Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಕನಿಷ್ಠ...

ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಕನಿಷ್ಠ ದರದಲ್ಲಿ ನ್ಯಾಪ್‌ಕಿನ್: ಕೇಂದ್ರ ಸಚಿವ ಅನಂತ ಕುಮಾರ್

ಸುವಿಧಾ ನ್ಯಾಪ್‌ಕಿನ್ ಬಿಡುಗಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Jun 2018 6:51 PM IST
share
ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಕನಿಷ್ಠ ದರದಲ್ಲಿ ನ್ಯಾಪ್‌ಕಿನ್: ಕೇಂದ್ರ ಸಚಿವ ಅನಂತ ಕುಮಾರ್

ಬೆಂಗಳೂರು, ಜೂ.5: ದೇಶದಲ್ಲಿ ಶೇ.48ರಷ್ಟು ಮಹಿಳೆಯರು ದುಬಾರಿ ಎನ್ನುವ ಕಾರಣಕ್ಕಾಗಿ ನ್ಯಾಪ್‌ಕಿನ್ ಬಳಕೆಯಿಂದ ವಂಚಿತರಾಗಿದ್ದಾರೆ. ಹೀಗಾಗಿ ಎಲ್ಲರಿಗೂ ಕೈಗೆಟಕುವ, ಗುಣಮಟ್ಟದ ಜನೌಷಧಿ ಸುವಿಧಾ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಅನಂತಕುಮಾರ್ ತಿಳಿಸಿದರು.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಡಿ ‘ಜನೌಷಧಿ ಸುವಿಧಾ ಸ್ಯಾನಿಟರಿ ನ್ಯಾಪ್‌ಕಿನ್’ ಅನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ದೇಶದ ಶೇ.58ರಷ್ಟು ಮಹಿಳೆಯರು ಮಾತ್ರ ಉತ್ತಮ ಸ್ಯಾನಿಟರಿ ನ್ಯಾಪ್‌ಕಿನ್ ಬಳಸುತ್ತಿದ್ದಾರೆ, ಮುಂಬೈ, ದೆಹಲಿ ಸೇರಿದಂತೆ ಮಹಾನಗರಗಳಲ್ಲಿ ಶೇ.72 ಉತ್ತಮ ಗುಣಮಟ್ಟದ ನ್ಯಾಪ್‌ಕಿನ್ ಬಳಕೆ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಸರ್ವೆ ವರದಿ ನೀಡಿದೆ. ಇನ್ನುಳಿದ ಶೇ.48 ಮಹಿಳೆಯರು ಆರ್ಥಿಕ ದುರ್ಬಲತೆ, ಬಡತನದಿಂದಾಗಿ ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಹೀಗಾಗಿ ಸರಕಾರದ ವತಿಯಿಂದಲೆ ಉತ್ತಮ ಗುಣಮಟ್ಟದ ನ್ಯಾಪ್‌ಕಿನ್ ಜನೌಷಧಿ ಕೇಂದ್ರಗಳಲ್ಲಿ ಕನಿಷ್ಠ ಬೆಲೆಯಲ್ಲಿ ದೊರೆಯಲಿದೆ ಎಂದು ಅವರು ಹೇಳಿದರು.

ಸದ್ಯ ದೇಶದ ಮಾರುಕಟ್ಟೆಯಲ್ಲಿರುವ ಗುಣಮಟ್ಟದ ಸ್ಯಾನಿಟರಿ ನ್ಯಾಪ್‌ಕಿನ್ ಬೆಲೆ 38 ರೂ. ಇದೆ, ಪ್ರತಿ ನ್ಯಾಪ್‌ಕಿನ್‌ಗೆ 10 ರೂ.ಆಗಲಿದೆ. ಅಲ್ಲದೇ ಬಯೋ ಡಿಗ್ರೇಡಬಲ್ ನ್ಯಾಪ್‌ಕಿನ್ ಯಾವುದೂ ಇಲ್ಲ. ಹಾಗಾಗಿ ನಾವು ದೇಶದಲ್ಲೇ ಮೊದಲ ಬಯೋ ಡಿಗ್ರೆಡಬಲ್ ಸ್ಯಾನಿಟರಿ ನ್ಯಾಪ್‌ಕಿನ್ ಅನ್ನು ಬಿಡುಗಡೆ ಮಾಡಿದ್ದೇವೆ. ಕೇವಲ 10 ರೂ.ಗೆ ನಾಲ್ಕು ನ್ಯಾಪ್‌ಕಿನ್ ಸಿಗಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ದೇಶದಲ್ಲಿ ಪ್ರತಿ ವರ್ಷ ಲಕ್ಷಾಂತರ ಟನ್ ನ್ಯಾಪ್‌ಕಿನ್ ಬಳಕೆ ಮಾಡಲಾಗುತ್ತಿದೆ. ಇದು 500 ವರ್ಷ ಆದರೂ ಡಿ ಕಂಪೋಸ್ ಆಗುವಂತಹದ್ದಲ್ಲ. ಆದರೆ, ಕೇಂದ್ರ ಸರಕಾರದ ಮೂಲಕ ಕೊಡಮಾಡುತ್ತಿರುವ ಆಕ್ಸೋ ಬಯೋ ಡಿಗ್ರೆಡಬಲ್ ತಂತ್ರಜ್ಞಾನದಿಂದ ನ್ಯಾಪ್‌ಕಿನ್ ತಯಾರಿ ಮಾಡಿದ್ದೇವೆ, ಇದು ಕೇವಲ 3-6 ತಿಂಗಳಿನಲ್ಲಿ ಬಯೋ ಡಿಗ್ರೆಡಬಲ್ ಆಗಲಿದೆ ಎಂದು ಅವರು ತಿಳಿಸಿದರು.

ಜುಲೈ 19 ರೊಳಗಿನ ದೇಶಾದ್ಯಂತ ಎಲ್ಲಾ ಮೂಲೆ ಮೂಲೆಗಳಲ್ಲಿಯೂ ಈ ಸುವಿಧಾ ನ್ಯಾಪ್‌ಕಿನ್ ಲಭ್ಯವಾಗಲಿದೆ. ಸೂಕ್ತ ಸಮಯದಲ್ಲಿ ನ್ಯಾಪ್‌ಕಿನ್ ಸಿಗುವಂತೆ ಮಾಡಲು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದು ಅವರು ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್, ಅಧಿಕಾರಿಗಳಾದ ನೀರಜಾ ಶರತ್, ಸಚಿನ್ ಸಿಂಗ್, ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತ ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X