Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಂಚು ಪಡೆಯಲು ಸೋತವರ ಸೆಣಸು

ಕಂಚು ಪಡೆಯಲು ಸೋತವರ ಸೆಣಸು

ಇಂದು ಬೆಲ್ಜಿಯಂ-ಇಂಗ್ಲೆಂಡ್ ಮೂರನೇ ಸ್ಥಾನಕ್ಕೆ ಪ್ಲೇ ಆಫ್

ವಾರ್ತಾಭಾರತಿವಾರ್ತಾಭಾರತಿ14 July 2018 12:15 AM IST
share
ಕಂಚು ಪಡೆಯಲು ಸೋತವರ ಸೆಣಸು

ಸೈಂಟ್‌ಪೀಟರ್ಸ್‌ಬರ್ಗ್, ಜು.13: ವಿಶ್ವಕಪ್‌ನಲ್ಲಿ ಫೈನಲ್‌ಗೇರುವ ಅವಕಾಶ ವಂಚಿತ ಇಂಗ್ಲೆಂಡ್ ಮತ್ತು ಬೆಲ್ಜಿಯಂ ತಂಡಗಳು ಶನಿವಾರ ಇಲ್ಲಿ ಮೂರನೇ ಸ್ಥಾನಕ್ಕಾಗಿ ನಡೆಯಲಿರುವ ಪ್ಲೇ-ಆಫ್ ಪಂದ್ಯದಲ್ಲಿ ಹಣಾಹಣಿ ನಡೆಸಲಿವೆೆ.

ಸೆಮಿಫೈನಲ್‌ನಲ್ಲಿ ಫ್ರಾನ್ಸ್ ವಿರುದ್ಧ ಬೆಲ್ಜಿಯಂ 0-1 ಅಂತರದಲ್ಲಿ ಮತ್ತು ಕ್ರೊಯೇಶಿಯ ವಿರುದ್ಧ ಇಂಗ್ಲೆಂಡ್ 1-2 ಅಂತರದಲ್ಲಿ ಸೋಲು ಅನುಭವಿಸಿ ಫೈನಲ್‌ಗೇರುವ ಅವಕಾಶ ಕಳೆದುಕೊಂಡಿತ್ತು. ಉಭಯ ತಂಡಗಳಿಗೆ ಇನ್ನುಳಿದಿರುವುದು ಮೂರನೇ ಸ್ಥಾನಕ್ಕಾಗಿ ಆಡುವ ಅವಕಾಶ .

ಬೆಲ್ಜಿಯಂ ಮತ್ತು ಇಂಗ್ಲೆಂಡ್ 2018ರ ವಿಶ್ವಕಪ್‌ನ ‘ಜಿ’ ಗುಂಪಿನಲ್ಲಿ ಸ್ಥಾನ ಪಡೆದು ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದೊಂದಿಗೆ 16ರ ಘಟ್ಟ ಪ್ರವೇಶಿಸಿದ್ದವು. ಗ್ರೂಪ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್‌ನ್ನು ಬೆಲ್ಜಿಯಂ 1-0 ಅಂತರದಲ್ಲಿ ಸೋಲಿಸಿತ್ತು.

   ಇಂಗ್ಲೆಂಡ್‌ಗೆ ಇದೀಗ ಬೆಲ್ಜಿಯಂ ವಿರುದ್ಧ ಸೇಡು ತೀರಿಸಿಕೊಳ್ಳಲು ಈ ವಿಶ್ವಕಪ್‌ನಲ್ಲಿ ಒಳ್ಳೆಯ ಅವಕಾಶ ಸಿಕ್ಕಿದೆ. ‘‘ಸೆಮಿಫೈನಲ್‌ನಲ್ಲಿ ಸೋತ ಬಳಿಕ ಯಾವುದೇ ತಂಡಕ್ಕೂ ಇನ್ನೊಂದು ಪಂದ್ಯದಲ್ಲಿ ಆಡುವ ಆಸಕ್ತಿ ಇರುವುದಿಲ್ಲ. ಆದರೆ ಗೌರವದಿಂದ ತವರಿಗೆ ಮರಳಲು ಈ ಪಂದ್ಯದಲ್ಲಿ ಜಯಿಸಬೇಕಾ ಗಿದೆ. ನಾವು ಪ್ಲೇ ಆಫ್‌ನಲ್ಲಿ ಆಡಲು ತಯಾರಾಗಿದ್ದೇವೆ ’’ ಎಂದು ಇಂಗ್ಲೆಂಡ್ ತಂಡದ ಕೋಚ್ ಗ್ಯಾರೆತ್ ಸೌತ್‌ಗೇಟ್ ಅಭಿಪ್ರಾಯಪಟ್ಟಿದ್ದಾರೆ. ‘‘ ಸೋಲಿನ ಆಘಾತದಿಂದ ಇನ್ನೂ ಹೊರ ಬಂದಿಲ್ಲ. ಈ ಕಾರಣದಿಂದಾಗಿ ಇನ್ನೊಂದು ಪಂದ್ಯದಲ್ಲಿ ಚೆನ್ನಾಗಿ ಆಡುವುದನ್ನು ನಿರೀಕ್ಷಿಸುವಂತಿಲ್ಲ. ಹೀಗಿದ್ದರೂ ನಾವು ಮೂರನೇ ಸ್ಥಾನ ಪಡೆಯಲು ಮುಂದಿನ ಪಂದ್ಯದಲ್ಲಿ ಚೆನ್ನಾಗಿ ಆಡಲು ಶ್ರಮಿಸುತ್ತೇವೆ’’ ಎಂದು ಬೆಲ್ಜಿಯಂ ಕೋಚ್ ರಾಬೆರ್ಟ್ ಮಾರ್ಟಿನೆಝ್ ತಿಳಿಸಿದ್ದಾರೆ. ಬೆಲ್ಜಿಯಂ ತಂಡ 1986ರಲ್ಲಿ ಫಿಫಾ ವಿಶ್ವಕಪ್‌ನಲ್ಲಿ 4ನೇ ಸ್ಥಾನ ಗಳಿಸಿತ್ತು. ಫ್ರಾನ್ಸ್ ವಿರುದ್ಧ ಬೆಲ್ಜಿಯಂ ಸೋಲು ಅನುಭವಿಸಿ 4ನೇ ಸ್ಥಾನ ಪಡೆದಿತ್ತು. ಮೂರನೇ ಸ್ಥಾನ ಪಡೆಯಲು 32 ವರ್ಷಗಳ ಬಳಿಕ ಮತ್ತೊಮ್ಮೆ ಬೆಲ್ಜಿಯಂ ಹೋರಾಟ ನಡೆಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X