಿಗಳ ಕೋಪಕ್ಕೆ ತುತ್ತಾಗಬೇಕಾಗುತ್ತದೆ ಎಂದು ಹೇಳುತ್ತಾರೆ ಸಹಾಯಕ ಪೊಲೀಸ್ ಆಯುಕ್ತರು.

ಸಮೀಕ್ಷೆಯ ವರದಿಯ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲು ನಿರಾಕರಿಸುವ ಅಥವಾ ಅಪರಾಧವನ್ನು ಕ್ಷುಲ್ಲಕಗೊಳಿಸಲು ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಪ್ರಧಾನ ನಿರ್ದೇಶಕರು ಏಳು ವಲಯಗಳ ಐಜಿಪಿಗಳಿಗೆ ಸೂಚಿಸಿದ್ದಾರೆ. ಈ ಸೂಚನೆಯನ್ನು ನೀಡಿದ ಒಂದು ತಿಂಗಳಲ್ಲೇ ಎಫ್‌ಐಆರ್ ದಾಖಲಾತಿಯಲ್ಲಿ 8% ಏರಿಕೆಯಾಗಿರುವುದಾಗಿ ಡಿಜಿಪಿ ಬಿಹಾರಿ ತಿಳಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X